ಶ್ರೀ ಚಳ್ಳಕೆರೆಮ್ಮ,ವೀರಭದ್ರಸ್ವಾಮಿ ದೇವಸ್ಥಾನಗಳ ವಿವಾದಕ್ಕೆ ತೆರೆ-ಕಮಿಟಿ ಬದಲಾಗಿ ಟ್ರಸ್ಟ್ ರಚನೆಗೆ ಒಪ್ಪಿಗೆ.

by | 16/05/24 | ಜನಧ್ವನಿ


ಚಳ್ಳಕೆರೆ ಮೇ 16 ನಗರದ ಶ್ರೀ ವೀರಭದ್ರ ಸ್ವಾಮಿ ದೇವಸ್ಥಾನ ಹಾಗೂ ಚಳಕರೆಮ್ಮ ಸಾರ್ವಜನಿಕ ದೇವಸ್ಥಾನಗಳಲ್ಲಿ ದುರಾಡಳಿತ ಹಾಗೂ ಹಣದ ದುರುಪಯೋಗ ವಾಗುತ್ತಿರುವ ಕಾರಣ ಈ ಎರಡು ದೇವಸ್ಥಾನವನ್ನು ಕೂಡಲೆ ಹಿಂದೂ ಧಾರ್ಮಿಕ ಸಂಸ್ಥೆ ಮತ್ತು ಧಾರ್ಮಿಕ ದತ್ತಿ ಇಲಾಖೆಯ ವಶಕ್ಕೆ ಪಡೆಯುವಂತೆ ಎಂ.ಎಸ್. ಬಸವರಾಜು ಜಿಲ್ಲಾಧಿಕಾರಿಗಳಿಗೆ ದೂರುಸಲ್ಲಿಸಿದ ಹಿನ್ನೆಲೆಯಲ್ಲಿ ಕಂದಾಯ ಇಲಾಖೆಗೆ ದೇವಸ್ಥಾನಗಳಿಗೆ ಭೇಟಿ ನೀಡಿ ಸಭೆ ನಡೆಸಿ ಆರೋಪಕ್ಕೆ ಸುಖಾಂತ್ಯ ಕಂಡಿದೆ.
ಚಳ್ಳಕೆರೆ ತಾಲೂಕು ಕಛೇರಿಯ ಕಂದಾಯ ಅಧಿಕಾರಿಗಳು ಸ್ಥಳ ಪರೀಶಿಲಿಸಿ ವರದಿ ನೀಡಲು ಎರಡು ಬಣದವರ ಸಮ್ಮುಖದಲ್ಲಿ ಸಭೆ ನಡೆಸಿದ್ದಾರೆ
ನಗರದ ಆರಾಧ್ಯದೇವ ಶ್ರೀ ವೀರಭದ್ರಸ್ವಾಮಿ ದೇವಾಲಯ ಹಾಗೂ ಶ್ರೀಚಳ್ಳಕೆರೆಮ್ಮ ದೇವಿ ದೇವಾಲಯದ ಎರಡು ದೇವಾಲಯಗಳಲ್ಲಿ ಸರಿಯಾದ ರೀತಿಯಲ್ಲಿ ದೇವರ ಆರಾಧನೆ ನಡೆಯುತ್ತಿಲ್ಲ ಆದ್ದರಿಂದ ಮುಜುರಾಯಿ ಇಲಾಖೆಗೆ ಸೇರಿಸಬೇಕು ಎಂಬ ವರದಿ ಮೇರೆಗೆ ಚಳ್ಳಕೆರೆ ತಾಲೂಕು ಕಂದಾಯ ಅಧಿಕಾರಿಗಳು ತಂಡ ದೇವಾಸ್ಥಾನಕ್ಕೆ ಸಂಬಂಧಿಸಿದ ಪದಾಧಿಕಾರಗಳ ಸಮಕ್ಷಮದಲ್ಲಿ ಸಭೆ ನಡೆಸಿದ್ದಾರೆ.
ಇನ್ನೂ ಸಭೆಯಲ್ಲಿ ಸಾವಿರಾರು ವರ್ಷಗಳ ಇತಿಹಾಸ ಇರುವ ಲಕ್ಷಾಂತರ ಭಕ್ತರನ್ನು ಹೊಂದಿರುವ ಈ ದೇವರುಗಳ ದೇವಾಲಯ ಹೊರತು ಪಡಿಸಿದರೆ ಬೇರೆ ಯಾವುದೇ ಮೂಲ ಆದಾಯ ಇಲ್ಲ ಇನ್ನೂ ಭಕ್ತರು ನೀಡಿದ ಅಲ್ಪ ಕಾಣಿಕೆ ಸಂದಾಯವಾಗುತ್ತಿದೆ, ಇದರಿಂದ ದೇವರ ಪೂಜಾ ಕೈಂಕಾರ್ಯಗಳು ಜರುಗುತ್ತಿವೆ, ಇದರಿಂದ ಮುಜರಾಯಿ ಇಲಾಖೆಗೆ ಒಳಪಡುವ ಯಾವುದೇ ಆಸ್ತಿ ಪಾಸ್ತಿ ಈ ದೇವಾಲಯಗಳಿಗೆ ಇಲ್ಲದೆ ಇರುವುದು ಕಂಡು ಬಂದಿದೆ ಎಂದು ಸಭೆಯಲ್ಲಿ ಚರ್ಚಿಸಿದ್ದಾರೆ, ಇನ್ನೂ ಪೂರ್ವಿಕರು ಯಾವ ರೀತಿಯಲ್ಲಿ ವಿಧಿ ವಿಧಾನ ಪದ್ದತಿಗಳನ್ನು ಅನುಸರಿಸಿಕೊಂಡು ದೇವಿಗಳ ಆರಾಧಕರು ಹಾಗಿದ್ದರು, ಆದೇ ರೀತಿಯಲ್ಲಿ ಸಂಪ್ರದಾಯ ಮುಂದುವರೆಸಿಕೊಂಡು ಹೋಗಲಾಗುವುದು ಹಾಗೂ ಈಗೀರುವ ಕೇವಲ “ಕಮಿಟಿ” ಬದಲಾಗಿ ‘ಟ್ರಸ್ಟ್” ಮಾಡಿಸಿಕೊಂಡು ಮುಂದುವರೆಸಲಾಗುವುದು ಎಂದು ಕಂದಾಯ ಅಧಿಕಾರಿಗಳಿಗೆ ಎರಡು ಬಣದವರು ಒಪ್ಪಿಕೊಂಡಿದ್ದಾರೆ.

