ಕರ್ನಾಟಕ ರಾಜ್ಯಸಭಾ ಚುನಾವಣೆಯ ಫಲಿತಾಂಶ ಹೊರಬಿದ್ದಿದ್ದು ಕಾಂಗ್ರೆಸ್‌ ತನ್ನ ಪಾಲಿನ ಮೂರು ಸೀಟನ್ನು ಗೆದ್ದುಕೊಂಡಿದೆ. ಇನ್ನು ಬಿಜೆಪಿ ನಿರೀಕ್ಷೆಯಂತೆ 1 ಸ್ಥಾನವನ್ನು ಪಡೆದುಕೊಂಡಿದೆ.

by | 27/02/24 | ಕರ್ನಾಟಕ

.
ಬೆಂಗಳೂರು, ಫೆ 27 ತೀವ್ರ ಕುತೂಹಲಕ್ಕೆ ಕಾರಣವಾಗಿದ್ದ ಕರ್ನಾಟಕ ರಾಜ್ಯಸಭಾ ಚುನಾವಣೆಯ ಫಲಿತಾಂಶ ಹೊರಬಿದ್ದಿದ್ದು ಕಾಂಗ್ರೆಸ್‌ ತನ್ನ ಪಾಲಿನ ಮೂರು ಸೀಟನ್ನು ಗೆದ್ದುಕೊಂಡಿದೆ. ಇನ್ನು ಬಿಜೆಪಿ ನಿರೀಕ್ಷೆಯಂತೆ 1 ಸ್ಥಾನವನ್ನು ಪಡೆದುಕೊಂಡಿದೆ. ಆದರೆ, ಮೈತ್ರಿ ಅಭ್ಯರ್ಥಿ ಕುಪೇಂದ್ರ ರೆಡ್ಡಿ ಸೋಲು ಕಂಡಿದ್ದಾರೆ. ಈ ಮೂಲಕ ಕುಮಾರಸ್ವಾಮಿ, ಬಿಜೆಪಿ ನಾಯಕರ ಲೆಕ್ಕಾಚಾರ ತಲೆಕೆಳಗಾಗಿದೆ. ಇದರೊಂದಿಗೆ ಲೋಕಸಭಾ ಚುನಾವಣೆಗೂ ಮುನ್ನವೇ ಮೈತ್ರಿಗೆ ಮತ್ತೊಂದು ಸೋಲಾದಂತಾಗಿದೆ.

ಚಲಾವಣೆಗೊಂಡ ಎಲ್ಲಾ ಅಂದರೆ 222 ಮತಗಳು ಸಹ ಸಿಂಧುವಾಗಿದ್ದು, ಕಾಂಗ್ರೆಸ್​ನ ಅಜಯ್ ಮಾಕೇನ್ -47, ನಾಸೀರ್ ಹುಸೇನ್ – 47, ಜಿ.ಸಿ. ಚಂದ್ರಶೇಖರ – 45 ಮತಗಳೊಂದಿಗೆ ಗೆಲುವು ಸಾಧಿಸಿದರೆ, ಬಿಜೆಪಿಯ ನಾರಾಯಣಸಾ ಭಾಂಡಗೆ 47 ಮತಗಳನ್ನ ಪಡೆದುಕೊಳ್ಳುವ ಮೂಲಕ ಗೆಲುವಿನ ನಗೆ ಬೀರಿದ್ದಾರೆ. ಇನ್ನು ಐದನೇ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಕುಪೇಂದ್ರ ರೆಡ್ಡಿ ಅವರಿಗೆ 36 ಮತಗಳು ಬಿದ್ದಿವೆ. ಮೈತ್ರಿ ಅಭ್ಯರ್ಥಿ ಕುಪೇಂದ್ರ ರೆಡ್ಡಿ ಅವರಿಗೆ ಜೆಡಿಎಸ್​​ನ 19 ಮತಗಳು ಬಿದ್ದಿದ್ದರೆ, ಮಿತ್ರ ಪಕ್ಷ ಬಿಜೆಪಿಯಿಂದ 16 ಮತಗಳು ಮಾತ್ರ ಬಿದ್ದಿವೆ. ಈ ಮೂಲಕ ಕುಪೇಂದ್ರ ರೆಡ್ಡಿ ಸೋಲನುಭವಿಸಿದ್ದಾರೆ.

ಆಡಳಿತರೂಢ ಕಾಂಗ್ರೆಸ್​​ಗೆ ಅಡ್ಡಮತದಾನ ಭೀತಿ ಶುರುವಾಗಿತ್ತು. ಇದರಿಂದ ಎಚ್ಚೆತ್ತ ಸಿದ್ದರಾಂಯ್ಯ ಡಿ.ಕೆ ಶಿವಕುಮಾರ್​, ರಣತಂತ್ರಗಳನ್ನು ಹೆಣೆದು ತಮ್ಮ ಶಾಸಕರ ಜೊತೆ ಜೊತೆಗೆ ಬಿಜೆಪಿ ಹಾಗೂ ಪಕ್ಷೇತರ ಶಾಸಕರ ಮತಗಳನ್ನು ಸೆಳೆಯುವಲ್ಲಿ ಯಶಸ್ವಿಯಾಗಿದ್ದಾರೆ.

