ರಾಜ್ಯದಲ್ಲಿ ಮತ್ತೆ ಬಿಜೆಪಿ ಸರಕಾರ ಬರುವುದು ಖಚಿತ ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ ನಡ್ಡಾ ವಿಶ್ವಾಸ ವ್ಯಕ್ತಪಡಿಸಿದರು.

by | 17/03/23 | ರಾಜಕೀಯ

ಚಳ್ಳಕೆರೆ ಜನಧ್ವನಿ ವಾರ್ತೆ ಮಾ.17
ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಅಭಿವೃದ್ಧಿ ಕಾರ್ಯಗಳಿಂದ ಕರ್ನಾಟಕದಲ್ಲಿ ಮತ್ತೊಮ್ಮೆ ಕಮಲ ಅರಳಲಿದೆ. ಕರ್ನಾಟಕದ ಸಮಗ್ರ ಅಭಿವೃದ್ಧಿ ಬಿಜೆಪಿಯಿಂದ ಮಾತ್ರ ಸಾಧ್ಯ. ದೇಶವಿರೋಧಿ ಕಾಂಗ್ರೆಸ್ಸಿಗರನ್ನು ಮನೆಯಲ್ಲೇ ಕೂರಿಸಿ ಈ ಬಾರಿಯೂ ರಾಜ್ಯದಲ್ಲಿ ಬಿಜೆಪಿ ಸರಕಾರ ಬರುವುದು ಖಚಿತ ಎಂದು ಬಿಜೆಪಿ ರಾಷ್ಟಾçಧ್ಯಕ್ಷೆ ಜೆ.ಪಿ ನಡ್ಡಾ ವಿಶ್ವಾಸ ವ್ಯಕ್ತಪಡಿಸಿದರು.


