ಇಲಿ ಜ್ವರ ಹಬ್ಬದಂತೆ ತಡೆಯಲು ನೈರ್ಮಲ್ಯ ಅಗತ್ಯ

by | 15/02/23 | ಆರೋಗ್ಯ

ಚಿತ್ರದುರ್ಗ ಫೆ.15 :
ಇಲಿ ಜ್ವರಕ್ಕೆ ಯಾವುದೇ ಲಸಿಕೆ ಲಭ್ಯವಿಲ್ಲ. ಇದು ಹಬ್ಬದಂತೆ ತಡೆಯಲು ಸುತ್ತಮುತ್ತಲಿನ ಪರಿಸರದ ನೈರ್ಮಲ್ಯ ಅತಿ ಅಗತ್ಯವಾಗಿದೆ ಎಂದು ಹಿರಿಯ ಆರೋಗ್ಯ ಮೇಲ್ವಿಚಾರಣಾಧಿಕಾರಿ ಆಂಜನೇಯ ಹೇಳಿದರು.
ಚಿತ್ರದುರ್ಗ ತಾಲ್ಲೂಕಿನ ಐಯ್ಯನಹಳ್ಳಿ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಬುಧವಾರ ಆರೋಗ್ಯ ಇಲಾಖೆಯ ಎನ್.ಹೆಚ್.ಎಂ ಯೋಜನೆ ಅಡಿಯಲ್ಲಿ ಇಲಿ ಜ್ವರ ಕುರಿತು ಸಮರ್ಥನಾ ಸಭೆಯಲ್ಲಿ ಅವರು ಮಾತನಾಡಿದರು.
ಇಲಿಜ್ವರ ಹರಡುವುದನ್ನು ಹಾಗೂ ನಿಯಂತ್ರಣದಲ್ಲಿ ಇಡಲು ಈ ಜ್ವರದಿಂದ ಬಳಲುತ್ತಿರುವ ಪ್ರಾಣಿಗಳ ಸಂಪರ್ಕಕ್ಕೆ ಮಾನವರು ಬರದಂತೆ ತಡೆಯುವುದು ಮುಖ್ಯವಾಗಿದೆ. ಸಾಕು ಪ್ರಾಣಿ ಅಥವಾ ಇಲಿ ಹಾಗೂ ಇಲಿಯ ಜಾತಿಗೆ ಸೇರಿದ ಪ್ರಾಣಿಗಳ ಸ್ಥಳಗಳನ್ನು ಸ್ವಚ್ಛಗೊಳಿಸುವಾಗ, ಕೈ ಮತ್ತು ಬಾಯಿಯ ನಡುವಿನ ಸಂಪರ್ಕವನ್ನು ತಪ್ಪಿಸಬೇಕು. ಸ್ವಚ್ಛತೆಯ ತರುವಾಯ ಕೈ ಮತ್ತು ಮುಖವನ್ನು ತಪ್ಪದೆ ಸೋಪಿನಿಂದ ತೊಳೆಯಬೇಕು. ಇಲಿ, ಅಳಿಲು ಸೇರಿದಂತೆ ಇತರೆ ಇಲಿಜಾತಿಗೆ ಸೇರಿದ ಪ್ರಾಣಿಗಳಿಂದ ದೇಹದ ಮೇಲೆ ಗೀರು ಉಂಟಾದರೆ ನಂಜುನಿರೋಧಕ ಲೇಪಿಸಿ ಸ್ವಚ್ಛಗೊಳಿಸಬೇಕು. ಗೀರಿನಿಂದ ಉಂಟಾಗುವ ಕೀಮೋಪೆÇ್ರಫಿಲ್ಯಾಕ್ಸಿಸ್‍ನ ಪರಿಣಾಮದ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲ. ಜ್ವರ ಹಬ್ಬುವುದನ್ನು ತಡೆಯಲು ಮನುಷ್ಯರೊಂದಿಗೆ ಸಾಕು ಪ್ರಾಣಿಗಳ ಸಂಪರ್ಕವನ್ನು ಕಡಿಮೆ ಮಾಡಬೇಕು. ಪ್ರಾಣಿ ನಿರ್ವಾಹಕರು, ಪ್ರಯೋಗಾಲಯದ ಕೆಲಸಗಾರರು ಮತ್ತು ನೈರ್ಮಲ್ಯ ಮತ್ತು ಒಳಚರಂಡಿ ಕೆಲಸಗಾರರು ವಿಶೇಷ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳಬೇಕು. ಸತ್ತ ಅಥವಾ ಜೀವಂತವಾಗಿರುವ ಇಲಿಜಾತಿಯ ಪ್ರಾಣಿಗಳನ್ನು ಮುಟ್ಟಬಾರದು. ಸಾಕು ಬೆಕ್ಕು ಅಥವಾ ನಾಯಿ ಇಲಿಗಳನ್ನು ಸೇವಿಸಲು ಅನುಮತಿಸಬಾರದು ಎಂದರು.
ತಾಲ್ಲೂಕು ಆರೋಗ್ಯ ಶಿಕ್ಷಣಾಧಿಕಾರಿ ಎನ್.ಎಸ್.ಮಂಜುನಾಥ ಮಾತನಾಡಿ, ಲಿ, ಹಸು, ನಾಯಿ, ಹಂದಿ ಮೂಲಕವೂ ಇಲಿ ಜ್ವರ ಹಬ್ಬುತ್ತದೆ. ಪರಿಸರ ನೈರ್ಮಲ್ಯದ ಕೊರತೆ, ನೆರೆಹಾವಳಿ ಇಲಿ ಜ್ವರ ಹರಡಲು ಮುಖ್ಯ ಕಾರಣವಾಗಿದೆ. ರೋಗಾಣು ಪ್ರವೇಶಿಸಿದ 2 ರಿಂದ 25 ದಿನಗಳಲ್ಲಿ ತೀವ್ರತರದ ಜ್ವರ ಕಾಡುತ್ತದೆ. ಮೈಕೈ ನೋವು, ತಲೆನೋವು , ಕೆಲವೊಮ್ಮೆ ವಾಂತಿ ಹೊಟ್ಟೆ ನೋವು ಕಾಣಿಸಿಕೊಳ್ಳುವುದು ಈ ಜ್ವರದ ಲಕ್ಷಣವಾಗಿದೆ. ಈ ಲಕ್ಷಣಗಳು ಕಂಡು ಬಂದಲ್ಲಿ ಹತ್ತಿರದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ತಪಾಸಣೆ ಚಿಕಿತ್ಸೆ ಪಡೆಯಬೇಕು ಎಂದರು.
ಗ್ರಾಮ ಪಂಚಾಯತಿ ಅಧ್ಯಕ್ಷೆ ಎಮ್.ವೀಣಾ ಇಲಿ ಜ್ವರ ನಿಯಂತ್ರಣ ಕರಪತ್ರ ಬಿಡುಗಡೆ ಮಾಡಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಕಾರ್ಯಕ್ರಮದಲ್ಲಿ ಗ್ರಾಮ ಆರೋಗ್ಯ ಅಮೃತ ಯೋಜನೆಯ ಬಗ್ಗೆ ತರಬೇತಿ ನೀಡಲಾಯಿತು. ಪಿ.ಡಿಓ ಶೃತಿ, ರೂಪ, ಸಹಾಯಕ ಶಿಶು ಅಭಿವೃದ್ಧಿ ಅಧಿಕಾರಿ ದಾಸಪ್ಪ, ಆರೋಗ್ಯ ನಿರೀಕ್ಷಣಾಧಿಕಾರಿ ಶ್ರೀಧರ್, ಗ್ರಾಮ ಪಂಚಾಯತ್ ಸದಸ್ಯ ಆಶಾ, ಅಂಗನವಾಡಿ ಕಾರ್ಯಕರ್ತರು, ಸಮುದಾಯ ಆರೋಗ್ಯಾಧಿಕಾರಿಗಳು, ಪ್ರಾಥಮಿಕ ಆರೋಗ್ಯ ಸುರಕ್ಷತಾಧಿಕಾರಿಗಳು, ಆರೋಗ್ಯ ನಿರೀಕ್ಷಣಾಧಿಕಾರಿಗಳು ಭಾಗವಹಿಸಿದ್ದರು.

