ಅಡ್ಡಾದಿಡ್ಡಿ ವಾಹನ ನಿಲುಗಡೆ, ಪಾದಚಾರಿಗಳ ರಸ್ತೆ ಒತ್ತುವರಿ ಅಧಿಕಾರಿಗಳ ನಿರ್ಲಕ್ಷಕ್ಕೆ ಇನ್ನೆಷ್ಟು ವಾಹನ ಸವಾರರಲು ಬಲಿಯಾಗ ಬೇಕು…?

by | 27/03/23 | ಜನಧ್ವನಿ


ಬೆಂಗಳೂರು ಮುಖ್ಯ ರಸ್ತೆಯ ಜೈನ್ ಕಲ್ಯಾಣ ಮಂಟದ ಮುಂಭಾಗದಲ್ಲಿ ಬೈಕ್ ಸವಾರನೊಬ್ಬ ಲಾರಿ ಚಕ್ರಕ್ಕೆ ಸಿಲುಕಿ ಮೃತ ಪಟ್ಟಿರುವುದು.
ಚಳ್ಳಕೆರೆ ಜನಧ್ವನಿ ವಾರ್ತೆ ಮಾ.27
ನಗರದಲ್ಲಿ ದಿನೇದಿನೇ ವಾಹನಗಳ ಸಂಖ್ಯೆ ಹೆಚ್ಚುತ್ತಿದೆ. ಪ್ರಮುಖ ರಸ್ತೆಗಳಲ್ಲಿ ವಾಹನಗಳ ಸಂಚಾರ ಹೆಚ್ಚಾಗಿದ್ದು, ದಟ್ಟಣೆ ಹೆಚ್ಚಾಗಿದ್ದು ಅಮಾಯಕ ಯುವಕರು ಬಲಿಯಾಗುತ್ತಿದ್ದಾರೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ.


ಮುಖ್ಯ ರಸ್ತೆಗೊಂದಿಕೊಂಡು ವಾಹನಗಳನ್ನು ನಿಲುಗಡೆ ಮಾಡಿರುವುದು.
ನಗರದ ಬೆಂಗಳೂರು, ಬಳ್ಳಾರಿ, ಪಾವಗಡ ಹಾಗೂ ಚಿತ್ರದುರ್ಗ ರಸ್ತೆಗಳಲ್ಲಿ ಎಲ್ಲಿಯೂವ ವಾಹನ ನಿಲುಗಡೆಗೆ ಸರಿಯಾದ ಜಾಗವಿಲ್ಲದೆ ರಸ್ತೆಗಳಲ್ಲಿ ಅಕ್ಕ ಪಕ್ಕ, ಪಾದಚಾರಿ ರಸ್ತೆಗಳಲ್ಲಿ ವಾಹನ ಗಳ ನಿಲುಗಡೆ ಹಾಗೂ ವ್ಯಾಪಾರಿಗಳು ರಸ್ತೆಗಳನ್ನು ಅಕ್ರಮಿಕೊಂಡು ವ್ಯಾಪಾರ ವಹಿವಾಟು ನಡೆಸುತ್ತಿರುವುದರಿಂದ ವಾಹನಗಳ ದಟ್ಟಣೆಯ್ನು ನಿಯಂತ್ರಣ ಮಾಡಲು ಪೊಲೀಸರು ಹರಸಹಾಸ ಪಡಬೇಕಾಗಿದೆ.
ಸಾರ್ವಜನಿಕ ತೆರಿಗೆ ಹಣದಲ್ಲಿ ಮಖ್ಯ ರಸ್ತೆಗಳ ಅಗಲೀಕರಣ, ಹಾಗೂ ಪಾದಚಾರಿಗಳ ರಸ್ತೆಗಳನ್ನು ನಿರ್ಮಿಸಿದ್ದು ಇವರುಗಳನ್ನು ವರ್ತಕರು ಅಕ್ರಮಸಿಕೊಂಡು ಶೆಡ್ ನಿರ್ಮಿಸಿಕೊಂಡಿದ್ದಾರೆ ಇದರಿಂದ ವಾಹನಗಳ ಸಂಚಾರಕ್ಕೆ ಕಿರಿಕಿರಿ ಯಾಗುತ್ತಿದೆ.