ನಗರದ ಪಾವಗಡ ರಸ್ತೆಯ ಶ್ರೀ ಈಶ್ವರದೇವಸ್ಥಾನ ಸಮೀಪ ಬಿಜೆಪಿ ವಿಕಯ ಸಂಕಲ್ಪ ಯಾತ್ರೆಯ ರೋಡ್ ಷೋ ಗೆ ಗೋಪೂಜೆ ನೆರವೇರಿಸುವ ಮೂಲಕ ಚಾಲನೆ ನೀಡಿ ನಂತರ ನೆಹರು ವೃತ್ತದಲಿ ಬಹಿರಂಗಸಭೆ ಉದ್ದೇಶಿಸಿ ಮಾತನಾಡಿದರು.
ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ದೇಶ ಸಶಕ್ತೀಕರಣ ಆಗುತ್ತಿದೆ. ಮೋದಿ ಬಂದ ಮೇಲೆ ಸಬ್ ಕಾ ಸಾಥ್ ಸಬ್ ಕ ವಿಕಾಸ್ ಶುರುವಾಗಿದೆ. ದೇಶ ಅತ್ಯಂತ ವೇಗವಾಗಿ ಪ್ರಗತಿ ಸಾಧಿಸುತ್ತಿದೆ. ದಲಿತ, ಹಿಂದುಳಿದ ವರ್ಗಗಳ ಪ್ರಗತಿಗೆ ಮೋದಿ ಸರ್ಕಾರ ಪಣತೊಟ್ಟಿದೆ. ಕಾಂಗ್ರೆಸ್ಸಿಗರು ಮಾನಸಿಕವಾಗಿ ದಿವಾಳಿ ಆಗಿದ್ದಾರೆ. ಒಡೆದು ಆಳುವ ನೀತಿಯ ಮುಖಂಡರನ್ನು ಸೋಲಿಸಿ ಮನೆಯಲ್ಲೇ ಕೂರಿಸಿ. ದೇಶದ ೨ನೇ ದೊಡ್ಡ ಅರ್ಥ ವ್ಯವಸ್ಥೆಯಾಗಿ ಕರ್ನಾಟಕ ಹೊರಹೊಮ್ಮಿದೆ. ರೈತ ವಿದ್ಯಾನಿಧಿ ಮೂಲಕ ೧೦ ಲಕ್ಷ ವಿದ್ಯಾರ್ಥಿಗಳಿಗೆ ಪ್ರಯೋಜನವಾಗಿದೆ. ರೈತರಿಗೆ ಸಾಲ, ಮೀಸಲಾತಿ ಹೆಚ್ಚಳ ಸೇರಿ ಸಮಗ್ರ ಅಭಿವೃದ್ಧಿಯ ಕಾರ್ಯವನ್ನು ಗಮನದಲ್ಲಿಟ್ಟು ಬಿಜೆಪಿಯನ್ನು ಬೆಂಬಲಿಸಿ ಎಂದು ಮನವಿ ಮಾಡಿದರು.
ಕಂದಾಯ ಸಚಿವ ಆರ್. ಅಶೋಕ್ ಮಾತನಾಡಿ ರಾಷ್ಟಿçÃಯ ಅಧ್ಯಕ್ಷರು ಚಿತ್ರದುರ್ಗ, ತುಮಕೂರು ಜಿಲ್ಲೆ ಸೇರಿದಂತೆ ೫೦ ಕ್ಷೇತ್ರದಲ್ಲಿ ನನ್ನ ನೇತೃತ್ವದಲ್ಲಿ ಸಂಕಲ್ಪ ಯಾತ್ರೆ ನಡೆಯುತ್ತಿದೆ. ಎಲ್ಲಾ ಕಡೆ ಉತ್ತಮವಾದ ವಾತಾವರಣ ಇದೆ. ಕಾಂಗ್ರೆಸ್ ಅಲ್ಲೋಂದು ಇಲ್ಲೋಂದು ಕಡೆ ಹೋಗುತ್ತಿದ್ದಾರೆ. ಜನರಲ್ಲಿ ಬಿಜೆಪಿ ಪರ ಮತ ಹಾಕಲು ಜಾಗೃತಿ ಮೂಡಿಸುತ್ತಿದ್ದೇವೆ. ಡಬಲ್ ಇಂಜಿನ್ ಸರ್ಕಾರ ತರಲು ಯತ್ನಿಸುತ್ತಿದ್ದೇವೆ ಮೋದಿ ಅವರು ರೋಡ್ ಷೋ ಮಾಡಿದ್ದು, ಕಾಂಗ್ರೆಸ್ & ಜೆಡಿಎಸ್ಗೆ ಹೊಟ್ಟೆ ಉರಿ. ಪುನೀತ್ ರಾಜ್‌ಕುಮಾರ್ ಅವರಿಗೆ ಸಕಲ ಗೌರವ ನೀಡಿದ ಪಕ್ಷ ನಮ್ಮದು. ಕರ್ನಾಟಕ ರತ್ನ ಪ್ರಶಸ್ತಿ ನೀಡಿದ್ದು ನಮ್ಮ ಪಕ್ಷ. ೧೨ ಏಒ ರಸ್ತೆಗೆ ಪುನೀತ್ ಹೆಸರು ಇಟ್ಟಿದ್ದೇವೆ. ವಿಜಯಸಂಕಲ್ಪಯಾತ್ರೆಗೆ ಎಲ್ಲೆಡೆ ಜನ ಸಾಗಾರ ಸೇರುತ್ತಿದ್ದು ಈ ಬಾರಿಯೂ ರಾಜ್ಯದಲ್ಲಿ ಬಿಜೆಪಿ ಸರಕಾರ ಬರಲಿದೆ ಮತದಾರರ ಬಿಜೆಪಿ ಪಕ್ಷಕ್ಕೆ ಮತನೀಡುವಂತೆ ಮನವಿ ಮಾಡಿಕೊಂಡರು.

