ದಾರ್ಶನಿಕರ ಜಯಂತಿಗಳ ಹಾಗೂ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಆಚರಣೆ ಮಾಡುವ ಎಲ್ಲಾ ಕಾರ್ಯಕ್ರಮಗಳಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳು ಕಡ್ಡಾಯವಾಗಿ ಭಾಗವಹಿಸುವಂತಾಗಬೇಕು ಶಾಸಕ ಟಿ.ರಘುಮೂರ್ತಿ.

by | 12/03/23 | ಚರಿತ್ರೆ, ವೈವಿಧ್ಯ


ಚಳ್ಳಕೆರೆ ಜನಧ್ವನಿ ವಾರ್ತೆ ಮಾ.೧೨
ನಮ್ಮ ನಾಡು, ನುಡಿಯ ಬಗ್ಗೆ ಬರಿ ಅಭಿಮಾನವಿದ್ದರೆ ಸಾಲದು ನಾಡಿಗಾಗಿ ನಾವು ತ್ಯಾಗ ಮತ್ತು ಸೇವೆ ಸಲ್ಲಿಸಬೇಕು ಇಂತಹ ಕಾರ್ಯಕ್ರಮದಲ್ಲಿ ನಿರೀಕ್ಷೆಗಿಂತ ಕಡಿಮೆ ಜನರು ಭಾಗವಹಿಸದೆ ಇರುವ ಬಗ್ಗೆ ಶಾಸಕ ಟಿ.ರಘುಮೂರ್ತಿ ವಿಷಾದ ವ್ಯಕ್ತಪಡಿಸಿದರು.

ನಗರದ ಬಿಸಿನೀರು ಮುದ್ದಪ್ಪ ಸರಕಾರಿ ಪ್ರೌಢಶಾಲೆಯ ಆವರಣದಲ್ಲಿ ಬಯಲು ರಂಗಮಂದಿರಲ್ಲಿ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಆಯೋಜಿಸಿದ್ದ ನಾಲ್ಕನೇತಾಲೂಕು ಕನ್ನಡ ಸಾಹಿತ್ಯ ಸಮ್ಮೇಳದಲ್ಲಿ ಭಾಗವಹಿಸಿ ಮಾತನಾಡಿದರು.ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿಯಿಂದ ಆಚರಣೆ ಮಾಡುವ ದಾರ್ಶನಿಕ ಜಯಂತಿಗಳ ಹಾಗೂ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಆಚರಣೆ ಮಾಡುವ ಎಲ್ಲಾ ಕಾರ್ಯಕ್ರಮಗಳಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳು ಕಡ್ಡಾಯವಾಗಿ ಭಾಗವಹಿಸುವಂತಾಗ ಬೇಕು. ಚುವಾವಣೆ ಸಂದರ್ಭದಲ್ಲಿ ರಾಜಕೀಯ ಉದ್ದೇಶಕ್ಕಾಗಿ ಸಮಾವೇಶಗಳಿಗೆ ಜನ ಸೇರಿಸುತ್ತಾರೆ ಆದರೆ ಕನ್ನಡ ನಾಡು ನುಡಿ, ಜಲ ಉಳಿವಿಗಾಗಿ ಹಮ್ಮಿಕೊಳ್ಳುವ ಮಹತ್ವದ ಕನ್ನಡ ಸಾಹಿತ್ಯ ಕಾರ್ಯಕ್ರಮಗಳಲ್ಲಿ ಕನ್ನಡಾಭಿಮಾನಿಗಳು, ವಿವಿಧ ಸಂಘಟನೆಗಳು, ಕಾರ್ಯಕ್ರಮದಲ್ಲಿ ಭಾಗವಹಿಸಬೇಕು.

ಕನ್ನಡ ಸಾಹಿತ್ಯದ ಕೃಷಿ ಬೆಳವಣಿಗೆಗೆ ಕೇವಲ ಸಂಘಟನೆ ಸಾಲದು. ಬದಲಾಗಿ ದೊಡ್ಡ ಪರಂಪರೆ ಬೆಳೆಯಬೇಕಾಗಿದೆ. ಕನ್ನಡ ನಮ್ಮೆಲ್ಲರ ಜೀವಾಳವಾಗಿದ್ದು, ಭಾರತದ ಸಂಸ್ಕ್ರತಿ ಕನ್ನಡದ ಮೇಲೆ ನಿಂತಿದೆ. ಭಾಷೆಯಲ್ಲಿ ಮೇಲು-ಕೀಳು ಎಂಬುದಿಲ್ಲ. ಉಳಿದ ಭಾಷೆಗಳನ್ನು ಗೌರವಿಸುವ ಮೂಲಕ ಕನ್ನಡ ಭಾಷೆಯ ಬೆಳವಣಿಗೆಗೆ ನಾವೆಲ್ಲರೂ ಕಟಿಬದ್ಧರಾಗಬೇಕು ಎಂದು ತಿಳಿಸಿದರು.

