ವಿಶ್ವ ಸ್ಕಿಜೋಫ್ರೇನಿಯಾ ದಿನಾಚರಣೆ ಮಾನಸಿಕ ರೋಗಿಗಳನ್ನು ಪ್ರೀತಿ ಹಾಗೂ ಸಹಾನುಭೂತಿಯಿಂದ ಕಾಣಬೇಕು -ಮನೋವೈದ್ಯ ಡಾ.ಆರ್.ಮಂಜುನಾಥ

by | 30/05/24 | ಆರೋಗ್ಯ

ಚಿತ್ರದುರ್ಗ ಮೇ.30:
ಸಂಶೋಧನೆಗಳ ಪ್ರಕಾರ ದೇಶದಲ್ಲಿ ನೂರಕ್ಕೆ ಶೇ.13.4 ರಷ್ಟು ಜನರು ಮಾನಸಿಕ ಖಾಯಿಲೆಗಳಿಂದ ಬಳಲುತ್ತಿದ್ದಾರೆ. ಸ್ಕಿಜೋಫ್ರೇನಿಯಾ ಶೇ.1 ರಷ್ಟು ಜನರಲ್ಲಿ ಕಂಡುಬಂದಿದೆ. ಮಾನಸಿಕ ಖಾಯಿಲೆಗಳನ್ನು ಸಹ ಸಂಪೂರ್ಣವಾಗಿ ಗುಣ ಪಡಿಸಬಹುದಾಗಿದೆ. ಮಾನಸಿಕ ರೋಗಿಗಳನ್ನು ಪ್ರೀತಿ ಹಾಗೂ ಸಹಾನುಭೂತಿಯಿಂದ ಕಾಣಬೇಕು ಎಂದು ಮನೋವೈದ್ಯ ಡಾ.ಆರ್.ಮಂಜುನಾಥ ಹೇಳಿದರು.
ನಗರದ ಶ್ರೀ.ಕಬೀರಾನಂದ ವಿದ್ಯಾಸಂಸ್ಥೆಯಲ್ಲಿ ಗುರುವಾರ ಆಯೋಜಿಸಲಾಗಿದ್ದ ವಿಶ್ವ ಸ್ಕಿಜೋಫ್ರೇನಿಯಾ ದಿನಾಚರಣೆಯಲ್ಲಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಸ್ಕಿಜೋಫ್ರೇನಿಯಾ ಎನ್ನುವುದು ತೀವ್ರತರವಾದ ಮಾನಸಿಕ ಕಾಯಿಲೆಯಾಗಿದೆ. ಇದರಲ್ಲಿ ರೋಗಿಯು ನೈಜ ಜಗತ್ತಿನ ಜೊತೆಗೆ ಸಂಪರ್ಕದಲ್ಲಿ ಇರುವುದಿಲ್ಲ. ಯೋಚನೆ ಮಾಡುವ ರೀತಿ, ಮಾತನಾಡುವ ರೀತಿಯಲ್ಲಿ ವ್ಯತ್ಯಾಸ ಕಂಡುಬುರತ್ತದೆ. ಸ್ಕಿಜೋಪ್ರೇನಿಯಾದಿಂದ ಬಳಲುವರು ದೈನಂದಿನ ಕಾರ್ಯ ಮತ್ತು ಜವಾಬ್ದಾರಿಗಳನ್ನು ನಿರ್ವಹಿಸುವಲ್ಲಿ ವಿಫಲರಾಗುತ್ತಾರೆ. ಸ್ಕಿಜೋಫ್ರೇನಿಯಾ ಕಾಯಿಲೆಗೆ ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತವಾದ ಚಿಕಿತ್ಸೆ ದೊರೆಯುತ್ತದೆ. ಉತ್ತಮ ಸಮಾಲೋಚನೆ ಮೂಲಕ ಸಂಪೂರ್ಣವಾಗಿ ಗುಣಮುಖರಾಗಬಹುದು. ನಂತರ ಸಾಮಾನ್ಯರಂತೆ ಜೀವಿಸಬಹುದು. ಈ ಕಾಯಿಲೆ ಇರುವ ವ್ಯಕ್ತಿಗಳನ್ನು ಸಮಾಜದಲ್ಲಿ ಕಳಂಕ ಮತ್ತು ತಾರತಮ್ಯದಿಂದ ಕಾಣಬಾರದು. ಇವರ ಬಗ್ಗೆ ಹೆಚ್ಚಿನ ಸಹಾನೂಭೂತಿ ತೋರಬೇಕು. ಇವರನ್ನು ಮಾನಸಿಕವಾಗಿ ಸದೃಢರನ್ನಾಗಿ ಮಾಡಬೇಕು.
