ಚಳ್ಳಕೆರೆ ಫೆ.1 ಮಳೆ ಇಲ್ಲದೆ ಬರಗಾಲದ ಪರಿಸ್ಥಿತಿ ಎದುರಾಗಿದ್ದು ಯಾರೂ ಗುಳೆ ಹೋಗದೇ ನರೇಗಾ ಯೋಜನೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಹವಹಿಸಿ ಕೂಲಿ ಕೆಲಸ ಮಾಡುವಂತೆ ತಾಪಂ ಇಒ ಶಶಿಧರ್ ಹೇಳಿದರು. ತಾಲೂಕಿನ ರಾಮಜೋಗಿಹಳ್ಳಿ ಗ್ರಾಪಂ ವ್ಯಾಪ್ತಿಯಲ್ಲಿ ನರೇಗಾ ಯೋಜನೆಯಡಿಯಲ್ಲಿ ನಡೆಯುತ್ತಿರು ಕಾಮಗಸರಿಗಳ ಬಳಿ ಭೇಟಿ ನೀಡಿ ಪರಿಶೀಲನೆ ನಡೆಸಿ ಮಾತನಾಡಿದರು. ಗ್ರಾಮೀಣ ಜನರಿಗೆ ನರೇಗಾ ವರದಾನವಾಗಿದ್ದು ಈ. ಯೋಜನೆಯನ್ನು ಸದ್ಬಳಕೆ ಮಾಡಿಕೊಂಡು ಆರ್ಥಿಕವಾಗಿ ಸದೃಢರಾಗುವಂತೆ ಕೂಲಿ ಕಾರ್ಮಿಕರಿಗೆ ಹೇಳಿದರು. ಮಹಾತ್ಮಗಾಂಧಿ ಉದ್ಯೋಗ ಖಾತ್ರಿ ಯೋಜನೆಯಡಿ ರೈತರಿಗೆ ಅನುಕೂಲವಾಗಲು ಸಾಕಷ್ಟು ಕಾರ್ಯಕ್ರಮಗಳನ್ನು ರೂಪಿಸಲಾಗಿದೆ.
ತಾಲುಯಕಿನಲ್ಲಿ ಮುಂಗಾರು ಮಳೆ ಕೈ ಕೊಟ್ಟಿದೆ. ಹಿಂಗಾರು ಮಳೆಯೂ ಬಾರದೇ ರೈತರು ಸಂಕಷ್ಟ ಎದುರಿಸುವ ಸ್ಥಿತಿ ನಿರ್ಮಾಣವಾಗಿದೆ. ಒಂದು ಕಡೆ ಮಳೆ ಇಲ್ಲದೆ ಮತ್ತೂಂದು ಕಡೆ ಬರದ ಪರಿಸ್ಥಿತಿ ಎದುರಿಸುತ್ತಿರುವ ರೈತರಿಗೆ ನರೇಗಾ ಹೆಚ್ಚು ಅನುಕೂಲಾಗಲಿದೆ
ಗ್ರಾಮೀಣ ಜನರಿಗೆ ಉದ್ಯೋಗಕ್ಕಾಗಿ ಬೇಡಿಕೆ ಸಲ್ಲಿಸುವ ಪ್ರತಿ ಕುಟುಂಬಕ್ಕೆ ವರ್ಷದಲ್ಲಿ 100 ದಿನ ಕೂಲಿ ಕೆಲಸ ನೀಡಲಾಗುವುದು ದಿನಕ್ಕೆ316 ರೂ ಕೂಲಿಹಣ ನೇರವಾಗಿ ನಿಮ್ಮ ಖಾತೆಗೆ ಜಮ ಮಾಡಲಾಗುವುದು
ನರೇಗಾ ಯೋಜನೆಯಡಿ ಕುರಿ, ಮೇಕೆ, ಹಂದಿ, ಕೋಳಿ ಶೆಡ್, ದನದ ಕೊಟ್ಟಿಗೆ, ಕೃಷಿ ಹೊಂಡ, ವೈಯಕ್ತಿಕ ಬದು ನಿರ್ಮಾಣ, ಬಚ್ಚಲು ಗುಂಡಿ ಮತ್ತು ತೋಟಗಾರಿಕೆ ಬೆಳೆ, ಕೃಷಿ, ಅರಣ್ಯ, ರೇಷ್ಮೆ ಇಲಾಖೆಯಡಿ ವೈಯಕ್ತಿಕ ಕಾಮಗಾರಿ . ಕೆರೆ ಕಾಲುವೆ ಹೂಳೆತ್ತುವ.ಶಾಲಾ ಅಂಗನವಾಡಿ ಕಾಂಪೌಂಡು ಸೇರಿದಂತೆ ಹಲವು ಅಭಿವೃದ್ಧಿ ಕಾಮಗನ್ನುಕೈಗೆತ್ತಿಕೊಂಡು ಗುಣ ಮಟ್ಟದ ಕಾಮಗಾರಿಗಳನ್ನು ನಿರ್ಮಿಸ ಬೇಕು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ತಾಲ್ಲೂಕು ತಾಂತ್ರಿಕ ಸಂಯೋಜಕರು(ಸಿವಿಲ್ ಹಾಗೂ ಅನುಷ್ಠಾನ) ಐ.ಇ.ಸಿ ಸಂಯೋಜಕರು ಹಾಗೂ ಗ್ರಾಮಪಂಚಾಯಿತಿ ಸಿಬ್ಬಂದಿಗಳು ಉಪಸ್ಥಿತರಿದ್ದರು.
0 Comments