Latest News >>

ಡಿ.ಸಿ.ಸಿ. ಬ್ಯಾಂಕ್ ನಿರ್ದೇಶಕರಾಗಿ ಓ.ಮಂಜುನಾಥ್ ಮಾಳಿಗೆ ಅವರು ಅವಿರೋಧ ಆಯ್ಕೆಯಾಗಿದ್ದಾರೆ.

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತ, ಚಿತ್ರದುರ್ಗ ಇದರ ಆಡಳಿತ ಮಂಡಳಿ ನಿರ್ದೇಶಕರ ಸ್ಥಾನಕ್ಕೆ ಹಿರಿಯೂರು...

ಚಿತ್ರದುರ್ಗದಲ್ಲಿ ನಡೆಯಲಿರುವ ಪತ್ರಿಕಾ ವಿತರಕರ ಹಂಚಿಕೆದಾರರ 4ನೇರಾಜ್ಯಸಮ್ಮೇಳನ ಕಾರ್ಯಕ್ರಮ ಯಶಸ್ವಿಯಾಗಲಿ : ಆಲೂರು ಹನುಮಂತರಾಯಪ್ಪ

ಹಿರಿಯೂರು: ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ ಹಾಗೂ ಚಿತ್ರದುರ್ಗ ಜಿಲ್ಲಾ ಪತ್ರಿಕೆ ಹಂಚಿಕೆದಾರರ ಹಾಗೂ ವಿತರಕರ ಸಂಘ (ರಿ) ಇವರುಗಳ...

ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ ಅನುಷ್ಟಾನ ಮೌಲ್ಯಮಾಪನ ಸಭೆಜಿಲ್ಲಾ ಮೇಲ್ವಿಚಾರಣಾ ಸಮಿತಿಯಿಂದ ಕ್ರಿಯಾಯೋಜನೆ ಅನುಮೋದನೆ ಕ್ರಮಕ್ಕೆ ಶಿಫಾರಸ್ಸು

ಚಿತ್ರದುರ್ಗ ಸೆ.06: ಪರಿಶಿಷ್ಟ ಜಾತಿ ಹಾಗೂ ಗಿರಿಜನ ಉಪಯೋಜನೆಯಡಿ (ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ) ಜಿಲ್ಲೆಯಲ್ಲಿ ಕೈಗೊಳ್ಳುವ ಎಲ್ಲಾ...

ಪೋಷಣ್ ಮಾಸಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ.ಡಿ.ಎಂ.ಅಭಿನವ್ ಪೌಷ್ಠಿಕಾಂಶಯುಕ್ತ ಆಹಾರ ಪದಾರ್ಥ ಸೇವಿಸುವುದು ಅಭ್ಯಾಸಿಸಿ

ಚಿತ್ರದುರ್ಗ ಸೆ.6: ಪೋಷಣ್ ಮಾಸಾಚರಣೆ ಕಾರ್ಯಕ್ರಮ ಮಕ್ಕಳ ಹಾಗೂ ಗರ್ಭಿಣಿಯರ, ಬಾಣಂತಿಯರ ಆರೋಗ್ಯ ಪೋಷಣ ಮಾಸಾಚರಣೆ ಆಗಬೇಕು. ಮಕ್ಕಳಲ್ಲಿ...

ಎಚ್‌ಐವಿ/ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆ

ಚಿತ್ರದುರ್ಗ ಸೆ.6: ಯುವ ಜನೋತ್ಸವ ಅಂಗವಾಗಿ ಎಚ್‌ಐವಿ/ ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆಯು ಚಿತ್ರದುರ್ಗ ನಗರದಲ್ಲಿ ಗುರುವಾರ...

ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಕಾಮಗಾರಿ ಪರಿಶೀಲನೆ

ಚಿತ್ರದುರ್ಗ ಸೆ.06: ನಬಾರ್ಡ್ ಸಂಸ್ಥೆಯ ಡಿಜಿಎಂ ಸಂಜೀವ್ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಈಚೆಗೆ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ವಾಣಿವಿಲಾಸ...

ಮೊಳಕಾಲ್ಮುರು : ಫಲಾನುಭವಿಗಳ ಮನೆ ಬಾಗಿಲಿಗೆ ಹೋಗಿ ಸಮಸ್ಯೆ ಆಲಿಸಿ ಶಾಸಕ ಎನ್ ವೈ ಗೋಪಾಲಕೃಷ್ಣ.

ಮೊಳಕಾಲ್ಮೂರು :-ಪಟ್ಟಣದ ತಾಲೂಕು ಪಂಚಾಯಿತಿಯಲ್ಲಿ ಗ್ಯಾರೆಂಟಿ ಅನುಷ್ಠಾನ ಸಮಿತಿ ನೂತನ ಕಾರ್ಯಾಲಯವನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ಎನ್ ವೈ....

ಬೆಂಬಲಬೆಲೆಯಲ್ಲಿ ಸೂರ್ಯಕಾಂತಿ ಖರೀದಿ ಕೇಂದ್ರಗಳ ಸ್ಥಾಪನೆ

ಚಿತ್ರದುರ್ಗ ಸೆ.04: 2024-25ನೇ ಸಾಲಿಗೆ ಕೇಂದ್ರ ಸರ್ಕಾರದ ಬೆಂಬಲಬೆಲೆ ಯೋಜನೆಯಡಿ ನಿಗದಿಪಡಿಸಿರುವ ರೂ.7,280/- (ಪ್ರತಿ ಕ್ವಿಂಟಾಲ್‌ಗೆ)...

ಮಹಾತ್ಮ ಗಾಂಧೀ ಸೇವಾ ಪ್ರಶಸ್ತಿ – ಕರ್ನಾಟಕ’ ಆಯ್ಕೆಗೆ ನಾಮನಿರ್ದೇಶನ ಆಹ್ವಾನ

ಚಿತ್ರದುರ್ಗ ಸೆ.04: ರಾಜ್ಯ ಸರ್ಕಾರವು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಸ್ಥಾಪಿಸಿರುವ ಐದು ಲಕ್ಷ ರೂಪಾಯಿ ನಗದನ್ನು ಒಳಗೊಂಡ...

ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್ 110 ಸಿಸಿ ಯ ಆಕರ್ಷಕ ಸ್ಕೂಟಿ ಮಾರುಕಟ್ಟೆಗೆ ಬಿಡುಗಡೆ.

ಚಿತ್ರದುರ್ಗ: ಚಿತ್ರದುರ್ಗ ನಗರದ ತುರುವನೂರು ರಸ್ತೆಯಲ್ಲಿನ ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page