ಎರಡನೇ ದಿನಕ್ಕೆ ಕಾಲಿಟ್ಟು ಗಂಜಿಗುಂಟೆ ಗ್ರಾಮಸ್ಥರ ಪ್ರತಿಭಟನೆ- ಪಿಡಿಒ ಪ್ರತಿಭಟನಾಕರರನ್ನು ಮನವೊಲಿಸಿದರೂ ಜಗ್ಗದ ಪ್ರತಿಭಟನಾಕಾರರು.

by | 26/03/24 | ಪ್ರತಿಭಟನೆ

ಚಳ್ಳಕೆರೆ ಜನಧ್ವನಿ ಮಾ.26.ಚಳ್ಳಕೆರೆ :ತಾಲೂಕಿನ ಸೋಮಗುದ್ದು ಗ್ರಾಮಪಂಚಾಯಿತಿ ವ್ಯಾಪ್ತಿಯ ಗಂಜಿಗುಂಟೆ ಗ್ರಾಮದಲ್ಲಿ ನಿವೇಶಕ್ಕಾಗಿ ಪ್ರತಿಭಟನೆ ಎರಡನೇ ದಿನಕ್ಕೆ ಕಾಲಿಟ್ಟಿದೆ.
ಪ್ರತಿಭಟನಾ ಸ್ಥಳಕ್ಕೆ ಗ್ರಾಪಂ ಪಿಡಿಒ ಗೌತಮಿ ದೌಢಾಯಿಸಿ ಪ್ರತಿಭಟನಾ ಕರಾರರನ್ನು ಮನವೊಲಿಸಲು ಮುಂದಾದರೂ ವಿಫಲವಾಗಿದ್ದು ಪಿಡಿಒ ಗೌತಮಿಗೆ ಮುತ್ತಿಗೆ ಹಾಕಿ ಗಂಜಿಗುಂಟೆ ಸರ್ಕಾರಿ ಗೋಮಾಳವನ್ನು ಪ್ರಭಾವಿಗಳು ಅಕ್ರಮಿಸಿಕೊಂಡಿರುವುದನ್ನು ತೆರವು ಮಾಡಿಸಿ, ನಿವೇಶನಗಳಿಲ್ಲದ ಬಡಜನರಿಗೆ ಗೋಮಾಳದಲ್ಲಿ ಖಾಲಿ ನಿವೇಶನ ನೀಡಬೇಕೆಂದು ಗ್ರಾಮದ ಮಹಿಳೆಯರು ಗ್ರಾಮದ ರಸ್ತೆಗೆ ಮುಳ್ಳಿನ ಕಳ್ಳೆ ಅಡ್ಡಹಾಕಿ ಪ್ರತಿಭಟನೆ ನಡೆಸುತ್ತಿದ್ದಾರೆ.


