ಜ.30 ರೊಳಗೆ ಬೆಳೆ ವಿಮೆ ನೀಡಿದ್ದರೆ ಲೋಕ ಸಭಾ ಚುನಾವಣೆಗೆ ಬಹಿಷ್ಟಾರ ರೈತ ಸಂಘಟನೆಗಳ ಆಗ್ರಹ- ಸಾಂಖಿಕ ಇಲಾಖೆ ವರದಿ ವಿಳಂಬದಿಂದ ಬೆಳೆವಿಮೆ ವಿಳಂಬಕ್ಕೆ ಕಾರಣ ಸತ್ಯ ಬಯಲು.

by | 16/01/24 | ಕೃಷಿ


ಚಳ್ಳಕೆರೆ ಜನಧ್ವನಿ ವಾರ್ತೆ ಜ.16. ಬರಗಾಲ ಎಂದು ಸರಕಾರ ಘೋಷಣೆ ಮಾಡಿದರೂ ನೈಸರ್ಗಿಕ ವಿಕೋಪದ ಹಿನ್ನೆಲೆಯಲ್ಲಿ ಬೆಳೆ ನಷ್ಟ ಕಂಡ ರೈತರಿಗೆ ಆರ್ಥಿಕ ನೆರವು ನೀಡುವ ಮಹತ್ವದ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆ ಮತ್ತೆ ಮುಗ್ಗರಿಸಿದೆ. 2022-23ನೇ ರೈತರು ಬೆಳೆ ವಿಮೆ ಕಂತು ಕಟ್ಟಿದ್ದಾರೆ. ಆದರೆ, ಮಳೆ ಇಲ್ಲದೆ ಬರದಿಂದ ತತ್ತರಿಸಿರುವ ರೈತರಿಗೆ ಮಾತ್ರ ಯೋಜನೆಯಡಿ ಬೆಳೆ ವಿಮೆ ಕಾಸು ಇನ್ನೂ ಕೈ ಸೇರಿಲ್ಲ ಜ.೩೦ರೊಳಗೆಲ ಬೆಳೆವಿಮೆ ಹಾಗೂ ಪರಿಹಾರ ನೀಡಿದ್ದರೆ ಲೋಕ ಸಭಾ ಚುನಾವಣೆ ಬಹಿಷ್ಟಕರಿಸುವುದಾಗಿ ರೈತ ಮುಖಂಡರು ಎಚ್ಚರಿಕೆ ನೀಡಿದ್ದಾರೆ.


