ಚಿತ್ರದುರ್ಗಜಿಲ್ಲೆಯ ಜೀವನಾಡಿ ವಾಣಿವಿಲಾಸಸಾಗರ ಜಲಾಶಯದ ಒಳ ಹರಿವು 1850 ಕ್ಯುಸೆಕ್ ತಲುಪಿದೆ.

by | 08/06/24 | ಸುದ್ದಿ


ಹಿರಿಯೂರು:
ವೇದಾವತಿ ನದಿ ಪಾತ್ರದಲ್ಲಿ ವರುಣನ ಕೃಪೆಯಿಂದ ಚಿತ್ರದುರ್ಗ ಜಿಲ್ಲೆಯ ಜೀವನಾಡಿ ವಾಣಿವಿಲಾಸ ಸಾಗರ ಜಲಾಶಯದ ಒಳ ಹರಿವು 1850 ಕ್ಯುಸೆಕ್ ತಲುಪಿದೆ.
ಪ್ರಸಕ್ತ ವರ್ಷ ಮುಂಗಾರು ಮಳೆ ಆರಂಭದಲ್ಲೇ ಅಬ್ಬರಿಸುತ್ತಿದ್ದು, ಪ್ರಸ್ತುತ ಜಲಾಶಯದಲ್ಲಿ 114.05 ಅಡಿ ನೀರು ಸಂಗ್ರಹವಿದೆ. ಮುಂಗಾರು ಪೂರ್ವ ಮಳೆಗೆ ವೇದಾವತಿ ನದಿ ಪಾತ್ರದಲ್ಲಿ ಚೆಕ್ ಡ್ಯಾಂ ಬ್ಯಾರೇಜ್ ಗಳು ಭರ್ತಿಯಾಗಿದ್ದು, ಚಿಕ್ಕಮಗಳೂರು-ವೇದಾವತಿ ನದಿ ಪಾತ್ರದಲ್ಲಿ ಮಳೆ ಸುರಿದರೆ ಅಪಾರ ಪ್ರಮಾಣದ ಜಲರಾಶಿ ಹರಿದು ಬರಲಿದೆ.
2022ರಲ್ಲಿ ವಾಣಿವಿಲಾಸ ಸಾಗರ ಜಲಾಶಯ ಭರ್ತಿಯಾಗಿ 89 ವರ್ಷಗಳ ನಂತರ ಕೋಡಿ ಬಿದ್ದಿದ್ದು ಇತಿಹಾಸ. ಅಂದು ಜಲಾಶಯದಲ್ಲಿ 130 ಅಡಿ ನೀರು ಸಂಗ್ರಹವಾಗಿತ್ತು. 2023ರಲ್ಲಿ ಮಳೆ ಕೊರತೆಯಿಂದ ಜಲಾಶಯಕ್ಕೆ ನೀರು ಹರಿಯಲಿಲ್ಲ.
ಕಳೆದ ಎರಡು ವರ್ಷದಲ್ಲಿ ಅಚ್ಚುಕಟ್ಟು ಪ್ರದೇಶ, ವೇದಾವತಿ ನದಿ ನೀರಿಗೆ 18 ಟಿಎಂಸಿ ಅಡಿ ನೀರು ಬಳಕೆ ಮಾಡಲಾಗಿದೆ. 2023 ರಲ್ಲಿ ಜಲಸಂಕಷ್ಟ ಎದುರಾಗಿ ರಾಜ್ಯದ ವಿವಿಧ ಜಲಾಶಯಗಳು ನೀರಿನ ಮಟ್ಟ ಕುಸಿದಿತ್ತು. ಆದರೆ ಬಯಲು ಸೀಮೆಯ ಜಲಪಾತ್ರೆ ವಾಣಿವಿಲಾಸ ಸಾಗರದಲ್ಲಿ ಅಪಾರ ಪ್ರಮಾಣದ ಜಲರಾಶಿ ಸಂಗ್ರಹವಿತ್ತು.
ಹವಮಾನ ಇಲಾಖೆ ವರದಿ ಪ್ರಕಾರ ಈ ಬಾರಿ ಮುಂಗಾರು ಮಳೆ ಅಬ್ಬರಿಸಲಿದ್ದು, ಆಗಸ್ಟ್ – ಸೆಪ್ಟಂಬರ್ ತಿಂಗಳಲ್ಲಿ ಭಾರಿ ಮಳೆ ಸುರಿಯಲಿದೆ ಎನ್ನಲಾಗಿದೆ.ವರುಣ ಕೃಪೆ ತೋರಿದರೆ ಶತಮಾನದ ಇತಿಹಾಸವಿರುವ ವಾಣಿವಿಲಾಸ ಸಾಗರ ಜಲಾಶಯ 3ನೇ ಬಾರಿ ಭರ್ತಿಯಾಗಿ ಜಲ ವೈಭವ ಮರುಕಳಿಸಲಿದೆ.
ತಾಲ್ಲೂಕಿನಲ್ಲಿ ಜೂನ್ ತಿಂಗಳ ಆರಂಭದಲ್ಲಿ ಕೆರೆ, ಕಟ್ಟೆ, ಹಳ್ಳ, ಕೊಳ್ಳಗಳು ಭರ್ತಿಯಾಗುತ್ತಿರುವುದು ಅನ್ನದಾತರ ಮೊಗದಲ್ಲಿ ಮಂದಹಾಸ ಮೂಡಿಸಿದೆ.ತಾಪಮಾನ ಏರಿಕೆಯಿಂದ ಒಣಗಿದ್ದ ಅಡಿಕೆ- ತೆಂಗು, ಬಾಳೆ ಇತರ ತೋಟಗಾರಿಕೆ ಬೆಳೆಗಳಿಗೆ ಜೀವ ಕಳೆ ಬಂದಿದೆ.
ಬತ್ತಿದ ಕೊಳವೆ ಬಾವಿಗಳಲ್ಲಿ ಗಂಗೆ ಉಕ್ಕುತ್ತಿದೆ. ಎತ್ತ ನೋಡಿದರೂ ಹಸಿರ ಸಿರಿ ಮೇಳೈಸುತ್ತಿದೆ. ಜನ–ಜಾನುವಾರುಗಳ ಮೇವು, ಕುಡಿಯುವ ನೀರಿನ ಸಂಕಷ್ಟ ದೂರಾಗಿದೆ. ತಾಲ್ಲೂಕಿನ 56 ಕಿ.ಮೀ. ವ್ಯಾಪ್ತಿಯ ವೇದಾವತಿ ನದಿ ಪಾತ್ರದಲ್ಲಿರುವ ಬ್ಯಾರೇಜ್ಗಳು ಭರ್ತಿಯಾಗಿದ್ದು, ಅಂತರ್ಜಲ ವೃದ್ಧಿ- ಕೃಷಿ ಚಟುವಟಿಕೆಗಳಿಗೆ ವರದಾನವಾಗಿದೆ.