ಸಾರ್ವಜನಿಕ ಪಾದಚಾರಿಗಳ ರಸ್ತೆಗಳನ್ನು ಒತ್ತುವರಿ ಮಾಡಿಕೊಂಡ ವರ್ತಕರು.
ನಗರದ ಹೃದಯ ಭಾಗದಲ್ಲೇ ರಾಷ್ಟಿçÃಯ ಹೆದ್ದಾರಿ ಹಾದು ಹೋಗಿರುವುದರಿಂದ ಬಳ್ಳಾರಿ, ಬೆಂಗಳೂರು, ಮೈಸೂರು, ಪಾವಗಡ, ಹೊಸಪೇಟೆ. ಕೊಪ್ಪಳ, ಸೇರರಿದಂತೆ ವಿವಿಧ ನಗರಗಳಿಗೆ ಹೋಗುವ ವಾಹನಳ ದಟ್ಟಣೆ ಸಂಚಾರ ಹೆಚ್ಚಾಗಿದೆ. ಮುಖ್ಯ ರಸ್ತೆಗೆ ಹೊಂದಿಕೊAಡು ಕಲ್ಯಾಣ ಮಂಟಪಗಳಿದ್ದು ವಾಹನ ನಿಲುಗಡೆ ಸ್ಥಳವನ್ನು ನಿಗಧಿ ಮಾಡದೆ ಇರುವುದರಿಂದ ಕಲ್ಯಾಣ ಮಂಟಪಗಳಿಗೆ ಬರುವ ವಾಹನಗಳನ್ನು ರಸ್ತೆಯ ಮೇಲೆ ನಿಲ್ಲಿಸಿ ಹೋಗುವುದರಿಂದ ಇರುವ ರಸ್ತೆಯನ್ನು ಅಕ್ರಮಿಸಿಕೊಂಡು ವಾಹನ ದಟ್ಟಣೆ ಉಂಟಾಗುತ್ತಿದೆ ಇದರಿಂದ ಅಪಘಾಗಳ ಸಂಖ್ಯೆ ಹೆಚ್ಚುತ್ತಿದೆ.


ನಗರದ ನೆಹರು ವೃತ್ತದಲ್ಲಿ ರಾಷ್ಟಿçÃಯ ಹೆದ್ದಾರಿ ಹಾದು ಹೋಗಿರುವುರದರಿಂದ ಪ್ರತಿದಿನ ಸಾವಿರಾರು ವಾಹನಗಳು ಸಂಚರಿಸುತ್ತವೆ. ಅಲ್ಲದೆ, ಈ ವೃತ್ತಗಳಲ್ಲಿ ವಾಹನ ಸವಾರರು ಮನಬಂದAತೆ ಚಲಾಯಿಸುತ್ತಾರೆ. ಇದರಿಂದ ಅಪಘಾತಗಳು ಸಂಭವಿಸುತ್ತಿವೆ. ಪಾದಚಾರಿಗಳು ಹಾಗೂ ಶಾಲಾ ವಿದ್ಯಾರ್ಥಿಗಳು ಪ್ರಾಣವನ್ನು ಕೈಯಲ್ಲಿಡಿದು ಸಂಚರಿಸುವ ಸ್ಥಿತಿ ಇದೆ. ರಾಷ್ಟಿçÃಯ ಹೆದ್ದಾರಿಯಲ್ಲಿ ಈ ಹಿಂದೆ ಟ್ರಾಫಿಕ್ ಸಿಗ್ನಲ್ ಹಾಗೂ ಸಿಸಿ ಕ್ಯಾಮರಗಳನ್ನು ಅಳವಡಿಸಲಾಗಿತ್ತು ಅವುಗಳು ಕೆಟ್ಟ ನಂತರ ಅಳವಡಿಸದೆ ಇರುವುರಿಂದ ಪ್ರಮುಖ ವೃತ್ತಗಳಲ್ಲಿ ಓಡಾಡಲು ಸಾಧ್ಯವಾಗುತ್ತಿಲ್ಲ.
ಕೂಡಲೆ ಪೊಲೀಸ್ ಇಲಾಖೆ, ನಗರಸಭೆ ಅಧಿಕಾರಿಗಳು ಜಂಟಿಯಾಗಿ ರಸ್ತೆ ಬದಿಯಲ್ಲಿ ಪಾದ ಚಾರಿಗಳ ರಸ್ತೆ ಅಕ್ರಮಸಿಕೊಂಡಿರುವುದನ್ನು ತೆರವುಗೊಳಿಸ ಬೇಕು ಹಾಗೂ ವಾಹನ ನಿಲುಗಡೆಗೆ ಸೂಕ್ತ ಸ್ಥಳವನ್ನು ನಿಗಧಿ ಪಡಿಸಿ ಅಪಘಾತಗಳನ್ನು ತಪ್ಪಿಸ ಬೇಕೆಂದು ಸಾರ್ವಜನಿಕು ಒತ್ತಾಯಿಸಿದ್ದಾರೆ.

