ಚುನಾವಣೆ ಘೋಷಣೆ ಮುನ್ನವೇ ಅಕ್ರಮ ಪ್ಲೆಕ್ಸ್ , ಬ್ಯಾನರ್ ಅಳವಡಿಕೆಗೆ ಬಿತ್ತು ಬ್ರೇಕ್ ,ಒಂದೇ ಕಾರ್ಯಕ್ರಮಕ್ಕೆ 25800 ರೂ ನಗರಸಭೆ ಬೊಕ್ಕಸಕ್ಕೆ ಬಂತು ಆಧಾಯ

by | 18/03/23 | ಜನಧ್ವನಿ, ಸುದ್ದಿ


ಪ್ರತಿ ನಿತ್ಯ ಪ್ಲೆಕ್ಸ್ ಬ್ಯಾನರ್ ಗಳಿಂದ ತುಂಬಿದ್ದ ನೆಹರು ವೃತ್ತ ಕಟ್ಟು ನಿಟ್ಟಿನ ಕಾನೂನು ಪಾಲನೆಯಿಂದ ತೆರವು ಬಿಕೋಎನ್ನುತ್ತಿರುವ ವೃತ್ತ
ಚಳ್ಳಕೆರೆ ಜನಧ್ವನಿ ವಾರ್ತೆ ಮಾ.18
ಇದೇನಪ್ಪ ಚುನಾವಣೆ ನೀತಿ ಸಂಹಿತೆ ಏನಾದರೂ ಘೋಷಣೆಯಾತ್ತ ಪ್ಲೆಕ್ಸ್ ಬ್ಯಾನರ್ ತೆರವುಗೊಳಿಸುತ್ತಿದ್ದಾರೆ ಎಂಬ ಅನುಮಾನ ಸಾರ್ವಜನಿಕರಲ್ಲಿ ಮೂಡಿದೆ.
ರಾಜಕೀಯ ನೇತಾರರಿಂದ ಪದೇ ಪದೇ ನಿಯಮ ಉಲ್ಲಂಘನೆಯಾದರೂ ಕಡಿವಾಣ ಹಾಕುವ ಅಧಿಕಾರಿಗಳು ಮಾತ್ರ ಮೌನಕ್ಕೆ ಜಾರಿದ್ದಾರೆ ಎಂಬ ಆರೋಪಗಳು ಕೇಳಿ ಬರುತ್ತಿರುವ ಬೆನ್ನಲ್ಲೆ ಈಗ ನಗರಸಭೆ ಅಧಿಕಾರಿಗಳು ಅಕ್ರಮ ನಿಷೇದಿತ ಪ್ಲೆಕ್ಸ್ ,ಬ್ಯಾನರ್‌ಗಳನ್ನು ತೆರವುಗೊಳಿಸಲು ಮುಂದಾಗಿದ್ದಾರೆ.
ಹೌದು ಇದು ಚಳ್ಳಕೆರೆ ನಗರದ ನೆಹರು ವೃತ್ತ ಸೇರುದಂತೆ ಸಾರ್ವಜನಿಕ ಸ್ಥಳದಲ್ಲಿ ವಿವಿಧ ಪಕ್ಷಗಳ ಸಭೆ.ಸಮಾರಂಭ. ಹುಟ್ಟು ಹಬ್ಬ, ನಾಮಕರಳ, ನಾಟಕ, ಜಾತ್ರೆ ಉತ್ಸವ ಸೇರಿದಂತೆ ವಿವಿಧ ಕಾರ್ಯಕ್ರಮಗಳಿಗೆ ಪ್ಲೆಕ್ಸ್ ಬ್ಯಾನರ್ ಗಳನ್ನು ನಗರಸಭೆ ಅನುಮತಿ ಪಡೆಯದೆಎಲ್ಲೆಂದಲ್ಲಿ ಹಾಕಿ ಕಾರ್ಯಗಳು ಮುಗಿದರೂ ಅವುಗಳನ್ನು ತೆರವುಗೊಳಿಸುವ ಗೋಜಿಗೆ ಹೋಗುತ್ತಿರಲಿಲ್ಲ. ನ್ಯಾಯಾಲಯ ಆದೇಶ ಇದ್ದರೂ ಸಹ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಅನುಮತಿ ಪಡೆಯದೆ ಅನಧಿಕೃತವಾಗಿ ಬ್ಯಾನರ್ ಮತ್ತು ಫ್ಲೆಕ್ಸ್ಗಳನ್ನು ಅಳವಡಿಸಿದರೆ ಒಂದು ಸಾವಿರ ದಂಡ ಮತ್ತು ೬ ತಿಂಗಳು ಜೈಲು ಶಿಕ್ಷೆ ವಿಧಿಸಲಾಗು ಎಂಬ ಕಾನೂನು ಇದ್ದರೂ ಸಹ ಉಲ್ಲಂಘಿಸಿ ರಾಜಕೀಯ ಸಮಾವೇಶ, ರಾಜಕಾರಣಿಗಳ ಜನ್ಮದಿನ, ಸಮಾರಂಭ, ಜಯಂತಿ, ಉತ್ಸವ, ಧಾರ್ಮಿಕ ಕಾರ್ಯಕ್ರಮಗಳ ಸಮಯದಲ್ಲಿ ಅನಧಿಕೃತ ಫ್ಲೆಕ್ಸ್, ಬ್ಯಾನರ್, ಸ್ಟಿಕ್ಕರ್, ಭಿತ್ತಿಪತ್ರ, ಸ್ವಾಗತ ಕಮಾನುಗಳು ನಗರದ ಎಲ್ಲೆಡೆ ರಾರಾಜಿಸುವಂತೆ ಮಾಡುತ್ತಿದ್ದರು.
ಸಾಂಧರ್ಭಿಕ ಚಿತ್ರ
ಅಕ್ರಮ ಪ್ಲೆಕ್ಸ್ ಅವಳಡಿಸುವುದರಿಂದ ನಗರದ ಸೌಂದರ್ಯಕ್ಕೆ ಧಕ್ಕೆ ಹಾಗೂ ನಗರಸಭೆ ಬೊಕ್ಕಸಕ್ಕೂ ನಷ್ಟವನ್ನುಂಟು ಮಾಡುತ್ತಿತ್ತು. ಈ
