ಕಳ್ಳತನ ಮಾಡುತ್ತಿದ್ದ ಆರೋಪಿಯ ಬಂಧನ, ನಗದು ಮತ್ತು ಬೈಕ್ ವಶ

by | 13/03/23 | ಕ್ರೈಂ, ಸುದ್ದಿ

ಚಳ್ಳಕೆರೆ ಮಾ13
ಚಳ್ಳಕೆರೆ ಪೊಲೀಸರಿಂದ ಕಳ್ಳತನ ಮಾಡುತ್ತಿದ್ದ ಆರೋಪಿಯ ಬಂಧನ, ನಗದು ಮತ್ತು ಬೈಕ್ ವಶ

ಚಳ್ಳಕೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ದಿನಾಂಕ.೧೦.೦೩.೨೦೨೩ ರಂದು ಮನೆ ಮುಂದೆ
ನಿಲ್ಲಿಸಿದ್ದ ಬೈಕನ್ನು ಯಾರೋ ಕಳ್ಳರು ಕಳ್ಳತನ ಮಾಡಿಕೊಂಡು ಹೋಗಿರುವ ಬಗ್ಗೆ ಚಳ್ಳಕೆರೆ ಪೊಲೀಸ್
ಠಾಣೆ ಮೊ.ನಂ.೮೪/೨೦೨೩ ಕಲಂ.೩೭೯ ಐ.ಪಿ.ಸಿ. ಪ್ರಕರಣ ದಾಖಲಾಗಿರುತ್ತದೆ. ದಿನಾಂಕ.೧೧.೦೩.೨೦೨೩
ರಂದು ನಗರದ ಸಂಗೀತ ಮೊಬೈಲ್ ಶಾಪ್‌ನ ಬೀಗ ಮುರಿದು ಕಳ್ಳತನಕ್ಕೆ ಪ್ರಯತ್ನಪಟ್ಟಿರುವ ಬಗ್ಗೆ
ಮೊ.ನಂ.೮೬/೨೦೨೩ ಕಲಂ.೩೮೦,೫೧೧ ಐ.ಪಿ.ಸಿ. ಮತ್ತು ವಿನಾಯಕ ಕಾಂಡಿಮೆAಟ್ಸ್ ಅಂಗಡಿಯ ಬೀಗವನ್ನು
ಮುರಿದು ಅಂಗಡಿಯಲ್ಲಿ ಇಟ್ಟಿದ್ದ ೨೦ ಸಾವಿರ ಹಣವನ್ನು ಕಳ್ಳತನವಾಗಿರುವ ಬಗ್ಗೆ ಮೊ.ನಂ.೮೭/೨೦೨೩
ಕಲಂ.೪೫೭,೩೮೦ ಐ.ಪಿ.ಸಿ. ರೀತ್ಯ ಪ್ರಕರಣಗಳು ದಾಖಲಾಗಿರುತ್ತವೆ.
ಸದರಿ ಪ್ರಕರಣಗಳಲ್ಲಿ ಆರೋಪಿ ಮತ್ತು ಮಾಲನ್ನು ಪತ್ತೆ ಮಾಡಲು ಚಳ್ಳಕೆರೆ ಪೊಲೀಸ್
ಉಪಾಧೀಕ್ಷಕರಾದ ಶ್ರೀ ರಮೇಶ್ ಕುಮಾರ್ ರವರ ನಿರ್ದೇಶನದಲ್ಲಿ ಪೊಲೀಸ್ ನಿರೀಕ್ಷಕರಾದ
ಆರ್.ಎಫ್ ದೇಸಾಯಿ, ಪಿ.ಎಸ್.ಐ ಸತೀಶ್ ನಾಯ್ಕ ಹಾಗೂ ಸಿಬ್ಬಂದಿಗಳಾದ ಹಾಲೇಶ್, ಸತೀಶ್,
ಶ್ರೀಧರ್, ವಸಂತ್ ರವರನ್ನು ಒಳಗೊಂಡ ತಂಡವು ಮಾಹಿತಿಯನ್ನು ಸಂಗ್ರಹಿಸಿ ದಿನಾಂಕ:೧೨.೦೩.೨೦೨೩
ರಂದು ಎಂ.ಓ.ಬಿ ಆಸಾಮಿಯಾದ ನವೀನ ತಂದೆ ಲೇಟ್ ವಿಶ್ವನಾಥ, ಕೂಲಿ ಕೆಲಸ ಚಳ್ಳಕೆರೆ ಟೌನ್
ಈತನನ್ನು ಹಿಡಿದು ವಶಕ್ಕೆ ಪಡೆದುಕೊಂಡು ವಿಚಾರಣೆ ಮಾಡಲಾಗಿ ಸದರಿ ಆಸಾಮಿಯು
ದಿನಾಂಕ:೦೫.೦೩.೨೦೨೩ ರಂದು ರಾತ್ರಿ ಚಳ್ಳಕೆರೆ ನಗರದ ಪಾವಗಡ ರಸ್ತೆ, ೫ನೇ ಕ್ರಾಸ್, ಹಳೇ ಟೌನ್ ನ
ಒಂದು ಮನೆ ಮುಂಭಾಗದಲ್ಲಿ ನಿಲ್ಲಿಸಿದ್ದ ನಂ.ಕೆ.ಎ.೩೫-ವಿ-೭೦೨೩ ನೇ ಪ್ಯಾಷನ್ ಪ್ರೋ ಬೈಕನ್ನು,
ದಿನಾಂಕ:೦೭.೦೩.೨೦೨೩ ರಂದು ರಾತ್ರಿ ಚಳ್ಳಕೆರೆ ಟೌನ್ ಸಂಗೀತ ಮೊಬೈಲ್ ಶಾಪ್ ನಲ್ಲಿ ಕಳ್ಳತನಕ್ಕೆ
ಪ್ರಯತ್ನ ಹಾಗೂ ಚಳ್ಳಕೆರೆ ಟೌನ್ ಬಳ್ಳಾರಿ ರಸ್ತೆಯಲ್ಲಿ ವಿನಾಯಕ ಕಾಂಡಿಮೆAಟ್ಸ್ ಅಂಗಡಿಯ ಬಾಗಿಲು
ಮುರಿದು ಒಳಗೆ ಹೋಗಿ ಅಂಗಡಿ ಡ್ರಾನಲ್ಲಿ ಇದ್ದ ೨೦,೦೦೦/- ರೂ ನಗದು ಹಣವನ್ನು ಕಳ್ಳತನ
ಮಾಡಿರುತ್ತೇನೆ ಎಂದು ಒಪ್ಪಿಕೊಂಡಿದ್ದು, ಆರೋಪಿತನಿಂದ ಕಳ್ಳತನ ಮಾಡಿದ ನಂ.ಕೆ.ಎ.೩೫-ವಿ-೭೦೨೩
ನೇ ಪ್ಯಾಷನ್ ಪ್ರೋ ಬೈಕ್ ಹಾಗೂ ೨೦,೦೦೦/- ರೂ ನಗದು ಹಣವನ್ನು ವಶಕ್ಕೆ ಪಡೆದು
ಆರೋಪಿಯನ್ನು ದಸ್ತಗಿರಿ ಮಾಡಿ ನ್ಯಾಯಾಂಗ ಬಂಧನಕ್ಕಾಗಿ ಒಪ್ಪಿಸಲಾಗಿರುತ್ತದೆ.
ಸದರಿ ಪತ್ತೆ ಕಾರ್ಯವನ್ನು ಮಾನ್ಯ ಪೊಲೀಸ್ ಅಧೀಕ್ಷಕರು, ಚಿತ್ರದುರ್ಗ ಜಿಲ್ಲೆ ರವರು
ಶ್ಲಾಘಿಸಿರುತ್ತಾರೆ.

