ವಿವಿ ಪುರ ಗ್ರಾ.ಪಂ. ವ್ಯಾಪ್ತಿಯ 11 ಹಳ್ಳಿಗಳಿಗೆ ಶಾಶ್ವತ ಕುಡಿಯುವ ನೀರು ಸೌಲಭ್ಯವನ್ನು ಕಲ್ಪಿಸಲು ಕೆರೆಗಳಿಗೆ ನೀರು ತುಂಬಿಸಬೇಕು ನೀರಾವರಿ ಹೋರಾಟ ಸಮಿತಿಯ ಅಧ್ಯಕ್ಷ ಕಸವನಹಳ್ಳಿ ರಮೇಶ್

by | 29/03/24 | ಪ್ರತಿಭಟನೆ


ಹಿರಿಯೂರು:
ತಾಲ್ಲೂಕಿನ ವಿವಿ ಪುರ ಗ್ರಾ.ಪಂ. ವ್ಯಾಪ್ತಿಯಲ್ಲಿರುವ ಸುತ್ತಮುತ್ತಲ 11 ಹಳ್ಳಿಗಳಿಗೆ ಶಾಶ್ವತ ಕುಡಿಯುವ ನೀರು ಸೌಲಭ್ಯ ಕಲ್ಪಿಸಲು ಕೆರೆಗಳಿಗೆ ನೀರು ತುಂಬಿಸಬೇಕೆಂಬ ಗ್ರಾಮಸ್ಥರ ಹೋರಾಟಕ್ಕೆ ನಮ್ಮ ಸಂಪೂರ್ಣ ಬೆಂಬಲವಿದೆ ಎಂಬುದಾಗಿ ತಾಲ್ಲೂಕು ನೀರಾವರಿ ಹೋರಾಟ ಸಮಿತಿ ಅಧ್ಯಕ್ಷ ಹಾಗೂ ಸಾಮಾಜಿಕ ಕಾರ್ಯಕರ್ತರಾದ ಕಸವನಹಳ್ಳಿ ರಮೇಶ್ ಹೇಳಿದರು.
ತಾಲ್ಲೂಕಿನ ಭರಮಗಿರಿ ಗ್ರಾಮದ ಕೆರೆಗೆ ನೀರು ಹರಿಸುವಂತೆ ಒತ್ತಾಯಿಸಿ ಗ್ರಾಮಸ್ಥರು-ರೈತರು ನಡೆಸುತ್ತಿರುವ ಧರಣಿ ಸ್ಥಳಕ್ಕೆ ಗುರುವಾರ ಭೇಟಿ ನೀಡಿ, ಧರಣಿ ನಿರತರಿಗೆ ತಮ್ಮ ಬೆಂಬಲ ವ್ಯಕ್ತಪಡಿಸಿ, ನಂತರ ಅವರು ಮಾತನಾಡಿದರು.
ವಾಣಿವಿಲಾಸ ಸಾಗರ ಜಲಾಶಯದ ಬುಡದಲ್ಲಿರುವ 11 ಗ್ರಾಮಗಳ ಪರಿಸ್ಥಿತಿ ದೀಪದ ಕೆಳಗಿನ ಕತ್ತಲು ಎನ್ನುವಂತಾಗಿದೆ. ಜಲಾಶಯ ನಿರ್ಮಿಸಿ ಶತಮಾನ ಕಳೆದರೂ ತಾಲ್ಲೂಕಿನ ಜನತೆಗೆ ಶುದ್ದ ಕುಡಿಯುವ ನೀರು ಸಿಗುತ್ತಿಲ್ಲ. ಅಂತರ್ಜಲ ಅಪಾಯದ ಮಟ್ಟ ತಲುಪಿದೆ. ಕೊಳವೆ ಬಾವಿಗಳ ಸಂಖ್ಯೆ ಮಿತಿ ಮೀರಿದೆ. ಅಡಿಕೆ ಮೇಲಿನ ವ್ಯಾಮೋಹ, ಅತಿಯಾದ ಅಂತರ್ಜಲ ಬಳಕೆಯಿಂದ ಹನಿ ನೀರಿಗೂ ಪರದಾಡುವಂತಾಗಿದೆ ಎಂಬುದಾಗಿ ಕಳವಳ ವ್ಯಕ್ತಪಡಿಸಿದರು.
ಏಕ ಬೆಳೆ ಪದ್ದತಿ ಅಪಾಯ ಎನ್ನುವ ಅರಿವು ರೈತರಿಗೆ ಇದ್ದರೂ ಎಚ್ಚೆತ್ತುಕೊಳ್ಳುತ್ತಿಲ್ಲ. ತಾಲ್ಲೂಕಿನ ಜಲಪಾತ್ರೆಗಳು ಬತ್ತಿದ್ದು, ಭದ್ರಾ ಮೇಲ್ದಂಡೆ ಯೋಜನೆ ತ್ವರಿತವಾಗಿ ಪೂರ್ಣಗೊಳಿಸಿ, ವಿವಿ ಸಾಗರಕ್ಕೆ ಕನಿಷ್ಠ ಹತ್ತು ಟಿಎಂಸಿ ಅಡಿ ನೀರು ತುಂಬಿಸಿದರೆ ಮಾತ್ರ ಜಲ ಸಂಕಷ್ಟಕ್ಕೆ ಪರಿಹಾರ ಸಿಗಲಿದೆ ಎಂಬುದಾಗಿ ತಿಳಿಸಿದರು.
ಜನ ಪ್ರತಿನಿಧಿಗಳು- ಅಧಿಕಾರಿಗಳು ಸಮಸ್ಯೆ ಪರಿಹಾರಕ್ಕೆ ತಕ್ಷಣ ಕ್ರಮ ಕೈಗೊಳ್ಳಬೇಕು . ಒಂದು ವಾರದಿಂದ ರೈತರು ಪ್ರತಿಭಟಿಸುತ್ತಿದ್ದು, ಜಿಲ್ಲಾ ಸಚಿವರು ಸ್ಥಳಕ್ಕೆ ಭೇಟಿ ನೀಡಿ, ಸಮಸ್ಯೆ ಆಲಿಸಬೇಕು, ಇಲ್ಲವಾದಲ್ಲಿ ನಮ್ಮ ಹೋರಾಟವನ್ನು ಇನ್ನೂ ತೀವ್ರಗೊಳಿಸಬೇಕಾಗುತ್ತದೆ ಎಂಬುದಾಗಿ ವಿವಿಪುರ ಗ್ರಾಮಸ್ಥರು ಎಚ್ಚರಿಸಿದರು.
ಈ ಸಂದರ್ಭದಲ್ಲಿ ವಿವಿ ಪುರ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಗಂಗಮ್ಮ ಉಮೇಶ್, ಗ್ರಾಮಸ್ಥರಾದ ಬಿ.ಎಸ್. ಕೆಂಚಪ್ಪ, ತಳವಾರಹಟ್ಟಿ ತಿಮ್ಮರಾಜ್ , ಮುನ್ನಾ, ಕವಿತಾಕಣುಮಪ್ಪ, ಬಿ.ಕೆ.ಲೋಕೇಶ್, ಜಯರಾಮಯ್ಯ, ಕಾಂತರಾಜ್, ಎನ್. ಮಂಜುನಾಥ್, ಯೋಗೇಶ್ವರ್, ಕಕ್ಕಯ್ಯನ ಹಟ್ಟಿ ಚಂದ್ರಪ್ಪ, ಕೆ.ಆರ್. ತಿಪ್ಪೇಸ್ವಾಮಿ, ಕಾಂತಣ್ಣ, ವೆಂಕಟಾಚಲಯ್ಯ,ಅಗಳೇರಟ್ಟಿ ನಾಗರಾಜ್, ಕುರುಬರಹಳ್ಳಿ ರಘುನಾಯ್ಕ್, ಕೆರೆ ಸಮಿತಿ ಅಧ್ಯಕ್ಷ ವೀರಭದ್ರಪ್ಪ, ಮೂರ್ತಿ, ಮೂಡ್ಲಪ್ಪ, ಓಂಕಾರಪ್ಪ, ರಮೇಶ್, ವಂದೇ ಮಾತರಂ ವೇದಿಕೆಯ ದೇವರಾಜ್, ನಾಗಣ್ಣ, ಎಸ್.ಕೆ.ರಘು, ಕಸವನಹಳ್ಳಿ ರಾಮಚಂದ್ರ, ಚಂದ್ರಕಾತ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

