ಕುಡಿಯುವ ನೀರಿನ ತೊಂದರೆ ಉದ್ಭವಿಸುವ ಗ್ರಾಮಗಳ ಪಟ್ಟಿ ಸಿದ್ಧಪಡಿಸಿ ಖಾಸಗಿ ಬೋರ್‍ವೆಲ್ ಹಾಗೂ ಟ್ಯಾಂಕರ್‍ಗಳನ್ನು ಗುರುತಿಸಿ

by | 27/03/24 | ಸುದ್ದಿ


ಚಿತ್ರದುರ್ಗ ಮಾ.27:
ಚಿತ್ರದುರ್ಗ ತಾಲ್ಲೂಕಿನ ಕುಡಿಯುವ ನೀರಿನ ತೊಂದರೆ ಉದ್ಭವಿಸುವ ಗ್ರಾಮಗಳ ಪಟ್ಟಿಯನ್ನು ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು ಸಿದ್ಧಪಡಿಸಬೇಕು. ಸಾರ್ವಜನಿಕರಿಗೆ ಕುಡಿಯುವ ನೀರು ಒದಗಿಸುವ ಕರ್ತವ್ಯ ನಿಮ್ಮದಾಗಿದೆ. ಮುಂಚಿತವಾಗಿಯೇ ಖಾಸಗಿ ಬೋರ್‍ವೆಲ್ ಹಾಗೂ ಟ್ಯಾಂಕರ್‍ಗಳನ್ನು ಗುರುತಿಸಿ ಅಗತ್ಯ ಬಿದ್ದಾಗ ಸೇವೆಗೆ ಪಡೆಯುವಂತೆ ಚಿತ್ರದುರ್ಗ ತಹಶೀಲ್ದಾರ್ ಡಾ.ನಾಗವೇಣಿ ಹೇಳಿದರು.
ನಗರದ ತಾಲ್ಲೂಕು ಪಂಚಾಯತಿ ಸಭಾಂಗಣದಲ್ಲಿ ಬುಧವಾರ ಕುಡಿಯುವ ನೀರು ಸರಬರಾಜು ಕುರಿತು ಜರುಗಿದ ಸಭೆಯಲ್ಲಿ ಅವರು ಮಾತನಾಡಿದರು.
ಕುಡಿಯುವ ನೀರಿನ ಸಮಸ್ಯೆ ಎದುರಿಸಲು ನಿಖರ ಅಂಕಿ ಅಂಶಗಳನ್ನು ಸಂಗ್ರಹಿಸಬೇಕು. ಗ್ರಾಮಗಳ ವ್ಯಾಪ್ತಿಯಲ್ಲಿ ಬೋರ್‍ವೆಲ್‍ಗಳ ಪಟ್ಟಿ ಸಿದ್ದಪಡಿಸಬೇಕು. ಕುಡಿಯುವ ನೀರಿನ ಕಾಮಗಾರಿಗಳನ್ನು ಕೈಗೊಳ್ಳಲು ನೀತಿ ಸಂಹಿತೆ ಅಡ್ಡಿ ಬರುವುದಿಲ್ಲ. ಹೊಸ ಬೋರ್‍ವೆಲ್ ಕೊರೆದು, ಪೈಪ್‍ಲೈನ್ ಅಳವಡಿಸಿ ನೀರು ಸರಬರಾಜು ಮಾಡವ ಕುರಿತು ವಿಸ್ತøತ ಯೋಜನಾ ವರದಿಯನ್ನು ನೀಡಬೇಕು. ಇದಕ್ಕೆ ಪಿಡಿಓಗಳು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಇಂಜಿನಿಯರ್‍ಗಳ ಸಹಾಯ ಪಡೆದುಕೊಳ್ಳುವಂತೆ ತಹಶೀಲ್ದಾರ್ ಡಾ.ನಾಗವೇಣಿ ಸೂಚಿಸಿದರು.
