ಚಿತ್ರದುರ್ಗ ಪೋಲಿಸರಿಂದ ಅಂತರ ಜಿಲ್ಲಾ ಸುಲಿಗೆಕೋರರನ್ನು ಬಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.

by | 09/12/23 | ಕ್ರೈಂ


ಚಿತ್ರದುರ್ಗ. ಡಿ.9. ವಿವಿದೆಡೆ ಸರಗಳ್ಳತನ ಮಾಡಿತ್ತಿದ್ದ ಕಳ್ಳರನ್ನು ಚಿತ್ರದುರ್ಗ ಪೋಲಿಸರು ಬಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಪೋಲಿಸರು ಗಸ್ತಿನಲ್ಲಿರುವಾಗ ಅನುಮಾನಸ್ಪದವಾಗಿ ಓಡಾಡುತ್ತಿರುವುದನ್ನು ಗಮನಿಸಿ ವಿಚಾರಣೆ ಮಾಡಿದಾಗ ಕಳ್ಳತನ ಮಾಡಿರುವ ಬಗ್ಗೆ ಬಯಲಾಗಿದ್ದು ಹಣ ಹಾಗೂ ಮಾಲು ಸಹಿತ ವಶಪಡಿಸಿಕೊಂಡಿದ್ದಾರೆ.

