ಗೌರಸಮುದ್ರ ಮಾರಮ್ಮ ಜಾತ್ರೆ ನಡೆಯುವ ಪ್ರದೇಶದಲ್ಲಿ ನಿತ್ಯ ಬರುವ ಭಕ್ತರಿಗಿಲ್ಲ ಸೌಲಭ್ಯ ಬಯಲೇ ಸ್ನಾನ, ಶೌಚಾಲಯ …

by | 23/05/24 | ಜನಧ್ವನಿ


ಚಳ್ಳಕೆರೆ ಜನಧ್ವನಿ ವಾರ್ತೆ ಮೇ 23. ಸಾವಿರಾರು ವರ್ಷಗಳ ಇತಿಹಾಸವಿರುವ ದೇವಸ್ಥನಕ್ಕೆ ಬರುವ ಭಕ್ತರಿಗೆ ಅಗತ್ಯ ಮೂಲಭೂತ ಸೌಲಭ್ಯಗಳಿಲ್ಲದೆ ನಲುಗುತ್ತಿದೆ.

ಹೌದು ಚಳ್ಳಕೆರೆ ತಾಲೂಕಿನ ಮೊಳಕಾಲ್ಮೂರು ವಿಧಾನ ಸಭಾ ಕ್ಷೇತ್ರಕ್ಕೆ ಸೇರಿದ ಗೌರಸಮುದ್ರ ಮಾರಮ್ಮ ದೇವಿಯ ಜಾತ್ರೆ ನಡೆಯುವ ತುಮ್ಮಲು ಪ್ರದೇಶದಲ್ಲಿ ನೆಲಸಿರುವ ಮಾರಮ್ಮ ದೇವಸ್ಥಾನಕ್ಕೆ ಪ್ರತಿ ಶುಕ್ರವಾರ ಹಾಗೂ ಮಂಗಳವಾರ ಜಿಲ್ಲೆ ಸೇರಿದಂತೆ ವಿವಿಧ ಜಿಲ್ಲೆ ಹಾಗೂ ನೆರೆಯ ರಾಜ್ಯಗಳಿಂದಲೂ ಭಕ್ತರು ಬರುತ್ತಾರೆ.
ರಾತ್ರಿ ತಂಗುವ ಮಹಿಳೆಯರಿಗೆ ಸ್ನಾನದ ಗೃಹ ಹಾಗೂ ಶೌಚಾಯಲಗಳಿಲ್ಲದೆ ಬಯಲೇ ಶೌಚಾಲಯ, ಸೀರೆಯ ಪರದೆ ಕಟ್ಟಿಕೊಂಡು ಮಹಿಳೆಯರು ಸ್ನಾನ ಮಾಡುವ ಪರಿಸ್ಥಿತಿ ಇದೆ. ಮಳೆ ಗಾಳಿ ಬಂದರೆ ಭಕ್ತರಿಗೆ ರಕ್ಷಣೆಗೆ ಇಲ್ಲಿ ಯಾವುದೇ ಸಮುದಾಯ ಭವನಗಳಿಲ್ಲದೆ ಬಿಸಿಲು ಮಳೆ,ಗಾಳಿಯಿಂದ ರಕ್ಷಣೆಗೆ ತೊಂಡರೆಯಾಗುತ್ತಿದೆ ಇತ್ತೀಚಿಗೆ ಭಕ್ತರು ಪೌಳಿಯನ್ನು ನಿರ್ಮಿಸಿದ್ದಾರೆ.
ಗೌರಸಮುದ್ರ ಗ್ರಾಮದ ಭಕ್ತಾಧಿಗಳ ಆರಾಧ್ಯ ದೇವತೆ ಮಾರಮ್ಮ ದೇವಿಯ ಸುಕ್ಷೇತ್ರ 500 ವರ್ಷಗಳ ಇತಿಹಾಸ ಹೊಂದಿದೆ. ಈ ದೇಗುಲವು ಮುಜರಾಯಿ ಇಲಾಖೆಗೆ ಒಳಪಟ್ಟಿದೆ ಎನ್ನಲಾಗಿದೆ ಆದರೆ ಮುಜರಾಯಿ ಇಲಾಖೆಗೆ ಸೇರಿಸಿದರುವ ಸಂಬಂಧಪಟ್ಟ ಇಲಾಖೆಯಲ್ಲಿ ದಾಖಲೆಗಳು ಲಭ್ಯವಿಲ್ಲ ಎನ್ನಲಾಗಿದೆ ಪ್ರತಿ ವರ್ಷದಲ್ಲಿ 20 ರಿಂದ 25 ಲಕ್ಷ ರೂ. ಆದಾಯ ಸಂಗ್ರಹವಾಗಲಿದೆ. ಆದರೂ ಮಾರಮ್ಮದೇವಿ ದೇವಸ್ಥಾನದಲ್ಲಿ ಮೂಲ ಸೌಕರ್ಯ ಮರಿಚೀಕೆಯಾಗಿದೆ.