ಪಿಡಿಒ ಗೌತಮಿ ಮಾತನಾಡಿ ಈಗ ಲೋಕಸಭಾ ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿದೆ ನಾಯಕಟ್ಟಿ ಜಾತ್ರೆ ಇರುವುದರಿಂದ ಇನ್ನು ಎರಡು ದಿನ ಅಧಿಕಾರಿಗಳುಜಾತ್ರೆ ಚುನಾವಣೆ ಕರ್ತವ್ಯದಲ್ಲಿ ನಿರತರಾಗಿದ್ದು ಅಧಿಕಾರಿಗಳ ಗಮನ ಸೆಳೆದ ನಂತರ ಅವರ ಆದೇಶವನ್ನು ಪಾಲನೆ ಮಾಡಲಾಗುದು ಅಲ್ಲಿಯವರೆಗೆ ಪ್ರತಿಭಟನೆ ಹಿಂಪಡೆಯುವಂತೆ ಮನವೊಲಿಸಿದರೂ ಸಹ ನಮಗೆ ನ್ಯಾಯ ದೊರೆಯುವ ತನಕ ಪ್ರತಿಭಟನೆ ಮಾಡುವುದಾಗಿ ತಿಳಿಸಿದ್ದಾರೆ.
ಗಂಜಿಗುಂಟೆ ಗ್ರಾಮದ ಸರ್ಕಾರಿ ಗೋಮಾಳವನ್ನು ಒಂದೇ ಸಮಾಜದವರು ಅಕ್ರಮವಾಗಿ ಒತ್ತುವರಿ ಮಾಡಿಕೊಂಡು ಬೇಲಿ ಹಾಕಿಕೊಂಡಿದ್ದಾರೆ, ಉಳಿದ ಸಮಾಜದಲ್ಲಿ ನಿವೇಶಗಳಿಲ್ಲದ ಬಡಜನರು ಇದ್ದಾರೆ, ಇವರು ಎಲ್ಲಿಗೆ ಹೋಗಬೇಕು. ನಿವೇಶನ ಇದ್ದವರೆ ಸರ್ಕಾರಿ ಗೋಮಾಳವನ್ನು ಒತ್ತುವರಿ ಮಾಡಿಕೊಂಡಿದ್ದಾರೆ, ಸ್ಥಳಕ್ಕೆ ತಹಶೀಲ್ದಾರ್ ಭೇಟಿ ಒತ್ತುವರಿ ಮಾಡಿಕೊಂಡಿರುವ ಗೋಮಾಳವನ್ನು ತೆರವು ಮಾಡಿಸಿ, ನಿವೇಶನದ ಇಲ್ಲದ ಬಡಜನರಿಗೆ ಗೋಮಾಳದಲ್ಲಿ ಖಾಲಿ ನಿವೇಶನ ನೀಡಬೇಕು ಎಂದು ಗ್ರಾಮಸ್ಥರಾದ ರಂಗಸ್ವಾಮಿ, ರಮೇಶ್, ಕೆಂಚಮ್ಮ, ಕಮಲಮ್ಮ,ಹರೀಶ್ ಸೇರಿದಂತೆ ಮುಂತಾದವರು ಒತ್ತಾಯ ಮಾಡಿದ್ದಾರೆ.
ಗಂಜಿಗುಂಟೆ ಗ್ರಾಮದ ಪಕ್ಕದಲ್ಲಿ ಸುಮಾರು ಐದು ಎಕರೆ ಸರ್ಕಾರಿ ಗೋಮಾಳವಿದೆ, ಈ ಜಾಗದಲ್ಲಿ 20 ಕ್ಕೂ ಹೆಚ್ಚು ಫಲಾನುಭವಿಗಳಿಗೆ ಸರ್ಕಾರ ಖಾಲಿ‌ನಿವೇಶನದ ಹಕ್ಕು ಪತ್ರ ನೀಡಿತ್ತು, ಅವರು ಮನೆಗಳು ಕಟ್ಟಿಕೊಂಡಿದ್ದಾರೆ, ಅದಕ್ಕೆ ನಮ್ಮದು ಯಾವುದೇ ಅಡ್ಡಿಯಿಲ್ಲದೆ, ಆದರೆ ಗ್ರಾಮದಲ್ಲಿ ಎರಡೆರಡು ಮನೆಯಿದ್ದರು, ಗೋಮಾಳವನ್ನು ಅಕ್ರಮಿಸಿಕೊಂಡರೆ ನಿವೇಶನವಿಲ್ಲದವರು ಎಲ್ಲಿಗೆ ಹೋಗಬೇಕು, ಜಾನುವಾರುಗಳು ಮೇಯಲು, ಮಕ್ಕಳು ಆಟವಾಡಲು ಜಾಗವಿಲ್ಲದಂತೆ ಪ್ರಭಾವಿಗಳು ಸರ್ಕಾರಿ ಗೋಮಾಳದಲ್ಲಿ ಗುಡಿಸಲು, ಕುರಿದೊಡ್ಡಿ, ಮೇವಿನ ಬಣಿವೆಗಳು ಹಾಕಿಕೊಂಡು ಒಬ್ಬರು ಒಂದು-ಒಂದು ಎಕರೆ ಅಕ್ರಮಿಸಿಕೊಂಡಿದ್ದಾರೆ. ಇದರಿಂದ ಮುಂದಿನ ದಿನಗಳಲ್ಲಿ ಸರ್ಕಾರಿ ಜಾಗವಿಲ್ಲದೆ ಸಾರ್ವಜನಿಕ ಕಾರ್ಯಕ್ರಮಗಳಿಗೆ ತುಂಬ ತೊಂದರೆಯಾಗುತ್ತದೆ. ಆದ್ದರಿಂದ ಗೋಮಾಳ ಒತ್ತುವರಿ ತೆರವು ಮಾಡಿಸಬೇಕು ಎಂದು ಗ್ರಾಮಸ್ಥರು ಒತ್ತಾಯ ಮಾಡಿದ್ದಾರೆ.

Latest News >>

ಡಿ.ಸಿ.ಸಿ. ಬ್ಯಾಂಕ್ ನಿರ್ದೇಶಕರಾಗಿ ಓ.ಮಂಜುನಾಥ್ ಮಾಳಿಗೆ ಅವರು ಅವಿರೋಧ ಆಯ್ಕೆಯಾಗಿದ್ದಾರೆ.

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತ, ಚಿತ್ರದುರ್ಗ ಇದರ ಆಡಳಿತ ಮಂಡಳಿ ನಿರ್ದೇಶಕರ ಸ್ಥಾನಕ್ಕೆ ಹಿರಿಯೂರು...

ಚಿತ್ರದುರ್ಗದಲ್ಲಿ ನಡೆಯಲಿರುವ ಪತ್ರಿಕಾ ವಿತರಕರ ಹಂಚಿಕೆದಾರರ 4ನೇರಾಜ್ಯಸಮ್ಮೇಳನ ಕಾರ್ಯಕ್ರಮ ಯಶಸ್ವಿಯಾಗಲಿ : ಆಲೂರು ಹನುಮಂತರಾಯಪ್ಪ

ಹಿರಿಯೂರು: ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ ಹಾಗೂ ಚಿತ್ರದುರ್ಗ ಜಿಲ್ಲಾ ಪತ್ರಿಕೆ ಹಂಚಿಕೆದಾರರ ಹಾಗೂ ವಿತರಕರ ಸಂಘ (ರಿ) ಇವರುಗಳ...

ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ ಅನುಷ್ಟಾನ ಮೌಲ್ಯಮಾಪನ ಸಭೆಜಿಲ್ಲಾ ಮೇಲ್ವಿಚಾರಣಾ ಸಮಿತಿಯಿಂದ ಕ್ರಿಯಾಯೋಜನೆ ಅನುಮೋದನೆ ಕ್ರಮಕ್ಕೆ ಶಿಫಾರಸ್ಸು

ಚಿತ್ರದುರ್ಗ ಸೆ.06: ಪರಿಶಿಷ್ಟ ಜಾತಿ ಹಾಗೂ ಗಿರಿಜನ ಉಪಯೋಜನೆಯಡಿ (ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ) ಜಿಲ್ಲೆಯಲ್ಲಿ ಕೈಗೊಳ್ಳುವ ಎಲ್ಲಾ...

ಪೋಷಣ್ ಮಾಸಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ.ಡಿ.ಎಂ.ಅಭಿನವ್ ಪೌಷ್ಠಿಕಾಂಶಯುಕ್ತ ಆಹಾರ ಪದಾರ್ಥ ಸೇವಿಸುವುದು ಅಭ್ಯಾಸಿಸಿ

ಚಿತ್ರದುರ್ಗ ಸೆ.6: ಪೋಷಣ್ ಮಾಸಾಚರಣೆ ಕಾರ್ಯಕ್ರಮ ಮಕ್ಕಳ ಹಾಗೂ ಗರ್ಭಿಣಿಯರ, ಬಾಣಂತಿಯರ ಆರೋಗ್ಯ ಪೋಷಣ ಮಾಸಾಚರಣೆ ಆಗಬೇಕು. ಮಕ್ಕಳಲ್ಲಿ...

ಎಚ್‌ಐವಿ/ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆ

ಚಿತ್ರದುರ್ಗ ಸೆ.6: ಯುವ ಜನೋತ್ಸವ ಅಂಗವಾಗಿ ಎಚ್‌ಐವಿ/ ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆಯು ಚಿತ್ರದುರ್ಗ ನಗರದಲ್ಲಿ ಗುರುವಾರ...

ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಕಾಮಗಾರಿ ಪರಿಶೀಲನೆ

ಚಿತ್ರದುರ್ಗ ಸೆ.06: ನಬಾರ್ಡ್ ಸಂಸ್ಥೆಯ ಡಿಜಿಎಂ ಸಂಜೀವ್ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಈಚೆಗೆ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ವಾಣಿವಿಲಾಸ...

ಮೊಳಕಾಲ್ಮುರು : ಫಲಾನುಭವಿಗಳ ಮನೆ ಬಾಗಿಲಿಗೆ ಹೋಗಿ ಸಮಸ್ಯೆ ಆಲಿಸಿ ಶಾಸಕ ಎನ್ ವೈ ಗೋಪಾಲಕೃಷ್ಣ.

ಮೊಳಕಾಲ್ಮೂರು :-ಪಟ್ಟಣದ ತಾಲೂಕು ಪಂಚಾಯಿತಿಯಲ್ಲಿ ಗ್ಯಾರೆಂಟಿ ಅನುಷ್ಠಾನ ಸಮಿತಿ ನೂತನ ಕಾರ್ಯಾಲಯವನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ಎನ್ ವೈ....

ಬೆಂಬಲಬೆಲೆಯಲ್ಲಿ ಸೂರ್ಯಕಾಂತಿ ಖರೀದಿ ಕೇಂದ್ರಗಳ ಸ್ಥಾಪನೆ

ಚಿತ್ರದುರ್ಗ ಸೆ.04: 2024-25ನೇ ಸಾಲಿಗೆ ಕೇಂದ್ರ ಸರ್ಕಾರದ ಬೆಂಬಲಬೆಲೆ ಯೋಜನೆಯಡಿ ನಿಗದಿಪಡಿಸಿರುವ ರೂ.7,280/- (ಪ್ರತಿ ಕ್ವಿಂಟಾಲ್‌ಗೆ)...

ಮಹಾತ್ಮ ಗಾಂಧೀ ಸೇವಾ ಪ್ರಶಸ್ತಿ – ಕರ್ನಾಟಕ’ ಆಯ್ಕೆಗೆ ನಾಮನಿರ್ದೇಶನ ಆಹ್ವಾನ

ಚಿತ್ರದುರ್ಗ ಸೆ.04: ರಾಜ್ಯ ಸರ್ಕಾರವು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಸ್ಥಾಪಿಸಿರುವ ಐದು ಲಕ್ಷ ರೂಪಾಯಿ ನಗದನ್ನು ಒಳಗೊಂಡ...

ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್ 110 ಸಿಸಿ ಯ ಆಕರ್ಷಕ ಸ್ಕೂಟಿ ಮಾರುಕಟ್ಟೆಗೆ ಬಿಡುಗಡೆ.

ಚಿತ್ರದುರ್ಗ: ಚಿತ್ರದುರ್ಗ ನಗರದ ತುರುವನೂರು ರಸ್ತೆಯಲ್ಲಿನ ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page