ಮೊಳಕಾಲ್ಮುರು ಕ್ಷೇತ್ರದಲ್ಲಿ ಕಳೆದ ೫ವರ್ಷಗಳಿಂದ ಸರ್ಕಾರಿ ಸೌಲಭ್ಯಗಳನ್ನು ಲೂಟಿ ಮಾಡಿದ ಹೆಗ್ಗಳಿಕೆ ಶ್ರೀರಾಮುಲು ಮತ್ತು ಅವರ ತಂಡಕ್ಕೆ ಸಲ್ಲುತ್ತದೆ. ಹಾಗಾಗಿ ಕ್ಷೇತ್ರದ ನೊಂದ ಬಡಜನರ ಅಭಿವೃದ್ಧಿಗಾಗಿ ಮುಂಬರುವ ಚುನಾವಣೆಯಲ್ಲಿ ಶ್ರೀರಾಮುಲು ಸೂಚಿಸಿದ ವ್ಯಕ್ತಿಗೆ ನಮ್ಮ ಬೆಂಬಲವಿಲ್ಲ ಎಂದು ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ಎಚ್.ಟಿ.ನಾಗಿರೆಡ್ಡಿ

by | 05/04/23 | ಚುನಾವಣೆ-2023


ಚಳ್ಳಕೆರೆ ಜನಧ್ವನಿ ವಾರ್ತೆ ಏ 5
ಮೊಳಕಾಲ್ಮುರು ಕ್ಷೇತ್ರದಲ್ಲಿ ಕಳೆದ ೫ವರ್ಷಗಳಿಂದ ಸರ್ಕಾರಿ ಸೌಲಭ್ಯಗಳನ್ನು ಲೂಟಿ ಮಾಡಿದ ಹೆಗ್ಗಳಿಕೆ ಶ್ರೀರಾಮುಲು ಮತ್ತು ಅವರ ತಂಡಕ್ಕೆ ಸಲ್ಲುತ್ತದೆ. ಹಾಗಾಗಿ ಕ್ಷೇತ್ರದ ನೊಂದ ಬಡಜನರ ಅಭಿವೃದ್ಧಿಗಾಗಿ ಮುಂಬರುವ ಚುನಾವಣೆಯಲ್ಲಿ ಶ್ರೀರಾಮುಲು ಸೂಚಿಸಿದ ವ್ಯಕ್ತಿಗೆ ನಮ್ಮ ಬೆಂಬಲವಿಲ್ಲ ಎಂದು ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ಎಚ್.ಟಿ.ನಾಗಿರೆಡ್ಡಿ ಹೇಳಿದರು.
ಚಳ್ಳಕೆರೆ ತಾಲೂಕೀನ ಮೊಳಕಾಲ್ಮೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ನಾಯನಹಟ್ಟಿ ಪಟ್ಟಣದ ಹೊರವಲಯದ ತೋಟವೊಂದರಲ್ಲಿ ಬುಧವಾರ ಹಮ್ಮಿಕೊಂಡಿದ್ದ ಕಾರ್ಯಕರ್ತರ ಸಭೆಯನ್ನು ಉದ್ದೇಶಿಸಿ ಮತನಾಡಿದರು.
ಶ್ರೀರಾಮುಲು ಪರಿಶಿಷ್ಟ ಪಂಗಡದ ರಾಜ್ಯ ನಾಯಕ. ಅವರಿಂದ ಹಿಂದುಳಿದ ಮೊಳಕಾಲ್ಮುರು ಕ್ಷೇತ್ರದ ಅಭಿವೃದ್ಧಿಯಾಗುತ್ತದೆ ಎಂಬ ದೂರದೃಷ್ಠಿಯಿಂದ ಅವರನ್ನು ಕಳೆದ ಚುನಾವಣೆಯಲ್ಲಿ ಮೊಳಕಾಲ್ಮುರು ಕ್ಷೇತ್ರಕ್ಕೆ ಕರೆ ತರಲಾಯಿತು. ಆದರೆ ಕೆಲವೇ ತಿಂಗಳಲ್ಲಿ ಅವರ ನೈಜವಾದ ಗುಣ ನಮಗೆ ಅರ್ಥವಾಯಿತು. ಹಲವು ಆಪ್ತ ಸಹಾಯಕರನ್ನು ನೇಮಿಸಿಕೊಂಡು ರೈತರು, ನಿರ್ಗತಿಕರು, ವಸತಿ ರಹಿತರು ಸೇರಿದಂತೆ ದೀನದಲಿತರ ಹಲವು ಸರ್ಕಾರಿ ಸೌಲಭ್ಯಗಳು ಲೂಟಿ ಮಾಡಿದರು. ಕ್ಷೇತ್ರದಲ್ಲಿ ಶಿಕ್ಷಣ, ಸಾರಿಗೆ , ರಸ್ತೆಗಳ ಅಭಿವೃದ್ಧಿ ಸೇರಿದಂತೆ ಮೂಲಸೌಕರ್ಯಗಳ ಕೊರತೆಯಲ್ಲಿ ೧೦ವರ್ಷಗಳಷ್ಟು ಹಿಂದುಳಿದ ಪರಿಸ್ಥಿತಿ ತಲೆದೋರಿದೆ. ಇವರ ಈ ನಡೆಗೆ ಕ್ಷೇತ್ರದ ಜನರು ರೋಸಿಹೋಗಿದ್ದರು. ಇದರಿಂದ ಸೋಲಿನ ಭಯದಿಂದ ಕ್ಷೇತ್ರವನ್ನು ಬಿಟ್ಟುಹೋಗುವ ತೀರ್ಮಾನ ಮಾಡಿದರು.