ಚಿತ್ರದುರ್ಗ ಜಿಲ್ಲೆ ಬಡಾವಣೆ ಪೊಲೀಸರಿಂದ ಅಂತರ್ ಜಿಲ್ಲಾ ಸುಲಿಗೆಕೋರ ಮಹಿಳೆಯರ ಬಂಧನ,
ಆರೋಪಿತರಿಂದ 2,01,500/- ರೂ ಬೆಲೆ ಬಾಳುವ ಆಭರಣಗಳು ಹಾಗೂ 50,000/- ನಗದು ವಶ
ಇತ್ತೀಚೆಗೆ ಬಡಾವಣೆ ಠಾಣಾ ವ್ಯಾಪ್ತಿಯಲ್ಲಿ ಪ್ರಯಾಣಿಕರ ಸೋಗಿನಲ್ಲಿ ಬಸ್ ನಿಲ್ದಾಣಗಳಲ್ಲಿ,
ಬಸ್ಸುಗಳನ್ನು ಹತ್ತುವ ಮತ್ತು ಇಳಿಯುವ ವೇಳೆ ಪ್ರಯಾಣಿಕರ ಗಮನ ಬೇರೆಡೆ ಸೆಳೆದು ಕಳವು ಮಾಡುವ
ಹಾಗೂ ಬಸ್ಸಗಳಲ್ಲಿ ಪ್ರಯಾಣಿಕರಂತೆ ಕುಳಿತು ಪ್ರಯಾಣಿಕರ ಬಳಿ ಇರುವ ಬೆಲೆ ಬಾಳುವ ಆಭರಣಗಳನ್ನು ಕಳವು
ಮಾಡುವ, ಬಗ್ಗೆ ಪ್ರಕರಣಗಳು ವರದಿಯಾಗುತ್ತಿದ್ದು, ಈ ಬಗ್ಗೆ ಚಿತ್ರದುರ್ಗ ಬಡಾವಣೆ ಠಾಣೆಯಲ್ಲಿ 1] ಮೊ.ನಂ:-
129/2023 ಕಲಂ-392 ಐಪಿಸಿ & 2] ಮೊ.ನಂ: 158/2023 ಕಲಂ. 379 ಐಪಿಸಿ ರಿತ್ಯಾ
ಪ್ರಕರಣಗಳು
ದಾಖಲಾಗಿರುತ್ತವೆ. ಸದರಿ ಪ್ರಕರಣಗಳ ಆರೋಪಿತರ ಪತ್ತೆ ಸಲುವಾಗಿ ಮಾನ್ಯ ಮೇಲಾಧಿಕಾರಿಗಳು ನಗರದಲ್ಲಿ
ಸಂಜೆ ಗಸ್ತು ಹೆಚ್ಚಿಸುವಂತೆ ಹಾಗೂ ಜಾತ್ರೆ, ಮೆರವಣಿಗೆ, ಹೆಚ್ಚು ಜನರು ಸೇರುವ ಕಡೆ ಮಹಿಳೆಯರ ಬಂಗಾರದ
ಸರಗಳನ್ನು ಸುಲಿಗೆ/ಕಳುವು ಮಾಡುವವರ ಬಗ್ಗೆ ನಿಗಾವಹಿಸುವಂತೆ ಸೂಚಿಸಿರುತ್ತಾರೆ.
ಅದರಂತೆ ಬಡಾವಣೆ ಪೊಲೀಸ್ ಠಾಣೆ ಅಧಿಕಾರಿ & ಸಿಬ್ಬಂದಿಗಳು ದಿನಾಂಕ:04.12.2023 ರಂದು ಸಂಜೆ
ನಗರದ ಚಳ್ಳಕೆರೆ ಗೇಟ್ ಬಳಿ ಗಸ್ತಿನಲ್ಲಿರುವಾಗ ಅನುಮಾನಸ್ಪದವಾಗಿ ನಿಂತಿದ್ದ ಮೂವರು ಮಹಿಳೆಯರ ಹೆಸರು
ವಿಳಾಸ ಕೇಳಲಾಗಿ ಅಸ್ಪಷ್ಟ ಉತ್ತರ ನೀಡಿದ್ದು, ಸದರಿಯವರನ್ನು ಹೆಚ್ಚಿನ ವಿಚಾರಣೆಗೆ ಠಾಣೆಗೆ ಕರೆದು ತಂದು
ವಿಚಾರಣೆ ಮಾಡಿದಾಗ 1] ಮಹೇಶ್ವರಿ @ ರೇಖಾವತಿ @ ರಾಧ ಗಂಡ ರಾಘವೇಂದ್ರ ಸು 26 ವರ್ಷ, ಹತ್ತರಗಿ
ಗ್ರಾಮ, ಹುಕ್ಕೇರಿ ತಾಲ್ಲೂಕು, ಬೆಳಗಾಂ ಜಿಲ್ಲೆ, 2] ಸಂಜನಾ ಗಂಡ ಮಂಜುನಾಥ ಸು 25 ವರ್ಷ, ಹತ್ತರಗಿ ಗ್ರಾಮ,
ಹುಕ್ಕೇರಿ ತಾಲ್ಲೂಕು, ಬೆಳಗಾಂ ಜಿಲ್ಲೆ, 3] ಅಕಿಲಾ ಗಂಡ ಮಂಜುನಾಥ ಸು 35 ವರ್ಷ, ಹತ್ತರಗಿ ಗ್ರಾಮ, ಹುಕ್ಕೇರಿ
ತಾಲ್ಲೂಕು, ಬೆಳಗಾಂ ಜಿಲ್ಲೆ ಎಂಬುದಾಗಿ ಹಾಗೂ ಸರಗಳ್ಳತನ ಮಾಡುವುದಾಗಿ ತಿಳಿಸಿರುತ್ತಾರೆ. ಮುಂದುವರೆದು
ಪ್ರಕರಣಗಳಲ್ಲಿ ಸರಗಳ್ಳತನ & ಒಡವೆಗಳನ್ನು ಕಳವು ಮಾಡಿರುವುದಾಗಿ ಒಪ್ಪಿಕೊಂಡಿರುತ್ತಾರೆ.
ಸದರಿ ಆರೋಪಿತರಿಂದ
1) ಬಡಾವಣೆ ಠಾಣೆ ಮೊ.ನಂ:129/2023 ಕಲಂ.392 ಐಪಿಸಿ ಪ್ರಕರಣಕ್ಕೆ ಸಂಬಂಧಿಸಿದಂತೆ 20 ಗ್ರಾಂ ತೂಕದ
ತುಂಡಾದ ಬಂಗಾರದ ಮಾಂಗಲ್ಯ ಸರ ಅಂದಾಜು ಬೆಲೆ 1,00,000
2] ಬಡಾವಣೆ ಠಾಣೆ ಮೊ.ನಂ: 158/2023 ಕಲಂ, 379 ಐಪಿಸಿ ಪ್ರಕರಣಕ್ಕೆ ಸಂಬಂಧಿಸಿದ 20 ಗ್ರಾಂ ತೂಕದ 05
ಜೊತೆ ಬಂಗಾರದ ಕಿವಿಯೋಲೆಗಳು ಅಂದಾಜು ಬೆಲೆ 1,00,000 ಒಂದು ಜತೆ ಬೆಳ್ಳಿಯ ಕಾಲು ಚೈನು ಅಂದಾಜು
ಬೆಲೆ 1500 ಮತ್ತು 50,000 ರೂ ನಗದು ಹಣವನ್ನು ಅಮಾನತು ಪಡಿಸಿಕೊಳ್ಳಲಾಗಿದೆ.
ಆರೋಪಿತರು ಬಳ್ಳಾರಿ, ದಾವಣಗೆರೆ ಮತ್ತು ಕೊಪ್ಪಳ ಜಿಲ್ಲೆಗಳ ಅಪರಾಧ ಪ್ರಕರಣಗಳಲ್ಲಿ
ಭಾಗಿಯಾಗಿರುವುದು ತನಿಖಾ ಸಮಯದಲ್ಲಿ ಕಂಡುಬಂದಿರುತ್ತದೆ.
ಸದರಿ ಪ್ರಕರಣದ ಪತ್ತೆ ಕಾರ್ಯದಲ್ಲಿ ಭಾಗವಹಿಸಿದ ಬಡಾವಣೆ ವೃತ್ತದ ವೃತ್ತ ನಿರೀಕ್ಷಕರಾದ ಶ್ರೀ.ನಯೀಂ
ಅಹಮದ್, ಪಿ.ಎಸ್.ಐ. ಶ್ರೀ.ರಘು.ಟಿ. ಮತ್ತು ಸಿಬ್ಬಂದಿಯವರಾದ ಲಕ್ಷ್ಮಣ, ಮಂಜುನಾಥ, ವೀರೇಶ ಇವರ
ಕಾರ್ಯವನ್ನು ಮಾನ್ಯ ಪೊಲೀಸ್ ಅಧೀಕ್ಷಕರು ಶ್ಲಾಘಿಸಿರುತ್ತಾರೆ.