ನೆಹರು ವೃತ್ತದಲ್ಲಿರ ನೆಹರು ಪ್ರತಿಮೆಗೂ ಪ್ಲೆಕ್ಸ್ ಹೆಚ್ಚು ಜನಸಂದಣಿ ಇರುವ ಪ್ರಮುಖ ವೃತ್ತಗಳು ಸೇರಿ ಪಾದಚಾರಿ ಮಾರ್ಗಗಳಲ್ಲಿ, ವಿಭಜಕಗಳಲ್ಲಿರುವ ಬೀದಿ ದೀಪದ ಕಂಬಗಳು, ರಸ್ತೆ ಬದಿಯಲ್ಲಿರುವ ವಿದ್ಯುತ್ ಕಂಬಗಳಲ್ಲಿ ಅನಧಿಕೃತವಾಗಿ ಅಳವಡಿಸುತ್ತಿದ್ದರು ಇದರಿಂದ ಸಾರ್ವಜನಿಕರು ಹಾಗೂ ವಾಹನ ಸವಾರರ ಸಂಚಾರಕ್ಕೂ ಅಡಚಣೆಯಾಗುತ್ತಿತ್ತು ವಿವಿಧ ಪಕ್ಷದಮುಖಂಡರು , ಜನಪ್ರತಿನಿಧಿಗಳ ಪ್ಲೆಕ್ಸ್ ಆಗಿರುವುದರಿಂದ ನಗರಸಭೆ ಅಧಿಗಳು ಅವುಗಳನ್ನು ತೆರವುಗೊಳಿಸುವ ಗೋಜಿಗೆ ಹೋಗುತ್ತಿರಲಿಲ್ಲ ಈಗ ಚುನಾವಣೆ ಸಮೀಪಿಸುತ್ತಿರುವುದರಿಂದ ನೀತಿ ಸಂಹಿತೆ ಜಾರಿಯಾಗುವ ಮುನ್ನವೇ ಜಿಲ್ಲಾಡಳಿ ನೀಡಿದ ಎಚ್ಚರಿಕೆಯಿಂದ ದಿನದ೨೪ ಗಂಟೆಯೊಳಗೆ ಪ್ಲೆಕ್ಸ್ಗಳನ್ನು ತೆರವುಗೊಳಿಸಬೇಕು, ಪ್ಲೆಕ್ಸ್ ಅಳವಡಿಸುವ ಮುನ್ನ ನಿಗಧಿ ಸ್ಥಳ ಹಾಗೂ ಹಣ ನೀಡಿ ಪರವಾನಿಗೆ ಪಡೆದು ಅಳಡವಡಿಸ ಬೇಕು ಒಂದು ವೇಳೆ ಪರವಾನಿಗೆಪಡೆಯದೆ ಪ್ಲೆಕ್ಸ್ ಗಳನ್ನು ಅಳವಡಿಸಿದರೆ ಕಾನೂನು ಶಿಕ್ಷೆಗೆ ಗುರಿಯಾಗ ಬೇಕಾಗುತ್ತದೆ .
ತಮ್ಮ ಪ್ಲೆಕ್ಸ್ಗಳಿಗೆ ತಾವೆ ಜವ್ಬಾರಿ.
ನಗರಸಭೆಯಿಂದ ಪರವಾನಿಗೆ ಪಡೆದು ಅಳವಡಿಸುವ ಜಾಹೀರಾತುಗಳಿಗೆ ಪ್ಲೆಕ್ಸ್ ದಾರರು ಜವಾಬ್ದಾರರು, ಜಾಹೀರಾತುಗಳಿಗೆ ಏನಾದರೂ ಹಾನಿಯಾದಲ್ಲಿ ನಗರಸಭೆ ಜವಾಬ್ದಾರಿಯಲ್ಲ, ಪರವಾನಿಗೆ ಪಡೆದು ಸಮಯದ ನಂತರ ಒಂದು ಗಂಟೆಯೊಳಗೆ ಹಾಕಿರುವ ಜಾಹೀರಾತುಗಳನ್ನು ತಮ್ಮ ಸ್ವಂತ ಖರ್ಚಿನಿಂದ ತೆರವುಗೊಳಿಸಿಕೊಡತಕ್ಕದ್ದು ಪರವಾನಿಗೆಯು ಜಾರಿಯಲ್ಲಿದ್ದು, ಸರ್ಕಾರದಿಂದ ಯಾವುದಾದರೂ ತುರ್ತು ಆದೇಶ ಬಂದಲ್ಲಿ, ನಿಯಮಾನುಸಾರ ಯಾವುದೇ ತಿಳುವಳಿಕೆ ನೀಡದೆ ರದ್ದುಪಡಿಸುವ ಅಧಿಕಾರವನ್ನು ಪೌರಾಯುಕ್ತರು, ನಗರಸಭೆ, ಚಳ್ಳಕೆರೆ ರವರಿಗೆ ಇರುತ್ತದೆ ಯಾವುದೇ ಸರ್ಕಾರಿ ಆಸ್ತಿಗಳ ಮೇಲೆ ಜಾಹೀರಾತುಗಳನ್ನು ಅಳವಡಿಸಬಾರದು. ನಿಗಧಿಪಡಿಸಿದ ಸ್ಥಳಗಳಲ್ಲೇ(ಪರವಾನಿಗೆ ನೀಡಿದ) ಜಾಹೀರಾತುಗಳನ್ನು ಅಳವಡಿಸತಕ್ಕದ್ದು. ನಗರಸಭೆ ವ್ಯಾಪ್ತಿಯಲ್ಲಿನ ವಿದ್ಯುತ್ ಕಂಬ ಹಾಗೂ ಮರಗಳಿಗೆ ಜಾಹೀರಾತುಗಳನ್ನು ಹಾಕುವಂತಿಲ್ಲ. ಪರವಾನಿಗೆ ಎಷ್ಟು ಬ್ಯಾನರ್ , ಪ್ಲೆಕ್ಸ್ಗಳಿಗೆ ಪಡೆದಿರುತ್ತಾರೆ ಅದಕ್ಕಿಂತ ಹೆಚ್ಚಿಗೆ ಹಾಕುವಂತೆ ಒಂದು ವೇಳ ಪರವಾನಿಗೆ ಪಡೆಯದೆ ಅಕ್ರಮವಾಗಿ ಪ್ಲೆಕ್ಸ್ ಬ್ಯಾನರ್ ಅಳವಡಿಸಿದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ನಗರಸಭೆ ಎಚ್ಚರಿಕೆ ನೀಡಿದೆ.
ನಗರಸಭೆ ಬೊಕ್ಕಸಕ್ಕೆ ಲಾಭ.

