ಜಂತುಹುಳು ನಿವಾರಣಾ ಅಭಿಯಾನ : ಜಿಲ್ಲೆಯ 5.76 ಲಕ್ಷ ಮಕ್ಕಳಿಗೆ ಉಚಿತ ಅಲ್ಬೆಂಡಜೋಲ್ ಮಾತ್ರ ವಿತರಣೆ ಶೇ.100 ರಷ್ಟು ಪ್ರಗತಿ ಸಾಧಿಸಲು ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ ಸೂಚನೆ

by | 13/03/23 | ಆರೋಗ್ಯ

ಚಿತ್ರದುರ್ಗ ಮಾರ್ಚ್4:
ಇದೇ ಮಾರ್ಚ್ 14 ರಿಂದ 25ರ ವರೆಗೆ ರಾಜ್ಯಾದ್ಯಂತ ಜಂತು ಹುಳು ನಿವಾರಣಾ ಅಭಿಯಾನ ಜರುಗಲಿದೆ. ಆರೋಗ್ಯ ಇಲಾಖೆ ನಿಯಮಾನುಸಾರ ಜಿಲ್ಲೆಯ 5.76 ಲಕ್ಷ ಮಕ್ಕಳಿಗೆ ಉಚಿತವಾಗಿ ಅಲ್ಬೆಂಡಜೋಲ್ ಮಾತ್ರ ವಿತರಣೆ ಮಾಡಿ ಶೇ.100 ರಷ್ಟು ಪ್ರಗತಿ ಸಾಧಿಸಿಸುವಂತೆ ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ಜಂತು ಹುಳು ನಿವಾರಣಾ ದಿನದ ಅಂಗವಾಗಿ ಏರ್ಪಡಿಸಲಾಗಿದ್ದ ಜಂತು ಹುಳು ನಿವಾರಣಾ ಅಭಿಯಾನದ ಕುರಿತಾದ ಜಿಲ್ಲಾ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಅಭಿಯಾನದ ಅಂಗವಾಗಿ 1 ರಿಂದ 19ನೇ ವಯಸ್ಸಿನ ಮಕ್ಕಳಿಗೆ ಜಂತುಹುಳು ಮಾತ್ರೆ ನೀಡಬೇಕು. ಹೀಗಾಗಿ ಅಂಗನವಾಡಿ, ಶಿಕ್ಷಣ, ಪಿಯು ಇಲಾಖೆಯಿಂದ ನಿಖರವಾಗಿ ಮಕ್ಕಳ ಸಂಖ್ಯೆಯನ್ನು ಪಡೆದುಕೊಳ್ಳಿ. ಐಟಿಐ, ಪಾಲಿಟೆಕ್ನಿಕ್ ಹಾಗೂ ಪ್ರಥಮ ವರ್ಷದ ಡಿಗ್ರಿ ವಿದ್ಯಾರ್ಥಿಗಳಿಗೂ ತಪ್ಪದೇ ಮಾತ್ರೆ ನೀಡಬೇಕು. ಶಾಲೆ ಬಿಟ್ಟ ಮಕ್ಕಳು, ಅಲೆಮಾರಿ ಮಕ್ಕಳಿಗಾಗಿ ವಿಶೇಷ ತಂಡಗಳನ್ನು ರಚಿಸಿ ಮಾತ್ರೆ ಹಂಚುವ ಕೆಲಸ ಮಾಡಬೇಕು. ಸಣ್ಣ ಹಂತದಲ್ಲೂ ಸಹ ಯೋಜನೆ ರೂಪಿಸಿ ಅಭಿಯಾನ ಯಶಸ್ವಿಗೊಳಿಸುವಂತೆ ತಾಕೀತು ಮಾಡಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ರಂಗನಾಥ ಮಾತನಾಡಿ, ಕಳೆದ ಸಾಲಿನಲ್ಲಿ ಜಿಲ್ಲೆಯ 5.76 ಲಕ್ಷ ಮಕ್ಕಳ ಪೈಕಿ, 5.41 ಲಕ್ಷ ಮಕ್ಕಳಿಗೆ ಉಚಿತವಾಗಿ ಜಂತು ಹುಳು ಮಾತ್ರೆಗಳನ್ನು ವಿತರಿಸಲಾಗಿತ್ತು. ಜಿಲ್ಲೆಯಲ್ಲಿ ಶೇ.94 ರಷ್ಟು ಸಾಧನೆ ಮಾಡಲಾಗಿತ್ತು. ಜಿಲ್ಲೆಗೆ 6.34 ಲಕ್ಷ ಅಲ್ಬೆಂಡಜೋಲ್ ಮಾತ್ರೆ ಬುಧವಾರ ಬಂದು ಸೇರಲಿವೆ. ಅಂಗನವಾಡಿ, ಆಶಾ ಕಾರ್ಯಕರ್ತೆಯರು ಮನೆ ಮನೆಗೆ ತೆರಳಿ ಮಕ್ಕಳಿಗೆ ನಿಯಮಾನುಸಾರ ಮಾತ್ರೆ ವಿತರಣೆ ಮಾಡಲಿದ್ದಾರೆ. ತಾಲ್ಲೂಕುವಾರು ಸಭೆಗಳನ್ನು ನಡೆಸಿ ಮಾತ್ರೆ ಹಂಚಿಕೆ ಕ್ರಮ ಕೈಗೊಳ್ಳಲಾಗುವುದು. ದ್ವಿತೀಯ ಪಿ.ಯು.ಸಿ ಓದುವ ಮಕ್ಕಳಿಗೆ 23ನೇ ತಾರೀಕು ಇಂಗ್ಲೀಷ್ ಭಾಷಾ ಪರೀಕ್ಷೆ ನಡೆಯಲಿದೆ. ಅಂದು ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ಮುಗಿದ ನಂತರ ಮಾತ್ರೆಗಳನ್ನು ನೀಡಲು ಕ್ರಮಕೈಗೊಳ್ಳಲಾಗುವುದು. ಮಾರ್ಚ್ 31 ರಂದು ಪ್ರಥಮ ಪಿ.ಯು.ಸಿ ಮಕ್ಕಳ ಫಲಿತಾಂಶ ಬರಲಿದ್ದು, ಅಂದು ಮಕ್ಕಳಿಗೆ ಮಾತ್ರೆ ನೀಡಲು ಸಿದ್ದತೆ ನೆಡೆಸಲಾಗಿದೆ ಎಂದು ತಿಳಿಸಿದರು.
ಜಿಲ್ಲೆಯಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ದಾಖಲೆ ಅನುಸಾರ 1 ರಿಂದ 6 ವರ್ಷಗಳ 1.10 ಲಕ್ಷ ಮಕ್ಕಳು, ಶಿಕ್ಷಣ ಇಲಾಖೆಯ ಸಾಟ್ಸ್ ದಾಖಲೆ ಅನುಸಾರ 1 ರಿಂದ 10ನೇ ತರಗತಿ ಓದುತ್ತಿರುವ 2.55 ಲಕ್ಷ ಮಕ್ಕಳು ಇದ್ದಾರೆ.
ದಡಾರ ಮುಕ್ತ ಭಾರತ: 2023ನೇ ವರ್ಷವನ್ನು ಭಾರತದಲ್ಲಿ ಮೀಸಲ್ಸ್ ಹಾಗೂ ರೂಬೆಲ್ಲಾ (ದಡಾರ) ಮುಕ್ತ ವರ್ಷವಾಗಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಲಸಿಕಾ ಅಭಿಯಾನವನ್ನು ಸಹ ಆರಂಭಿಸಿದೆ. ಜಿಲ್ಲೆಯಲ್ಲಿ ಡಿಸೆಂಬರ್ 2022 ರ ಅಂತ್ಯಕ್ಕೆ 280 ಹಾಗೂ ಮಾರ್ಚ್ 2023ರ ವರೆಗೆ 139 ದಡಾರ ಪ್ರಕರಣಗಳು ಕಂಡುಬಂದಿವೆ. ಅಧಿಕಾರಿಗಳು ಈ ಕುರಿತು ನಿಗಾ ವಹಿಸುವಂತೆ ಆರ್.ಸಿ.ಹೆಚ್.ಅಧಿಕಾರಿ ರೇಣುಪ್ರಸಾದ್ ಸೂಚನೆ ನೀಡಿದರು.
ಸಭೆಯಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೆಶಕಿ ಭಾರತಿ ಆರ್ ಬಣಕಾರ್ ಸೇರಿದಂತೆ ವಿವಿಧ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Latest News >>