ಕಳೆದ ಚುನಾವಣೆಯಲ್ಲಿ ಶ್ರೀರಾಮುಲು ಅವರು ಮಾಜಿ ಶಾಸಕ ಎಸ್.ತಿಪ್ಪೇಸ್ವಾಮಿಯವರಿಗೆ ಬಿಜೆಪಿ ಟಿಕೆಟ್ ತಪ್ಪಿಸಿದ ಪರಿಣಾಮವಾದ ಅವರಿಂದ ನಾಯಕನಹಟ್ಟಿ ಒಳಮಠದ ಮುಂಭಾಗದಲ್ಲಿ ಇಟ್ಟಿಗೆ ಕಲ್ಲುಗಳಿಂದ ಒದೆಯನ್ನೂ ಸಹ ತಿಂದರು. ನಂತರ ೫ವರ್ಷಗಳ ಕಾಲ ಶತ್ರುಗಳ ರೀತಿ ಇಬ್ಬರೂ ಹಗೆಯನ್ನು ಸಾಧಿಸಿಕೊಂಡು ಬಂದಿದ್ದರು. ಆದರೆ ಏಕಾಏಕಿ ಮಾಜಿ ಶಾಸಕ ಎಸ್.ತಿಪ್ಪೇಸ್ವಾಮಿಯವರನ್ನು ಬಿಜೆಪಿಗೆ ಸೇರ್ಪಡೆ ಮಾಡಿಕೊಳ್ಳುವ ಮೂಲಕ ಶ್ರೀರಾಮುಲು ಮತ್ತೊಮ್ಮೆ ಮೊಳಕಾಲ್ಮುರು ಕ್ಷೇತ್ರದಲ್ಲಿ ತನ್ನ ಹಿಡಿತ ಸಾಧಿಸಲು ಯೋಜನೆ ರೂಪಿಸಿದ್ದಾರೆ. ಹಾಗಾಗಿ ಶ್ರೀರಾಮುಲು ಅವರು ಸೂಚಿಸಿದ ವ್ಯಕ್ತಿಗೆ ನಮ್ಮ ಬೆಂಬಲವಿಲ್ಲ. ಅದಾಗ್ಯೂ ಮಾಜಿ ಶಾಸಕ ಎಸ್.ತಿಪ್ಪೇಸ್ವಾಮಿಯವರಿಗೆ ಬಿಜೆಪಿ ಟಿಕೆಟ್ ದೊರೆತರೆ ಕ್ಷೇತ್ರದಲ್ಲಿ ಅವರ ವಿರುದ್ಧ ಬಂಡಾಯ ಅಭ್ಯರ್ಥಿಯನ್ನು ನಿಲ್ಲಿಸುವುದು ಖಚಿತ ಎಂದರು.
ಬಿಜೆಪಿ ಮುಖಂಡ ಪಟೇಲ್ ಜಿ.ಎಂ.ತಿಪ್ಪೇಸ್ವಾಮಿ ಮಾತನಾಡಿ, “ಕಳೆದ ಚುನಾವಣೆಯಲ್ಲಿ ಶ್ರೀರಾಮುಯಲು ವಿರುದ್ಧ ತೊಡೆತಟ್ಟಿದ್ದ ಮಾಜಿ ಎಸ್.ತಿಪ್ಪೇಸ್ವಾಮಿಯವರು ಕಾಂಗ್ರೆಸ್ ಪಕ್ಷದಲ್ಲಿ ಗುರ್ತಿಸಿಕೊಂಡು ೫ವರ್ಷಗಳ ಕಾಲ ನಿರಂತರವಾಗಿ ಬಿಜೆಪಿ ಮತ್ತು ಶ್ರೀರಾಮುಲು ವಿರುದ್ಧ ಟೀಕಾಪ್ರಹಾರ ನಡೆಸಿದ್ದರು. ಅಂತವರಿಗೆ ಇಂದು ಶ್ರೀರಾಮುಲು ಟಿಕೆಟ್ ಕೊಡಿಸಲು ಪಣತೊಟ್ಟಿರುವುದು ವಿಪರ್ಯಾಸದ ಸಂಗತಿಯಾಗಿದೆ. ಇದರಿಂದ ನಿಷ್ಠಾವಂತ ಬಿಜೆಪಿ ಕಾರ್ಯಕರ್ತರಿಗೆ ನೋವುಂಟಾಗಿದೆ” ಎಂದರು.
ಇದೇವೇಳೆ ಮುಖಂಡರಾದ ದಾಸರೆಡ್ಡಿ, ಸಿ.ಬಿ.ಮೋಹನ್‌ಕುಮಾರ್, ರಾಜಣ್ಣ, ದೊಡ್ಡಬೋರಯ್ಯ, ಮಲಿಕಾರ್ಜುನ, ನಾಗರಾಜ್, ಚಿನ್ನಯ್ಯ, ಮಹಾಂತೇಶ್ ಇತರಿದ್ದರು.