ಸ್ಪ್ಲಿಟ್ ಪರ್ಸನಾಲಿಟಿ ಮತ್ತು ಸ್ಕಿಜೋಫ್ರೇನಿಯಾ ಎರಡು ಕೂಡ ಬೇರೆ ಬೇರೆ. ಮೆದುಳಲ್ಲಿ ರಸಾಯನಿಕ ಬದಲಾವಣೆಗಳಿಂದ ಒಂದು ನಿರ್ದಿಷ್ಟವಾದ ವಯಸ್ಸಿನಲ್ಲಿ ವ್ಯಕ್ತಿಗೆ ಸ್ಕಿಜೋಫ್ರೇನಿಯಾ ಕಾಯಿಲೆ ಶುರುವಾಗುತ್ತದೆ. ವಿಶೇಷವಾಗಿ ಹದಿ ಹರಿಯದವರಲ್ಲಿ ಹೆಚ್ಚಾಗಿ ಕಂಡುಬರುತ್ತದೆ. ಅವಳಿ ಜವಳಿ ಮಕ್ಕಳಲ್ಲಿ ಒಂದು ಮಗು ಸ್ಕಿಜೋಪ್ರೇನಿಯಾಗಿ ತುತ್ತಾದರೆ ಇನ್ನೊಂದು ಮಗುವುದ ರೋಗಕ್ಕೆ ಒಳಗಾಗುವ ಸಂಭವ ಇರುತ್ತದೆ. ಸರ್ಕಾರದಿಂದ ಮಾನಸಿಕ ಖಾಯಿಲೆಯಿಂದ ಬಳಲುವವರಿಗಾಗಿ ಟೆಲಿ ಮಾನಸ ಉಚಿತ ಸಹಾಯವಾಣಿ ಸಂಖ್ಯೆ 14416 ಆರಂಭಿಸಲಾಗಿದೆ. ಈ ಸಂಖ್ಯೆಗೆ ಕರೆ ಮಾಡಿ ಆಪ್ತಸಮಾಲೋಚನೆ ಪಡೆಯಬಹುದು ಎಂದು ಡಾ.ಆರ್.ಮಂಜುನಾಥ ಹೇಳಿದರು.
ಶ್ರೀ ಸದ್ಗುರು ಕಬೀರಾನಂದ ಆಶ್ರಮದ ಶಿವಲಿಂಗಾನಂದ ಮಹಾಸ್ವಾಮಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿ, ಆದಿ ಋಷಿಗಳು ಹೇಳಿದಂತೆ ಮನಸ್ಸೆ ದೇಹದಲ್ಲಿ ಅತಿ ಮುಖ್ಯವಾದ ಭಾಗ, ತಾಯಿಬೇರಿನಂತೆ ಮನಸ್ದು ಎಲ್ಲದಕ್ಕೂ ಮೂಲ. ಮನ್ಸು ಹುಟ್ಟಿದ್ದು ಅರ್ಧ ಗಾಳಿ ಇನ್ನರ್ಧ ಆಕಾಶ, ಆಕಾಶ ಗಾಳಿ ಸೇರಿ ಮನಸ್ಸು ಸೃಷ್ಟಿಯಾಗಿದೆ. ವಾಯುವಿನಂತೆ ಮನಸ್ಸು ಸಂಚರಿಸುತ್ತದೆ, ಆದರಿಂದ ಮನಸ್ಸು ಚಂಚಲವಾಗಿರುತ್ತದೆ, ಕಣ್ಣಿಗೆ ಕಾಣದ ಮನಸ್ಸು. ಮಾನಸಿಕವಾದಂತಹ ವಸ್ತುಗಳು ಸಿಗಲ್ಲ ಮಾನಸಿಕ ಕಾಯಿಲೆಯಿಂದ ಬಳಲುವವರು ಬಹಳಷ್ಟು ಜನರಿದ್ದಾರೆ. ಮಾನಸಿಕ ಕಾಯಿಲೆಯ ಪರಿಹಾರಕ್ಕೆ ಅನೇಕ ಚಿಕಿತ್ಸೆಗಳಿವೆ ಎಂದು ಹೇಳಿದರು.
ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ಅನುμÁ್ಠನಾಧಿಕಾರಿ ಡಾ.ನಾಗರಾಜ್.ಜಿ.ಓ ಪ್ರಾಸ್ತವಿಕವಾಗಿ ಮಾತನಾಡಿ, ಸ್ಕಿಜೋಫ್ರೇನಿಯಾ ಎನ್ನುವುದನ್ನು ಕನ್ನಡದಲ್ಲಿ ಚಿತ್ತ ಚಂಚಲತೆ ಅಥವಾ ಚಿತ್ತ ವಿಕಲತೆ ಎಂದು ಕರೆಯುತ್ತೇವೆ. ಕಾಯಿಲೆ ಇರುವ ವ್ಯಕ್ತಿಗೆ ಕಾಯಿಲೆಯ ಬಗ್ಗೆ ಅರಿವು ಇರುವುದಿಲ್ಲ, ಭ್ರಮೆ ಮತ್ತು ಭ್ರಾಂತಿಗಳು ಇರುತ್ತವೆ. ಯಾರಿಗೂ ಕಾಣದ ವಸ್ತುಗಳು ದೃಶ್ಯವನ್ನು ಕಾಣುವುದು, ಯಾರಿಗೂ ಕೇಳಿಸದ ಧ್ವನಿಗಳು ಕೇಳುವುದು, ಅನುಮಾನ ಅಥವಾ ಯತ್ತೇಚ್ಚವಾಗಿ ಸಂಶಯಪಡುವುದು, ವಿಚಿತ್ರವಾಗಿ ವರ್ತಿಸುವುದು ಮುಂತಾದ ಲಕ್ಷಣಗಳು ಕಂಡುಬರುತ್ತವೆ. ಈ ರೀತಿಯ ಕಾಯಿಲೆ ಇರುವವರನ್ನು ಪ್ರೀತಿಯಿಂದ ಕಾಣಬೇಕು ಎಂದರು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ.ಅಭಿನವ್.ಡಿ.ಎಂ, ತಾಲೂಕು ಆರೋಗ್ಯ ಅಧಿಕಾರಿ ಡಾ.ಗಿರೀಶ್.ಬಿ.ವಿ, ಕಬೀರಾನಂದ ಡಿಪಿಇಡಿ ಕಾಲೇಜಿನ ಪ್ರಾಂಶುಪಾಲ ನಿರಂಜನ ಮೂರ್ತಿ.ಸಿ.ಎಲ್, ಬಿ.ಇಡಿ ಪ್ರಾಂಶುಪಾಲ ಗಿರೀಶ್.ಟಿ, ನಸಿರ್ಂಗ್ ಕಾಲೇಜಿನ ಪ್ರಾಂಶುಪಾಲೆ ವಿಶಾಲ.ಎಸ್ ಭಾಗವಹಿಸಿದ್ದರು. ತಾಲೂಕು ಆರೋಗ್ಯ ಶಿಕ್ಷಣಾಧಿಕಾರಿ ಎನ್.ಎಸ್.ಮಂಜುನಾಥ ಕಾರ್ಯಕ್ರಮದ ನಿರೂಪಣೆ ಮತ್ತು ವಂದನಾರ್ಪಣೆ ಮಾಡಿದರು. ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮದ ಚಿಕಿತ್ಸಕ ಮನೊವೈದ್ಯ ಶ್ರೀಧರ.ಟಿ, ಸಾಮಾಜಿಕ ಮಾನಸಿಕ ಕಾರ್ಯಕರ್ತೆ ಸುನೀತಾ.ಎನ್, ಶೂಷ್ರಷಕಿ ರಶ್ಮಿ.ಕೆ.ಎಂ, ರೂಪ.ಆರ್,ಅರುಣ ಕೀರ್ತಿ, ಶಿವರಾಜ್ .ಟಿ, ಮಂಜುನಾಥ.ಟಿ ಮತ್ತು ಮಂಜುನಾಥ್.ಎಂ.ಓ ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.