Latest News >>

ಡಿ.ಸಿ.ಸಿ. ಬ್ಯಾಂಕ್ ನಿರ್ದೇಶಕರಾಗಿ ಓ.ಮಂಜುನಾಥ್ ಮಾಳಿಗೆ ಅವರು ಅವಿರೋಧ ಆಯ್ಕೆಯಾಗಿದ್ದಾರೆ.

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತ, ಚಿತ್ರದುರ್ಗ ಇದರ ಆಡಳಿತ ಮಂಡಳಿ ನಿರ್ದೇಶಕರ ಸ್ಥಾನಕ್ಕೆ ಹಿರಿಯೂರು...

ಚಿತ್ರದುರ್ಗದಲ್ಲಿ ನಡೆಯಲಿರುವ ಪತ್ರಿಕಾ ವಿತರಕರ ಹಂಚಿಕೆದಾರರ 4ನೇರಾಜ್ಯಸಮ್ಮೇಳನ ಕಾರ್ಯಕ್ರಮ ಯಶಸ್ವಿಯಾಗಲಿ : ಆಲೂರು ಹನುಮಂತರಾಯಪ್ಪ

ಹಿರಿಯೂರು: ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ ಹಾಗೂ ಚಿತ್ರದುರ್ಗ ಜಿಲ್ಲಾ ಪತ್ರಿಕೆ ಹಂಚಿಕೆದಾರರ ಹಾಗೂ ವಿತರಕರ ಸಂಘ (ರಿ) ಇವರುಗಳ...

ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ ಅನುಷ್ಟಾನ ಮೌಲ್ಯಮಾಪನ ಸಭೆಜಿಲ್ಲಾ ಮೇಲ್ವಿಚಾರಣಾ ಸಮಿತಿಯಿಂದ ಕ್ರಿಯಾಯೋಜನೆ ಅನುಮೋದನೆ ಕ್ರಮಕ್ಕೆ ಶಿಫಾರಸ್ಸು

ಚಿತ್ರದುರ್ಗ ಸೆ.06: ಪರಿಶಿಷ್ಟ ಜಾತಿ ಹಾಗೂ ಗಿರಿಜನ ಉಪಯೋಜನೆಯಡಿ (ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ) ಜಿಲ್ಲೆಯಲ್ಲಿ ಕೈಗೊಳ್ಳುವ ಎಲ್ಲಾ...