ಹಲವು ಗ್ರಾಮಗಳಲ್ಲಿ ಈಗಾಗಲೇ ಟ್ಯಾಂಕರ್ ಮೂಲಕ ಕುಡಿಯುವ ನೀರು ಸರಬರಾಜು ಮಾಡಲಾಗುತ್ತಿದೆ. ಈ ಟ್ಯಾಂಕರ್‍ಗಳಿಗೆ ಜಿಪಿಎಸ್ ಅಳವಡಿಸಲಾಗಿದೆ. ಎಷ್ಟು ಬಾರಿ ಟ್ಯಾಂಕರ್‍ಗಳನ್ನು ನೀರು ಸರಬರಾಜು ಮಾಡಿವೆ. ಬೋರ್‍ವೆಲ್‍ಗಳಲ್ಲಿ ದೊರಕುವ ನೀರಿನ ಪ್ರಮಾಣ ಏನು ಎಂಬುದರ ಬಗ್ಗೆ ಧೃಡೀಕರಣ ನೀಡಬೇಕು. ಈಗಾಗಲೇ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡಲು ಟೆಂಡರ್ ನೀಡಲಾಗಿದೆ. ನಿಮ್ಮ ವ್ಯಾಪ್ತಿಯ ಕಂದಾಯ ನಿರೀಕ್ಷಕರ ಮೂಲಕ ಈ ಟ್ಯಾಂಕರ್‍ಗಳನ್ನು ಗ್ರಾಮಗಳಿಗೆ ಪಡೆದುಕೊಳ್ಳುವಂತೆ ಹೇಳಿದರು.
ಪ್ರಸ್ತುತ ಬರಪರಿಸ್ಥಿತಿ ಉಂಟಾಗಿದೆ. ಕೆಲಸ ದೊರಕದೆ ಯಾರು ಸಹ ಗುಳೆ ಹೋಗದಂತೆ ನೋಡಿಕೊಳ್ಳಬೇಕು. ನರೇಗಾದಡಿ ಗ್ರಾಮದಲ್ಲಿಯೇ ಕೆಲಸವನ್ನು ಸೃಜಿಸಿ, ಬಡ ಕುಟುಂಬಗಳಿಗೆ ಆರ್ಥಿಕ ನೆರವು ನೀಡಬೇಕು. ಕುಡಿಯುವ ನೀರು ಸರಬಾಜಿನಲ್ಲಿ ವ್ಯತ್ಯಯ ಉಂಟಾಗಬಾರದು. ಜಾನುವಾರುಗಳಿಗೂ ಕುಡಿಯುವ ನೀರು ಕಲ್ಪಿಸುವ ಕೆಲಸ ಮಾಡುವಂತೆ ತಾ.ಪಂ.ಇಓ ಅನಂತರಾಜು ಪಿಡಿಓಗಳಿಗೆ ನಿರ್ದೇಶನ ನೀಡಿದರು.
ಚಿತ್ರದುರ್ಗ ತಾಲ್ಲೂಕಿನಲ್ಲಿ ಸದ್ಯ 6 ಗ್ರಾಮ ಪಂಚಾಯಿತಿ ವ್ಯಾಪ್ತಿಯ 9 ಗ್ರಾಮಗಳಿಗೆ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡಲಾಗುತ್ತಿದೆ. 8 ಗ್ರಾಮ ಪಂಚಾಯತಿ ವ್ಯಾಪ್ತಿಯ 16 ಗ್ರಾಮಗಳಲ್ಲಿ ಖಾಸಗಿ ಬೊರೆವೆಲ್ ಬಾಡಿಗೆ ಪಡೆದು ನೀರು ಒದಗಿಸಲಾಗುತ್ತಿದೆ. ಮುಂಬರುವ ದಿನಗಳಲ್ಲಿ 27 ಗ್ರಾಮ ಪಂಚಾಯತಿ ವ್ಯಾಪ್ತಿಯ 59 ಗ್ರಾಮಗಳಲ್ಲಿ ತೀವ್ರ ತರನಾದ ಕುಡಿಯುವ ನೀರಿನ ಸಮಸ್ಯೆ ತಲೆದೊರಬಹುದು. ಈ ನಿಟ್ಟಿನಲ್ಲಿ ನೀರಿನ ಸೌಕರ್ಯ ಒದಗಿಸಲು ಅಗತ್ಯ ಸಿದ್ಧತೆ ಕೈಗೊಳ್ಳುವಂತೆ ಸೂಚನೆ ನೀಡಿದರು.
ಸಭೆಯಲ್ಲಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಸಹಾಯಕ ಇಂಜಿನಿಯರ್ ಶಿವಮೂರ್ತಿ, ಆರ್.ಡಿ.ಪಿ.ಆರ್ ಸಹಾಯಕ ನಿರ್ದೇಶಕಿ ರೂಪಕುಮಾರಿ, ತಾ.ಪಂ ವ್ಯವಸ್ಥಾಪಕ ತಿಪ್ಪೇಸ್ವಾಮಿ ಸೇರಿದಂತೆ ತಾಲ್ಲೂಕಿನ ಎಲ್ಲಾ ಗ್ರಾಮ ಪಂಚಾಯತಿ ಪಿಡಿಓಗಳು ಉಪಸ್ಥಿತರಿದ್ದರು.

