ಪ್ರಭಾಕರ ಮ್ಯಾಸನಾಯಕ ಮೊಳಕಾಲ್ಮೂರು ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿಯ ಅಂತರಾಳದ ಮಾತು

by | 27/02/23 | ವೈರಲ್

ಆತ್ಮೀಯರೇ..

ಕೊನೆಗಳಿಗೆ ತನಕ ಹೋರಾಟ ಮಾಡಿದ್ದರ ಫಲವಾಗಿ ಅಭಿಮನ್ಯುವಿಗೆ ಶೂರ ಎಂಬ ಬಿರುದು ಬಂತು ಎಂದು ಕೇಳಿದ್ದೇವೆ. ಅಭಿಮನ್ಯು ನನಗೆ ಪ್ರೇರಣೆ. ಅದೇ ರೀತಿ ಮಾಡಿದಷ್ಟು ನೀಡುಭಿಕ್ಷೆಯ ಶ್ರೀಕ್ಷೇತ್ರ ಇರುವುದು ಕೂಡ ಮೊಳಕಾಲ್ಮೂರು ಕ್ಷೇತ್ರದಲ್ಲಿ. ಇಲ್ಲಿ ಕಳೆದ 10 ವರ್ಷಗಳಿಂದ ನಿರಂತರವಾಗಿ ಸೇವಾಕಾರ್ಯ ಕೈಗೊಂಡಿದ್ದೇನೆ. ನನ್ನ ಪರಿಶ್ರಮಕ್ಕೆ ಭಗವಂತ ಕೈ ಹಿಡಿದು ನಡೆಸುತ್ತಾನೆ ಎಂಬ ಅಚಲ ನಂಬಿಕೆ ನನ್ನದು. ಈಗಲೂ ಕ್ಷೇತ್ರದ ಜನರೊಡನೆ ಇದ್ದೇನೆ, ಮುಂದೆಯೂ ಇರುತ್ತೇನೆ.ನನ್ನ ನೋಡಿ ನಗುವವರು ಆಡಿಕೊಳ್ಳುವವರು, ಕಿಚಾಯಿಸುವವರು ಹಾಗೂ ನನಗೆ ಮಾಡುತ್ತಿರುವ ಅಪಮಾನ ಅವಮಾನಗಳು ಎಲ್ಲವೂ ನನಗೆ ಪ್ರೇರಣೆಯಾಗಿದೆ.
ಇವೆಲ್ಲವೂ ನನ್ನನ್ನು ಮತ್ತಷ್ಟು ಸದೃಢನನ್ನಾಗಿಸಿದೆ. ನನಗೆ ಅಪಮಾನ ಅವಮಾನ ಮಾಡುತ್ತಿರುವ ಎಲ್ಲರನ್ನು ಬಸವಣ್ಣನವರ ಹೇಳಿರುವ ವಚನದಂತೆ ಜರಿದವರೆನ್ನ ಜನ್ಮ ಬಂಧುಗಳೆಂಬಂತೆ ಅತ್ಯಂತ ಸ್ನೇಹಭಾವದಿಂದ ಸ್ವೀಕರಿಸಿದ್ದೇನೆ.
ಡಾಕ್ಟರ್ ಎಪಿಜೆ ಅಬ್ದುಲ್ ಕಲಾಂ ಅವರು ಹೇಳಿರುವಂತೆ *ಕನಸಿನ ಗುರಿ ಕೇಳಿ ಜನ ಇವನೊಬ್ಬ ಹುಚ್ಚ ಎನ್ನಬೇಕು ಗುರಿ ತಲುಪಿದ ಮೇಲೆ ನೋಡಿ ನಗಾಡಿರುವವರು ಹುಚ್ಚರಾಗಬೇಕು* ಇವು ನನಗೆ ಆದರ್ಶ ನುಡಿಗಳು ಕ್ಷೇತ್ರದಲ್ಲಿ ನನ್ನ ಗುರಿ ತಲುಪುತ್ತೇನೆ. ನನ್ನ ಮಾತೃಸಮಾನ ಪಕ್ಷ ಈ ಬಾರಿ ಕ್ಷೇತ್ರದಲ್ಲಿ ಸ್ಪರ್ಧಿಸಲು ಅವಕಾಶ ನೀಡುವ ವಿಶ್ವಾಸವಿದೆ. ಮತದಾರ ದೇವರುಗಳ ಆಶೀರ್ವಾದದಿಂದ ಶಾಸಕನಾಗುತ್ತೇನೆ ಎಂಬ ಅಧಮ್ಯ ವಿಶ್ವಾಸ ನನ್ನದು. ಇದಕ್ಕೆ ಕ್ಷೇತ್ರದ ಜನರ ಸಹಕಾರ ಕೋರುತ್ತೇನೆ. ಮಹಾತ್ಮ ಗಾಂಧೀಜಿ ಅವರು ಉಪ್ಪಿನ ಸತ್ಯಾಗ್ರಹ ಆರಂಭ ಮಾಡಿದಾಗ ಹಿಂದೆ ಬಂದವರು ಕೇವಲ ಮೂರು ಜನ ಮಾತ್ರ ಹಾಗೆ ಶಿವಾಜಿ ಮಹಾರಾಜರು ಸೈನ್ಯ ಕಟ್ಟಲು ಹೊರಟಾಗ ಸಿಕ್ಕಿದ್ದು ಹಸು ಮೇಯಿಸುವ ನಾಲ್ಕಾರು ಹುಡುಗರು ಮಾತ್ರ. ಇವರ್ಯಾರು ಎದೆಗುಂದದೆ ಸೈನ್ಯ ಕಟ್ಟಿ ಇಡೀ ಹಿಂದೂ ಸಮಾಜಕ್ಕೆ ಪ್ರೇರಣೆಯಾಗಿದ್ದಾರೆ. ಹಾಗೆ ನಾನು ಕೂಡ ಶುಭೋದಯ ಕಾರ್ಯಕ್ರಮ ಮುಖೇನ ಕ್ಷೇತ್ರದಾದ್ಯಂತ ಸಂಚರಿಸಿ ಜನರ ಮನಸ್ಸನ್ನು ಗೆಲ್ಲುತ್ತೇನೆ. *ನನ್ನ ತಾಯಿ ನನಗೆ ಕಲಿಸಿಕೊಟ್ಟ ಸಂಸ್ಕಾರ*
ಯಾರಿಗೂ ನೋವುಂಟು ಮಾಡಬೇಡ ಯಾರಿಗೂ ಕೆಡಕು ಬಯಸಬೇಡ ಎಂದು ನನ್ನ ತಾಯಿ ಅನಕ್ಷರಸ್ಥೆ ಆದರೂ ಮೇಲಿನಂತೆ ಸದಾ ಹೇಳುತ್ತಿದ್ದರು. ಅಣ್ಣ ಶ್ರೀರಾಮುಲು ಅವರ ಬಗ್ಗೆ ಆವೇಶದಲ್ಲಿ ಭಾವನಾತ್ಮಕವಾಗಿ ಮಾತನಾಡಿರುವ ಬಗ್ಗೆ ಇತ್ತೀಚೆಗೆ ಸ್ನೇಹಿತನೋರ್ವ ಒಂದು ಆಡಿಯೋ ಒಂದು ವೈರಲ್ ಮಾಡಿದ್ದರು. ಅದು ನನ್ನನ್ನು ಮಾನಸಿಕವಾಗಿ ಬಹಳ ನೋಯಿಸಿದೆ. ಇದು ಉದ್ದೇಶಪೂರ್ವಕವಾಗಿ ಮಾತನಾಡಿದ್ದಲ್ಲ. ಯಾರು ಈ ಬಗ್ಗೆ ಅನ್ಯತಾಭಾವಿಸಬಾರದು ಈ ಬಗ್ಗೆ ಅವರಲ್ಲಿ ಹಾಗು ಕಾರ್ಯಕರ್ತರಲ್ಲಿ ಕ್ಷಮೆ ಕೇಳಿದ್ದೇನೆ ಪಕ್ಷದಲ್ಲಿರುವ ಎಲ್ಲರೂ ಅಣ್ಣ ತಮ್ಮಂದಿರು, ಚುನಾವಣೆಯಲ್ಲಿ ಪಕ್ಷಕ್ಕಾಗಿ ದುಡಿಯೋಣ ಪಕ್ಷ ಗೆಲ್ಲಿಸೋಣ ಎಂದು ಆಶಿಸುತ್ತಾ ನಿಮ್ಮೆಲ್ಲರ ಸಹಕಾರದ ನಿರೀಕ್ಷೆಯಲ್ಲಿ