Latest News >>

ಡಿ.ಸಿ.ಸಿ. ಬ್ಯಾಂಕ್ ನಿರ್ದೇಶಕರಾಗಿ ಓ.ಮಂಜುನಾಥ್ ಮಾಳಿಗೆ ಅವರು ಅವಿರೋಧ ಆಯ್ಕೆಯಾಗಿದ್ದಾರೆ.

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತ, ಚಿತ್ರದುರ್ಗ ಇದರ ಆಡಳಿತ ಮಂಡಳಿ ನಿರ್ದೇಶಕರ ಸ್ಥಾನಕ್ಕೆ ಹಿರಿಯೂರು...

ಚಿತ್ರದುರ್ಗದಲ್ಲಿ ನಡೆಯಲಿರುವ ಪತ್ರಿಕಾ ವಿತರಕರ ಹಂಚಿಕೆದಾರರ 4ನೇರಾಜ್ಯಸಮ್ಮೇಳನ ಕಾರ್ಯಕ್ರಮ ಯಶಸ್ವಿಯಾಗಲಿ : ಆಲೂರು ಹನುಮಂತರಾಯಪ್ಪ

ಹಿರಿಯೂರು: ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ ಹಾಗೂ ಚಿತ್ರದುರ್ಗ ಜಿಲ್ಲಾ ಪತ್ರಿಕೆ ಹಂಚಿಕೆದಾರರ ಹಾಗೂ ವಿತರಕರ ಸಂಘ (ರಿ) ಇವರುಗಳ...

ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ ಅನುಷ್ಟಾನ ಮೌಲ್ಯಮಾಪನ ಸಭೆಜಿಲ್ಲಾ ಮೇಲ್ವಿಚಾರಣಾ ಸಮಿತಿಯಿಂದ ಕ್ರಿಯಾಯೋಜನೆ ಅನುಮೋದನೆ ಕ್ರಮಕ್ಕೆ ಶಿಫಾರಸ್ಸು

ಚಿತ್ರದುರ್ಗ ಸೆ.06: ಪರಿಶಿಷ್ಟ ಜಾತಿ ಹಾಗೂ ಗಿರಿಜನ ಉಪಯೋಜನೆಯಡಿ (ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ) ಜಿಲ್ಲೆಯಲ್ಲಿ ಕೈಗೊಳ್ಳುವ ಎಲ್ಲಾ...