Latest News >>

ಡಿ.ಸಿ.ಸಿ. ಬ್ಯಾಂಕ್ ನಿರ್ದೇಶಕರಾಗಿ ಓ.ಮಂಜುನಾಥ್ ಮಾಳಿಗೆ ಅವರು ಅವಿರೋಧ ಆಯ್ಕೆಯಾಗಿದ್ದಾರೆ.

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತ, ಚಿತ್ರದುರ್ಗ ಇದರ ಆಡಳಿತ ಮಂಡಳಿ ನಿರ್ದೇಶಕರ ಸ್ಥಾನಕ್ಕೆ ಹಿರಿಯೂರು...

ಚಿತ್ರದುರ್ಗದಲ್ಲಿ ನಡೆಯಲಿರುವ ಪತ್ರಿಕಾ ವಿತರಕರ ಹಂಚಿಕೆದಾರರ 4ನೇರಾಜ್ಯಸಮ್ಮೇಳನ ಕಾರ್ಯಕ್ರಮ ಯಶಸ್ವಿಯಾಗಲಿ : ಆಲೂರು ಹನುಮಂತರಾಯಪ್ಪ

ಹಿರಿಯೂರು: ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ ಹಾಗೂ ಚಿತ್ರದುರ್ಗ ಜಿಲ್ಲಾ ಪತ್ರಿಕೆ ಹಂಚಿಕೆದಾರರ ಹಾಗೂ ವಿತರಕರ ಸಂಘ (ರಿ) ಇವರುಗಳ...

ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ ಅನುಷ್ಟಾನ ಮೌಲ್ಯಮಾಪನ ಸಭೆಜಿಲ್ಲಾ ಮೇಲ್ವಿಚಾರಣಾ ಸಮಿತಿಯಿಂದ ಕ್ರಿಯಾಯೋಜನೆ ಅನುಮೋದನೆ ಕ್ರಮಕ್ಕೆ ಶಿಫಾರಸ್ಸು

ಚಿತ್ರದುರ್ಗ ಸೆ.06: ಪರಿಶಿಷ್ಟ ಜಾತಿ ಹಾಗೂ ಗಿರಿಜನ ಉಪಯೋಜನೆಯಡಿ (ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ) ಜಿಲ್ಲೆಯಲ್ಲಿ ಕೈಗೊಳ್ಳುವ ಎಲ್ಲಾ...