Latest News >>

ಡಿ.ಸಿ.ಸಿ. ಬ್ಯಾಂಕ್ ನಿರ್ದೇಶಕರಾಗಿ ಓ.ಮಂಜುನಾಥ್ ಮಾಳಿಗೆ ಅವರು ಅವಿರೋಧ ಆಯ್ಕೆಯಾಗಿದ್ದಾರೆ.

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತ, ಚಿತ್ರದುರ್ಗ ಇದರ ಆಡಳಿತ ಮಂಡಳಿ ನಿರ್ದೇಶಕರ ಸ್ಥಾನಕ್ಕೆ ಹಿರಿಯೂರು...

ಚಿತ್ರದುರ್ಗದಲ್ಲಿ ನಡೆಯಲಿರುವ ಪತ್ರಿಕಾ ವಿತರಕರ ಹಂಚಿಕೆದಾರರ 4ನೇರಾಜ್ಯಸಮ್ಮೇಳನ ಕಾರ್ಯಕ್ರಮ ಯಶಸ್ವಿಯಾಗಲಿ : ಆಲೂರು ಹನುಮಂತರಾಯಪ್ಪ

ಹಿರಿಯೂರು: ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ ಹಾಗೂ ಚಿತ್ರದುರ್ಗ ಜಿಲ್ಲಾ ಪತ್ರಿಕೆ ಹಂಚಿಕೆದಾರರ ಹಾಗೂ ವಿತರಕರ ಸಂಘ (ರಿ) ಇವರುಗಳ...

ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ ಅನುಷ್ಟಾನ ಮೌಲ್ಯಮಾಪನ ಸಭೆಜಿಲ್ಲಾ ಮೇಲ್ವಿಚಾರಣಾ ಸಮಿತಿಯಿಂದ ಕ್ರಿಯಾಯೋಜನೆ ಅನುಮೋದನೆ ಕ್ರಮಕ್ಕೆ ಶಿಫಾರಸ್ಸು

ಚಿತ್ರದುರ್ಗ ಸೆ.06: ಪರಿಶಿಷ್ಟ ಜಾತಿ ಹಾಗೂ ಗಿರಿಜನ ಉಪಯೋಜನೆಯಡಿ (ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ) ಜಿಲ್ಲೆಯಲ್ಲಿ ಕೈಗೊಳ್ಳುವ ಎಲ್ಲಾ...

