ಎನ್ ದೇವರಹಳ್ಳಿ ಗ್ರಾಮದಲ್ಲಿ ಅದ್ದೂರಿಯಾಗಿ ನೆರವೇರಿದ ಶ್ರೀ ಕಂಚಿಹೋಬಳಿ ಸ್ವಾಮಿ ಜಾತ್ರೋತ್ಸವ.

by | 02/06/24 | ಸುದ್ದಿ


ನಾಯಕನಹಟ್ಟಿ ::ಜೂನ್ 2. ಎನ್ ದೇವರಹಳ್ಳಿ ಗ್ರಾಮದಲ್ಲಿ ಅದ್ದೂರಿಯಾಗಿ ನೆರವೇರಿದ ಶ್ರೀ ಕಂಚಿ ಹೋಬಳಿ ಸ್ವಾಮಿ ಜಾತ್ರೋತ್ಸವ

ಹೋಬಳಿ ಬುಡಕಟ್ಟು ಸಂಪ್ರದಾಯ ಗ್ರಾಮದ ಆರಾಧ್ಯ ದೈವ ಶ್ರೀ ಕಂಚಿ ಹೋಬಳಿ ಸ್ವಾಮಿ ದೇವರ ಉತ್ಸವ ಸಾವಿರಾರು ಭಕ್ತರ ಸಮ್ಮುಖದಲ್ಲಿ ಶನಿವಾರ ಮತ್ತು ಭಾನುವಾರ ಅದ್ದೂರಿಯಾಗಿ ಜರುಗಿತು.


ಶ್ರೀ ಕಂಚಿ ಹೋಬಳಿ ಸ್ವಾಮಿ ಮಹಾಸಂಸ್ಥಾನ ಎನ್ ದೇವರಹಳ್ಳಿ 500 ವರ್ಷಗಳ ಇತಿಹಾಸ ಇರುವಂತ ಈ ಮಹಾ ಸಂಸ್ಥಾನದಲ್ಲಿ ಬುಡಕಟ್ಟು ಸಂಸ್ಕೃತಿಯ ಆಚರಣೆಯ ಶ್ರೀ ಕಂಚಿಹೋಬಳಿ ಸ್ವಾಮಿ ಮೂರು ಗುಡಿಕಟ್ಟಿನ ಅಜ್ಜನ ಅಣ್ಣ-ತಮ್ಮಂದಿರು ಮೊದಲನೇದಾಗಿ ಯಜಮಾನ ವಂಶಸ್ಥರು ದಾಸಯ್ಯನ ವಂಶಸ್ಥರು ಪೂಜಾರಿ ವಂಶಸ್ಥರು ಅವರ ರವರ ಬಿರುದ್ಧಾವಳಿಯ ಬಾಪ್ತುಗಳಂತೆ ಶ್ರೀ ಕಂಚಿ ಹೋಬಳೇಶ್ವರ ಸ್ವಾಮಿ ದೇವರನ್ನು ಆರಾಧನೆ ಮಾಡಿಕೊಂಡು ಬಂದಿದ್ದಾರೆ.
ಕಳೆದ ಸುಮಾರು ವರ್ಷಗಳಿಂದ ಪಾಪಿಮುತ್ತೆ ಹೊಳೆಯಲ್ಲಿ ಶ್ರೀಕಂಚಿಹೋಬಳಿ ಸ್ವಾಮಿ ಗಂಗಾ ಪೂಜೆ ಹೋಮ ಹವನ ಪೂಜೆ ಕೈಂಕಾರ್ಯಗಳನ್ನು ನೆರವೇರಿಸಿ ಅದ್ದೂರಿ ಮೆರವಣಿಗೆ ಮೂಲಕ ಗ್ರಾಮಕ್ಕೆ ಕರೆದೊಯ್ದು ಗುಡಿ ತುಂಬಿಸಲಾಗುತ್ತದೆ.


ಬಹಳಷ್ಟು ಕೋಮಿನ ಅಣ್ಣತಮ್ಮಂದಿರು ಶ್ರೀದೇವರ ಆರಾಧನೆ ಮಾಡುತ್ತಿದ್ದಾರೆ. ಮೊನ್ನೆ ಗುರುವಾರ ಶಾಸ್ತ್ರವಾಗಿ ನಮ್ಮ ಮಹಾಸ್ವಾಮಿಗಳ ಅಪ್ಪಣೆಯಂತೆ ಶ್ರೀ ಪೆನ್ನುಬಳಿ ದೇವಸ್ಥಾನಕ್ಕೆ ಹೋಗಿ ಅಲ್ಲಿ ನೂತನ ಪೂಜಾರಿ ಮತ್ತು ದಾಸಯ್ಯನ ಮುದ್ರಿಕೆ ಮಾಡಿಸುವ ಮುಖಾಂತರ ಇಂದು ಅಧಿಕೃತವಾಗಿ ನೂತನ ಪೂಜಾರಿ ದಾಸಯ್ಯ ಪಟ್ಟಾಭಿಷೇಕವನ್ನು ಮಾಡಲಾಗಿದೆ.