ಸಚಿವ ಎ.ನಾರಾಯಣಸ್ವಾಮಿ, ವಿಧಾನ ಪರಿಷತ್ ಸದಸ್ಯ ನವೀನ್‌ಕುಮಾರ್, ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್,ಜಿಲ್ಲಾಧ್ಯಕ್ಷ ಮುರಳಿ, ಮಂಡಲ ಅಧ್ಯಕ್ಷ ಸೂರನಹಳ್ಳಿ ಶ್ರೀನಿವಾಸ್, ಬಿಜೆಪಿ ಟಿಕೇಟ್ ಆಕಾಂಕ್ಷಿಗಳಾದ ಅನಿಲ್‌ಕುಮಾರ್, ಜಯರಾಂ, ಜಯಪಾಯ್ಯ, ಬಾಳೆಕಾಯಿರಾಮದಾಸ್ ಸೇರಿದಂತೆ ಬಿಜೆಪಿ ಮುಖಂಡರು ಕಾರ್ಯಕರ್ತರು ಉಪಸ್ಥಿತರಿದ್ದರು.
ರೋಡ್ ಷೋ ನಲ್ಲಿ ವಿವಿಧ ಕಲಾ ತಂಡಗಳು,ಕುAಭಮೇಳದೊAದಿಗೆ ಅದ್ದುರಿಯಾಗಿ ಮೆರವಣಿಗೆ ದಾರಿ ಉದ್ದಕ್ಕೂ ಜನ ಸಾಗರ ಸೇರಿದ್ದರು.

Latest News >>

ಡಿ.ಸಿ.ಸಿ. ಬ್ಯಾಂಕ್ ನಿರ್ದೇಶಕರಾಗಿ ಓ.ಮಂಜುನಾಥ್ ಮಾಳಿಗೆ ಅವರು ಅವಿರೋಧ ಆಯ್ಕೆಯಾಗಿದ್ದಾರೆ.

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತ, ಚಿತ್ರದುರ್ಗ ಇದರ ಆಡಳಿತ ಮಂಡಳಿ ನಿರ್ದೇಶಕರ ಸ್ಥಾನಕ್ಕೆ ಹಿರಿಯೂರು...

ಚಿತ್ರದುರ್ಗದಲ್ಲಿ ನಡೆಯಲಿರುವ ಪತ್ರಿಕಾ ವಿತರಕರ ಹಂಚಿಕೆದಾರರ 4ನೇರಾಜ್ಯಸಮ್ಮೇಳನ ಕಾರ್ಯಕ್ರಮ ಯಶಸ್ವಿಯಾಗಲಿ : ಆಲೂರು ಹನುಮಂತರಾಯಪ್ಪ

ಹಿರಿಯೂರು: ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ ಹಾಗೂ ಚಿತ್ರದುರ್ಗ ಜಿಲ್ಲಾ ಪತ್ರಿಕೆ ಹಂಚಿಕೆದಾರರ ಹಾಗೂ ವಿತರಕರ ಸಂಘ (ರಿ) ಇವರುಗಳ...

ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ ಅನುಷ್ಟಾನ ಮೌಲ್ಯಮಾಪನ ಸಭೆಜಿಲ್ಲಾ ಮೇಲ್ವಿಚಾರಣಾ ಸಮಿತಿಯಿಂದ ಕ್ರಿಯಾಯೋಜನೆ ಅನುಮೋದನೆ ಕ್ರಮಕ್ಕೆ ಶಿಫಾರಸ್ಸು

ಚಿತ್ರದುರ್ಗ ಸೆ.06: ಪರಿಶಿಷ್ಟ ಜಾತಿ ಹಾಗೂ ಗಿರಿಜನ ಉಪಯೋಜನೆಯಡಿ (ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ) ಜಿಲ್ಲೆಯಲ್ಲಿ ಕೈಗೊಳ್ಳುವ ಎಲ್ಲಾ...

