ಡಿ.ದೇವರಾಜ ಅರಸು ಅವರ 108ನೇ ಜನ್ಮ ದಿನಾಚರಣೆ ಸಮಾರಂಭದಲ್ಲಿ ಸಚಿವ ಡಿ.ಸುಧಾಕರ್ ಸಾಮಾಜಿಕ ಕಳಕಳಿ ಹರಿಕಾರ ಅರಸು

by | 20/08/23 | ಸಾಂಸ್ಕೃತಿಕ


ಚಿತ್ರದುರ್ಗ ಆ.20:
ರಾಜ್ಯಕಂಡ ಅಪ್ರತಿಮ ಧೀಮಂತ ನಾಯಕ ಡಿ.ದೇವರಾಜು ಅರಸು ಅವರು ಸಮಾಜದ ಎಲ್ಲ ವರ್ಗದ ಜನರ ಅಭಿವೃದ್ಧಿಗಾಗಿ ದೂರದೃಷ್ಠಿಯಿಂದ ಕೆಲಸ ಮಾಡಿದ್ದಾರೆ. ಸಾಮಾಜಿಕ ಕಳಕಳಿಯ ಹರಿಕಾರ ಅರಸು ಎಂದು ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಹೇಳಿದರು.
ನಗರದ ತರಾಸು ರಂಗಮಂದಿರದಲ್ಲಿ ಭಾನುವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ ಇವರ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ಪರಿವರ್ತನೆಯ ಹರಿಕಾರ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ 108ನೇ ಜನ್ಮ ದಿನಾಚರಣೆ ಸಮಾರಂಭದಲ್ಲಿ ಡಿ.ದೇವರಾಜ ಅರಸು ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಅವರು ಮಾತನಾಡಿದರು.
ಡಿ.ದೇವರಾಜು ಅರಸು ಅವರು ಒಂದು ಪುಟ್ಟ ಹಳ್ಳಿಯಲ್ಲಿ ಜನಿಸಿದರೂ ಅವರಿಗಿರುವ ಸಾಮಾಜಿಕ ಕಳಕಳಿ ಆಗಾಧವಾದುದು. 1972 ರಲ್ಲಿ ರಾಜ್ಯದಲ್ಲಿ ಮುಖ್ಯಮಂತ್ರಿ ಆಗುವ ಮೂಲಕ ಅವರ ದೂರದೃಷ್ಠಿದಿಂದ ನಾವುಗಳು ಸಮಾಜದಲ್ಲಿ ಅಭಿವೃದ್ಧಿಯ ಹಾದಿಯಲ್ಲಿ ಸಾಗುತ್ತಿದ್ದೇವೆ. ಭೂಸುಧಾರಣೆ ಕಾಯ್ದೆ, ಹಾವನೂರು ವರದಿ ಸೇರಿದಂತೆ ಹಿಂದುಳಿದ ವರ್ಗಗಳ ಅಭಿವೃದ್ಧಿಗಾಗಿ ರೂಪಿಸಿದ ಅನೇಕ ಕ್ರಾಂತಿಕಾರಕ ಯೋಜನೆಗಳನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಿದ್ದಾರೆ. ಅವರ ಸಮಾಜಮುಖಿ ಕಾರ್ಯಗಳು, ಪ್ರಗತಿಪರ ಯೋಜನೆಗಳು ಅವಿಸ್ಮರಣೀಯ ಎಂದರು.
ಅರಸು ಅವರು ಬಡಮಕ್ಕಳ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿನಿಲಯಗಳ ಪರಿಕಲ್ಪನೆಯನ್ನು ರಾಜ್ಯಕ್ಕೆ ಕೊಟ್ಟಿದ್ದಾರೆ. ಸಮಾಜಕ್ಕೆ ಅವರ ಕೊಡುಗೆ ಅಪಾರ. ಇಂತಹ ಆದರ್ಶ ವ್ಯಕ್ತಿಗಳು ನಮಗೆ ಹಾಗೂ ವಿದ್ಯಾರ್ಥಿಗಳಿಗೆ ಸ್ಫೂರ್ತಿಯಾಗಬೇಕು. ಎಲ್ಲ ವರ್ಗಗಳನ್ನು ಮುಖ್ಯವಾಹಿನಿಗೆ ತರುವ ನಿಟ್ಟಿನಲ್ಲಿ ಅನೇಕ ಕೊಡುಗೆಗಳನ್ನು ನೀಡಿದ್ದಾರೆ ಎಂದು ಸ್ಮರಿಸಿದರು.