Latest News >>

ಡಿ.ಸಿ.ಸಿ. ಬ್ಯಾಂಕ್ ನಿರ್ದೇಶಕರಾಗಿ ಓ.ಮಂಜುನಾಥ್ ಮಾಳಿಗೆ ಅವರು ಅವಿರೋಧ ಆಯ್ಕೆಯಾಗಿದ್ದಾರೆ.

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತ, ಚಿತ್ರದುರ್ಗ ಇದರ ಆಡಳಿತ ಮಂಡಳಿ ನಿರ್ದೇಶಕರ ಸ್ಥಾನಕ್ಕೆ ಹಿರಿಯೂರು...

ಚಿತ್ರದುರ್ಗದಲ್ಲಿ ನಡೆಯಲಿರುವ ಪತ್ರಿಕಾ ವಿತರಕರ ಹಂಚಿಕೆದಾರರ 4ನೇರಾಜ್ಯಸಮ್ಮೇಳನ ಕಾರ್ಯಕ್ರಮ ಯಶಸ್ವಿಯಾಗಲಿ : ಆಲೂರು ಹನುಮಂತರಾಯಪ್ಪ

ಹಿರಿಯೂರು: ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ ಹಾಗೂ ಚಿತ್ರದುರ್ಗ ಜಿಲ್ಲಾ ಪತ್ರಿಕೆ ಹಂಚಿಕೆದಾರರ ಹಾಗೂ ವಿತರಕರ ಸಂಘ (ರಿ) ಇವರುಗಳ...

ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ ಅನುಷ್ಟಾನ ಮೌಲ್ಯಮಾಪನ ಸಭೆಜಿಲ್ಲಾ ಮೇಲ್ವಿಚಾರಣಾ ಸಮಿತಿಯಿಂದ ಕ್ರಿಯಾಯೋಜನೆ ಅನುಮೋದನೆ ಕ್ರಮಕ್ಕೆ ಶಿಫಾರಸ್ಸು

ಚಿತ್ರದುರ್ಗ ಸೆ.06: ಪರಿಶಿಷ್ಟ ಜಾತಿ ಹಾಗೂ ಗಿರಿಜನ ಉಪಯೋಜನೆಯಡಿ (ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ) ಜಿಲ್ಲೆಯಲ್ಲಿ ಕೈಗೊಳ್ಳುವ ಎಲ್ಲಾ...

ಪೋಷಣ್ ಮಾಸಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ.ಡಿ.ಎಂ.ಅಭಿನವ್ ಪೌಷ್ಠಿಕಾಂಶಯುಕ್ತ ಆಹಾರ ಪದಾರ್ಥ ಸೇವಿಸುವುದು ಅಭ್ಯಾಸಿಸಿ

ಚಿತ್ರದುರ್ಗ ಸೆ.6: ಪೋಷಣ್ ಮಾಸಾಚರಣೆ ಕಾರ್ಯಕ್ರಮ ಮಕ್ಕಳ ಹಾಗೂ ಗರ್ಭಿಣಿಯರ, ಬಾಣಂತಿಯರ ಆರೋಗ್ಯ ಪೋಷಣ ಮಾಸಾಚರಣೆ ಆಗಬೇಕು. ಮಕ್ಕಳಲ್ಲಿ...

ಎಚ್‌ಐವಿ/ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆ

ಚಿತ್ರದುರ್ಗ ಸೆ.6: ಯುವ ಜನೋತ್ಸವ ಅಂಗವಾಗಿ ಎಚ್‌ಐವಿ/ ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆಯು ಚಿತ್ರದುರ್ಗ ನಗರದಲ್ಲಿ ಗುರುವಾರ...

ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಕಾಮಗಾರಿ ಪರಿಶೀಲನೆ

ಚಿತ್ರದುರ್ಗ ಸೆ.06: ನಬಾರ್ಡ್ ಸಂಸ್ಥೆಯ ಡಿಜಿಎಂ ಸಂಜೀವ್ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಈಚೆಗೆ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ವಾಣಿವಿಲಾಸ...

ಮೊಳಕಾಲ್ಮುರು : ಫಲಾನುಭವಿಗಳ ಮನೆ ಬಾಗಿಲಿಗೆ ಹೋಗಿ ಸಮಸ್ಯೆ ಆಲಿಸಿ ಶಾಸಕ ಎನ್ ವೈ ಗೋಪಾಲಕೃಷ್ಣ.

ಮೊಳಕಾಲ್ಮೂರು :-ಪಟ್ಟಣದ ತಾಲೂಕು ಪಂಚಾಯಿತಿಯಲ್ಲಿ ಗ್ಯಾರೆಂಟಿ ಅನುಷ್ಠಾನ ಸಮಿತಿ ನೂತನ ಕಾರ್ಯಾಲಯವನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ಎನ್ ವೈ....

ಬೆಂಬಲಬೆಲೆಯಲ್ಲಿ ಸೂರ್ಯಕಾಂತಿ ಖರೀದಿ ಕೇಂದ್ರಗಳ ಸ್ಥಾಪನೆ

ಚಿತ್ರದುರ್ಗ ಸೆ.04: 2024-25ನೇ ಸಾಲಿಗೆ ಕೇಂದ್ರ ಸರ್ಕಾರದ ಬೆಂಬಲಬೆಲೆ ಯೋಜನೆಯಡಿ ನಿಗದಿಪಡಿಸಿರುವ ರೂ.7,280/- (ಪ್ರತಿ ಕ್ವಿಂಟಾಲ್‌ಗೆ)...

ಮಹಾತ್ಮ ಗಾಂಧೀ ಸೇವಾ ಪ್ರಶಸ್ತಿ – ಕರ್ನಾಟಕ’ ಆಯ್ಕೆಗೆ ನಾಮನಿರ್ದೇಶನ ಆಹ್ವಾನ

ಚಿತ್ರದುರ್ಗ ಸೆ.04: ರಾಜ್ಯ ಸರ್ಕಾರವು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಸ್ಥಾಪಿಸಿರುವ ಐದು ಲಕ್ಷ ರೂಪಾಯಿ ನಗದನ್ನು ಒಳಗೊಂಡ...

ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್ 110 ಸಿಸಿ ಯ ಆಕರ್ಷಕ ಸ್ಕೂಟಿ ಮಾರುಕಟ್ಟೆಗೆ ಬಿಡುಗಡೆ.

ಚಿತ್ರದುರ್ಗ: ಚಿತ್ರದುರ್ಗ ನಗರದ ತುರುವನೂರು ರಸ್ತೆಯಲ್ಲಿನ ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page