ಪಟ್ಟದ ಐನೋರು ಬಸವರಾಜ್. ಮಾತನಾಡಿ ಸಾವಿರಾರು ವರ್ಷಗಳ ಇತಿಹಾಸ ಇರುವ ಗುರುಪರಂಪರೆಯ ದೇವಾಲಗಳನ್ನು ಮುಜರಾಯಿ ಇಲಾಖೆಗೆ ಒಳಪಡಿಸಬೇಕು ಎಂದು ಜಿಲ್ಲಾಧಿಕಾರಿಗಳ ಗಮನ ಸೇಳೆದಿದ್ದೆ ಆದ್ದರಿಂದ ಕಂದಾಯ ಅಧಿಕಾರಿಗಳು ಸ್ಥಳ ಪರೀಶಿಲಿಸಿ ಮಾಹಿತಿ ಪಡೆಯಲು ಬಂದಿದ್ದರು, ಎರಡು ಬಣಗಳ ಸಮಕ್ಷಮದಲ್ಲಿ ಸಭೆ ನಡೆಸಿ ಅಂತಿಮವಾಗಿ ಈಗಿರುವ ಎರಡು ದೇವಾಲಯಗಳ ಕಮಿಟಿ ಬೇಡ ಅದರ ಬದಲಾಗಿ ಟ್ರಸ್ಟ್ ಮಾಡಿಸಿಕೊಂಡರೆ ಅಧಿಕೃತವಾಗುತ್ತದೆ, ಎಂದು ಕಂದಾಯ ಅಧಿಕಾರಿಗಳ ಗಮನ ಸೇಳೆದಿದ್ದೆವೆ ಎಂದು ತಿಳಿಸಿದ್ದಾರೆ.
ಧರ್ಮಧಶಿಗಳಾದ ಪಿಜಿ.ರಾಮಣ್ಣ, ಪಿ.ತಿಪ್ಪೆಸ್ವಾಮಿ ತಳವಾರ ಮುಖ್ಯಸ್ಥರು. ಮಾತನಾಡಿ ಪೂರ್ವಿಕರು ಆರಾಧನೆ ಮಾಡಿಕೊಂಡ ಪುರಾತನ ಈ ದೇವರುಗಳ ದೇವಾಲಯಕ್ಕೆ ಸಂಬಂಧಿಸಿದಂತೆ ದೇವಾಲಯ ಬಿಟ್ಟರೆ ಯಾವುದೇ ಆದಾಯ ಬರುವ ಆಸ್ತಿಗಳು ಇಲ್ಲ, ಆದ್ದರಿಂದ ಗ್ರಾಮದಲ್ಲಿ ಒಪ್ಪಿ ಟ್ರಸ್ಟ್ ಮಾಡಿಸಲು ಒಪ್ಪಿಗೆ ಸಹಿ ಮಾಡಲಾಗಿದೆ, ಈಗೀರುವ ಎಲ್ಲಾ ಬಾಬ್ತುದಾರರು ಯಥಾ ಪ್ರಕಾರ ಸಂಪ್ರದಾಯ ಮುಂದುವರೆಸಲಾಗುವುದು.–
ಇದೇ ಸಂದರ್ಭದಲ್ಲಿ ಕಂದಾಯ ನಿರೀಕ್ಷಕರ ಪಿ.ಲಿಗೇಗೌಡ, ಗ್ರಾಮ ಲೆಕಕ್ಕಾಧಿಕಾರಿ ಪ್ರಕಾಶ್, ಧರ್ಮಧಶಿಗಳಾದ ಪಿಜಿ.ರಾಮಣ್ಣ. ಪಿ.ತಿಪ್ಪೆಸ್ವಾಮಿ, ದಳವಾಯಿಮೂರ್ತಿ, ನಾಗರಾಜ್, ಗೌಡ್ರುನಾಗಣ್ಣ, ಮಂಜಣ್ಣ, ಸೂರಯ್ಯ, ಚಿಕ್ಕಣ್ಣ, ರುದ್ರಣ್ಣ, ಬಸವರಾಜ್, ಹೆಚ್.ಮಂಜಣ್ಣ, ವಿ.ತಿಪ್ಪೆಸ್ವಾಮಿ. ಇತರರಿದ್ದರು.