ಪೋಷಣ್ ಮಾಸಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ.ಡಿ.ಎಂ.ಅಭಿನವ್ ಪೌಷ್ಠಿಕಾಂಶಯುಕ್ತ ಆಹಾರ ಪದಾರ್ಥ ಸೇವಿಸುವುದು ಅಭ್ಯಾಸಿಸಿ

ಚಿತ್ರದುರ್ಗ ಸೆ.6: ಪೋಷಣ್ ಮಾಸಾಚರಣೆ ಕಾರ್ಯಕ್ರಮ ಮಕ್ಕಳ ಹಾಗೂ ಗರ್ಭಿಣಿಯರ, ಬಾಣಂತಿಯರ ಆರೋಗ್ಯ ಪೋಷಣ ಮಾಸಾಚರಣೆ ಆಗಬೇಕು. ಮಕ್ಕಳಲ್ಲಿ...

ಎಚ್‌ಐವಿ/ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆ

ಚಿತ್ರದುರ್ಗ ಸೆ.6: ಯುವ ಜನೋತ್ಸವ ಅಂಗವಾಗಿ ಎಚ್‌ಐವಿ/ ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆಯು ಚಿತ್ರದುರ್ಗ ನಗರದಲ್ಲಿ ಗುರುವಾರ...

ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಕಾಮಗಾರಿ ಪರಿಶೀಲನೆ

ಚಿತ್ರದುರ್ಗ ಸೆ.06: ನಬಾರ್ಡ್ ಸಂಸ್ಥೆಯ ಡಿಜಿಎಂ ಸಂಜೀವ್ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಈಚೆಗೆ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ವಾಣಿವಿಲಾಸ...

ಮೊಳಕಾಲ್ಮುರು : ಫಲಾನುಭವಿಗಳ ಮನೆ ಬಾಗಿಲಿಗೆ ಹೋಗಿ ಸಮಸ್ಯೆ ಆಲಿಸಿ ಶಾಸಕ ಎನ್ ವೈ ಗೋಪಾಲಕೃಷ್ಣ.

ಮೊಳಕಾಲ್ಮೂರು :-ಪಟ್ಟಣದ ತಾಲೂಕು ಪಂಚಾಯಿತಿಯಲ್ಲಿ ಗ್ಯಾರೆಂಟಿ ಅನುಷ್ಠಾನ ಸಮಿತಿ ನೂತನ ಕಾರ್ಯಾಲಯವನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ಎನ್ ವೈ....

ಬೆಂಬಲಬೆಲೆಯಲ್ಲಿ ಸೂರ್ಯಕಾಂತಿ ಖರೀದಿ ಕೇಂದ್ರಗಳ ಸ್ಥಾಪನೆ

ಚಿತ್ರದುರ್ಗ ಸೆ.04: 2024-25ನೇ ಸಾಲಿಗೆ ಕೇಂದ್ರ ಸರ್ಕಾರದ ಬೆಂಬಲಬೆಲೆ ಯೋಜನೆಯಡಿ ನಿಗದಿಪಡಿಸಿರುವ ರೂ.7,280/- (ಪ್ರತಿ ಕ್ವಿಂಟಾಲ್‌ಗೆ)...

ಮಹಾತ್ಮ ಗಾಂಧೀ ಸೇವಾ ಪ್ರಶಸ್ತಿ – ಕರ್ನಾಟಕ’ ಆಯ್ಕೆಗೆ ನಾಮನಿರ್ದೇಶನ ಆಹ್ವಾನ

ಚಿತ್ರದುರ್ಗ ಸೆ.04: ರಾಜ್ಯ ಸರ್ಕಾರವು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಸ್ಥಾಪಿಸಿರುವ ಐದು ಲಕ್ಷ ರೂಪಾಯಿ ನಗದನ್ನು ಒಳಗೊಂಡ...

ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್ 110 ಸಿಸಿ ಯ ಆಕರ್ಷಕ ಸ್ಕೂಟಿ ಮಾರುಕಟ್ಟೆಗೆ ಬಿಡುಗಡೆ.

ಚಿತ್ರದುರ್ಗ: ಚಿತ್ರದುರ್ಗ ನಗರದ ತುರುವನೂರು ರಸ್ತೆಯಲ್ಲಿನ ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page