ನಗರದ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಕೃಷಿ ಇಲಾಖೆ ಹಾಗೂ ಕಂದಾಯ ಇಲಾಖೆ ಜಂಟಿಯಾಗಿ ರೈತರಿಗೆ ಕರೆದಿದ್ದ ಕುಂದು ಕೊರತೆಗಳ ಸಭೆಯಲ್ಲಿ ರೈತ್ರರು ಅಕ್ರೋಶ ಹೊರಹಾಕಿದ್ದಾರೆ.
ಸಭೆಯಲ್ಲಿ ರಾಜ್ಯ ರೈತ ಸಂಘದ ಹಿರಿಯ ಉಪಾಧ್ಯಕ್ಷ ಕೆ.ಪಿ.ಭೂತಯ್ಯ ಮತಾನಾಡಿ ಜಿಲ್ಲಾಧಿಕಾರಿಗಳ ಕುಂದುಕೊರತೆ ಸಭೆಯಲ್ಲೇ ಡಿ. ಒಳಗೆ ರೈತರಿಗೆ ಬೆಳೆ ವಿಮೆ ಬಿಡುಗಡೆ ಮಾಡುವಂತೆ ವಿಮೆ ಕಂಪನಿಗಳಿಗೆ ಜಿಲ್ಲಾಧಿಕಾರಿಗಳು ಸೂಚನೆ ನೀಡಿದ್ದರೂ ಸಹ ಬೆಳೆ ವಿಮೆ ಕಂಪನಿಕರಳು ಒಬ್ಬರ ಮೇಲೆ ಒಬ್ಬರು ಹೇಳುತ್ತಿದ್ದಾರೆ.
ಚಳ್ಳಕೆರೆ ತಾಲ್ಲೂಕು ಬರ ಪೀಡಿತ ಪ್ರದೇಶವೆಂದು ಘೋಷಣೆಯಾದರೂ ರೈತರಿಗೆ ಬೆಳೆ ವಿಮೆ, ಬೆಳೆ ಪರಿಹಾರ ಇದುವರೆಗೆಯಾದರೂ ರೈತರ ಖಾತೆಗೆ ಬಂದಿಲ್ಲ, ಸಂಕಷ್ಟಕ್ಕೆ ಸಿಲುಕಿದ ರೈತರು ಪರಿಹಾರದ ಹಣಕ್ಕಾಗಿ ಜಾತಕಪಕ್ಷಿಯಂತೆ ಕಾಯುತ್ತಿದ್ದಾರೆ. ಕೂಡಲೇ ಬೆಳೆ ವಿಮೆ ಕಂಪನಿ ಬೆಳೆ ವಿಮೆ ಹಣವನ್ನು ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದರು.
ರೈತ ಮುಖಂಡ ರೆಡ್ಡಿಹಳ್ಳಿ ವೀರಣ್ಣ ಮಾತನಾಡಿ ರೈರು ಲಕ್ಷಾಂತರ ಹಾಕಿದ ಬಂಡವಾಳ ಬೆಳೆ ನಷ್ಟದಿಂದ ಕಳೆದುಕೊಂಡಿದ್ದರೂ ರೈತರಿಗೆ ಪುಡಿಗಾಸು 2 ಸಾವಿರ ಪರಿಹಾರ ಮೊತ್ತ ಬಿಕ್ಷೆ ನೀಡಿದೆ ಈ ಕೂಡಲೆ ರೈತರ ಖರ್ಚು ಮಾಡಿದ ಅರ್ಧದಷ್ಟು ಬೆಳೆ ಪರಿಹಾರ ಹಾಗೂ ರೈತರು ಕಟ್ಟಿದ ಬೆಳೆವಿಮೆಯನ್ನು ಕೂಡಲೆ ಬಿಡುಗಡೆ ಮಾಡಬೇಕು ಬಿಡುಗಡೆ ಮಾಡದಿಂದ್ದರೆ ಕಂಪನಿಗಳು ವಿರುದ್ದ ಪ್ರತಿಭಟನೆ ಮಾಡಲಾಗುವುದು ಎಂದು ಎಚ್ಚರಿಸಿದರು.
ವಿಮೆ ಕಂಪನಿತಾಜ್ಯ ಮಟ್ಟದ ಅಧಿಕಾರಿ ಅಮಿತ್ ಮಾತನಾಡಿ ಜಿಲ್ಲೆಯಲ್ಲಿ ಚಳ್ಳಕೆರೆ ತಾಲ್ಲೂಕಿನಲ್ಲಿ ರೈತರು ಬಿತ್ತನೆ ಮಾಡಿದ ಶೇಂಗಾ ಬೆಳೆ ಸಂಪೂರ್ಣವಾಗಿ ಇಳುವರಿಯಿಲ್ಲದೆ ಸಂಕಷ್ಟಕ್ಕೆ ಸಿಲುಕಿದ್ದಾರೆ. ನಮಗೆ ಸಾಂಖಿಕ ಇಲಾಖೆಯಿಂದ ಇಳುವರಿ ಮಾಹಿತಿ ಬಂದಿಲ್ಲ, ಕಟಾವಿನ ಅವಧಿಗಿಂತ ಮುಂಚಿತವಾಗಿ ಬೆಳೆ ಕಟಾವು ಮಾಡಿರುವುದರಿಂದ ನಿಯಮುಲ್ಲಂಘಟನೆಯಾಗಿದ್ದು ಮಧ್ಯಂತರ ಬೆಳೆ ವಿಮೆ ಕೊಡಲು ಸಾಧ್ಯವಿಲ್ಲ ಬೆಳೆ ಸಮೀಕ್ಷೆ ವರದಿ ಬಂದ ನಂತರ ಬೆಳೆವಿಮೆ ನೀಡಲಾಗುವುದು ಎಂದು ಉತ್ತರಿಸಿದರು.
ಕೆ,ಭೂತಯ್ಯ, ರೆಡ್ಡಿಹಳ್ಳಿ ವೀರಣ್ಣ ಮಾತನಾಡಿ ಮಳೆ ಇಲ್ಲದೆ ಬೆಳೆಗಳು ಒಣಗಿವೆ ಜಾನುವಾರುಗಳಿಗೆ ಮೇವಿನ ಕೊರತೆ ಎದುರಾಗ ಬಾರದು ಎಂದು ಕಟಾವು ಮಾಡಲಾಗಿದೆ ರೈತರು ಬೆಳೆಗಳಿಗೆ ಬೆಳೆ ವಿಮೆ ಕಟ್ಟುವಾಗ, ಕೊನೆಯ ದಿನಾಂಕವನ್ನು ನೀಡುತ್ತೀರಾ, ರೈತರಿಗೆ ಬೆಳೆ ವಿಮೆ ಹಾಕಲು ನಿಮಗೆ ಕೊನೆಯ ದಿನಾಂಕ ಇರಲ್ವಾ ಎಂದು ವಿಮೆ ಕಂಪನಿ ಅಧಿಕಾರಿಗಳನ್ನು ಪ್ರಶ್ಮೆ ಮಾಡಿದ ಅವರು, ರೈತರಿಗೆ ಬೆಳೆ ವಿಮೆ ಹಣವನ್ನು ಶೀಘ್ರದಲ್ಲಿ ನೀಡಬೇಕು ಎಂದರು.
.ಸಹಾಯಕ ಕೃಷಿ ನಿರ್ಧೇಕ ಡಾ.ಅಶೋಕ್ ಮಾತನಾಡಿ ಹಿಂಗಾರು ಹಂಗಾಮಿನಲ್ಲಿ ಬಿತ್ತನೆ ಮಾಡಿದ ಕಡಲೆ ಬೆಳೆ ಮಳೆಯಿಲ್ಲದೆ ಇಳುವರಿ ಕುಂಠಿತವಾಗಿರುವುದರಿAದ ಮಧ್ಯಂತರ ಬೆಳೆ ವಿಮೆ ನೀಡುವಂತೆ ಸಭೆ ಕರೆಯಲಾಗಿದೆ ಎಂದು ತಿಳಿಸಿದರು.
ಈ ವೇಳೆ ಶಿರಸ್ತೇದಾರ್ ಸದಾಶಿವಯ್ಯ, ತಾಂತ್ರಿಕ ಕೃಷಿ ಅಧಿಕಾರಿ ಮೇಘನಾಮ ಬೆಳೆ ವಿಮೆ ಕಂಪನಿಯ ಜಿಲ್ಲಾ ಪ್ರತಿನಿಧಿ ತೇಜಶ್ವಿನಿ, ಕೃಷಿ ಅಧಿಕಾರಿ ತಿಪ್ಪೇಸ್ವಾಮಿ, ರೈತಮುಖಂಡರಾದ ಶ್ರೀಕಂಠಮೂರ್ತಿ ಇತರ ರೈತ ಮುಖಂಡರು ಉಪಸ್ಥಿತರಿದ್ದರು.