ಅರಸು ಅವರು ಮೈಸೂರು ರಾಜ್ಯವನ್ನು ಕರ್ನಾಟಕ ರಾಜ್ಯ ಎಂದು ಮರು ನಾಮಕರಣ ಮಾಡಿ ಕರ್ನಾಟಕದ ಏಕೀಕರಣಕ್ಕೆ ಮಹತ್ವ ನೀಡಿ ರಾಜ್ಯವನ್ನು ಮುನ್ನೆಡೆಸಿದ ಧೀಮಂತ ವ್ಯಕ್ತಿ. ಸಾಮಾಜಿಕ ನ್ಯಾಯದ ಹರಿಕಾರ ಹಾಗೂ ಬಡವರ ಬಂಧು ಡಿ.ದೇವರಾಜು ಅರಸು ಜನ್ಮ ದಿನಾಚರಣೆಯನ್ನು ರಾಜ್ಯಾದ್ಯಂತ ಸಂಭ್ರಮದಿಂದ ಆಚರಿಸಲಾಗುತ್ತಿದ್ದು, ಇಂದಿನ ಯುವ ಜನತೆಯು ದೇವರಾಜ ಅರಸು ಅವರ ಆದರ್ಶ, ತತ್ವಗಳನ್ನು, ಸಾಮಾಜಿಕ ನ್ಯಾಯದ ಬದ್ಧತೆಯನ್ನು ಜೀವನದಲ್ಲಿ ಮೈಗೂಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಲೇಖಕರು ಹಾಗೂ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ವಿಜೇತ ಎಚ್.ಆನಂದ ಕುಮಾರ್ ಅವರು ಡಿ.ದೇವರಾಜ ಅರಸುರವರ ತತ್ವ ಮತ್ತು ಚಿಂತನೆಗಳ ಬಗ್ಗೆ ಮಾತನಾಡಿ, ದೇವರಾಜ ಅರಸು ಅವರನ್ನೂ ಸದಾ ಸ್ಮರಿಸಬೇಕು. ಭಾರತದ ನೆಲದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅವರು ಹೇಗೆ ಕಟ್ಟಕಡೆಯ ಮನುಷ್ಯನಿಗಾಗಿ ಕೆಲಸ ಮಾಡಿದರೂ ಹಾಗೆಯೇ ರಾಜ್ಯಕ್ಕಾಗಿ ಅರಸು ಅವರು ಕೆಲಸ ಮಾಡಿರುವುದು ದೊಡ್ಡ ಸಂಗತಿ ಎಂದು ಹೇಳಿದರು.
ರಾಜ್ಯದ ಇತಿಹಾಸದಲ್ಲಿ ಅರಸು ಯುಗ “ಸುವರ್ಣಯುಗ” ಎಂದು ಇತಿಹಾಸದಲ್ಲಿ ದಾಖಲಾಗಿದೆ. 1972ರಿಂದ 1980 ಕರ್ನಾಟಕದ ಆಡಳಿತಾತ್ಮಕವಾಗಿ ಸುವರ್ಣಯುಗ. ಅಂಬೇಡ್ಕರ್ ಹಾಕಿಕೊಟ್ಟ ಸಂವಿಧಾನ ಹಾಗೂ ಸಂವಿಧಾನದ ಆಶಯಗಳನ್ನು ಹಿಂದುಳಿದ ವರ್ಗಗಳಿಗೆ, ದಲಿತರಿಗೆ, ಅಲ್ಪಸಂಖ್ಯಾತರಿಗೆ ಸ್ಪರ್ಶ ಮಾಡಿದ ಪ್ರಪ್ರಥಮ ಮುಖ್ಯಮಂತ್ರಿ ದೇವರಾಜ ಅರಸು. ಡಾ.ಬಿ.ಆರ್.ಅಂಬೇಡ್ಕರ್, ನಾಲ್ವಡಿ ಕೃಷ್ಣರಾಜ ಒಡೆಯರ್, ದೇವರಾಜ ಅರಸು ಅವರು ನಮ್ಮೆಲ್ಲರಿಗೂ ಪ್ರಾತಃಸ್ಮರಣೀಯರಾಗಿದ್ದಾರೆ ಎಂದು ಹೇಳಿದರು.
ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ ಮಾತನಾಡಿ, ಹಿಂದುಳಿದ ವರ್ಗದವರಿಗೆ ಶಿಕ್ಷಣಕ್ಕೆ ಒತ್ತು ಕೊಟ್ಟು, ಹಾಸ್ಟಲ್, ವಸತಿ ಗೃಹಗಳು ಕೊಡಬೇಕು ಎಂದು ಸಾಮಾಜಿಕ ಕ್ರಾಂತಿಗೆ ಬದಲಾವಣೆ ತರಲಾಯಿತು. ಎಲ್ಲರಿಗೂ ಸಮಾನ ಅವಕಾಶ ನೀಡುವ ಉದ್ದೇಶ ಡಿ.ದೇವರಾಜ ಅರಸು ಅವರದಾಗಿತ್ತು. ಎಲ್ಲರ ಬಗ್ಗೆ ಹೆಚ್ಚಿನ ಕಾಳಜಿ ಹೊಂದಿದ್ದರು. ಅವರಂತೆ ನಾವು ಉತ್ತಮವಾದ ಶಿಕ್ಷಣ ಪಡೆದು ಸಾಮಾಜಕ್ಕೆ ಕೊಡುಗೆ ನೀಡಿದರೆ ನಾವು ಕೂಡ ಅವರಂತೆ ದೊಡ್ಡ ನಾಯಕರಾಗಿ ಬೆಳೆಯುತ್ತೇವೆ. ಡಿ.ದೇವರಾಜ ಅರಸು ಅವರ ತತ್ವ ಮತ್ತು ಆದರ್ಶಗಳನ್ನು ವಿದ್ಯಾರ್ಥಿಗಳು ಅಳವಡಿಸಿಕೊಳ್ಳಬೇಕು. ಡಿ.ದೇವರಾಜ ಅರಸು ಅವರು ಸಮಾಜದಲ್ಲಿ ಅಷ್ಟೊಂದು ಕ್ರಾಂತಿ ಮಾಡಿದ್ದಾರೆ ಎಂದರೇ ಅದು ಅವರ ಸ್ವಾರ್ಥಕ್ಕಾಗಿ ಅಲ್ಲ. ನಮಗಾಗಿ ಮಾಡಿದ್ದಾರೆ ಎಂದು ಹೇಳಿದರು.
