ದೆಹಲಿಯ ಅಮೃತಕಲಶ ಪ್ರತಿಷ್ಠಾಪನೆ ಕಾರ್ಯಕ್ರಮದಲ್ಲಿ ಪಾಲ್ಗೊಂಡಿರುವ ಚಳ್ಳಕೆರೆ ಆರೋಗ್ಯ ನಿರೀಕ್ಷಕರಾದ ಗೀತಾ.

by | 01/11/23 | ಸುದ್ದಿ

ದೆಹಲಿ ಜನಧ್ವನಿ ವಾರ್ತೆ ನ.1.ದೆಹಲಿಯ ಅಮೃತಕಲಶ ಪ್ರತಿಷ್ಠಾಪನೆ ಕಾರ್ಯಕ್ರಮದಲ್ಲಿ
ಪಾಲ್ಗೊಂಡಿರುವ ಚಳ್ಳಕೆರೆ ಆರೋಗ್ಯ ನಿರೀಕ್ಷಕರಾದ ಗೀತಾ.


ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಕಾರ್ಯಕ್ರಮವಾದ “ನನ್ನ ಮಣ್ಣು ನನ್ನ ದೇಶ” ಎಂಬ ಕಾರ್ಯಕ್ರಮದ ಮೂಲಕ ದೇಶದ ಎಲ್ಲಾ ರಾಜ್ಯಗಳ ಜಿಲ್ಲಾ ಕೇಂದ್ರ, ತಾಲ್ಲೂಕು ಕೇಂದ್ರ, ನಗರಸಭೆ, ಪುರಸಭೆ ಹಾಗೂ ಗ್ರಾಮೀಣ ಪ್ರದೇಶದ ಗ್ರಾಮಪಂಚಾಯಿತಿಗಳಿಂದ ಸಂಗ್ರಹ ಮಾಡಿರುವ ಪವಿತ್ರವಾದ ಮಣ್ಣನ್ನು ದೆಹಲಿಯ ರಾಜಭವನ ಮುಂಭಾಗದಲ್ಲಿರುವ ಅಮೃತ ಕಲಶ ಪ್ರತಿಷ್ಠಾಪನೆ ಮಾಡಿರುವ ಕಾರ್ಯಕ್ರಮಕ್ಕೆ ಸಮರ್ಪಣೆ ಮಾಡಲಾಯಿತು ಎಂಬುದಾಗಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಚಳ್ಳಕೆರೆ ನಗರಸಭೆಯ ಹಿರಿಯ ಆರೋಗ್ಯ ನಿರೀಕ್ಷಕರಾದ ಗೀತ ಜಬಧ್ವನಿ ಡಿಜಿಟಲ್ ಮಾಧ್ಯಕ್ಜೆ ತಿಳಿಸಿದ್ದಾರೆ.
ಚಳ್ಳಕೆರೆ ನಗರಸಭೆ ವತಿಯಿಂದ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಕಾರ್ಯಕ್ರಮವಾದ ಅಮೃತ ಕಳಶ ಯಾತ್ರೆಯ ಮೂಲಕ ಚಳ್ಳಕೆರೆ ನಗರ ವತಿಯಿಂದ ಸಂಗ್ರಹಣೆ ಮಾಡಿರುವ ಮಣ್ಣನ್ನು ದೆಹಲಿಯ ರಾಜಭವನ ಮುಂಭಾಗದಲ್ಲಿ ಅಕ್ಟೋಬರ್ 30 ಮತ್ತು 31 ರಂದು ಅಮೃತ ಕಲಶ ಪ್ರತಿಷ್ಠಾಪನೆ ಮಾಡಿರುವ ಕಾರ್ಯಕ್ರಮದಲ್ಲಿ ಅಮೃತವಾಟಿಕ ಎಂಬ ವೀರ ಯೋಧರಿಗೆ ವಂದನಾ ಕಾರ್ಯಕ್ರಮದಲ್ಲಿ ಅರ್ಪಣೆ ಮಾಡಲಾಯಿತು ಎಂಬುದಾಗಿ ಮಾಹಿತಿ ತಿಳಿಸಿದ್ದಾರೆ.
ದೆಹಲಿಯ ಅಮೃತ ಕಲಶ ಪ್ರತಿಷ್ಠಾಪನೆ ಕಾರ್ಯಕ್ರಮದಲ್ಲಿ ಪಾಲ್ಗೊಂಡಿರುವಆರೋಗ್ಯ ನಿರೀಕ್ಷಕಿ ಗೀತಾರವರು ದೂರದ ದೆಹಲಿಯಿಂದ ವಾಟ್ಸ್ ಆಪ್ ಮೂಲಕ ಜನಧ್ವನಿ ಡಿಜಿಟಲ್ ಮಾಧ್ಯಮಕ್ಕೆ ಪೋಟೋ ಗಳನ್ನು ನೀಡಿದ್ದಾರೆ ತಮ್ಮ ವಿಶಿಷ್ಠ ಅನುಭವಗಳನ್ನು ಸಡಗರ ಸಂಭ್ರಮದಿಂದ ಈ ರೀತಿ ಹಂಚಿಕೊಂಡರು.
ಈ ಅಮೃತ ಕಲಶ ಪ್ರತಿಷ್ಠಾಪನೆ ಕಾರ್ಯಕ್ರಮ ನಮ್ಮ ಜೀವಿತ ಅವಧಿಯಲ್ಲಿ ಇದೊಂದು ವಿಶಿಷ್ಠ ಕಾರ್ಯಕ್ರಮವಾಗಿದ್ದು, ಮೈ ರೋಮಾಂಚನಗೊಳಿಸುವ ಅನುಭವವಾಯಿತು, ಈ ಕಾರ್ಯಕ್ರಮದಲ್ಲಿ ದೇಶದ ವಿವಿಧ ಭಾಗಗಳಿಂದ ದೇಶ, ಭಾಷೆ, ಗಡಿ, ಜಾತಿ,ಮತಗಳನ್ನು ಮೀರಿ, ಯಾವುದೇ ಬೇಧಭಾವವಿಲ್ಲದೆ ಜನರು ಭಾಗವಹಿಸಿರುವುದು ದೇಶದ ಸೌಹಾರ್ದತೆ ಹಾಗೂ ಐಕ್ಯತೆಯ ಸಂದೇಶವಾಗಿದೆ ಎಂದರಲ್ಲದೆ ಈ ಕಾರ್ಯಕ್ರಮದಲ್ಲಿ ಭಾಗವಹಿಸಲು ನನಗೆ ಅವಕಾಶ ಸಿಕ್ಕಿದ್ದು, ಜನ್ಮಜನ್ಮಾಂತರದ ಪುಣ್ಯ ಎಂಬುದಾಗಿ ಸಂತಸ ವ್ಯಕ್ತಪಡಿಸಿದ್ದಾರೆ.