Latest News >>

ಡಿ.ಸಿ.ಸಿ. ಬ್ಯಾಂಕ್ ನಿರ್ದೇಶಕರಾಗಿ ಓ.ಮಂಜುನಾಥ್ ಮಾಳಿಗೆ ಅವರು ಅವಿರೋಧ ಆಯ್ಕೆಯಾಗಿದ್ದಾರೆ.

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತ, ಚಿತ್ರದುರ್ಗ ಇದರ ಆಡಳಿತ ಮಂಡಳಿ ನಿರ್ದೇಶಕರ ಸ್ಥಾನಕ್ಕೆ ಹಿರಿಯೂರು...

ಚಿತ್ರದುರ್ಗದಲ್ಲಿ ನಡೆಯಲಿರುವ ಪತ್ರಿಕಾ ವಿತರಕರ ಹಂಚಿಕೆದಾರರ 4ನೇರಾಜ್ಯಸಮ್ಮೇಳನ ಕಾರ್ಯಕ್ರಮ ಯಶಸ್ವಿಯಾಗಲಿ : ಆಲೂರು ಹನುಮಂತರಾಯಪ್ಪ

ಹಿರಿಯೂರು: ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ ಹಾಗೂ ಚಿತ್ರದುರ್ಗ ಜಿಲ್ಲಾ ಪತ್ರಿಕೆ ಹಂಚಿಕೆದಾರರ ಹಾಗೂ ವಿತರಕರ ಸಂಘ (ರಿ) ಇವರುಗಳ...

ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ ಅನುಷ್ಟಾನ ಮೌಲ್ಯಮಾಪನ ಸಭೆಜಿಲ್ಲಾ ಮೇಲ್ವಿಚಾರಣಾ ಸಮಿತಿಯಿಂದ ಕ್ರಿಯಾಯೋಜನೆ ಅನುಮೋದನೆ ಕ್ರಮಕ್ಕೆ ಶಿಫಾರಸ್ಸು

ಚಿತ್ರದುರ್ಗ ಸೆ.06: ಪರಿಶಿಷ್ಟ ಜಾತಿ ಹಾಗೂ ಗಿರಿಜನ ಉಪಯೋಜನೆಯಡಿ (ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ) ಜಿಲ್ಲೆಯಲ್ಲಿ ಕೈಗೊಳ್ಳುವ ಎಲ್ಲಾ...