ನಿಕಟಪೂವರ್ಗ ತಾಲೂಕು ಸಮ್ಮೇಳನಾಧ್ಯಕ್ಷ ಹಾಗೂ ನಿವೃತ್ತ ಪ್ರಾಚಾರ್ಯ ಶಿವಲಿಂಗಪ್ಪ ಮಾತನಾಡಿ ಬಳ್ಳಾರಿ ಚಿತ್ರದುರ್ಗ ಬರದ ನಾಡು ಅತಿ ಕಡಿಮೆ ಮಳೆ ಬೀಳುವ ಪ್ರದೇಶ, ಹಿಂದುಳಿದ ಜಿಲ್ಲೆಗಳು ಎಂದು ಎನಿಸಿಕೊಂಡಿದ್ದು ವಿಶೇಷ ಅನುದಾನದಡಿಯಲ್ಲಿ ಕಲ್ಯಾಣ ಕರ್ನಾಟ ಎಂದು ಹೇಗೆ ಅಭಿವೃದ್ಧಿಯಾಗಿದೆಯೋ ಅದೇ ರೀತಿ ಚಿತ್ರದುರ್ಗ, ಬಳ್ಳಾರಿ ಎರಡು ಜಿಲ್ಲೆಗಳನ್ನು ೩೭೧ ಜೆ ಅಡಿಯಲ್ಲಿ ಜಾರಿಗೆ ತರುವ ಮೂಲಕ ಪರಶುರಾಂಪುರ ತಾಲೂಕು ಕೇಂದ್ರ, ನಿರುದ್ಯೋಗ ಹೋಗಲಾಡಿಸಲು ಉದ್ಯೋಗ ಸಂಸ್ಥೆ, ಡಿಆರ್ ಡಿಒ, ಸೇರಿದಂತೆ ಕೇಂದ್ರದ ಸಂಸ್ಥೆಗಳು ಸ್ಥಾಪನೆಯಾಗಿದ್ದು ಸ್ಥಳಿಯರಿಗೆ ಉದ್ಯೋಗ ಕಲ್ಪಿಸ ಬೇಕು, ರಾಣಿಕೆರೆ ಪೀಡರ್ ಚಾನಲ್ , ಕೆರೆ ಗಳು ಅಭಿವೃದ್ಧಿ, ಗಡಿ ಭಾಗದ ಶಾಲೆಗಳ ಅಭಿವೃದ್ಧಿ ಪಡಿಸಿ ವಿದ್ಯಾರ್ಥಿಗಳ ಸಂಖ್ಯೆ ಕಡಿಮೆ ಇದೆ ಎಂಬ ನೆಪವೊಡ್ಡಿ ಅವುಗಳನ್ನು ಮುಚ್ಚುವ ಕೆಲಸ ತೆರೆಮರೆಯಲ್ಲಿ ನಡೆಯುತ್ತಿದೆ ಸರಕಾರಿ ಶಾಲೆಗಳನ್ನು ಮುಚ್ಚದಂತೆ ಅಭಿವೃದ್ಧಿ ಪಡಿಸಬೇಕು ಎಂದು ತಿಳಿಸಿದರು.
ಸಮ್ಮೇಳನಾಧ್ಯಕ್ಷ ಕಲಮರಹಳ್ಳಿ ಡಾ.ಮಲ್ಲಿಕಾರ್ಜುನ ಮಾತನಾಡಿ ಕನ್ನಡ ಭಾಷೆಗೆ ಸೌಂದರ್ಯವಿದೆ. ಭಾಷೆಯನ್ನು ಗೌರವಸುವುದು ಎಂದರೆ ಆ ಭಾಷೆಯನ್ನು ಮಾತನಾಡುವ ಜನರನ್ನು ಗೌರವಿಸಿದಂತೆ. ನಮ್ಮ ಜಿಲ್ಲೆ ಅದರಲ್ಲೂ ಚಳ್ಳಕೆರೆ ತಾಲೂಕು ಹಲವಾರು ತಳಕಿನ ವೆಂಕಣ್ಣಯ್ಯ, ಜಾನಪದ ಸಿರಿಯಜ್ಜಿ, ಬೆಳೆಗೆರೆ ಕೃಷ್ಣಶಾಸ್ತಿç ಸೇರಿದ ಹಲವು ಸಾಹಿತಿಗಳ ಜನ್ಮ ಸ್ಥಳವಾಗಿದ್ದು ಕನ್ನಡ ಭವನ, ನಾಡೋಜ ದಿ.ಸಿರಿಯಜ್ಜಿಯ ಸ್ಮಾರಕ,ಶತಮಾನ ಕಂಡ ಶಾಲೆಗಳನ್ನು ಉನ್ನತೀಕರಿಸಿ ಹೆಚ್ಚಿನ ಸೌಲಭ್ಯಗಳನ್ನು ಒದಗಿಸುವುದು, ಜಾರಿಯಲ್ಲಿರುವ ನೀರಾವರಿ ಯೋಜನೆಗಳನ್ನು ತ್ವರಿತವಾಗಿ ಪೂರ್ಣಗೊಳಿಸಿ, ಬರಡು ಸೀಮೆಯನ್ನು ಹಸಿರು ವಲಯವನ್ನಾಗಿಸುವುದು, ತಾಲೂಕಿನ ಬಡ ಕುಟುಂಬದ ಮಕ್ಕಳ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಕೇಂದ್ರ, ಅರಣ್ಯ ಕೃಷಿ ಪದ್ದತಿ, ಸೇರಿದಂತೆ ಹಲವು ಯೋಜೆಗಳನ್ನು ಜಾರಿಗೊಳಸಿ ಸಮಗ್ರ ಅಭಿವೃದ್ಧಿಗೆ ಶ್ರಮಿಸುವಂತೆ ತಿಳಿಸಿದರು.