ಪೋಷಣ್ ಮಾಸಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ.ಡಿ.ಎಂ.ಅಭಿನವ್ ಪೌಷ್ಠಿಕಾಂಶಯುಕ್ತ ಆಹಾರ ಪದಾರ್ಥ ಸೇವಿಸುವುದು ಅಭ್ಯಾಸಿಸಿ

ಚಿತ್ರದುರ್ಗ ಸೆ.6: ಪೋಷಣ್ ಮಾಸಾಚರಣೆ ಕಾರ್ಯಕ್ರಮ ಮಕ್ಕಳ ಹಾಗೂ ಗರ್ಭಿಣಿಯರ, ಬಾಣಂತಿಯರ ಆರೋಗ್ಯ ಪೋಷಣ ಮಾಸಾಚರಣೆ ಆಗಬೇಕು. ಮಕ್ಕಳಲ್ಲಿ...

ಎಚ್‌ಐವಿ/ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆ

ಚಿತ್ರದುರ್ಗ ಸೆ.6: ಯುವ ಜನೋತ್ಸವ ಅಂಗವಾಗಿ ಎಚ್‌ಐವಿ/ ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆಯು ಚಿತ್ರದುರ್ಗ ನಗರದಲ್ಲಿ ಗುರುವಾರ...

ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಕಾಮಗಾರಿ ಪರಿಶೀಲನೆ

ಚಿತ್ರದುರ್ಗ ಸೆ.06: ನಬಾರ್ಡ್ ಸಂಸ್ಥೆಯ ಡಿಜಿಎಂ ಸಂಜೀವ್ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಈಚೆಗೆ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ವಾಣಿವಿಲಾಸ...

ಮೊಳಕಾಲ್ಮುರು : ಫಲಾನುಭವಿಗಳ ಮನೆ ಬಾಗಿಲಿಗೆ ಹೋಗಿ ಸಮಸ್ಯೆ ಆಲಿಸಿ ಶಾಸಕ ಎನ್ ವೈ ಗೋಪಾಲಕೃಷ್ಣ.

ಮೊಳಕಾಲ್ಮೂರು :-ಪಟ್ಟಣದ ತಾಲೂಕು ಪಂಚಾಯಿತಿಯಲ್ಲಿ ಗ್ಯಾರೆಂಟಿ ಅನುಷ್ಠಾನ ಸಮಿತಿ ನೂತನ ಕಾರ್ಯಾಲಯವನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ಎನ್ ವೈ....

ಬೆಂಬಲಬೆಲೆಯಲ್ಲಿ ಸೂರ್ಯಕಾಂತಿ ಖರೀದಿ ಕೇಂದ್ರಗಳ ಸ್ಥಾಪನೆ

ಚಿತ್ರದುರ್ಗ ಸೆ.04: 2024-25ನೇ ಸಾಲಿಗೆ ಕೇಂದ್ರ ಸರ್ಕಾರದ ಬೆಂಬಲಬೆಲೆ ಯೋಜನೆಯಡಿ ನಿಗದಿಪಡಿಸಿರುವ ರೂ.7,280/- (ಪ್ರತಿ ಕ್ವಿಂಟಾಲ್‌ಗೆ)...

ಮಹಾತ್ಮ ಗಾಂಧೀ ಸೇವಾ ಪ್ರಶಸ್ತಿ – ಕರ್ನಾಟಕ’ ಆಯ್ಕೆಗೆ ನಾಮನಿರ್ದೇಶನ ಆಹ್ವಾನ

ಚಿತ್ರದುರ್ಗ ಸೆ.04: ರಾಜ್ಯ ಸರ್ಕಾರವು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಸ್ಥಾಪಿಸಿರುವ ಐದು ಲಕ್ಷ ರೂಪಾಯಿ ನಗದನ್ನು ಒಳಗೊಂಡ...

ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್ 110 ಸಿಸಿ ಯ ಆಕರ್ಷಕ ಸ್ಕೂಟಿ ಮಾರುಕಟ್ಟೆಗೆ ಬಿಡುಗಡೆ.

ಚಿತ್ರದುರ್ಗ: ಚಿತ್ರದುರ್ಗ ನಗರದ ತುರುವನೂರು ರಸ್ತೆಯಲ್ಲಿನ ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page