ಜಾತ್ರೆ ಸಂದರ್ಭದಲ್ಲಿ ಮಾತ್ರ ಜನಪ್ರತಿ ನಿಧಿ ಹಾಗೂ ಅಧಿಕಾರಿ ಸಭೆ ಮಾಡಿ ಜಾತ್ರೆಗೆ ಬರುವ ಭಕ್ತರಿಗೆ ಯಾವುದೇ ತೊಂದರೆ ಯಾಗದಂತೆ ಎಲ್ಲಾ ಅಗತ್ಯ ಮೂಲ ಭೂತ ಸೌಲಭ್ಯಗಳನ್ನು ಒದಗಿಸುವಂತೆ ಹೇಳಲಾಗುತ್ತದೆ ಜಾತ್ರೆ ಮುಗಿದ ನಂತರ ಇತ್ತ ಯಾರು ಇಣಿಕಿ ನೋಡುವುದಿಲ್ಲ ಬಸ್ ತಂಗುದಾಣಗಳಿಲ್ಲ. ಭಕ್ತರಿಗೆ ಆರೋಗ್ಯ ಸಮಸ್ಯೆಯ ನಿವಾರಣೆಗೆ ಪ್ರಥಮ ಚಿಕಿತ್ಸಾ ಘಟಕ ಇಲ್ಲದಿರುವುದರಿಂದ 15 ಕಿ.ಮೀ.ದೂರದ ಬೇಡರೆಡ್ಡಿಹಳ್ಳಿ ಅಥವಾ 40 ಕಿ.ಮೀ. ದೂರವಿರುವ ಚಳ್ಳಕೆರೆಗೆ ಹೋಗಬೇಕಿದೆ.

ಗೌರಸಮುದ್ರ ಜಾತ್ರೆ ನಡೆಯುವ ತಮಲಿನಲ್ಲಿ ವಸತಿ ಮತ್ತು ಶೌಚಾಲಯಗಳಿಲ್ಲದೆ ಶುಕ್ರವಾರ ಮತ್ತು ಮಂಗಳವಾರ ಬರುವ ಮಹಿಳಾ ಭಕ್ತರು ಸೀರೆ ಕಟ್ಟಿಕೊಂಡು ಬಟ್ಟೆ ಬದಲಾಯಿಸಬೇಕಿದೆ.ಎಂದು ಬೇಸರ ವ್ಯಕ್ತಪಡಿಸಿದರು.


ಗ್ರಾಪಂ ಸದಸ್ಯ ಶಶಿಕುಮಾರ್ ಮಾತನಾಡಿ, ಮುಜರಾಯಿ ಇಲಾಖೆಗೆ ದೇವಿಯ ದುಡ್ಡು ಬೇಕೇ ಹೊರತು ಯಾತ್ರಿ ನಿವಾಸವಾಗಲಿ, ಶೌಚಾಲಯವಾಗಲಿ ಕಟ್ಟಿಸುತ್ತಿಲ್ಲ ಊರಿನವರು ತಾತ್ಕಾಲಿಕ ಶೌಚಾಲಯಗಳು ಜಾತ್ರೆಯಲ್ಲಿ ನಿರ್ಮಾಣ ಮಾಡುವುದು ಬೇಡ ಶಾಶ್ವತವಾಗಿ ಶೌಚಾಲಯ , ಸ್ನಾನದ ಗೃಹ, ನಿರ್ಮಿಸಬೇಕು ಎಂದು ಗಮನಸೆಳೆದಿದ್ದಾರೆ.

Latest News >>

ಡಿ.ಸಿ.ಸಿ. ಬ್ಯಾಂಕ್ ನಿರ್ದೇಶಕರಾಗಿ ಓ.ಮಂಜುನಾಥ್ ಮಾಳಿಗೆ ಅವರು ಅವಿರೋಧ ಆಯ್ಕೆಯಾಗಿದ್ದಾರೆ.

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತ, ಚಿತ್ರದುರ್ಗ ಇದರ ಆಡಳಿತ ಮಂಡಳಿ ನಿರ್ದೇಶಕರ ಸ್ಥಾನಕ್ಕೆ ಹಿರಿಯೂರು...

ಚಿತ್ರದುರ್ಗದಲ್ಲಿ ನಡೆಯಲಿರುವ ಪತ್ರಿಕಾ ವಿತರಕರ ಹಂಚಿಕೆದಾರರ 4ನೇರಾಜ್ಯಸಮ್ಮೇಳನ ಕಾರ್ಯಕ್ರಮ ಯಶಸ್ವಿಯಾಗಲಿ : ಆಲೂರು ಹನುಮಂತರಾಯಪ್ಪ

ಹಿರಿಯೂರು: ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ ಹಾಗೂ ಚಿತ್ರದುರ್ಗ ಜಿಲ್ಲಾ ಪತ್ರಿಕೆ ಹಂಚಿಕೆದಾರರ ಹಾಗೂ ವಿತರಕರ ಸಂಘ (ರಿ) ಇವರುಗಳ...

ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ ಅನುಷ್ಟಾನ ಮೌಲ್ಯಮಾಪನ ಸಭೆಜಿಲ್ಲಾ ಮೇಲ್ವಿಚಾರಣಾ ಸಮಿತಿಯಿಂದ ಕ್ರಿಯಾಯೋಜನೆ ಅನುಮೋದನೆ ಕ್ರಮಕ್ಕೆ ಶಿಫಾರಸ್ಸು

ಚಿತ್ರದುರ್ಗ ಸೆ.06: ಪರಿಶಿಷ್ಟ ಜಾತಿ ಹಾಗೂ ಗಿರಿಜನ ಉಪಯೋಜನೆಯಡಿ (ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ) ಜಿಲ್ಲೆಯಲ್ಲಿ ಕೈಗೊಳ್ಳುವ ಎಲ್ಲಾ...

ಪೋಷಣ್ ಮಾಸಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ.ಡಿ.ಎಂ.ಅಭಿನವ್ ಪೌಷ್ಠಿಕಾಂಶಯುಕ್ತ ಆಹಾರ ಪದಾರ್ಥ ಸೇವಿಸುವುದು ಅಭ್ಯಾಸಿಸಿ

ಚಿತ್ರದುರ್ಗ ಸೆ.6: ಪೋಷಣ್ ಮಾಸಾಚರಣೆ ಕಾರ್ಯಕ್ರಮ ಮಕ್ಕಳ ಹಾಗೂ ಗರ್ಭಿಣಿಯರ, ಬಾಣಂತಿಯರ ಆರೋಗ್ಯ ಪೋಷಣ ಮಾಸಾಚರಣೆ ಆಗಬೇಕು. ಮಕ್ಕಳಲ್ಲಿ...

ಎಚ್‌ಐವಿ/ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆ

ಚಿತ್ರದುರ್ಗ ಸೆ.6: ಯುವ ಜನೋತ್ಸವ ಅಂಗವಾಗಿ ಎಚ್‌ಐವಿ/ ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆಯು ಚಿತ್ರದುರ್ಗ ನಗರದಲ್ಲಿ ಗುರುವಾರ...

ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಕಾಮಗಾರಿ ಪರಿಶೀಲನೆ

ಚಿತ್ರದುರ್ಗ ಸೆ.06: ನಬಾರ್ಡ್ ಸಂಸ್ಥೆಯ ಡಿಜಿಎಂ ಸಂಜೀವ್ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಈಚೆಗೆ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ವಾಣಿವಿಲಾಸ...

ಮೊಳಕಾಲ್ಮುರು : ಫಲಾನುಭವಿಗಳ ಮನೆ ಬಾಗಿಲಿಗೆ ಹೋಗಿ ಸಮಸ್ಯೆ ಆಲಿಸಿ ಶಾಸಕ ಎನ್ ವೈ ಗೋಪಾಲಕೃಷ್ಣ.

ಮೊಳಕಾಲ್ಮೂರು :-ಪಟ್ಟಣದ ತಾಲೂಕು ಪಂಚಾಯಿತಿಯಲ್ಲಿ ಗ್ಯಾರೆಂಟಿ ಅನುಷ್ಠಾನ ಸಮಿತಿ ನೂತನ ಕಾರ್ಯಾಲಯವನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ಎನ್ ವೈ....

ಬೆಂಬಲಬೆಲೆಯಲ್ಲಿ ಸೂರ್ಯಕಾಂತಿ ಖರೀದಿ ಕೇಂದ್ರಗಳ ಸ್ಥಾಪನೆ

ಚಿತ್ರದುರ್ಗ ಸೆ.04: 2024-25ನೇ ಸಾಲಿಗೆ ಕೇಂದ್ರ ಸರ್ಕಾರದ ಬೆಂಬಲಬೆಲೆ ಯೋಜನೆಯಡಿ ನಿಗದಿಪಡಿಸಿರುವ ರೂ.7,280/- (ಪ್ರತಿ ಕ್ವಿಂಟಾಲ್‌ಗೆ)...

ಮಹಾತ್ಮ ಗಾಂಧೀ ಸೇವಾ ಪ್ರಶಸ್ತಿ – ಕರ್ನಾಟಕ’ ಆಯ್ಕೆಗೆ ನಾಮನಿರ್ದೇಶನ ಆಹ್ವಾನ

ಚಿತ್ರದುರ್ಗ ಸೆ.04: ರಾಜ್ಯ ಸರ್ಕಾರವು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಸ್ಥಾಪಿಸಿರುವ ಐದು ಲಕ್ಷ ರೂಪಾಯಿ ನಗದನ್ನು ಒಳಗೊಂಡ...

ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್ 110 ಸಿಸಿ ಯ ಆಕರ್ಷಕ ಸ್ಕೂಟಿ ಮಾರುಕಟ್ಟೆಗೆ ಬಿಡುಗಡೆ.

ಚಿತ್ರದುರ್ಗ: ಚಿತ್ರದುರ್ಗ ನಗರದ ತುರುವನೂರು ರಸ್ತೆಯಲ್ಲಿನ ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page