ತಾಲೂಕು ಕಸಾಪ ಅಧ್ಯಕ್ಷ ಜಿ.ಟಿ.ವೀರಭದ್ರಸ್ವಾಮಿ ಮಾತನಾಡಿ ತಾಲೂಕು ಕನ್ನಡ ಸಾಹಿತ್ಯ ೪ ನೇ ಸಮ್ಮೇಳನ ಕಾರ್ಯಕ್ಕೆ ಸುಮಾರು ೨ ಸಾವಿರ ಕನ್ನಡಾಭಿಮಾನಿಗಳ ನಿರೀಕ್ಷೆಯಿತ್ತು ಆದರೆ ನಿರೀಕ್ಷೆಯಂತೆ ಬಾರದೆ ಇರುವುದು ವಿಷಾಧನೀಯ ಪ್ರತ್ಯಕ್ಷವಾಗಿ ಪರೋಕ್ಷವಾಗಿ ಭಾಗವಹಿಸಿ ಎಲ್ಲಾರಿಗೂ ಕನ್ನಡ ಸಾಹಿತ್ಯ ಸಮ್ಮೇಳನ ಕಾರ್ಯಕ್ರಮ ಯಶಸ್ವಿಗೆ ಸಹಕರಿದವರು ಅಭಿನಂಧನೆಗಳನ್ನು ತಿಳಿಸಿದರು.
ಕಾರ್ಯಕ್ರಕ್ಕೂ ಮುನ್ನ ಬೆಳಗ್ಗೆ ೭ ಗಂಟೆಗೆ ತಹಶೀಲ್ದಾರ್ ರೇಹಾನ್ ಪಾಷ ರಾಷ್ಟçಧ್ವಜರೋಹಣ ನೆರವೇರಿಸಿದರು, ನಗರಸಭೆ ಅಧ್ಯಕ್ಷೆ ಸುಮಕ್ಕ ನಾಡಧ್ವಜರೋಹಣ, ತಾಲೂಕು ಅಧ್ಯಕ್ಷ ಪರಿಷತ್ ಧ್ವಜರೋಹಣ, ಸಾಹಿತಿ ಮರಿಕುಂಟೆ ತಿಪ್ಪಣ್ಣ ಬೆಳಗೆರೆ ಕೃಷ್ಣ ಶಾಸ್ತಿçಯವರ ಮಹಾಧ್ವರವನ್ನು ಉದ್ಘಾಟಿಸಿದರು ನಂತರ ಚಳ್ಳಕೆರೆಮ್ಮ ದೇವಸ್ಥಾನ ಬಳಿ ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷ ಕಲಮರಹಳ್ಳಿ ಡಾ.ಮಲ್ಲಿಕಾರ್ಜುನ ಇವರನ್ನು ಸಾರೋಟದಲ್ಲಿ ವಿವಿಧ ಕಲಾ ತಂಡಗಳೊAದಿಗೆ ಪ್ರಮುಖ ಬೀದಿಗಳನ್ನುಮೆರವಣಿಗೆ ಮೂಲಕ ಕಾರ್ಯಕ್ರಮದ ವೇಧಿಯತ್ತ ಕರೆ ತಂದರು.