Latest News >>

ಡಿ.ಸಿ.ಸಿ. ಬ್ಯಾಂಕ್ ನಿರ್ದೇಶಕರಾಗಿ ಓ.ಮಂಜುನಾಥ್ ಮಾಳಿಗೆ ಅವರು ಅವಿರೋಧ ಆಯ್ಕೆಯಾಗಿದ್ದಾರೆ.

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತ, ಚಿತ್ರದುರ್ಗ ಇದರ ಆಡಳಿತ ಮಂಡಳಿ ನಿರ್ದೇಶಕರ ಸ್ಥಾನಕ್ಕೆ ಹಿರಿಯೂರು...

ಚಿತ್ರದುರ್ಗದಲ್ಲಿ ನಡೆಯಲಿರುವ ಪತ್ರಿಕಾ ವಿತರಕರ ಹಂಚಿಕೆದಾರರ 4ನೇರಾಜ್ಯಸಮ್ಮೇಳನ ಕಾರ್ಯಕ್ರಮ ಯಶಸ್ವಿಯಾಗಲಿ : ಆಲೂರು ಹನುಮಂತರಾಯಪ್ಪ

ಹಿರಿಯೂರು: ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ ಹಾಗೂ ಚಿತ್ರದುರ್ಗ ಜಿಲ್ಲಾ ಪತ್ರಿಕೆ ಹಂಚಿಕೆದಾರರ ಹಾಗೂ ವಿತರಕರ ಸಂಘ (ರಿ) ಇವರುಗಳ...

ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ ಅನುಷ್ಟಾನ ಮೌಲ್ಯಮಾಪನ ಸಭೆಜಿಲ್ಲಾ ಮೇಲ್ವಿಚಾರಣಾ ಸಮಿತಿಯಿಂದ ಕ್ರಿಯಾಯೋಜನೆ ಅನುಮೋದನೆ ಕ್ರಮಕ್ಕೆ ಶಿಫಾರಸ್ಸು

ಚಿತ್ರದುರ್ಗ ಸೆ.06: ಪರಿಶಿಷ್ಟ ಜಾತಿ ಹಾಗೂ ಗಿರಿಜನ ಉಪಯೋಜನೆಯಡಿ (ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ) ಜಿಲ್ಲೆಯಲ್ಲಿ ಕೈಗೊಳ್ಳುವ ಎಲ್ಲಾ...