Latest News >>

ಡಿ.ಸಿ.ಸಿ. ಬ್ಯಾಂಕ್ ನಿರ್ದೇಶಕರಾಗಿ ಓ.ಮಂಜುನಾಥ್ ಮಾಳಿಗೆ ಅವರು ಅವಿರೋಧ ಆಯ್ಕೆಯಾಗಿದ್ದಾರೆ.

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತ, ಚಿತ್ರದುರ್ಗ ಇದರ ಆಡಳಿತ ಮಂಡಳಿ ನಿರ್ದೇಶಕರ ಸ್ಥಾನಕ್ಕೆ ಹಿರಿಯೂರು...

ಚಿತ್ರದುರ್ಗದಲ್ಲಿ ನಡೆಯಲಿರುವ ಪತ್ರಿಕಾ ವಿತರಕರ ಹಂಚಿಕೆದಾರರ 4ನೇರಾಜ್ಯಸಮ್ಮೇಳನ ಕಾರ್ಯಕ್ರಮ ಯಶಸ್ವಿಯಾಗಲಿ : ಆಲೂರು ಹನುಮಂತರಾಯಪ್ಪ

ಹಿರಿಯೂರು: ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ ಹಾಗೂ ಚಿತ್ರದುರ್ಗ ಜಿಲ್ಲಾ ಪತ್ರಿಕೆ ಹಂಚಿಕೆದಾರರ ಹಾಗೂ ವಿತರಕರ ಸಂಘ (ರಿ) ಇವರುಗಳ...

ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ ಅನುಷ್ಟಾನ ಮೌಲ್ಯಮಾಪನ ಸಭೆಜಿಲ್ಲಾ ಮೇಲ್ವಿಚಾರಣಾ ಸಮಿತಿಯಿಂದ ಕ್ರಿಯಾಯೋಜನೆ ಅನುಮೋದನೆ ಕ್ರಮಕ್ಕೆ ಶಿಫಾರಸ್ಸು

ಚಿತ್ರದುರ್ಗ ಸೆ.06: ಪರಿಶಿಷ್ಟ ಜಾತಿ ಹಾಗೂ ಗಿರಿಜನ ಉಪಯೋಜನೆಯಡಿ (ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ) ಜಿಲ್ಲೆಯಲ್ಲಿ ಕೈಗೊಳ್ಳುವ ಎಲ್ಲಾ...