ಕಾರ್ಯಕ್ರಮದಲ್ಲಿ ನಗರಸಭೆ ಅಧ್ಯಕ್ಷೆ ಸುಮಕ್ಕ, ಸ್ಥಾಯಿಸಮಿತಿ ಅಧ್ಯಕ್ಷೆ ಎಂ.ಜೆ,ರಾಘವೇAದ್ರ, ಸಾಹಿತಿ ಮಿರಸಾಬಿಹಳ್ಳಿ ಶಿವಣ್ಣ, ಮಾಜಿ ಗಡಿನಾಡು ಅಧ್ಯಕ್ಷ ರಾಮಚಂದ್ರಪ್ಪ,ನಾಟಕ ಅಕಾಡಮೆ ಮಾಜಿ ಸದಸ್ಯ ಪಿ.ತಿಪ್ಪೇಸ್ವಾಮಿ, ಕ.ಸ,ಪ ಜಿಲ್ಲಾಧ್ಯಕ್ಷ ಕೆ.ಎಂ.ಶಿವಸ್ವಾಮಿ,ಡಾ.ಎA.ಮAಜಣ್ಣ, ಸಾಹಿತಿ ಟಿ.ಜೆ.ತಿಪ್ಪೇಸ್ವಾಮಿ , ಪಾಪಣ್ಣ, ತಹಶೀಲ್ದಾರ್ ರೇಹಾನ್ ಪಾಷ, ತಾಪಂ ಇಒ ಹೊನ್ನಯ್ಯ, ನೌಕರರ ಸಂಘದ ಅಧ್ಯಕ್ಷ ಲಿಂಗೇಗೌಡ, ಮೋದೂರು ತೇಜ ಸೇರಿದಂತೆ ಹಲವರು ಭಾಗವಹಿಸಿದ್ದರು.
ಇದೇ ಸಂದರ್ಭದಲ್ಲಿ ವಿವಿಧ ಸಾಧಕರಿಗೆ ಹಾಗೂ ಕವಿಗೋಷ್ಠಿಯಲ್ಲಿ ಭಾಗವಹಿಸಿದ್ದರ ಸಾಹಿತಿ , ಕವಿಗಳಿಗೆ ಸನ್ಮಾನಿಸಿ ಗೌರವಿಸಿದರು.

Latest News >>

ಡಿ.ಸಿ.ಸಿ. ಬ್ಯಾಂಕ್ ನಿರ್ದೇಶಕರಾಗಿ ಓ.ಮಂಜುನಾಥ್ ಮಾಳಿಗೆ ಅವರು ಅವಿರೋಧ ಆಯ್ಕೆಯಾಗಿದ್ದಾರೆ.

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತ, ಚಿತ್ರದುರ್ಗ ಇದರ ಆಡಳಿತ ಮಂಡಳಿ ನಿರ್ದೇಶಕರ ಸ್ಥಾನಕ್ಕೆ ಹಿರಿಯೂರು...

ಚಿತ್ರದುರ್ಗದಲ್ಲಿ ನಡೆಯಲಿರುವ ಪತ್ರಿಕಾ ವಿತರಕರ ಹಂಚಿಕೆದಾರರ 4ನೇರಾಜ್ಯಸಮ್ಮೇಳನ ಕಾರ್ಯಕ್ರಮ ಯಶಸ್ವಿಯಾಗಲಿ : ಆಲೂರು ಹನುಮಂತರಾಯಪ್ಪ

ಹಿರಿಯೂರು: ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ ಹಾಗೂ ಚಿತ್ರದುರ್ಗ ಜಿಲ್ಲಾ ಪತ್ರಿಕೆ ಹಂಚಿಕೆದಾರರ ಹಾಗೂ ವಿತರಕರ ಸಂಘ (ರಿ) ಇವರುಗಳ...

ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ ಅನುಷ್ಟಾನ ಮೌಲ್ಯಮಾಪನ ಸಭೆಜಿಲ್ಲಾ ಮೇಲ್ವಿಚಾರಣಾ ಸಮಿತಿಯಿಂದ ಕ್ರಿಯಾಯೋಜನೆ ಅನುಮೋದನೆ ಕ್ರಮಕ್ಕೆ ಶಿಫಾರಸ್ಸು

ಚಿತ್ರದುರ್ಗ ಸೆ.06: ಪರಿಶಿಷ್ಟ ಜಾತಿ ಹಾಗೂ ಗಿರಿಜನ ಉಪಯೋಜನೆಯಡಿ (ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ) ಜಿಲ್ಲೆಯಲ್ಲಿ ಕೈಗೊಳ್ಳುವ ಎಲ್ಲಾ...

