ಶೇಕಡ 60ರಷ್ಟು ಹೆಚ್ಚಿಸಿರುವ ಬಿತ್ತನೆ ಬೀಜದ ದರ ಕಡಿತಗೊಳಿಸಲು, ಹಾಗೂ ಪರಿಹಾರ ರೈತರ ಖಾತೆಗೆ ಜಮಾಕ್ಕೆ ರೈತಮುಖಂಡ ಸಿ.ಹೊರೆಕೆರಪ್ಪ ಒತ್ತಾಯ

by | 31/05/24 | ಪ್ರತಿಭಟನೆ


ಹಿರಿಯೂರು:
ಶೇಕಡ 60ರಷ್ಟು ಹೆಚ್ಚಿಸಿರುವ ಬಿತ್ತನೆ ಬೀಜದ ದರ ಕಡಿತಗೊಳಿಸಿ ಪರಿಹಾರವನ್ನು ಸಮರ್ಪಕವಾಗಿ ಜಿಲ್ಲೆಯ ಎಲ್ಲಾ ರೈತರ ಖಾತೆಗೆ ಜಮಾ ಮಾಡುವ ಬಗ್ಗೆ ಸಂಬಂಧಿಸಿದಂತೆ ಮಾನ್ಯ ಕೃಷಿ ಸಚಿವರು ಕರ್ನಾಟಕ ಸರ್ಕಾರ ವಿಕಾಸಸೌಧ ಬೆಂಗಳೂರು ಇವರಿಗೆ ಸಹಾಯಕ ಕೃಷಿ ನಿರ್ದೇಶಕರು ಹಿರಿಯೂರು ರವರ ಮುಖಾಂತರ ಮನವಿ ಸಲ್ಲಿಸಲಾಯಿತು ಎಂಬುದಾಗಿ ರೈತ ಸಂಘದ ಜಿಲ್ಲಾ ಕಾರ್ಯದರ್ಶಿ ಕೆ. ಸಿ. ಹೊರೆಕೆರಪ್ಪ ತಿಳಿಸಿದರು.
ರಾಜ್ಯದಲ್ಲಿ ಸುಮಾರು ವರ್ಷಗಳಿಂದ ಬರಗಾಲ ಆವರಿಸಿದ್ದು ಮಧ್ಯ ಕರ್ನಾಟಕದ ಚಿತ್ರದುರ್ಗ ಜಿಲ್ಲೆ, ಬರಗಾಲಕ್ಕೆ ಒಳಪಟ್ಟಿದ್ದು ಕಳೆದ ವರ್ಷದಿಂದ ಜಿಲ್ಲೆಯಲ್ಲಿ ಮಳೆ ಬರದೆ ರೈತರು ಸಂಕಷ್ಟವನ್ನು ಅನುಭವಿಸುತ್ತಿದ್ದಾರೆ.
ಇಂದಿನ ಸರ್ಕಾರ ಬೆಳೆ ನಷ್ಟ ಅನುಭವಿಸಿದ ಎಲ್ಲಾ ರೈತರಿಗೂ ತಾರತಮ್ಯವಿಲ್ಲದೆ, ಬರ ಪರಿಹಾರದ ಹಣವನ್ನು ರೈತರ ಖಾತೆಗೆ ಜಮೆ ಮಾಡಿದ್ದು, ತಮ್ಮ ಸರ್ಕಾರ ಕೊಳವೆಬಾವಿ ಇರುವ ರೈತರಿಗೆ ,ನೀರಾವರಿ ಪ್ರದೇಶದ ರೈತರಿಗೆ ಬೆಳೆ ನಷ್ಟ ಪರಿಹಾರ ಮೊತ್ತವನ್ನು ನೀಡದೆ ತಾರತಮ್ಯ ಮಾಡಿ ಮಾಡುತ್ತಿದೆ.
ರೈತರು ಟ್ಯಾಂಕರ್ ಮೂಲಕ ಲಕ್ಷಾಂತರ ರೂಪಾಯಿ ಖರ್ಚು ಮಾಡಿ ತೋಟಗಾರಿಕೆ ಬೆಳೆಗಳಿಗೆ ನೀರು ಹಾಯಿಸಿ, ಸಂಕಷ್ಟ ಅನುಭವಿಸಿದ್ದು ಸರ್ಕಾರ ತಾರತಮ್ಯ ಮಾಡದೆ ಎಲ್ಲಾ ರೈತರಿಗೂ ಬರ ಪರಿಹಾರವನ್ನು ರೈತರ ಖಾತೆಗೆ ಜಮಾ ಮಾಡುವಂತೆ ತಾಲ್ಲೂಕು ರೈತ ಸಂಘವು ಒತ್ತಾಯಿಸುತ್ತದೆ ಎಂದರು.
ಚಿತ್ರದುರ್ಗ ಜಿಲ್ಲೆ ಸದಾ ಬರಗಾಲಕ್ಕೆ ತುತ್ತಾಗಿದ್ದು, ರೈತರು ಬಿತ್ತಿದ ಬೆಳೆ ಕೈ ಸೇರದೆ ಸಾಲಗಾರಾಗಿದ್ದು ಸರ್ಕಾರ ಬಿತ್ತನೆ ಬೀಜದ ಬೆಲೆಯನ್ನು ಶೇಕಡ 60 ರಷ್ಟು ಹೆಚ್ಚಿಸಿರುವುದು ರೈತರಿಗೆ ಗಾಯದ ಮೇಲೆ ಬರೆ ಎಳೆದಂತಾಗಿದೆ ಇದರಿಂದ ಕೃಷಿ ಚಟುವಟಿಕೆ ಕುಂಟಿತವಾಗಿದೆ ಎಂದರಲ್ಲದೆ,
ಈ ಕೂಡಲೇ ಸರ್ಕಾರ ಬಿತ್ತನೆ ವೇಗದ ದರವನ್ನು ಪೂರ್ಣ ಕಡಿತಗೊಳಿಸುವಂತೆ ಹಾಗೂ ಇದುವರೆಗೂ ಸ್ಪಿಂಕ್ಲರ್ ಸೆಟ್ ದರ 1746ರೂ ಇದ್ದಿದ್ದನ್ನು ಏಕಾಏಕಿ 4,139 ರೂ ಕ್ಕೆ ಹೆಚ್ಚಿಸಿರುವುದು ಕೂಡ ರೈತರಿಗೆ ದುಬಾರಿ ವೆಚ್ಚವಾಗಿದ್ದು ಕೂಡಲೇ ಕಳೆದುಗೊಳಿಸುವಂತೆ ತಾಲ್ಲೂಕು ರೈತ ಸಂಘ ಒತ್ತಾಯಿಸುತ್ತದೆ ಎಂದರು.
ಈ ಸಂದರ್ಭದಲ್ಲಿ ಜಿಲ್ಲಾ ಕಾರ್ಯದರ್ಶಿ ಸಿ. ಹೊರೆಕೆರಪ್ಪ, ತಾಲ್ಲೂಕು ರೈತ ಸಂಘದ ಅಧ್ಯಕ್ಷ ಬಿ. ಓ. ಶಿವಕುಮಾರ್, ತಾಲ್ಲೂಕು ಯುವ ಘಟಕದ ಅಧ್ಯಕ್ಷ ಚೇತನ್ ಯಳನಾಡು, ತಾಲೂಕು ಕಾರ್ಯದರ್ಶಿ ಹೆಚ್.ದಸ್ತಗಿರಿಸಾಬ್, ಜಿಲ್ಲಾ ಸಂಘಟನಾ ಕಾರ್ಯದರ್ಶಿ ಲಕ್ಷ್ಮಿಕಾಂತ್, ಮಲ್ಲಪ್ಪನಹಳ್ಳಿ ಟಿ. ಮುನಿಸ್ವಾಮಿ, ನಾಗರಾಜ, ಗಿರೀಶ್, ಚಿಕ್ಕತಾಯಮ್ಮ, ಮಾರುತಿ, ನಾಗರಾಜ್, ರುದ್ರಮ್ಮ ಸೇರಿದಂತೆ ಅನೇಕ ಮುಖಂಡರು ಉಪಸ್ಥಿತರಿದ್ದರು.