Latest News >>

ಡಿ.ಸಿ.ಸಿ. ಬ್ಯಾಂಕ್ ನಿರ್ದೇಶಕರಾಗಿ ಓ.ಮಂಜುನಾಥ್ ಮಾಳಿಗೆ ಅವರು ಅವಿರೋಧ ಆಯ್ಕೆಯಾಗಿದ್ದಾರೆ.

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತ, ಚಿತ್ರದುರ್ಗ ಇದರ ಆಡಳಿತ ಮಂಡಳಿ ನಿರ್ದೇಶಕರ ಸ್ಥಾನಕ್ಕೆ ಹಿರಿಯೂರು...

ಚಿತ್ರದುರ್ಗದಲ್ಲಿ ನಡೆಯಲಿರುವ ಪತ್ರಿಕಾ ವಿತರಕರ ಹಂಚಿಕೆದಾರರ 4ನೇರಾಜ್ಯಸಮ್ಮೇಳನ ಕಾರ್ಯಕ್ರಮ ಯಶಸ್ವಿಯಾಗಲಿ : ಆಲೂರು ಹನುಮಂತರಾಯಪ್ಪ

ಹಿರಿಯೂರು: ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ ಹಾಗೂ ಚಿತ್ರದುರ್ಗ ಜಿಲ್ಲಾ ಪತ್ರಿಕೆ ಹಂಚಿಕೆದಾರರ ಹಾಗೂ ವಿತರಕರ ಸಂಘ (ರಿ) ಇವರುಗಳ...

ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ ಅನುಷ್ಟಾನ ಮೌಲ್ಯಮಾಪನ ಸಭೆಜಿಲ್ಲಾ ಮೇಲ್ವಿಚಾರಣಾ ಸಮಿತಿಯಿಂದ ಕ್ರಿಯಾಯೋಜನೆ ಅನುಮೋದನೆ ಕ್ರಮಕ್ಕೆ ಶಿಫಾರಸ್ಸು

ಚಿತ್ರದುರ್ಗ ಸೆ.06: ಪರಿಶಿಷ್ಟ ಜಾತಿ ಹಾಗೂ ಗಿರಿಜನ ಉಪಯೋಜನೆಯಡಿ (ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ) ಜಿಲ್ಲೆಯಲ್ಲಿ ಕೈಗೊಳ್ಳುವ ಎಲ್ಲಾ...