ಇಂತಿ ನಿಮ್ಮ ಪ್ರೀತಿಯ
ಪ್ರಭಾಕರ ಮ್ಯಾಸನಾಯಕ
ಮೊಳಕಾಲ್ಮೂರು ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿ.

Latest News >>

ಡಿ.ಸಿ.ಸಿ. ಬ್ಯಾಂಕ್ ನಿರ್ದೇಶಕರಾಗಿ ಓ.ಮಂಜುನಾಥ್ ಮಾಳಿಗೆ ಅವರು ಅವಿರೋಧ ಆಯ್ಕೆಯಾಗಿದ್ದಾರೆ.

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತ, ಚಿತ್ರದುರ್ಗ ಇದರ ಆಡಳಿತ ಮಂಡಳಿ ನಿರ್ದೇಶಕರ ಸ್ಥಾನಕ್ಕೆ ಹಿರಿಯೂರು...

ಚಿತ್ರದುರ್ಗದಲ್ಲಿ ನಡೆಯಲಿರುವ ಪತ್ರಿಕಾ ವಿತರಕರ ಹಂಚಿಕೆದಾರರ 4ನೇರಾಜ್ಯಸಮ್ಮೇಳನ ಕಾರ್ಯಕ್ರಮ ಯಶಸ್ವಿಯಾಗಲಿ : ಆಲೂರು ಹನುಮಂತರಾಯಪ್ಪ

ಹಿರಿಯೂರು: ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ ಹಾಗೂ ಚಿತ್ರದುರ್ಗ ಜಿಲ್ಲಾ ಪತ್ರಿಕೆ ಹಂಚಿಕೆದಾರರ ಹಾಗೂ ವಿತರಕರ ಸಂಘ (ರಿ) ಇವರುಗಳ...

ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ ಅನುಷ್ಟಾನ ಮೌಲ್ಯಮಾಪನ ಸಭೆಜಿಲ್ಲಾ ಮೇಲ್ವಿಚಾರಣಾ ಸಮಿತಿಯಿಂದ ಕ್ರಿಯಾಯೋಜನೆ ಅನುಮೋದನೆ ಕ್ರಮಕ್ಕೆ ಶಿಫಾರಸ್ಸು

ಚಿತ್ರದುರ್ಗ ಸೆ.06: ಪರಿಶಿಷ್ಟ ಜಾತಿ ಹಾಗೂ ಗಿರಿಜನ ಉಪಯೋಜನೆಯಡಿ (ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ) ಜಿಲ್ಲೆಯಲ್ಲಿ ಕೈಗೊಳ್ಳುವ ಎಲ್ಲಾ...