ಪ್ಲೆಕ್ಸ್ ಅಳವಡಿಕೆಗೆ ಕಾನೂನು ಜಾರಿಯಾದ ಮೊದಲ ಬಿಜೆಪಿ ಪಕ್ಷದ ವಿಜಯಸಂಕಲ್ಪ ರೋಡ್ ಶೋಗೆ ಪ್ಲೆಕ್ಸ್ ಬ್ಯಾನರ್ ಅಳವಡಿಸಲು ಬಿಜೆಪಿ ಪಕ್ಷದಿಂದ 25800 ರೂ ನಗರಸಭೆ ಬೊಕ್ಕಸಕ್ಕೆ ಪ್ಲೆಕ್ಸ್ ಬ್ಯಾನರ್ , ಬಂಟಿAಗ್ಸ್ ನಿಂದ ಲಾಭ ಬಂದಿದೆ ಈ ಹಿಂದೆ ರಾಜಕೀಯ ಪಕ್ಷಗಳು ಯಾವುದೇ ಪರವಾನಿಗೆ ಪಡೆಯದೆ ಹಣವೂ ಸಂದಾಯ ಮಾಡದೆ ಅಳವಡಿಸುತ್ತಿದ್ದರು ಎಂಬ ಆರೋಗಳು ಜನರಿಂದ ಕೇಳಿ ಬರುತ್ತಿದ್ದವು ಈಗ ಯಾರೇ ಆಗಲಿ ಹಣ ನೀಡಿ ಪರವಾನಿಗೆ ಪಡೆದು ನಿಗಧಿಯ ಸಮಯ ನಂತರ ಒಂದುಗAಟೆಯೊಳಗೆ ತೆರವುಗೊಳಿಸ ಬೇಕು ಎಂಬಷರತ್ತು ವಿಧಿಸಿದೆ.