ಪೋಷಣ್ ಮಾಸಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ.ಡಿ.ಎಂ.ಅಭಿನವ್ ಪೌಷ್ಠಿಕಾಂಶಯುಕ್ತ ಆಹಾರ ಪದಾರ್ಥ ಸೇವಿಸುವುದು ಅಭ್ಯಾಸಿಸಿ

ಚಿತ್ರದುರ್ಗ ಸೆ.6: ಪೋಷಣ್ ಮಾಸಾಚರಣೆ ಕಾರ್ಯಕ್ರಮ ಮಕ್ಕಳ ಹಾಗೂ ಗರ್ಭಿಣಿಯರ, ಬಾಣಂತಿಯರ ಆರೋಗ್ಯ ಪೋಷಣ ಮಾಸಾಚರಣೆ ಆಗಬೇಕು. ಮಕ್ಕಳಲ್ಲಿ...

ಎಚ್‌ಐವಿ/ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆ

ಚಿತ್ರದುರ್ಗ ಸೆ.6: ಯುವ ಜನೋತ್ಸವ ಅಂಗವಾಗಿ ಎಚ್‌ಐವಿ/ ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆಯು ಚಿತ್ರದುರ್ಗ ನಗರದಲ್ಲಿ ಗುರುವಾರ...

ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಕಾಮಗಾರಿ ಪರಿಶೀಲನೆ

ಚಿತ್ರದುರ್ಗ ಸೆ.06: ನಬಾರ್ಡ್ ಸಂಸ್ಥೆಯ ಡಿಜಿಎಂ ಸಂಜೀವ್ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಈಚೆಗೆ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ವಾಣಿವಿಲಾಸ...

ಮೊಳಕಾಲ್ಮುರು : ಫಲಾನುಭವಿಗಳ ಮನೆ ಬಾಗಿಲಿಗೆ ಹೋಗಿ ಸಮಸ್ಯೆ ಆಲಿಸಿ ಶಾಸಕ ಎನ್ ವೈ ಗೋಪಾಲಕೃಷ್ಣ.

ಮೊಳಕಾಲ್ಮೂರು :-ಪಟ್ಟಣದ ತಾಲೂಕು ಪಂಚಾಯಿತಿಯಲ್ಲಿ ಗ್ಯಾರೆಂಟಿ ಅನುಷ್ಠಾನ ಸಮಿತಿ ನೂತನ ಕಾರ್ಯಾಲಯವನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ಎನ್ ವೈ....

ಬೆಂಬಲಬೆಲೆಯಲ್ಲಿ ಸೂರ್ಯಕಾಂತಿ ಖರೀದಿ ಕೇಂದ್ರಗಳ ಸ್ಥಾಪನೆ

ಚಿತ್ರದುರ್ಗ ಸೆ.04: 2024-25ನೇ ಸಾಲಿಗೆ ಕೇಂದ್ರ ಸರ್ಕಾರದ ಬೆಂಬಲಬೆಲೆ ಯೋಜನೆಯಡಿ ನಿಗದಿಪಡಿಸಿರುವ ರೂ.7,280/- (ಪ್ರತಿ ಕ್ವಿಂಟಾಲ್‌ಗೆ)...

ಮಹಾತ್ಮ ಗಾಂಧೀ ಸೇವಾ ಪ್ರಶಸ್ತಿ – ಕರ್ನಾಟಕ’ ಆಯ್ಕೆಗೆ ನಾಮನಿರ್ದೇಶನ ಆಹ್ವಾನ

ಚಿತ್ರದುರ್ಗ ಸೆ.04: ರಾಜ್ಯ ಸರ್ಕಾರವು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಸ್ಥಾಪಿಸಿರುವ ಐದು ಲಕ್ಷ ರೂಪಾಯಿ ನಗದನ್ನು ಒಳಗೊಂಡ...

ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್ 110 ಸಿಸಿ ಯ ಆಕರ್ಷಕ ಸ್ಕೂಟಿ ಮಾರುಕಟ್ಟೆಗೆ ಬಿಡುಗಡೆ.

ಚಿತ್ರದುರ್ಗ: ಚಿತ್ರದುರ್ಗ ನಗರದ ತುರುವನೂರು ರಸ್ತೆಯಲ್ಲಿನ ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page