ಜನಧ್ವನಿ ನ್ಯೂಸ್ ವರದಿ ಬಿತ್ತರಿಸಿದ ಬೆನ್ನಲ್ಲೇ ಪೋಲಿಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಬೊಮ್ಮಸಮುದ್ರ ಕೆರೆಯಲ್ಲಿನ ಸುರಂಗ ಹಾಗೂ ಗುಂಡಿಗಳನ್ನು ಮುಚ್ಚಿಸಲು ಮುಂದಾಗಿದ್ದಾರೆ.

by | 15/05/24 | ಇಂಪ್ಯಾಕ್ಟ್


ಜನಧ್ವನಿ ವರದಿ ಫಲಶೃತಿ
ಚಳ್ಳಕೆರೆ ಮೇ 15 ಜೀವದ ಹಂಗು ತೊರೆದು ಕೆರೆಯಲ್ಲಿ ಸುರಂಗ ಕೊರೆದು ಮರಳು ತುಂಬುತ್ತಿರುವ ದೃಶ್ಯ ನೋಡಿದರೆ ಜೀವ ಝಲ್ ಎನ್ನುವಂತಿದೆ ಎಂಬ ತಲೆಬರಹದಡಿಯಲ್ಲಿ ಜನಧ್ವನಿ ನ್ಯೂಸ್ ವರದಿ ಬಿತ್ತರಿಸಿದ ಬೆನ್ನಲ್ಲೇ ಪೋಲಿಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಕೆರೆಯಲ್ಲಿನ ಸುರಂಗ ಹಾಗೂ ಗುಂಡಿಗಳನ್ನು ಮುಚ್ಚಲು ಮುಂದಾಗಿದ್ದಾರೆ.


ಜನಧ್ವನಿ ನ್ಯೂಸ್ ವರದಿ ಬಿತ್ತಿರಿಸಿದಾಗ
ಹೌದು ಇದು ಚಳ್ಳಕೆರೆ ನಗರ ಸಮೀಪದ ಬೊಮ್ಮಸಂದ್ರ ಕೆರೆಯಲ್ಲಿ ನಗರ ಸೇರಿದಂತೆ ವಿವಿಧ ಗ್ರಾಮಗಳಿಂದ ಸುಮಾರು 10 ರಿಂದ 15 ಎತ್ತಿನಗಾಡಿಯಲ್ಲಿ ಮರಳು ಸಾಗಾಟ ಮಾಡುತ್ತಿದ್ದು. ಮೇಲಿನ ಕಪ್ಪು ಮಣ್ಣು ತೆಗೆದು ಸುಮಾರು 5 ರಿಂದ 8 ಅಡಿಯವರೆಗೆ ಸುರಂಗಕೊರೆದು ಮರಳು ತೆಗೆಯುತ್ತಾರೆ ಎಂದು ಸುದ್ದಿ ಬಿತ್ತಿರಿಸಿದ ಬೆನ್ನಲ್ಲೇ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿದ್ದಾರೆ.