ಪೋಷಣ್ ಮಾಸಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ.ಡಿ.ಎಂ.ಅಭಿನವ್ ಪೌಷ್ಠಿಕಾಂಶಯುಕ್ತ ಆಹಾರ ಪದಾರ್ಥ ಸೇವಿಸುವುದು ಅಭ್ಯಾಸಿಸಿ

ಚಿತ್ರದುರ್ಗ ಸೆ.6: ಪೋಷಣ್ ಮಾಸಾಚರಣೆ ಕಾರ್ಯಕ್ರಮ ಮಕ್ಕಳ ಹಾಗೂ ಗರ್ಭಿಣಿಯರ, ಬಾಣಂತಿಯರ ಆರೋಗ್ಯ ಪೋಷಣ ಮಾಸಾಚರಣೆ ಆಗಬೇಕು. ಮಕ್ಕಳಲ್ಲಿ...

ಎಚ್‌ಐವಿ/ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆ

ಚಿತ್ರದುರ್ಗ ಸೆ.6: ಯುವ ಜನೋತ್ಸವ ಅಂಗವಾಗಿ ಎಚ್‌ಐವಿ/ ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆಯು ಚಿತ್ರದುರ್ಗ ನಗರದಲ್ಲಿ ಗುರುವಾರ...

ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಕಾಮಗಾರಿ ಪರಿಶೀಲನೆ

ಚಿತ್ರದುರ್ಗ ಸೆ.06: ನಬಾರ್ಡ್ ಸಂಸ್ಥೆಯ ಡಿಜಿಎಂ ಸಂಜೀವ್ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಈಚೆಗೆ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ವಾಣಿವಿಲಾಸ...

ಮೊಳಕಾಲ್ಮುರು : ಫಲಾನುಭವಿಗಳ ಮನೆ ಬಾಗಿಲಿಗೆ ಹೋಗಿ ಸಮಸ್ಯೆ ಆಲಿಸಿ ಶಾಸಕ ಎನ್ ವೈ ಗೋಪಾಲಕೃಷ್ಣ.

ಮೊಳಕಾಲ್ಮೂರು :-ಪಟ್ಟಣದ ತಾಲೂಕು ಪಂಚಾಯಿತಿಯಲ್ಲಿ ಗ್ಯಾರೆಂಟಿ ಅನುಷ್ಠಾನ ಸಮಿತಿ ನೂತನ ಕಾರ್ಯಾಲಯವನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ಎನ್ ವೈ....

ಬೆಂಬಲಬೆಲೆಯಲ್ಲಿ ಸೂರ್ಯಕಾಂತಿ ಖರೀದಿ ಕೇಂದ್ರಗಳ ಸ್ಥಾಪನೆ

ಚಿತ್ರದುರ್ಗ ಸೆ.04: 2024-25ನೇ ಸಾಲಿಗೆ ಕೇಂದ್ರ ಸರ್ಕಾರದ ಬೆಂಬಲಬೆಲೆ ಯೋಜನೆಯಡಿ ನಿಗದಿಪಡಿಸಿರುವ ರೂ.7,280/- (ಪ್ರತಿ ಕ್ವಿಂಟಾಲ್‌ಗೆ)...

ಮಹಾತ್ಮ ಗಾಂಧೀ ಸೇವಾ ಪ್ರಶಸ್ತಿ – ಕರ್ನಾಟಕ’ ಆಯ್ಕೆಗೆ ನಾಮನಿರ್ದೇಶನ ಆಹ್ವಾನ

ಚಿತ್ರದುರ್ಗ ಸೆ.04: ರಾಜ್ಯ ಸರ್ಕಾರವು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಸ್ಥಾಪಿಸಿರುವ ಐದು ಲಕ್ಷ ರೂಪಾಯಿ ನಗದನ್ನು ಒಳಗೊಂಡ...

ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್ 110 ಸಿಸಿ ಯ ಆಕರ್ಷಕ ಸ್ಕೂಟಿ ಮಾರುಕಟ್ಟೆಗೆ ಬಿಡುಗಡೆ.

ಚಿತ್ರದುರ್ಗ: ಚಿತ್ರದುರ್ಗ ನಗರದ ತುರುವನೂರು ರಸ್ತೆಯಲ್ಲಿನ ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page