ಇದೇ ಸಂದರ್ಭದಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ ಹಾಗೂ ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳಲ್ಲಿ ವ್ಯಾಸಂಗ ಮಾಡಿ ಎಸ್‍ಎಸ್‍ಎಲ್‍ಸಿ, ಪಿಯುಸಿ ಹಾಗೂ ಪದವಿಯಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.
ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಸ್.ಜೆ.ಸೋಮಶೇಖರ್, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕುಮಾರಸ್ವಾಮಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಡಾ.ಆರ್.ಸುಬ್ರಾನಾಯಕ್, ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಮೀಸೆ ಮಹಲಿಂಗಪ್ಪ, ಯುವ ಮುಖಂಡ ಪ್ರತಾಪ್ ಜೋಗಿ ಸೇರಿದಂತೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳ ಎಲ್ಲಾ ಅಧಿಕಾರಿ, ನೌಕರರು, ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿ ನಿಲಯದ ವಿದ್ಯಾರ್ಥಿಗಳು ಇದ್ದರು.
ಭವ್ಯ ಮೆರವಣಿಗೆ:
ವೇದಿಕೆ ಕಾರ್ಯಕ್ರಮಕ್ಕೂ ಮುನ್ನ ಚಿತ್ರದುರ್ಗ ನಗರದ ನೀಲಕಂಠೇಶ್ವರ ದೇಗುಲದ ಬಳಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಅವರು ಡಿ.ದೇವರಾಜ ಅರಸು ಭಾವಚಿತ್ರಕ್ಕೆ ಪುಷ್ಪನಮನ ಸಮರ್ಪಿಸಿ ಮೆರವಣಿಗೆಗೆ ಚಾಲನೆ ನೀಡಿದರು.
ನಗರದ ಗಾಂಧಿವೃತ್ತ, ಎಸ್‍ಬಿಐ ವೃತ್ತ, ಪ್ರವಾಸಿ ಮಂದಿರದ ಮಾರ್ಗವಾಗಿ ಅಂಬೇಡ್ಕರ್ ವೃತ್ತ ಹಾಗೂ ಮದಕರಿ ನಾಯಕ ವೃತ್ತದ ಮೂಲಕ ಮೆರವಣಿಗೆಯು ತರಾಸು ರಂಗಮಂದಿರ ತಲುಪಿತು.
ಈ ಸಂದರ್ಭದಲ್ಲಿ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಕುಮಾರಸ್ವಾಮಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಡಾ.ಆರ್.ಸುಬ್ರಾನಯಕ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕ ಎಸ್.ಕೆ.ಮಲ್ಲಿಕಾರ್ಜುನ ಸೇರಿದಂತೆ ಮತ್ತಿತರರು ಇದ್ದರು.