ಜನಧ್ವನಿ ಸುದ್ದಿ ಬೆಳಕು ಚೆಲ್ಲಿದ ನಂತರ ಪೊಲೀಸ್ ಸಿಬ್ಬಂದಿಗಳು ಕೆರೆಯಲ್ಲಿನ ಗುಂಡಿ ಮರಳು ತುಂಬಲು ತೆಗೆದ ಸುರಂಗಗಳನ್ನು ಮುಚ್ಚುತ್ತಿರುವುದು ಹಾಗೂ ಕೆರೆಗೆ ಅಕ್ರಮ ಪ್ರವೇಶ ಮಾಡದಂತೆ ಜೆಸಿಬಿ ಯಂತ್ರದಿಂದ ಟ್ರಂಚ್ ತೆಗೆಯುತ್ತಿರುವುದು,
ಕೆರೆಯಲ್ಲಿ ಅಕ್ರಮ ಮಣ್ಣು ಹಾಗೂ ಮರಳು ಸಾಗಾಟದಿಂದ ಕೆರೆಯ ಚಿತ್ರಣವೇ ಬದಲಾಗಿದ್ದು ಕೆರೆಯಲ್ಲಿ ದೊಡ್ಡ ದೊಡ್ಡ ಗುಂಡಿಗಳನ್ನು ಮರಳಿನ ಸುರಂಗಮಾರ್ಗ ಗಳನ್ನು ಜೆಸಿಬಿ ಯಂತ್ರದಿಂದ ಮುಚ್ಚಿದ್ದಾರೆ. ಕೆರೆಯಲ್ಲಿ ಅಕ್ರಮ ಪ್ರವೇಶ ಮಾಡದಂತೆ ಕೆರೆಗೆ ಪ್ರವೇಶ ಮಾಡುವ ದಾರಿಗೆ ಟ್ರಚ್ ಹೊಡೆಸಿದ್ದಾರೆ.ಮರಳು ತುಂಬುವ ಎತ್ತಿನ ಗಾಡಿಗಳಿಗೆ ಮತ್ತೆ ಇತ್ತ ಸುಳಿಯ ಬಾರದು ಎಂದು ಎಚ್ಚರಿಗೆ ನೀಡಿ ಕಳಿಸಿದ್ದಾರೆ.
ಜೀವ ರಕ್ಷಣೆಯಿಲ್ಲದೆ ಸುರಂಗ ಕೊರೆದು ಮರಳು ತುಂಬುವವರಿಗೆ ಪೊಲೀಸ್ ಅಧಿಕಾರಿಗಳು ಬುದ್ದಿ ಹೇಳಿದ್ದಾರೆ. ಜನಧ್ವನಿ ನ್ಯೂಸ್ ವರಿದಿಯ ಫಲಶೃತಿಯಾಗಿದೆ.

Latest News >>

ಡಿ.ಸಿ.ಸಿ. ಬ್ಯಾಂಕ್ ನಿರ್ದೇಶಕರಾಗಿ ಓ.ಮಂಜುನಾಥ್ ಮಾಳಿಗೆ ಅವರು ಅವಿರೋಧ ಆಯ್ಕೆಯಾಗಿದ್ದಾರೆ.

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತ, ಚಿತ್ರದುರ್ಗ ಇದರ ಆಡಳಿತ ಮಂಡಳಿ ನಿರ್ದೇಶಕರ ಸ್ಥಾನಕ್ಕೆ ಹಿರಿಯೂರು...

ಚಿತ್ರದುರ್ಗದಲ್ಲಿ ನಡೆಯಲಿರುವ ಪತ್ರಿಕಾ ವಿತರಕರ ಹಂಚಿಕೆದಾರರ 4ನೇರಾಜ್ಯಸಮ್ಮೇಳನ ಕಾರ್ಯಕ್ರಮ ಯಶಸ್ವಿಯಾಗಲಿ : ಆಲೂರು ಹನುಮಂತರಾಯಪ್ಪ

ಹಿರಿಯೂರು: ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ ಹಾಗೂ ಚಿತ್ರದುರ್ಗ ಜಿಲ್ಲಾ ಪತ್ರಿಕೆ ಹಂಚಿಕೆದಾರರ ಹಾಗೂ ವಿತರಕರ ಸಂಘ (ರಿ) ಇವರುಗಳ...

ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ ಅನುಷ್ಟಾನ ಮೌಲ್ಯಮಾಪನ ಸಭೆಜಿಲ್ಲಾ ಮೇಲ್ವಿಚಾರಣಾ ಸಮಿತಿಯಿಂದ ಕ್ರಿಯಾಯೋಜನೆ ಅನುಮೋದನೆ ಕ್ರಮಕ್ಕೆ ಶಿಫಾರಸ್ಸು

ಚಿತ್ರದುರ್ಗ ಸೆ.06: ಪರಿಶಿಷ್ಟ ಜಾತಿ ಹಾಗೂ ಗಿರಿಜನ ಉಪಯೋಜನೆಯಡಿ (ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ) ಜಿಲ್ಲೆಯಲ್ಲಿ ಕೈಗೊಳ್ಳುವ ಎಲ್ಲಾ...