Latest News >>

ಡಿ.ಸಿ.ಸಿ. ಬ್ಯಾಂಕ್ ನಿರ್ದೇಶಕರಾಗಿ ಓ.ಮಂಜುನಾಥ್ ಮಾಳಿಗೆ ಅವರು ಅವಿರೋಧ ಆಯ್ಕೆಯಾಗಿದ್ದಾರೆ.

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತ, ಚಿತ್ರದುರ್ಗ ಇದರ ಆಡಳಿತ ಮಂಡಳಿ ನಿರ್ದೇಶಕರ ಸ್ಥಾನಕ್ಕೆ ಹಿರಿಯೂರು...

ಚಿತ್ರದುರ್ಗದಲ್ಲಿ ನಡೆಯಲಿರುವ ಪತ್ರಿಕಾ ವಿತರಕರ ಹಂಚಿಕೆದಾರರ 4ನೇರಾಜ್ಯಸಮ್ಮೇಳನ ಕಾರ್ಯಕ್ರಮ ಯಶಸ್ವಿಯಾಗಲಿ : ಆಲೂರು ಹನುಮಂತರಾಯಪ್ಪ

ಹಿರಿಯೂರು: ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ ಹಾಗೂ ಚಿತ್ರದುರ್ಗ ಜಿಲ್ಲಾ ಪತ್ರಿಕೆ ಹಂಚಿಕೆದಾರರ ಹಾಗೂ ವಿತರಕರ ಸಂಘ (ರಿ) ಇವರುಗಳ...

ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ ಅನುಷ್ಟಾನ ಮೌಲ್ಯಮಾಪನ ಸಭೆಜಿಲ್ಲಾ ಮೇಲ್ವಿಚಾರಣಾ ಸಮಿತಿಯಿಂದ ಕ್ರಿಯಾಯೋಜನೆ ಅನುಮೋದನೆ ಕ್ರಮಕ್ಕೆ ಶಿಫಾರಸ್ಸು

ಚಿತ್ರದುರ್ಗ ಸೆ.06: ಪರಿಶಿಷ್ಟ ಜಾತಿ ಹಾಗೂ ಗಿರಿಜನ ಉಪಯೋಜನೆಯಡಿ (ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ) ಜಿಲ್ಲೆಯಲ್ಲಿ ಕೈಗೊಳ್ಳುವ ಎಲ್ಲಾ...