Latest News >>

ಡಿ.ಸಿ.ಸಿ. ಬ್ಯಾಂಕ್ ನಿರ್ದೇಶಕರಾಗಿ ಓ.ಮಂಜುನಾಥ್ ಮಾಳಿಗೆ ಅವರು ಅವಿರೋಧ ಆಯ್ಕೆಯಾಗಿದ್ದಾರೆ.

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತ, ಚಿತ್ರದುರ್ಗ ಇದರ ಆಡಳಿತ ಮಂಡಳಿ ನಿರ್ದೇಶಕರ ಸ್ಥಾನಕ್ಕೆ ಹಿರಿಯೂರು...

ಚಿತ್ರದುರ್ಗದಲ್ಲಿ ನಡೆಯಲಿರುವ ಪತ್ರಿಕಾ ವಿತರಕರ ಹಂಚಿಕೆದಾರರ 4ನೇರಾಜ್ಯಸಮ್ಮೇಳನ ಕಾರ್ಯಕ್ರಮ ಯಶಸ್ವಿಯಾಗಲಿ : ಆಲೂರು ಹನುಮಂತರಾಯಪ್ಪ

ಹಿರಿಯೂರು: ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ ಹಾಗೂ ಚಿತ್ರದುರ್ಗ ಜಿಲ್ಲಾ ಪತ್ರಿಕೆ ಹಂಚಿಕೆದಾರರ ಹಾಗೂ ವಿತರಕರ ಸಂಘ (ರಿ) ಇವರುಗಳ...

ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ ಅನುಷ್ಟಾನ ಮೌಲ್ಯಮಾಪನ ಸಭೆಜಿಲ್ಲಾ ಮೇಲ್ವಿಚಾರಣಾ ಸಮಿತಿಯಿಂದ ಕ್ರಿಯಾಯೋಜನೆ ಅನುಮೋದನೆ ಕ್ರಮಕ್ಕೆ ಶಿಫಾರಸ್ಸು

ಚಿತ್ರದುರ್ಗ ಸೆ.06: ಪರಿಶಿಷ್ಟ ಜಾತಿ ಹಾಗೂ ಗಿರಿಜನ ಉಪಯೋಜನೆಯಡಿ (ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ) ಜಿಲ್ಲೆಯಲ್ಲಿ ಕೈಗೊಳ್ಳುವ ಎಲ್ಲಾ...

ಪೋಷಣ್ ಮಾಸಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ.ಡಿ.ಎಂ.ಅಭಿನವ್ ಪೌಷ್ಠಿಕಾಂಶಯುಕ್ತ ಆಹಾರ ಪದಾರ್ಥ ಸೇವಿಸುವುದು ಅಭ್ಯಾಸಿಸಿ

ಚಿತ್ರದುರ್ಗ ಸೆ.6: ಪೋಷಣ್ ಮಾಸಾಚರಣೆ ಕಾರ್ಯಕ್ರಮ ಮಕ್ಕಳ ಹಾಗೂ ಗರ್ಭಿಣಿಯರ, ಬಾಣಂತಿಯರ ಆರೋಗ್ಯ ಪೋಷಣ ಮಾಸಾಚರಣೆ ಆಗಬೇಕು. ಮಕ್ಕಳಲ್ಲಿ...

ಎಚ್‌ಐವಿ/ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆ

ಚಿತ್ರದುರ್ಗ ಸೆ.6: ಯುವ ಜನೋತ್ಸವ ಅಂಗವಾಗಿ ಎಚ್‌ಐವಿ/ ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆಯು ಚಿತ್ರದುರ್ಗ ನಗರದಲ್ಲಿ ಗುರುವಾರ...

ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಕಾಮಗಾರಿ ಪರಿಶೀಲನೆ

ಚಿತ್ರದುರ್ಗ ಸೆ.06: ನಬಾರ್ಡ್ ಸಂಸ್ಥೆಯ ಡಿಜಿಎಂ ಸಂಜೀವ್ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಈಚೆಗೆ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ವಾಣಿವಿಲಾಸ...

ಮೊಳಕಾಲ್ಮುರು : ಫಲಾನುಭವಿಗಳ ಮನೆ ಬಾಗಿಲಿಗೆ ಹೋಗಿ ಸಮಸ್ಯೆ ಆಲಿಸಿ ಶಾಸಕ ಎನ್ ವೈ ಗೋಪಾಲಕೃಷ್ಣ.

ಮೊಳಕಾಲ್ಮೂರು :-ಪಟ್ಟಣದ ತಾಲೂಕು ಪಂಚಾಯಿತಿಯಲ್ಲಿ ಗ್ಯಾರೆಂಟಿ ಅನುಷ್ಠಾನ ಸಮಿತಿ ನೂತನ ಕಾರ್ಯಾಲಯವನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ಎನ್ ವೈ....

ಬೆಂಬಲಬೆಲೆಯಲ್ಲಿ ಸೂರ್ಯಕಾಂತಿ ಖರೀದಿ ಕೇಂದ್ರಗಳ ಸ್ಥಾಪನೆ

ಚಿತ್ರದುರ್ಗ ಸೆ.04: 2024-25ನೇ ಸಾಲಿಗೆ ಕೇಂದ್ರ ಸರ್ಕಾರದ ಬೆಂಬಲಬೆಲೆ ಯೋಜನೆಯಡಿ ನಿಗದಿಪಡಿಸಿರುವ ರೂ.7,280/- (ಪ್ರತಿ ಕ್ವಿಂಟಾಲ್‌ಗೆ)...

ಮಹಾತ್ಮ ಗಾಂಧೀ ಸೇವಾ ಪ್ರಶಸ್ತಿ – ಕರ್ನಾಟಕ’ ಆಯ್ಕೆಗೆ ನಾಮನಿರ್ದೇಶನ ಆಹ್ವಾನ

ಚಿತ್ರದುರ್ಗ ಸೆ.04: ರಾಜ್ಯ ಸರ್ಕಾರವು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಸ್ಥಾಪಿಸಿರುವ ಐದು ಲಕ್ಷ ರೂಪಾಯಿ ನಗದನ್ನು ಒಳಗೊಂಡ...

ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್ 110 ಸಿಸಿ ಯ ಆಕರ್ಷಕ ಸ್ಕೂಟಿ ಮಾರುಕಟ್ಟೆಗೆ ಬಿಡುಗಡೆ.

ಚಿತ್ರದುರ್ಗ: ಚಿತ್ರದುರ್ಗ ನಗರದ ತುರುವನೂರು ರಸ್ತೆಯಲ್ಲಿನ ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page