ಪೋಷಣ್ ಮಾಸಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ.ಡಿ.ಎಂ.ಅಭಿನವ್ ಪೌಷ್ಠಿಕಾಂಶಯುಕ್ತ ಆಹಾರ ಪದಾರ್ಥ ಸೇವಿಸುವುದು ಅಭ್ಯಾಸಿಸಿ

ಚಿತ್ರದುರ್ಗ ಸೆ.6: ಪೋಷಣ್ ಮಾಸಾಚರಣೆ ಕಾರ್ಯಕ್ರಮ ಮಕ್ಕಳ ಹಾಗೂ ಗರ್ಭಿಣಿಯರ, ಬಾಣಂತಿಯರ ಆರೋಗ್ಯ ಪೋಷಣ ಮಾಸಾಚರಣೆ ಆಗಬೇಕು. ಮಕ್ಕಳಲ್ಲಿ...

ಎಚ್‌ಐವಿ/ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆ

ಚಿತ್ರದುರ್ಗ ಸೆ.6: ಯುವ ಜನೋತ್ಸವ ಅಂಗವಾಗಿ ಎಚ್‌ಐವಿ/ ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆಯು ಚಿತ್ರದುರ್ಗ ನಗರದಲ್ಲಿ ಗುರುವಾರ...

ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಕಾಮಗಾರಿ ಪರಿಶೀಲನೆ

ಚಿತ್ರದುರ್ಗ ಸೆ.06: ನಬಾರ್ಡ್ ಸಂಸ್ಥೆಯ ಡಿಜಿಎಂ ಸಂಜೀವ್ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಈಚೆಗೆ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ವಾಣಿವಿಲಾಸ...

ಮೊಳಕಾಲ್ಮುರು : ಫಲಾನುಭವಿಗಳ ಮನೆ ಬಾಗಿಲಿಗೆ ಹೋಗಿ ಸಮಸ್ಯೆ ಆಲಿಸಿ ಶಾಸಕ ಎನ್ ವೈ ಗೋಪಾಲಕೃಷ್ಣ.

ಮೊಳಕಾಲ್ಮೂರು :-ಪಟ್ಟಣದ ತಾಲೂಕು ಪಂಚಾಯಿತಿಯಲ್ಲಿ ಗ್ಯಾರೆಂಟಿ ಅನುಷ್ಠಾನ ಸಮಿತಿ ನೂತನ ಕಾರ್ಯಾಲಯವನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ಎನ್ ವೈ....

ಬೆಂಬಲಬೆಲೆಯಲ್ಲಿ ಸೂರ್ಯಕಾಂತಿ ಖರೀದಿ ಕೇಂದ್ರಗಳ ಸ್ಥಾಪನೆ

ಚಿತ್ರದುರ್ಗ ಸೆ.04: 2024-25ನೇ ಸಾಲಿಗೆ ಕೇಂದ್ರ ಸರ್ಕಾರದ ಬೆಂಬಲಬೆಲೆ ಯೋಜನೆಯಡಿ ನಿಗದಿಪಡಿಸಿರುವ ರೂ.7,280/- (ಪ್ರತಿ ಕ್ವಿಂಟಾಲ್‌ಗೆ)...

ಮಹಾತ್ಮ ಗಾಂಧೀ ಸೇವಾ ಪ್ರಶಸ್ತಿ – ಕರ್ನಾಟಕ’ ಆಯ್ಕೆಗೆ ನಾಮನಿರ್ದೇಶನ ಆಹ್ವಾನ

ಚಿತ್ರದುರ್ಗ ಸೆ.04: ರಾಜ್ಯ ಸರ್ಕಾರವು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಸ್ಥಾಪಿಸಿರುವ ಐದು ಲಕ್ಷ ರೂಪಾಯಿ ನಗದನ್ನು ಒಳಗೊಂಡ...

ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್ 110 ಸಿಸಿ ಯ ಆಕರ್ಷಕ ಸ್ಕೂಟಿ ಮಾರುಕಟ್ಟೆಗೆ ಬಿಡುಗಡೆ.

ಚಿತ್ರದುರ್ಗ: ಚಿತ್ರದುರ್ಗ ನಗರದ ತುರುವನೂರು ರಸ್ತೆಯಲ್ಲಿನ ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page