ಕೆಆರ್​ಪಿಪಿ ಶಾಸಕ ಗಾಲಿ ಜನಾರ್ದನ ರೆಡ್ಡಿ, ದರ್ಶನ್‌ ಪುಟ್ಟಣ್ಣಯ್ಯ, ಪುಟ್ಟ ಸಿದ್ದೇಗೌಡ, ಲತಾ ಮಲ್ಲಿಕಾರ್ಜುನ ಅವರು ಕಾಂಗ್ರೆಸ್‌ ಅನ್ನು ಬೆಂಬಲಿಸಿದ್ದು, ಕಾಂಗ್ರೆಸ್‌ ಅಭ್ಯರ್ಥಿಗಳ ಪರ ಮತ ಚಲಾಯಿಸಿದ್ದಾರೆ. ಅಲ್ಲದೆ, ಕಾಂಗ್ರೆಸ್‌ನ ಯಾವೊಬ್ಬ ಶಾಸಕರೂ ಅಡ್ಡ ಮತದಾನ ಮಾಡದೇ ಇದ್ದಿದ್ದರಿಂದ ನಿರಾಯಾಸವಾಗಿ ಗೆಲುವನ್ನು ಪಡೆದುಕೊಂಡಿದೆ. ಬಿಜೆಪಿಯ ಸೋಮಶೇಖರ್ ಅಡ್ಡಮತದಾನ ಮಾಡಿದರೆ. ಬಿಜೆಪಿಯ ಶಾಸಕ ಶಿವರಾಮ್​ ಹೆಬ್ಬಾರ್ ಮತದಾನದಿಂದ ಹಿಂದೆ ಸರಿದು ಗೈರಾಗಿದ್ದಾರೆ.

ಒಟ್ಟು 223 ಮತಗಳ ಪೈಕಿ 222 ಶಾಸಕಕರು ತಮ್ಮ ಮತದಾನ ಮಾಡಿದ್ದರು. ಯಲ್ಲಾಪುರ ಬಿಜೆಪಿ ಶಾಸಕ ಶಿವರಾಮ್ ಹೆಬ್ಬಾರ್​ ಮತದಾನಕ್ಕೆ ಗೈರಾಗಿದ್ದರು. ಈ ಹಿನ್ನೆಲೆಯಲ್ಲಿ ಶೇ.99.5ರಷ್ಟು ಮತದಾನವಾಗಿತ್ತು. ಕಾಂಗ್ರೆಸ್‌ ಪಕ್ಷದ 135 ಶಾಸಕರು, ಮೂವರು ಪಕ್ಷೇತರ ಶಾಸಕರು, ಬಿಜೆಪಿಯ 65 ಶಾಸಕರು, ಜೆಡಿಎಸ್‌ನ 19 ಶಾಸಕ ಸಹ ಮತದಾನ ಮಾಡಿದ್ದರು. ಈ ಪೈಕಿ ಸೋಮಶೇಖರ್ ಅವರು ಕಾಂಗ್ರೆಸ್​ನ ಮೊದಲ ಅಭ್ಯರ್ಥಿ ಅಜಯ್ ಮಕೇನ್​ಗೆ ಮತ ಹಾಕಿದ್ದಾರೆ.

Latest News >>

ಡಿ.ಸಿ.ಸಿ. ಬ್ಯಾಂಕ್ ನಿರ್ದೇಶಕರಾಗಿ ಓ.ಮಂಜುನಾಥ್ ಮಾಳಿಗೆ ಅವರು ಅವಿರೋಧ ಆಯ್ಕೆಯಾಗಿದ್ದಾರೆ.

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತ, ಚಿತ್ರದುರ್ಗ ಇದರ ಆಡಳಿತ ಮಂಡಳಿ ನಿರ್ದೇಶಕರ ಸ್ಥಾನಕ್ಕೆ ಹಿರಿಯೂರು...

ಚಿತ್ರದುರ್ಗದಲ್ಲಿ ನಡೆಯಲಿರುವ ಪತ್ರಿಕಾ ವಿತರಕರ ಹಂಚಿಕೆದಾರರ 4ನೇರಾಜ್ಯಸಮ್ಮೇಳನ ಕಾರ್ಯಕ್ರಮ ಯಶಸ್ವಿಯಾಗಲಿ : ಆಲೂರು ಹನುಮಂತರಾಯಪ್ಪ

ಹಿರಿಯೂರು: ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ ಹಾಗೂ ಚಿತ್ರದುರ್ಗ ಜಿಲ್ಲಾ ಪತ್ರಿಕೆ ಹಂಚಿಕೆದಾರರ ಹಾಗೂ ವಿತರಕರ ಸಂಘ (ರಿ) ಇವರುಗಳ...

ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ ಅನುಷ್ಟಾನ ಮೌಲ್ಯಮಾಪನ ಸಭೆಜಿಲ್ಲಾ ಮೇಲ್ವಿಚಾರಣಾ ಸಮಿತಿಯಿಂದ ಕ್ರಿಯಾಯೋಜನೆ ಅನುಮೋದನೆ ಕ್ರಮಕ್ಕೆ ಶಿಫಾರಸ್ಸು

ಚಿತ್ರದುರ್ಗ ಸೆ.06: ಪರಿಶಿಷ್ಟ ಜಾತಿ ಹಾಗೂ ಗಿರಿಜನ ಉಪಯೋಜನೆಯಡಿ (ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ) ಜಿಲ್ಲೆಯಲ್ಲಿ ಕೈಗೊಳ್ಳುವ ಎಲ್ಲಾ...

ಪೋಷಣ್ ಮಾಸಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ.ಡಿ.ಎಂ.ಅಭಿನವ್ ಪೌಷ್ಠಿಕಾಂಶಯುಕ್ತ ಆಹಾರ ಪದಾರ್ಥ ಸೇವಿಸುವುದು ಅಭ್ಯಾಸಿಸಿ

ಚಿತ್ರದುರ್ಗ ಸೆ.6: ಪೋಷಣ್ ಮಾಸಾಚರಣೆ ಕಾರ್ಯಕ್ರಮ ಮಕ್ಕಳ ಹಾಗೂ ಗರ್ಭಿಣಿಯರ, ಬಾಣಂತಿಯರ ಆರೋಗ್ಯ ಪೋಷಣ ಮಾಸಾಚರಣೆ ಆಗಬೇಕು. ಮಕ್ಕಳಲ್ಲಿ...

ಎಚ್‌ಐವಿ/ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆ

ಚಿತ್ರದುರ್ಗ ಸೆ.6: ಯುವ ಜನೋತ್ಸವ ಅಂಗವಾಗಿ ಎಚ್‌ಐವಿ/ ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆಯು ಚಿತ್ರದುರ್ಗ ನಗರದಲ್ಲಿ ಗುರುವಾರ...

ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಕಾಮಗಾರಿ ಪರಿಶೀಲನೆ

ಚಿತ್ರದುರ್ಗ ಸೆ.06: ನಬಾರ್ಡ್ ಸಂಸ್ಥೆಯ ಡಿಜಿಎಂ ಸಂಜೀವ್ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಈಚೆಗೆ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ವಾಣಿವಿಲಾಸ...

ಮೊಳಕಾಲ್ಮುರು : ಫಲಾನುಭವಿಗಳ ಮನೆ ಬಾಗಿಲಿಗೆ ಹೋಗಿ ಸಮಸ್ಯೆ ಆಲಿಸಿ ಶಾಸಕ ಎನ್ ವೈ ಗೋಪಾಲಕೃಷ್ಣ.

ಮೊಳಕಾಲ್ಮೂರು :-ಪಟ್ಟಣದ ತಾಲೂಕು ಪಂಚಾಯಿತಿಯಲ್ಲಿ ಗ್ಯಾರೆಂಟಿ ಅನುಷ್ಠಾನ ಸಮಿತಿ ನೂತನ ಕಾರ್ಯಾಲಯವನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ಎನ್ ವೈ....

ಬೆಂಬಲಬೆಲೆಯಲ್ಲಿ ಸೂರ್ಯಕಾಂತಿ ಖರೀದಿ ಕೇಂದ್ರಗಳ ಸ್ಥಾಪನೆ

ಚಿತ್ರದುರ್ಗ ಸೆ.04: 2024-25ನೇ ಸಾಲಿಗೆ ಕೇಂದ್ರ ಸರ್ಕಾರದ ಬೆಂಬಲಬೆಲೆ ಯೋಜನೆಯಡಿ ನಿಗದಿಪಡಿಸಿರುವ ರೂ.7,280/- (ಪ್ರತಿ ಕ್ವಿಂಟಾಲ್‌ಗೆ)...

ಮಹಾತ್ಮ ಗಾಂಧೀ ಸೇವಾ ಪ್ರಶಸ್ತಿ – ಕರ್ನಾಟಕ’ ಆಯ್ಕೆಗೆ ನಾಮನಿರ್ದೇಶನ ಆಹ್ವಾನ

ಚಿತ್ರದುರ್ಗ ಸೆ.04: ರಾಜ್ಯ ಸರ್ಕಾರವು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಸ್ಥಾಪಿಸಿರುವ ಐದು ಲಕ್ಷ ರೂಪಾಯಿ ನಗದನ್ನು ಒಳಗೊಂಡ...

ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್ 110 ಸಿಸಿ ಯ ಆಕರ್ಷಕ ಸ್ಕೂಟಿ ಮಾರುಕಟ್ಟೆಗೆ ಬಿಡುಗಡೆ.

ಚಿತ್ರದುರ್ಗ: ಚಿತ್ರದುರ್ಗ ನಗರದ ತುರುವನೂರು ರಸ್ತೆಯಲ್ಲಿನ ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page