ಪೋಷಣ್ ಮಾಸಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ.ಡಿ.ಎಂ.ಅಭಿನವ್ ಪೌಷ್ಠಿಕಾಂಶಯುಕ್ತ ಆಹಾರ ಪದಾರ್ಥ ಸೇವಿಸುವುದು ಅಭ್ಯಾಸಿಸಿ

ಚಿತ್ರದುರ್ಗ ಸೆ.6: ಪೋಷಣ್ ಮಾಸಾಚರಣೆ ಕಾರ್ಯಕ್ರಮ ಮಕ್ಕಳ ಹಾಗೂ ಗರ್ಭಿಣಿಯರ, ಬಾಣಂತಿಯರ ಆರೋಗ್ಯ ಪೋಷಣ ಮಾಸಾಚರಣೆ ಆಗಬೇಕು. ಮಕ್ಕಳಲ್ಲಿ...

ಎಚ್‌ಐವಿ/ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆ

ಚಿತ್ರದುರ್ಗ ಸೆ.6: ಯುವ ಜನೋತ್ಸವ ಅಂಗವಾಗಿ ಎಚ್‌ಐವಿ/ ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆಯು ಚಿತ್ರದುರ್ಗ ನಗರದಲ್ಲಿ ಗುರುವಾರ...

ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಕಾಮಗಾರಿ ಪರಿಶೀಲನೆ

ಚಿತ್ರದುರ್ಗ ಸೆ.06: ನಬಾರ್ಡ್ ಸಂಸ್ಥೆಯ ಡಿಜಿಎಂ ಸಂಜೀವ್ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಈಚೆಗೆ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ವಾಣಿವಿಲಾಸ...

ಮೊಳಕಾಲ್ಮುರು : ಫಲಾನುಭವಿಗಳ ಮನೆ ಬಾಗಿಲಿಗೆ ಹೋಗಿ ಸಮಸ್ಯೆ ಆಲಿಸಿ ಶಾಸಕ ಎನ್ ವೈ ಗೋಪಾಲಕೃಷ್ಣ.

ಮೊಳಕಾಲ್ಮೂರು :-ಪಟ್ಟಣದ ತಾಲೂಕು ಪಂಚಾಯಿತಿಯಲ್ಲಿ ಗ್ಯಾರೆಂಟಿ ಅನುಷ್ಠಾನ ಸಮಿತಿ ನೂತನ ಕಾರ್ಯಾಲಯವನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ಎನ್ ವೈ....

ಬೆಂಬಲಬೆಲೆಯಲ್ಲಿ ಸೂರ್ಯಕಾಂತಿ ಖರೀದಿ ಕೇಂದ್ರಗಳ ಸ್ಥಾಪನೆ

ಚಿತ್ರದುರ್ಗ ಸೆ.04: 2024-25ನೇ ಸಾಲಿಗೆ ಕೇಂದ್ರ ಸರ್ಕಾರದ ಬೆಂಬಲಬೆಲೆ ಯೋಜನೆಯಡಿ ನಿಗದಿಪಡಿಸಿರುವ ರೂ.7,280/- (ಪ್ರತಿ ಕ್ವಿಂಟಾಲ್‌ಗೆ)...

ಮಹಾತ್ಮ ಗಾಂಧೀ ಸೇವಾ ಪ್ರಶಸ್ತಿ – ಕರ್ನಾಟಕ’ ಆಯ್ಕೆಗೆ ನಾಮನಿರ್ದೇಶನ ಆಹ್ವಾನ

ಚಿತ್ರದುರ್ಗ ಸೆ.04: ರಾಜ್ಯ ಸರ್ಕಾರವು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಸ್ಥಾಪಿಸಿರುವ ಐದು ಲಕ್ಷ ರೂಪಾಯಿ ನಗದನ್ನು ಒಳಗೊಂಡ...

ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್ 110 ಸಿಸಿ ಯ ಆಕರ್ಷಕ ಸ್ಕೂಟಿ ಮಾರುಕಟ್ಟೆಗೆ ಬಿಡುಗಡೆ.

ಚಿತ್ರದುರ್ಗ: ಚಿತ್ರದುರ್ಗ ನಗರದ ತುರುವನೂರು ರಸ್ತೆಯಲ್ಲಿನ ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page