ಪೋಷಣ್ ಮಾಸಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ.ಡಿ.ಎಂ.ಅಭಿನವ್ ಪೌಷ್ಠಿಕಾಂಶಯುಕ್ತ ಆಹಾರ ಪದಾರ್ಥ ಸೇವಿಸುವುದು ಅಭ್ಯಾಸಿಸಿ

ಚಿತ್ರದುರ್ಗ ಸೆ.6: ಪೋಷಣ್ ಮಾಸಾಚರಣೆ ಕಾರ್ಯಕ್ರಮ ಮಕ್ಕಳ ಹಾಗೂ ಗರ್ಭಿಣಿಯರ, ಬಾಣಂತಿಯರ ಆರೋಗ್ಯ ಪೋಷಣ ಮಾಸಾಚರಣೆ ಆಗಬೇಕು. ಮಕ್ಕಳಲ್ಲಿ...

ಎಚ್‌ಐವಿ/ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆ

ಚಿತ್ರದುರ್ಗ ಸೆ.6: ಯುವ ಜನೋತ್ಸವ ಅಂಗವಾಗಿ ಎಚ್‌ಐವಿ/ ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆಯು ಚಿತ್ರದುರ್ಗ ನಗರದಲ್ಲಿ ಗುರುವಾರ...

ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಕಾಮಗಾರಿ ಪರಿಶೀಲನೆ

ಚಿತ್ರದುರ್ಗ ಸೆ.06: ನಬಾರ್ಡ್ ಸಂಸ್ಥೆಯ ಡಿಜಿಎಂ ಸಂಜೀವ್ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಈಚೆಗೆ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ವಾಣಿವಿಲಾಸ...

ಮೊಳಕಾಲ್ಮುರು : ಫಲಾನುಭವಿಗಳ ಮನೆ ಬಾಗಿಲಿಗೆ ಹೋಗಿ ಸಮಸ್ಯೆ ಆಲಿಸಿ ಶಾಸಕ ಎನ್ ವೈ ಗೋಪಾಲಕೃಷ್ಣ.

ಮೊಳಕಾಲ್ಮೂರು :-ಪಟ್ಟಣದ ತಾಲೂಕು ಪಂಚಾಯಿತಿಯಲ್ಲಿ ಗ್ಯಾರೆಂಟಿ ಅನುಷ್ಠಾನ ಸಮಿತಿ ನೂತನ ಕಾರ್ಯಾಲಯವನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ಎನ್ ವೈ....

ಬೆಂಬಲಬೆಲೆಯಲ್ಲಿ ಸೂರ್ಯಕಾಂತಿ ಖರೀದಿ ಕೇಂದ್ರಗಳ ಸ್ಥಾಪನೆ

ಚಿತ್ರದುರ್ಗ ಸೆ.04: 2024-25ನೇ ಸಾಲಿಗೆ ಕೇಂದ್ರ ಸರ್ಕಾರದ ಬೆಂಬಲಬೆಲೆ ಯೋಜನೆಯಡಿ ನಿಗದಿಪಡಿಸಿರುವ ರೂ.7,280/- (ಪ್ರತಿ ಕ್ವಿಂಟಾಲ್‌ಗೆ)...

ಮಹಾತ್ಮ ಗಾಂಧೀ ಸೇವಾ ಪ್ರಶಸ್ತಿ – ಕರ್ನಾಟಕ’ ಆಯ್ಕೆಗೆ ನಾಮನಿರ್ದೇಶನ ಆಹ್ವಾನ

ಚಿತ್ರದುರ್ಗ ಸೆ.04: ರಾಜ್ಯ ಸರ್ಕಾರವು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಸ್ಥಾಪಿಸಿರುವ ಐದು ಲಕ್ಷ ರೂಪಾಯಿ ನಗದನ್ನು ಒಳಗೊಂಡ...

ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್ 110 ಸಿಸಿ ಯ ಆಕರ್ಷಕ ಸ್ಕೂಟಿ ಮಾರುಕಟ್ಟೆಗೆ ಬಿಡುಗಡೆ.

ಚಿತ್ರದುರ್ಗ: ಚಿತ್ರದುರ್ಗ ನಗರದ ತುರುವನೂರು ರಸ್ತೆಯಲ್ಲಿನ ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page