ಡಿ.ಸಿ.ಸಿ. ಬ್ಯಾಂಕ್ ನಿರ್ದೇಶಕರಾಗಿ ಓ.ಮಂಜುನಾಥ್ ಮಾಳಿಗೆ ಅವರು ಅವಿರೋಧ ಆಯ್ಕೆಯಾಗಿದ್ದಾರೆ.

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತ, ಚಿತ್ರದುರ್ಗ ಇದರ ಆಡಳಿತ ಮಂಡಳಿ ನಿರ್ದೇಶಕರ ಸ್ಥಾನಕ್ಕೆ ಹಿರಿಯೂರು...

ಚಿತ್ರದುರ್ಗದಲ್ಲಿ ನಡೆಯಲಿರುವ ಪತ್ರಿಕಾ ವಿತರಕರ ಹಂಚಿಕೆದಾರರ 4ನೇರಾಜ್ಯಸಮ್ಮೇಳನ ಕಾರ್ಯಕ್ರಮ ಯಶಸ್ವಿಯಾಗಲಿ : ಆಲೂರು ಹನುಮಂತರಾಯಪ್ಪ

ಹಿರಿಯೂರು: ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ ಹಾಗೂ ಚಿತ್ರದುರ್ಗ ಜಿಲ್ಲಾ ಪತ್ರಿಕೆ ಹಂಚಿಕೆದಾರರ ಹಾಗೂ ವಿತರಕರ ಸಂಘ (ರಿ) ಇವರುಗಳ...

ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ ಅನುಷ್ಟಾನ ಮೌಲ್ಯಮಾಪನ ಸಭೆಜಿಲ್ಲಾ ಮೇಲ್ವಿಚಾರಣಾ ಸಮಿತಿಯಿಂದ ಕ್ರಿಯಾಯೋಜನೆ ಅನುಮೋದನೆ ಕ್ರಮಕ್ಕೆ ಶಿಫಾರಸ್ಸು

ಚಿತ್ರದುರ್ಗ ಸೆ.06: ಪರಿಶಿಷ್ಟ ಜಾತಿ ಹಾಗೂ ಗಿರಿಜನ ಉಪಯೋಜನೆಯಡಿ (ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ) ಜಿಲ್ಲೆಯಲ್ಲಿ ಕೈಗೊಳ್ಳುವ ಎಲ್ಲಾ...

ಪೋಷಣ್ ಮಾಸಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ.ಡಿ.ಎಂ.ಅಭಿನವ್ ಪೌಷ್ಠಿಕಾಂಶಯುಕ್ತ ಆಹಾರ ಪದಾರ್ಥ ಸೇವಿಸುವುದು ಅಭ್ಯಾಸಿಸಿ

ಚಿತ್ರದುರ್ಗ ಸೆ.6: ಪೋಷಣ್ ಮಾಸಾಚರಣೆ ಕಾರ್ಯಕ್ರಮ ಮಕ್ಕಳ ಹಾಗೂ ಗರ್ಭಿಣಿಯರ, ಬಾಣಂತಿಯರ ಆರೋಗ್ಯ ಪೋಷಣ ಮಾಸಾಚರಣೆ ಆಗಬೇಕು. ಮಕ್ಕಳಲ್ಲಿ...

ಎಚ್‌ಐವಿ/ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆ

ಚಿತ್ರದುರ್ಗ ಸೆ.6: ಯುವ ಜನೋತ್ಸವ ಅಂಗವಾಗಿ ಎಚ್‌ಐವಿ/ ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆಯು ಚಿತ್ರದುರ್ಗ ನಗರದಲ್ಲಿ ಗುರುವಾರ...

ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಕಾಮಗಾರಿ ಪರಿಶೀಲನೆ

ಚಿತ್ರದುರ್ಗ ಸೆ.06: ನಬಾರ್ಡ್ ಸಂಸ್ಥೆಯ ಡಿಜಿಎಂ ಸಂಜೀವ್ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಈಚೆಗೆ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ವಾಣಿವಿಲಾಸ...

ಮೊಳಕಾಲ್ಮುರು : ಫಲಾನುಭವಿಗಳ ಮನೆ ಬಾಗಿಲಿಗೆ ಹೋಗಿ ಸಮಸ್ಯೆ ಆಲಿಸಿ ಶಾಸಕ ಎನ್ ವೈ ಗೋಪಾಲಕೃಷ್ಣ.

ಮೊಳಕಾಲ್ಮೂರು :-ಪಟ್ಟಣದ ತಾಲೂಕು ಪಂಚಾಯಿತಿಯಲ್ಲಿ ಗ್ಯಾರೆಂಟಿ ಅನುಷ್ಠಾನ ಸಮಿತಿ ನೂತನ ಕಾರ್ಯಾಲಯವನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ಎನ್ ವೈ....

ಬೆಂಬಲಬೆಲೆಯಲ್ಲಿ ಸೂರ್ಯಕಾಂತಿ ಖರೀದಿ ಕೇಂದ್ರಗಳ ಸ್ಥಾಪನೆ

ಚಿತ್ರದುರ್ಗ ಸೆ.04: 2024-25ನೇ ಸಾಲಿಗೆ ಕೇಂದ್ರ ಸರ್ಕಾರದ ಬೆಂಬಲಬೆಲೆ ಯೋಜನೆಯಡಿ ನಿಗದಿಪಡಿಸಿರುವ ರೂ.7,280/- (ಪ್ರತಿ ಕ್ವಿಂಟಾಲ್‌ಗೆ)...

ಮಹಾತ್ಮ ಗಾಂಧೀ ಸೇವಾ ಪ್ರಶಸ್ತಿ – ಕರ್ನಾಟಕ’ ಆಯ್ಕೆಗೆ ನಾಮನಿರ್ದೇಶನ ಆಹ್ವಾನ

ಚಿತ್ರದುರ್ಗ ಸೆ.04: ರಾಜ್ಯ ಸರ್ಕಾರವು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಸ್ಥಾಪಿಸಿರುವ ಐದು ಲಕ್ಷ ರೂಪಾಯಿ ನಗದನ್ನು ಒಳಗೊಂಡ...

ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್ 110 ಸಿಸಿ ಯ ಆಕರ್ಷಕ ಸ್ಕೂಟಿ ಮಾರುಕಟ್ಟೆಗೆ ಬಿಡುಗಡೆ.

ಚಿತ್ರದುರ್ಗ: ಚಿತ್ರದುರ್ಗ ನಗರದ ತುರುವನೂರು ರಸ್ತೆಯಲ್ಲಿನ ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page