ಶ್ರೀ ಕಂಚಿ ಹೋಳೇಶ್ವರ ಸ್ವಾಮಿಯ ದೇವರಿಗೆ ಸಾಕಷ್ಟು ದಾನಿಗಳು ಮತ್ತು ಗುಡಿಕಟ್ಟಿನ ಅಣ್ಣ-ತಮ್ಮಂದಿರು ದೇವರ ತೂಗು ತೊಟ್ಟಿಲು ಛತ್ರಿ ಗರ್ಭಗುಡಿಗೆ ಕಂಚಿನ ಪದಕ ದಾಸೋಹ ಸೇರಿದಂತೆ ಅನೇಕ ದಾನಿಗಳು ಶ್ರೀ ಸ್ವಾಮಿಗೆ ಭಕ್ತಿಯನ್ನು ಸಮರ್ಪಿಸಿದ್ದಾರೆ ಎಂದು ಕುದಾಪುರ ಎಸ್ ಬಿ ತಿಪ್ಪೇಸ್ವಾಮಿ ದಾವಣಗೆರೆ ಪಬ್ಲಿಕ್ ಬಾಯ್ಸ್ ಪತ್ರಿಕೆಯೊಂದಿಗೆ ಮಾಹಿತಿಯನ್ನು ಹಂಚಿಕೊಂಡಿದ್ದಾರೆ.

ಇನ್ನೂ ಭಾನುವಾರ ಬೆಳಿಗ್ಗೆ ಶ್ರೀ ಕಂಚಿ ಹೋಬಳಿ ಸ್ವಾಮಿಗೆ ಅದ್ದೂರಿಯಾಗಿ ಸಂಭ್ರಮ ಸಡಗರದಿಂದ ಪೂಜಾ ಕೈಂಕಾರ್ಯಗಳನ್ನು ನೆರವೇರಿಸಿ ನಂತರ ಮಣೇವು ಕಾರ್ಯ ನಡೆಯಿತು . ದಾಸೋಹದ ನಂತರ ಜಾತ್ರೆಗೆ ತೆರೆ ಬಿತ್ತು

ಇದೇ ಸಂದರ್ಭದಲ್ಲಿ ಶ್ರೀ ಕಂಚಿಹೋಬಳಿ ಸ್ವಾಮಿಯ ಗುಡಿಕಟ್ಟಿನ ಯಜಮಾನ ವಂಶಸ್ಥರು ಪೂಜಾರಿ ವಂಶಸ್ಥರು ದಾಸಯ್ಯನ ವಂಶಸ್ಥರು ಹಾಗೂ ನೆಂಟರು ಸಮಸ್ತ ಎನ್ ದೇವರಹಳ್ಳಿ ಗ್ರಾಮಸ್ಥರು ಇದ್ದರು

Latest News >>

ಡಿ.ಸಿ.ಸಿ. ಬ್ಯಾಂಕ್ ನಿರ್ದೇಶಕರಾಗಿ ಓ.ಮಂಜುನಾಥ್ ಮಾಳಿಗೆ ಅವರು ಅವಿರೋಧ ಆಯ್ಕೆಯಾಗಿದ್ದಾರೆ.

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತ, ಚಿತ್ರದುರ್ಗ ಇದರ ಆಡಳಿತ ಮಂಡಳಿ ನಿರ್ದೇಶಕರ ಸ್ಥಾನಕ್ಕೆ ಹಿರಿಯೂರು...

ಚಿತ್ರದುರ್ಗದಲ್ಲಿ ನಡೆಯಲಿರುವ ಪತ್ರಿಕಾ ವಿತರಕರ ಹಂಚಿಕೆದಾರರ 4ನೇರಾಜ್ಯಸಮ್ಮೇಳನ ಕಾರ್ಯಕ್ರಮ ಯಶಸ್ವಿಯಾಗಲಿ : ಆಲೂರು ಹನುಮಂತರಾಯಪ್ಪ

ಹಿರಿಯೂರು: ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ ಹಾಗೂ ಚಿತ್ರದುರ್ಗ ಜಿಲ್ಲಾ ಪತ್ರಿಕೆ ಹಂಚಿಕೆದಾರರ ಹಾಗೂ ವಿತರಕರ ಸಂಘ (ರಿ) ಇವರುಗಳ...

ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ ಅನುಷ್ಟಾನ ಮೌಲ್ಯಮಾಪನ ಸಭೆಜಿಲ್ಲಾ ಮೇಲ್ವಿಚಾರಣಾ ಸಮಿತಿಯಿಂದ ಕ್ರಿಯಾಯೋಜನೆ ಅನುಮೋದನೆ ಕ್ರಮಕ್ಕೆ ಶಿಫಾರಸ್ಸು

ಚಿತ್ರದುರ್ಗ ಸೆ.06: ಪರಿಶಿಷ್ಟ ಜಾತಿ ಹಾಗೂ ಗಿರಿಜನ ಉಪಯೋಜನೆಯಡಿ (ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ) ಜಿಲ್ಲೆಯಲ್ಲಿ ಕೈಗೊಳ್ಳುವ ಎಲ್ಲಾ...

ಪೋಷಣ್ ಮಾಸಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ.ಡಿ.ಎಂ.ಅಭಿನವ್ ಪೌಷ್ಠಿಕಾಂಶಯುಕ್ತ ಆಹಾರ ಪದಾರ್ಥ ಸೇವಿಸುವುದು ಅಭ್ಯಾಸಿಸಿ

ಚಿತ್ರದುರ್ಗ ಸೆ.6: ಪೋಷಣ್ ಮಾಸಾಚರಣೆ ಕಾರ್ಯಕ್ರಮ ಮಕ್ಕಳ ಹಾಗೂ ಗರ್ಭಿಣಿಯರ, ಬಾಣಂತಿಯರ ಆರೋಗ್ಯ ಪೋಷಣ ಮಾಸಾಚರಣೆ ಆಗಬೇಕು. ಮಕ್ಕಳಲ್ಲಿ...

ಎಚ್‌ಐವಿ/ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆ

ಚಿತ್ರದುರ್ಗ ಸೆ.6: ಯುವ ಜನೋತ್ಸವ ಅಂಗವಾಗಿ ಎಚ್‌ಐವಿ/ ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆಯು ಚಿತ್ರದುರ್ಗ ನಗರದಲ್ಲಿ ಗುರುವಾರ...

ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಕಾಮಗಾರಿ ಪರಿಶೀಲನೆ

ಚಿತ್ರದುರ್ಗ ಸೆ.06: ನಬಾರ್ಡ್ ಸಂಸ್ಥೆಯ ಡಿಜಿಎಂ ಸಂಜೀವ್ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಈಚೆಗೆ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ವಾಣಿವಿಲಾಸ...

ಮೊಳಕಾಲ್ಮುರು : ಫಲಾನುಭವಿಗಳ ಮನೆ ಬಾಗಿಲಿಗೆ ಹೋಗಿ ಸಮಸ್ಯೆ ಆಲಿಸಿ ಶಾಸಕ ಎನ್ ವೈ ಗೋಪಾಲಕೃಷ್ಣ.

ಮೊಳಕಾಲ್ಮೂರು :-ಪಟ್ಟಣದ ತಾಲೂಕು ಪಂಚಾಯಿತಿಯಲ್ಲಿ ಗ್ಯಾರೆಂಟಿ ಅನುಷ್ಠಾನ ಸಮಿತಿ ನೂತನ ಕಾರ್ಯಾಲಯವನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ಎನ್ ವೈ....

ಬೆಂಬಲಬೆಲೆಯಲ್ಲಿ ಸೂರ್ಯಕಾಂತಿ ಖರೀದಿ ಕೇಂದ್ರಗಳ ಸ್ಥಾಪನೆ

ಚಿತ್ರದುರ್ಗ ಸೆ.04: 2024-25ನೇ ಸಾಲಿಗೆ ಕೇಂದ್ರ ಸರ್ಕಾರದ ಬೆಂಬಲಬೆಲೆ ಯೋಜನೆಯಡಿ ನಿಗದಿಪಡಿಸಿರುವ ರೂ.7,280/- (ಪ್ರತಿ ಕ್ವಿಂಟಾಲ್‌ಗೆ)...

ಮಹಾತ್ಮ ಗಾಂಧೀ ಸೇವಾ ಪ್ರಶಸ್ತಿ – ಕರ್ನಾಟಕ’ ಆಯ್ಕೆಗೆ ನಾಮನಿರ್ದೇಶನ ಆಹ್ವಾನ

ಚಿತ್ರದುರ್ಗ ಸೆ.04: ರಾಜ್ಯ ಸರ್ಕಾರವು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಸ್ಥಾಪಿಸಿರುವ ಐದು ಲಕ್ಷ ರೂಪಾಯಿ ನಗದನ್ನು ಒಳಗೊಂಡ...

ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್ 110 ಸಿಸಿ ಯ ಆಕರ್ಷಕ ಸ್ಕೂಟಿ ಮಾರುಕಟ್ಟೆಗೆ ಬಿಡುಗಡೆ.

ಚಿತ್ರದುರ್ಗ: ಚಿತ್ರದುರ್ಗ ನಗರದ ತುರುವನೂರು ರಸ್ತೆಯಲ್ಲಿನ ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page