ಪೋಷಣ್ ಮಾಸಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ.ಡಿ.ಎಂ.ಅಭಿನವ್ ಪೌಷ್ಠಿಕಾಂಶಯುಕ್ತ ಆಹಾರ ಪದಾರ್ಥ ಸೇವಿಸುವುದು ಅಭ್ಯಾಸಿಸಿ

ಚಿತ್ರದುರ್ಗ ಸೆ.6: ಪೋಷಣ್ ಮಾಸಾಚರಣೆ ಕಾರ್ಯಕ್ರಮ ಮಕ್ಕಳ ಹಾಗೂ ಗರ್ಭಿಣಿಯರ, ಬಾಣಂತಿಯರ ಆರೋಗ್ಯ ಪೋಷಣ ಮಾಸಾಚರಣೆ ಆಗಬೇಕು. ಮಕ್ಕಳಲ್ಲಿ...

ಎಚ್‌ಐವಿ/ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆ

ಚಿತ್ರದುರ್ಗ ಸೆ.6: ಯುವ ಜನೋತ್ಸವ ಅಂಗವಾಗಿ ಎಚ್‌ಐವಿ/ ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆಯು ಚಿತ್ರದುರ್ಗ ನಗರದಲ್ಲಿ ಗುರುವಾರ...

ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಕಾಮಗಾರಿ ಪರಿಶೀಲನೆ

ಚಿತ್ರದುರ್ಗ ಸೆ.06: ನಬಾರ್ಡ್ ಸಂಸ್ಥೆಯ ಡಿಜಿಎಂ ಸಂಜೀವ್ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಈಚೆಗೆ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ವಾಣಿವಿಲಾಸ...

ಮೊಳಕಾಲ್ಮುರು : ಫಲಾನುಭವಿಗಳ ಮನೆ ಬಾಗಿಲಿಗೆ ಹೋಗಿ ಸಮಸ್ಯೆ ಆಲಿಸಿ ಶಾಸಕ ಎನ್ ವೈ ಗೋಪಾಲಕೃಷ್ಣ.

ಮೊಳಕಾಲ್ಮೂರು :-ಪಟ್ಟಣದ ತಾಲೂಕು ಪಂಚಾಯಿತಿಯಲ್ಲಿ ಗ್ಯಾರೆಂಟಿ ಅನುಷ್ಠಾನ ಸಮಿತಿ ನೂತನ ಕಾರ್ಯಾಲಯವನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ಎನ್ ವೈ....

ಬೆಂಬಲಬೆಲೆಯಲ್ಲಿ ಸೂರ್ಯಕಾಂತಿ ಖರೀದಿ ಕೇಂದ್ರಗಳ ಸ್ಥಾಪನೆ

ಚಿತ್ರದುರ್ಗ ಸೆ.04: 2024-25ನೇ ಸಾಲಿಗೆ ಕೇಂದ್ರ ಸರ್ಕಾರದ ಬೆಂಬಲಬೆಲೆ ಯೋಜನೆಯಡಿ ನಿಗದಿಪಡಿಸಿರುವ ರೂ.7,280/- (ಪ್ರತಿ ಕ್ವಿಂಟಾಲ್‌ಗೆ)...

ಮಹಾತ್ಮ ಗಾಂಧೀ ಸೇವಾ ಪ್ರಶಸ್ತಿ – ಕರ್ನಾಟಕ’ ಆಯ್ಕೆಗೆ ನಾಮನಿರ್ದೇಶನ ಆಹ್ವಾನ

ಚಿತ್ರದುರ್ಗ ಸೆ.04: ರಾಜ್ಯ ಸರ್ಕಾರವು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಸ್ಥಾಪಿಸಿರುವ ಐದು ಲಕ್ಷ ರೂಪಾಯಿ ನಗದನ್ನು ಒಳಗೊಂಡ...

ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್ 110 ಸಿಸಿ ಯ ಆಕರ್ಷಕ ಸ್ಕೂಟಿ ಮಾರುಕಟ್ಟೆಗೆ ಬಿಡುಗಡೆ.

ಚಿತ್ರದುರ್ಗ: ಚಿತ್ರದುರ್ಗ ನಗರದ ತುರುವನೂರು ರಸ್ತೆಯಲ್ಲಿನ ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page