ಪೋಷಣ್ ಮಾಸಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ.ಡಿ.ಎಂ.ಅಭಿನವ್ ಪೌಷ್ಠಿಕಾಂಶಯುಕ್ತ ಆಹಾರ ಪದಾರ್ಥ ಸೇವಿಸುವುದು ಅಭ್ಯಾಸಿಸಿ

ಚಿತ್ರದುರ್ಗ ಸೆ.6: ಪೋಷಣ್ ಮಾಸಾಚರಣೆ ಕಾರ್ಯಕ್ರಮ ಮಕ್ಕಳ ಹಾಗೂ ಗರ್ಭಿಣಿಯರ, ಬಾಣಂತಿಯರ ಆರೋಗ್ಯ ಪೋಷಣ ಮಾಸಾಚರಣೆ ಆಗಬೇಕು. ಮಕ್ಕಳಲ್ಲಿ...

ಎಚ್‌ಐವಿ/ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆ

ಚಿತ್ರದುರ್ಗ ಸೆ.6: ಯುವ ಜನೋತ್ಸವ ಅಂಗವಾಗಿ ಎಚ್‌ಐವಿ/ ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆಯು ಚಿತ್ರದುರ್ಗ ನಗರದಲ್ಲಿ ಗುರುವಾರ...

ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಕಾಮಗಾರಿ ಪರಿಶೀಲನೆ

ಚಿತ್ರದುರ್ಗ ಸೆ.06: ನಬಾರ್ಡ್ ಸಂಸ್ಥೆಯ ಡಿಜಿಎಂ ಸಂಜೀವ್ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಈಚೆಗೆ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ವಾಣಿವಿಲಾಸ...

ಮೊಳಕಾಲ್ಮುರು : ಫಲಾನುಭವಿಗಳ ಮನೆ ಬಾಗಿಲಿಗೆ ಹೋಗಿ ಸಮಸ್ಯೆ ಆಲಿಸಿ ಶಾಸಕ ಎನ್ ವೈ ಗೋಪಾಲಕೃಷ್ಣ.

ಮೊಳಕಾಲ್ಮೂರು :-ಪಟ್ಟಣದ ತಾಲೂಕು ಪಂಚಾಯಿತಿಯಲ್ಲಿ ಗ್ಯಾರೆಂಟಿ ಅನುಷ್ಠಾನ ಸಮಿತಿ ನೂತನ ಕಾರ್ಯಾಲಯವನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ಎನ್ ವೈ....

ಬೆಂಬಲಬೆಲೆಯಲ್ಲಿ ಸೂರ್ಯಕಾಂತಿ ಖರೀದಿ ಕೇಂದ್ರಗಳ ಸ್ಥಾಪನೆ

ಚಿತ್ರದುರ್ಗ ಸೆ.04: 2024-25ನೇ ಸಾಲಿಗೆ ಕೇಂದ್ರ ಸರ್ಕಾರದ ಬೆಂಬಲಬೆಲೆ ಯೋಜನೆಯಡಿ ನಿಗದಿಪಡಿಸಿರುವ ರೂ.7,280/- (ಪ್ರತಿ ಕ್ವಿಂಟಾಲ್‌ಗೆ)...

ಮಹಾತ್ಮ ಗಾಂಧೀ ಸೇವಾ ಪ್ರಶಸ್ತಿ – ಕರ್ನಾಟಕ’ ಆಯ್ಕೆಗೆ ನಾಮನಿರ್ದೇಶನ ಆಹ್ವಾನ

ಚಿತ್ರದುರ್ಗ ಸೆ.04: ರಾಜ್ಯ ಸರ್ಕಾರವು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಸ್ಥಾಪಿಸಿರುವ ಐದು ಲಕ್ಷ ರೂಪಾಯಿ ನಗದನ್ನು ಒಳಗೊಂಡ...

ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್ 110 ಸಿಸಿ ಯ ಆಕರ್ಷಕ ಸ್ಕೂಟಿ ಮಾರುಕಟ್ಟೆಗೆ ಬಿಡುಗಡೆ.

ಚಿತ್ರದುರ್ಗ: ಚಿತ್ರದುರ್ಗ ನಗರದ ತುರುವನೂರು ರಸ್ತೆಯಲ್ಲಿನ ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page