Latest News >>

ಡಿ.ಸಿ.ಸಿ. ಬ್ಯಾಂಕ್ ನಿರ್ದೇಶಕರಾಗಿ ಓ.ಮಂಜುನಾಥ್ ಮಾಳಿಗೆ ಅವರು ಅವಿರೋಧ ಆಯ್ಕೆಯಾಗಿದ್ದಾರೆ.

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತ, ಚಿತ್ರದುರ್ಗ ಇದರ ಆಡಳಿತ ಮಂಡಳಿ ನಿರ್ದೇಶಕರ ಸ್ಥಾನಕ್ಕೆ ಹಿರಿಯೂರು...

ಚಿತ್ರದುರ್ಗದಲ್ಲಿ ನಡೆಯಲಿರುವ ಪತ್ರಿಕಾ ವಿತರಕರ ಹಂಚಿಕೆದಾರರ 4ನೇರಾಜ್ಯಸಮ್ಮೇಳನ ಕಾರ್ಯಕ್ರಮ ಯಶಸ್ವಿಯಾಗಲಿ : ಆಲೂರು ಹನುಮಂತರಾಯಪ್ಪ

ಹಿರಿಯೂರು: ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ ಹಾಗೂ ಚಿತ್ರದುರ್ಗ ಜಿಲ್ಲಾ ಪತ್ರಿಕೆ ಹಂಚಿಕೆದಾರರ ಹಾಗೂ ವಿತರಕರ ಸಂಘ (ರಿ) ಇವರುಗಳ...

ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ ಅನುಷ್ಟಾನ ಮೌಲ್ಯಮಾಪನ ಸಭೆಜಿಲ್ಲಾ ಮೇಲ್ವಿಚಾರಣಾ ಸಮಿತಿಯಿಂದ ಕ್ರಿಯಾಯೋಜನೆ ಅನುಮೋದನೆ ಕ್ರಮಕ್ಕೆ ಶಿಫಾರಸ್ಸು

ಚಿತ್ರದುರ್ಗ ಸೆ.06: ಪರಿಶಿಷ್ಟ ಜಾತಿ ಹಾಗೂ ಗಿರಿಜನ ಉಪಯೋಜನೆಯಡಿ (ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ) ಜಿಲ್ಲೆಯಲ್ಲಿ ಕೈಗೊಳ್ಳುವ ಎಲ್ಲಾ...