ಪೋಷಣ್ ಮಾಸಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ.ಡಿ.ಎಂ.ಅಭಿನವ್ ಪೌಷ್ಠಿಕಾಂಶಯುಕ್ತ ಆಹಾರ ಪದಾರ್ಥ ಸೇವಿಸುವುದು ಅಭ್ಯಾಸಿಸಿ

ಚಿತ್ರದುರ್ಗ ಸೆ.6: ಪೋಷಣ್ ಮಾಸಾಚರಣೆ ಕಾರ್ಯಕ್ರಮ ಮಕ್ಕಳ ಹಾಗೂ ಗರ್ಭಿಣಿಯರ, ಬಾಣಂತಿಯರ ಆರೋಗ್ಯ ಪೋಷಣ ಮಾಸಾಚರಣೆ ಆಗಬೇಕು. ಮಕ್ಕಳಲ್ಲಿ...

ಎಚ್‌ಐವಿ/ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆ

ಚಿತ್ರದುರ್ಗ ಸೆ.6: ಯುವ ಜನೋತ್ಸವ ಅಂಗವಾಗಿ ಎಚ್‌ಐವಿ/ ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆಯು ಚಿತ್ರದುರ್ಗ ನಗರದಲ್ಲಿ ಗುರುವಾರ...

ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಕಾಮಗಾರಿ ಪರಿಶೀಲನೆ

ಚಿತ್ರದುರ್ಗ ಸೆ.06: ನಬಾರ್ಡ್ ಸಂಸ್ಥೆಯ ಡಿಜಿಎಂ ಸಂಜೀವ್ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಈಚೆಗೆ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ವಾಣಿವಿಲಾಸ...

ಮೊಳಕಾಲ್ಮುರು : ಫಲಾನುಭವಿಗಳ ಮನೆ ಬಾಗಿಲಿಗೆ ಹೋಗಿ ಸಮಸ್ಯೆ ಆಲಿಸಿ ಶಾಸಕ ಎನ್ ವೈ ಗೋಪಾಲಕೃಷ್ಣ.

ಮೊಳಕಾಲ್ಮೂರು :-ಪಟ್ಟಣದ ತಾಲೂಕು ಪಂಚಾಯಿತಿಯಲ್ಲಿ ಗ್ಯಾರೆಂಟಿ ಅನುಷ್ಠಾನ ಸಮಿತಿ ನೂತನ ಕಾರ್ಯಾಲಯವನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ಎನ್ ವೈ....

ಬೆಂಬಲಬೆಲೆಯಲ್ಲಿ ಸೂರ್ಯಕಾಂತಿ ಖರೀದಿ ಕೇಂದ್ರಗಳ ಸ್ಥಾಪನೆ

ಚಿತ್ರದುರ್ಗ ಸೆ.04: 2024-25ನೇ ಸಾಲಿಗೆ ಕೇಂದ್ರ ಸರ್ಕಾರದ ಬೆಂಬಲಬೆಲೆ ಯೋಜನೆಯಡಿ ನಿಗದಿಪಡಿಸಿರುವ ರೂ.7,280/- (ಪ್ರತಿ ಕ್ವಿಂಟಾಲ್‌ಗೆ)...

ಮಹಾತ್ಮ ಗಾಂಧೀ ಸೇವಾ ಪ್ರಶಸ್ತಿ – ಕರ್ನಾಟಕ’ ಆಯ್ಕೆಗೆ ನಾಮನಿರ್ದೇಶನ ಆಹ್ವಾನ

ಚಿತ್ರದುರ್ಗ ಸೆ.04: ರಾಜ್ಯ ಸರ್ಕಾರವು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಸ್ಥಾಪಿಸಿರುವ ಐದು ಲಕ್ಷ ರೂಪಾಯಿ ನಗದನ್ನು ಒಳಗೊಂಡ...

ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್ 110 ಸಿಸಿ ಯ ಆಕರ್ಷಕ ಸ್ಕೂಟಿ ಮಾರುಕಟ್ಟೆಗೆ ಬಿಡುಗಡೆ.

ಚಿತ್ರದುರ್ಗ: ಚಿತ್ರದುರ್ಗ ನಗರದ ತುರುವನೂರು ರಸ್ತೆಯಲ್ಲಿನ ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page