ಪೋಷಣ್ ಮಾಸಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ.ಡಿ.ಎಂ.ಅಭಿನವ್ ಪೌಷ್ಠಿಕಾಂಶಯುಕ್ತ ಆಹಾರ ಪದಾರ್ಥ ಸೇವಿಸುವುದು ಅಭ್ಯಾಸಿಸಿ

ಚಿತ್ರದುರ್ಗ ಸೆ.6: ಪೋಷಣ್ ಮಾಸಾಚರಣೆ ಕಾರ್ಯಕ್ರಮ ಮಕ್ಕಳ ಹಾಗೂ ಗರ್ಭಿಣಿಯರ, ಬಾಣಂತಿಯರ ಆರೋಗ್ಯ ಪೋಷಣ ಮಾಸಾಚರಣೆ ಆಗಬೇಕು. ಮಕ್ಕಳಲ್ಲಿ...

ಎಚ್‌ಐವಿ/ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆ

ಚಿತ್ರದುರ್ಗ ಸೆ.6: ಯುವ ಜನೋತ್ಸವ ಅಂಗವಾಗಿ ಎಚ್‌ಐವಿ/ ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆಯು ಚಿತ್ರದುರ್ಗ ನಗರದಲ್ಲಿ ಗುರುವಾರ...

ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಕಾಮಗಾರಿ ಪರಿಶೀಲನೆ

ಚಿತ್ರದುರ್ಗ ಸೆ.06: ನಬಾರ್ಡ್ ಸಂಸ್ಥೆಯ ಡಿಜಿಎಂ ಸಂಜೀವ್ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಈಚೆಗೆ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ವಾಣಿವಿಲಾಸ...

ಮೊಳಕಾಲ್ಮುರು : ಫಲಾನುಭವಿಗಳ ಮನೆ ಬಾಗಿಲಿಗೆ ಹೋಗಿ ಸಮಸ್ಯೆ ಆಲಿಸಿ ಶಾಸಕ ಎನ್ ವೈ ಗೋಪಾಲಕೃಷ್ಣ.

ಮೊಳಕಾಲ್ಮೂರು :-ಪಟ್ಟಣದ ತಾಲೂಕು ಪಂಚಾಯಿತಿಯಲ್ಲಿ ಗ್ಯಾರೆಂಟಿ ಅನುಷ್ಠಾನ ಸಮಿತಿ ನೂತನ ಕಾರ್ಯಾಲಯವನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ಎನ್ ವೈ....

ಬೆಂಬಲಬೆಲೆಯಲ್ಲಿ ಸೂರ್ಯಕಾಂತಿ ಖರೀದಿ ಕೇಂದ್ರಗಳ ಸ್ಥಾಪನೆ

ಚಿತ್ರದುರ್ಗ ಸೆ.04: 2024-25ನೇ ಸಾಲಿಗೆ ಕೇಂದ್ರ ಸರ್ಕಾರದ ಬೆಂಬಲಬೆಲೆ ಯೋಜನೆಯಡಿ ನಿಗದಿಪಡಿಸಿರುವ ರೂ.7,280/- (ಪ್ರತಿ ಕ್ವಿಂಟಾಲ್‌ಗೆ)...

ಮಹಾತ್ಮ ಗಾಂಧೀ ಸೇವಾ ಪ್ರಶಸ್ತಿ – ಕರ್ನಾಟಕ’ ಆಯ್ಕೆಗೆ ನಾಮನಿರ್ದೇಶನ ಆಹ್ವಾನ

ಚಿತ್ರದುರ್ಗ ಸೆ.04: ರಾಜ್ಯ ಸರ್ಕಾರವು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಸ್ಥಾಪಿಸಿರುವ ಐದು ಲಕ್ಷ ರೂಪಾಯಿ ನಗದನ್ನು ಒಳಗೊಂಡ...

ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್ 110 ಸಿಸಿ ಯ ಆಕರ್ಷಕ ಸ್ಕೂಟಿ ಮಾರುಕಟ್ಟೆಗೆ ಬಿಡುಗಡೆ.

ಚಿತ್ರದುರ್ಗ: ಚಿತ್ರದುರ್ಗ ನಗರದ ತುರುವನೂರು ರಸ್ತೆಯಲ್ಲಿನ ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page