ಪೋಷಣ್ ಮಾಸಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ.ಡಿ.ಎಂ.ಅಭಿನವ್ ಪೌಷ್ಠಿಕಾಂಶಯುಕ್ತ ಆಹಾರ ಪದಾರ್ಥ ಸೇವಿಸುವುದು ಅಭ್ಯಾಸಿಸಿ

ಚಿತ್ರದುರ್ಗ ಸೆ.6: ಪೋಷಣ್ ಮಾಸಾಚರಣೆ ಕಾರ್ಯಕ್ರಮ ಮಕ್ಕಳ ಹಾಗೂ ಗರ್ಭಿಣಿಯರ, ಬಾಣಂತಿಯರ ಆರೋಗ್ಯ ಪೋಷಣ ಮಾಸಾಚರಣೆ ಆಗಬೇಕು. ಮಕ್ಕಳಲ್ಲಿ...

ಎಚ್‌ಐವಿ/ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆ

ಚಿತ್ರದುರ್ಗ ಸೆ.6: ಯುವ ಜನೋತ್ಸವ ಅಂಗವಾಗಿ ಎಚ್‌ಐವಿ/ ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆಯು ಚಿತ್ರದುರ್ಗ ನಗರದಲ್ಲಿ ಗುರುವಾರ...

ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಕಾಮಗಾರಿ ಪರಿಶೀಲನೆ

ಚಿತ್ರದುರ್ಗ ಸೆ.06: ನಬಾರ್ಡ್ ಸಂಸ್ಥೆಯ ಡಿಜಿಎಂ ಸಂಜೀವ್ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಈಚೆಗೆ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ವಾಣಿವಿಲಾಸ...

ಮೊಳಕಾಲ್ಮುರು : ಫಲಾನುಭವಿಗಳ ಮನೆ ಬಾಗಿಲಿಗೆ ಹೋಗಿ ಸಮಸ್ಯೆ ಆಲಿಸಿ ಶಾಸಕ ಎನ್ ವೈ ಗೋಪಾಲಕೃಷ್ಣ.

ಮೊಳಕಾಲ್ಮೂರು :-ಪಟ್ಟಣದ ತಾಲೂಕು ಪಂಚಾಯಿತಿಯಲ್ಲಿ ಗ್ಯಾರೆಂಟಿ ಅನುಷ್ಠಾನ ಸಮಿತಿ ನೂತನ ಕಾರ್ಯಾಲಯವನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ಎನ್ ವೈ....

ಬೆಂಬಲಬೆಲೆಯಲ್ಲಿ ಸೂರ್ಯಕಾಂತಿ ಖರೀದಿ ಕೇಂದ್ರಗಳ ಸ್ಥಾಪನೆ

ಚಿತ್ರದುರ್ಗ ಸೆ.04: 2024-25ನೇ ಸಾಲಿಗೆ ಕೇಂದ್ರ ಸರ್ಕಾರದ ಬೆಂಬಲಬೆಲೆ ಯೋಜನೆಯಡಿ ನಿಗದಿಪಡಿಸಿರುವ ರೂ.7,280/- (ಪ್ರತಿ ಕ್ವಿಂಟಾಲ್‌ಗೆ)...

ಮಹಾತ್ಮ ಗಾಂಧೀ ಸೇವಾ ಪ್ರಶಸ್ತಿ – ಕರ್ನಾಟಕ’ ಆಯ್ಕೆಗೆ ನಾಮನಿರ್ದೇಶನ ಆಹ್ವಾನ

ಚಿತ್ರದುರ್ಗ ಸೆ.04: ರಾಜ್ಯ ಸರ್ಕಾರವು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಸ್ಥಾಪಿಸಿರುವ ಐದು ಲಕ್ಷ ರೂಪಾಯಿ ನಗದನ್ನು ಒಳಗೊಂಡ...

ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್ 110 ಸಿಸಿ ಯ ಆಕರ್ಷಕ ಸ್ಕೂಟಿ ಮಾರುಕಟ್ಟೆಗೆ ಬಿಡುಗಡೆ.

ಚಿತ್ರದುರ್ಗ: ಚಿತ್ರದುರ್ಗ ನಗರದ ತುರುವನೂರು ರಸ್ತೆಯಲ್ಲಿನ ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page