ಪೋಷಣ್ ಮಾಸಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ.ಡಿ.ಎಂ.ಅಭಿನವ್ ಪೌಷ್ಠಿಕಾಂಶಯುಕ್ತ ಆಹಾರ ಪದಾರ್ಥ ಸೇವಿಸುವುದು ಅಭ್ಯಾಸಿಸಿ

ಚಿತ್ರದುರ್ಗ ಸೆ.6: ಪೋಷಣ್ ಮಾಸಾಚರಣೆ ಕಾರ್ಯಕ್ರಮ ಮಕ್ಕಳ ಹಾಗೂ ಗರ್ಭಿಣಿಯರ, ಬಾಣಂತಿಯರ ಆರೋಗ್ಯ ಪೋಷಣ ಮಾಸಾಚರಣೆ ಆಗಬೇಕು. ಮಕ್ಕಳಲ್ಲಿ...

ಎಚ್‌ಐವಿ/ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆ

ಚಿತ್ರದುರ್ಗ ಸೆ.6: ಯುವ ಜನೋತ್ಸವ ಅಂಗವಾಗಿ ಎಚ್‌ಐವಿ/ ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆಯು ಚಿತ್ರದುರ್ಗ ನಗರದಲ್ಲಿ ಗುರುವಾರ...

ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಕಾಮಗಾರಿ ಪರಿಶೀಲನೆ

ಚಿತ್ರದುರ್ಗ ಸೆ.06: ನಬಾರ್ಡ್ ಸಂಸ್ಥೆಯ ಡಿಜಿಎಂ ಸಂಜೀವ್ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಈಚೆಗೆ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ವಾಣಿವಿಲಾಸ...

ಮೊಳಕಾಲ್ಮುರು : ಫಲಾನುಭವಿಗಳ ಮನೆ ಬಾಗಿಲಿಗೆ ಹೋಗಿ ಸಮಸ್ಯೆ ಆಲಿಸಿ ಶಾಸಕ ಎನ್ ವೈ ಗೋಪಾಲಕೃಷ್ಣ.

ಮೊಳಕಾಲ್ಮೂರು :-ಪಟ್ಟಣದ ತಾಲೂಕು ಪಂಚಾಯಿತಿಯಲ್ಲಿ ಗ್ಯಾರೆಂಟಿ ಅನುಷ್ಠಾನ ಸಮಿತಿ ನೂತನ ಕಾರ್ಯಾಲಯವನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ಎನ್ ವೈ....

ಬೆಂಬಲಬೆಲೆಯಲ್ಲಿ ಸೂರ್ಯಕಾಂತಿ ಖರೀದಿ ಕೇಂದ್ರಗಳ ಸ್ಥಾಪನೆ

ಚಿತ್ರದುರ್ಗ ಸೆ.04: 2024-25ನೇ ಸಾಲಿಗೆ ಕೇಂದ್ರ ಸರ್ಕಾರದ ಬೆಂಬಲಬೆಲೆ ಯೋಜನೆಯಡಿ ನಿಗದಿಪಡಿಸಿರುವ ರೂ.7,280/- (ಪ್ರತಿ ಕ್ವಿಂಟಾಲ್‌ಗೆ)...

ಮಹಾತ್ಮ ಗಾಂಧೀ ಸೇವಾ ಪ್ರಶಸ್ತಿ – ಕರ್ನಾಟಕ’ ಆಯ್ಕೆಗೆ ನಾಮನಿರ್ದೇಶನ ಆಹ್ವಾನ

ಚಿತ್ರದುರ್ಗ ಸೆ.04: ರಾಜ್ಯ ಸರ್ಕಾರವು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಸ್ಥಾಪಿಸಿರುವ ಐದು ಲಕ್ಷ ರೂಪಾಯಿ ನಗದನ್ನು ಒಳಗೊಂಡ...

ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್ 110 ಸಿಸಿ ಯ ಆಕರ್ಷಕ ಸ್ಕೂಟಿ ಮಾರುಕಟ್ಟೆಗೆ ಬಿಡುಗಡೆ.

ಚಿತ್ರದುರ್ಗ: ಚಿತ್ರದುರ್ಗ ನಗರದ ತುರುವನೂರು ರಸ್ತೆಯಲ್ಲಿನ ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page