ಪೋಷಣ್ ಮಾಸಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ.ಡಿ.ಎಂ.ಅಭಿನವ್ ಪೌಷ್ಠಿಕಾಂಶಯುಕ್ತ ಆಹಾರ ಪದಾರ್ಥ ಸೇವಿಸುವುದು ಅಭ್ಯಾಸಿಸಿ

ಚಿತ್ರದುರ್ಗ ಸೆ.6: ಪೋಷಣ್ ಮಾಸಾಚರಣೆ ಕಾರ್ಯಕ್ರಮ ಮಕ್ಕಳ ಹಾಗೂ ಗರ್ಭಿಣಿಯರ, ಬಾಣಂತಿಯರ ಆರೋಗ್ಯ ಪೋಷಣ ಮಾಸಾಚರಣೆ ಆಗಬೇಕು. ಮಕ್ಕಳಲ್ಲಿ...

ಎಚ್‌ಐವಿ/ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆ

ಚಿತ್ರದುರ್ಗ ಸೆ.6: ಯುವ ಜನೋತ್ಸವ ಅಂಗವಾಗಿ ಎಚ್‌ಐವಿ/ ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆಯು ಚಿತ್ರದುರ್ಗ ನಗರದಲ್ಲಿ ಗುರುವಾರ...

ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಕಾಮಗಾರಿ ಪರಿಶೀಲನೆ

ಚಿತ್ರದುರ್ಗ ಸೆ.06: ನಬಾರ್ಡ್ ಸಂಸ್ಥೆಯ ಡಿಜಿಎಂ ಸಂಜೀವ್ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಈಚೆಗೆ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ವಾಣಿವಿಲಾಸ...

ಮೊಳಕಾಲ್ಮುರು : ಫಲಾನುಭವಿಗಳ ಮನೆ ಬಾಗಿಲಿಗೆ ಹೋಗಿ ಸಮಸ್ಯೆ ಆಲಿಸಿ ಶಾಸಕ ಎನ್ ವೈ ಗೋಪಾಲಕೃಷ್ಣ.

ಮೊಳಕಾಲ್ಮೂರು :-ಪಟ್ಟಣದ ತಾಲೂಕು ಪಂಚಾಯಿತಿಯಲ್ಲಿ ಗ್ಯಾರೆಂಟಿ ಅನುಷ್ಠಾನ ಸಮಿತಿ ನೂತನ ಕಾರ್ಯಾಲಯವನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ಎನ್ ವೈ....

ಬೆಂಬಲಬೆಲೆಯಲ್ಲಿ ಸೂರ್ಯಕಾಂತಿ ಖರೀದಿ ಕೇಂದ್ರಗಳ ಸ್ಥಾಪನೆ

ಚಿತ್ರದುರ್ಗ ಸೆ.04: 2024-25ನೇ ಸಾಲಿಗೆ ಕೇಂದ್ರ ಸರ್ಕಾರದ ಬೆಂಬಲಬೆಲೆ ಯೋಜನೆಯಡಿ ನಿಗದಿಪಡಿಸಿರುವ ರೂ.7,280/- (ಪ್ರತಿ ಕ್ವಿಂಟಾಲ್‌ಗೆ)...

ಮಹಾತ್ಮ ಗಾಂಧೀ ಸೇವಾ ಪ್ರಶಸ್ತಿ – ಕರ್ನಾಟಕ’ ಆಯ್ಕೆಗೆ ನಾಮನಿರ್ದೇಶನ ಆಹ್ವಾನ

ಚಿತ್ರದುರ್ಗ ಸೆ.04: ರಾಜ್ಯ ಸರ್ಕಾರವು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಸ್ಥಾಪಿಸಿರುವ ಐದು ಲಕ್ಷ ರೂಪಾಯಿ ನಗದನ್ನು ಒಳಗೊಂಡ...

ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್ 110 ಸಿಸಿ ಯ ಆಕರ್ಷಕ ಸ್ಕೂಟಿ ಮಾರುಕಟ್ಟೆಗೆ ಬಿಡುಗಡೆ.

ಚಿತ್ರದುರ್ಗ: ಚಿತ್ರದುರ್ಗ ನಗರದ ತುರುವನೂರು ರಸ್ತೆಯಲ್ಲಿನ ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page