Latest News >>

ಡಿ.ಸಿ.ಸಿ. ಬ್ಯಾಂಕ್ ನಿರ್ದೇಶಕರಾಗಿ ಓ.ಮಂಜುನಾಥ್ ಮಾಳಿಗೆ ಅವರು ಅವಿರೋಧ ಆಯ್ಕೆಯಾಗಿದ್ದಾರೆ.

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತ, ಚಿತ್ರದುರ್ಗ ಇದರ ಆಡಳಿತ ಮಂಡಳಿ ನಿರ್ದೇಶಕರ ಸ್ಥಾನಕ್ಕೆ ಹಿರಿಯೂರು...

ಚಿತ್ರದುರ್ಗದಲ್ಲಿ ನಡೆಯಲಿರುವ ಪತ್ರಿಕಾ ವಿತರಕರ ಹಂಚಿಕೆದಾರರ 4ನೇರಾಜ್ಯಸಮ್ಮೇಳನ ಕಾರ್ಯಕ್ರಮ ಯಶಸ್ವಿಯಾಗಲಿ : ಆಲೂರು ಹನುಮಂತರಾಯಪ್ಪ

ಹಿರಿಯೂರು: ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ ಹಾಗೂ ಚಿತ್ರದುರ್ಗ ಜಿಲ್ಲಾ ಪತ್ರಿಕೆ ಹಂಚಿಕೆದಾರರ ಹಾಗೂ ವಿತರಕರ ಸಂಘ (ರಿ) ಇವರುಗಳ...

ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ ಅನುಷ್ಟಾನ ಮೌಲ್ಯಮಾಪನ ಸಭೆಜಿಲ್ಲಾ ಮೇಲ್ವಿಚಾರಣಾ ಸಮಿತಿಯಿಂದ ಕ್ರಿಯಾಯೋಜನೆ ಅನುಮೋದನೆ ಕ್ರಮಕ್ಕೆ ಶಿಫಾರಸ್ಸು

ಚಿತ್ರದುರ್ಗ ಸೆ.06: ಪರಿಶಿಷ್ಟ ಜಾತಿ ಹಾಗೂ ಗಿರಿಜನ ಉಪಯೋಜನೆಯಡಿ (ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ) ಜಿಲ್ಲೆಯಲ್ಲಿ ಕೈಗೊಳ್ಳುವ ಎಲ್ಲಾ...

ಪೋಷಣ್ ಮಾಸಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ.ಡಿ.ಎಂ.ಅಭಿನವ್ ಪೌಷ್ಠಿಕಾಂಶಯುಕ್ತ ಆಹಾರ ಪದಾರ್ಥ ಸೇವಿಸುವುದು ಅಭ್ಯಾಸಿಸಿ

ಚಿತ್ರದುರ್ಗ ಸೆ.6: ಪೋಷಣ್ ಮಾಸಾಚರಣೆ ಕಾರ್ಯಕ್ರಮ ಮಕ್ಕಳ ಹಾಗೂ ಗರ್ಭಿಣಿಯರ, ಬಾಣಂತಿಯರ ಆರೋಗ್ಯ ಪೋಷಣ ಮಾಸಾಚರಣೆ ಆಗಬೇಕು. ಮಕ್ಕಳಲ್ಲಿ...

ಎಚ್‌ಐವಿ/ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆ

ಚಿತ್ರದುರ್ಗ ಸೆ.6: ಯುವ ಜನೋತ್ಸವ ಅಂಗವಾಗಿ ಎಚ್‌ಐವಿ/ ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆಯು ಚಿತ್ರದುರ್ಗ ನಗರದಲ್ಲಿ ಗುರುವಾರ...

ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಕಾಮಗಾರಿ ಪರಿಶೀಲನೆ

ಚಿತ್ರದುರ್ಗ ಸೆ.06: ನಬಾರ್ಡ್ ಸಂಸ್ಥೆಯ ಡಿಜಿಎಂ ಸಂಜೀವ್ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಈಚೆಗೆ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ವಾಣಿವಿಲಾಸ...

ಮೊಳಕಾಲ್ಮುರು : ಫಲಾನುಭವಿಗಳ ಮನೆ ಬಾಗಿಲಿಗೆ ಹೋಗಿ ಸಮಸ್ಯೆ ಆಲಿಸಿ ಶಾಸಕ ಎನ್ ವೈ ಗೋಪಾಲಕೃಷ್ಣ.

ಮೊಳಕಾಲ್ಮೂರು :-ಪಟ್ಟಣದ ತಾಲೂಕು ಪಂಚಾಯಿತಿಯಲ್ಲಿ ಗ್ಯಾರೆಂಟಿ ಅನುಷ್ಠಾನ ಸಮಿತಿ ನೂತನ ಕಾರ್ಯಾಲಯವನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ಎನ್ ವೈ....

ಬೆಂಬಲಬೆಲೆಯಲ್ಲಿ ಸೂರ್ಯಕಾಂತಿ ಖರೀದಿ ಕೇಂದ್ರಗಳ ಸ್ಥಾಪನೆ

ಚಿತ್ರದುರ್ಗ ಸೆ.04: 2024-25ನೇ ಸಾಲಿಗೆ ಕೇಂದ್ರ ಸರ್ಕಾರದ ಬೆಂಬಲಬೆಲೆ ಯೋಜನೆಯಡಿ ನಿಗದಿಪಡಿಸಿರುವ ರೂ.7,280/- (ಪ್ರತಿ ಕ್ವಿಂಟಾಲ್‌ಗೆ)...

ಮಹಾತ್ಮ ಗಾಂಧೀ ಸೇವಾ ಪ್ರಶಸ್ತಿ – ಕರ್ನಾಟಕ’ ಆಯ್ಕೆಗೆ ನಾಮನಿರ್ದೇಶನ ಆಹ್ವಾನ

ಚಿತ್ರದುರ್ಗ ಸೆ.04: ರಾಜ್ಯ ಸರ್ಕಾರವು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಸ್ಥಾಪಿಸಿರುವ ಐದು ಲಕ್ಷ ರೂಪಾಯಿ ನಗದನ್ನು ಒಳಗೊಂಡ...

ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್ 110 ಸಿಸಿ ಯ ಆಕರ್ಷಕ ಸ್ಕೂಟಿ ಮಾರುಕಟ್ಟೆಗೆ ಬಿಡುಗಡೆ.

ಚಿತ್ರದುರ್ಗ: ಚಿತ್ರದುರ್ಗ ನಗರದ ತುರುವನೂರು ರಸ್ತೆಯಲ್ಲಿನ ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page