Latest News >>

ಡಿ.ಸಿ.ಸಿ. ಬ್ಯಾಂಕ್ ನಿರ್ದೇಶಕರಾಗಿ ಓ.ಮಂಜುನಾಥ್ ಮಾಳಿಗೆ ಅವರು ಅವಿರೋಧ ಆಯ್ಕೆಯಾಗಿದ್ದಾರೆ.

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತ, ಚಿತ್ರದುರ್ಗ ಇದರ ಆಡಳಿತ ಮಂಡಳಿ ನಿರ್ದೇಶಕರ ಸ್ಥಾನಕ್ಕೆ ಹಿರಿಯೂರು...

ಚಿತ್ರದುರ್ಗದಲ್ಲಿ ನಡೆಯಲಿರುವ ಪತ್ರಿಕಾ ವಿತರಕರ ಹಂಚಿಕೆದಾರರ 4ನೇರಾಜ್ಯಸಮ್ಮೇಳನ ಕಾರ್ಯಕ್ರಮ ಯಶಸ್ವಿಯಾಗಲಿ : ಆಲೂರು ಹನುಮಂತರಾಯಪ್ಪ

ಹಿರಿಯೂರು: ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ ಹಾಗೂ ಚಿತ್ರದುರ್ಗ ಜಿಲ್ಲಾ ಪತ್ರಿಕೆ ಹಂಚಿಕೆದಾರರ ಹಾಗೂ ವಿತರಕರ ಸಂಘ (ರಿ) ಇವರುಗಳ...

ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ ಅನುಷ್ಟಾನ ಮೌಲ್ಯಮಾಪನ ಸಭೆಜಿಲ್ಲಾ ಮೇಲ್ವಿಚಾರಣಾ ಸಮಿತಿಯಿಂದ ಕ್ರಿಯಾಯೋಜನೆ ಅನುಮೋದನೆ ಕ್ರಮಕ್ಕೆ ಶಿಫಾರಸ್ಸು

ಚಿತ್ರದುರ್ಗ ಸೆ.06: ಪರಿಶಿಷ್ಟ ಜಾತಿ ಹಾಗೂ ಗಿರಿಜನ ಉಪಯೋಜನೆಯಡಿ (ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ) ಜಿಲ್ಲೆಯಲ್ಲಿ ಕೈಗೊಳ್ಳುವ ಎಲ್ಲಾ...

ಪೋಷಣ್ ಮಾಸಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ.ಡಿ.ಎಂ.ಅಭಿನವ್ ಪೌಷ್ಠಿಕಾಂಶಯುಕ್ತ ಆಹಾರ ಪದಾರ್ಥ ಸೇವಿಸುವುದು ಅಭ್ಯಾಸಿಸಿ

ಚಿತ್ರದುರ್ಗ ಸೆ.6: ಪೋಷಣ್ ಮಾಸಾಚರಣೆ ಕಾರ್ಯಕ್ರಮ ಮಕ್ಕಳ ಹಾಗೂ ಗರ್ಭಿಣಿಯರ, ಬಾಣಂತಿಯರ ಆರೋಗ್ಯ ಪೋಷಣ ಮಾಸಾಚರಣೆ ಆಗಬೇಕು. ಮಕ್ಕಳಲ್ಲಿ...

ಎಚ್‌ಐವಿ/ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆ

ಚಿತ್ರದುರ್ಗ ಸೆ.6: ಯುವ ಜನೋತ್ಸವ ಅಂಗವಾಗಿ ಎಚ್‌ಐವಿ/ ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆಯು ಚಿತ್ರದುರ್ಗ ನಗರದಲ್ಲಿ ಗುರುವಾರ...

ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಕಾಮಗಾರಿ ಪರಿಶೀಲನೆ

ಚಿತ್ರದುರ್ಗ ಸೆ.06: ನಬಾರ್ಡ್ ಸಂಸ್ಥೆಯ ಡಿಜಿಎಂ ಸಂಜೀವ್ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಈಚೆಗೆ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ವಾಣಿವಿಲಾಸ...

ಮೊಳಕಾಲ್ಮುರು : ಫಲಾನುಭವಿಗಳ ಮನೆ ಬಾಗಿಲಿಗೆ ಹೋಗಿ ಸಮಸ್ಯೆ ಆಲಿಸಿ ಶಾಸಕ ಎನ್ ವೈ ಗೋಪಾಲಕೃಷ್ಣ.

ಮೊಳಕಾಲ್ಮೂರು :-ಪಟ್ಟಣದ ತಾಲೂಕು ಪಂಚಾಯಿತಿಯಲ್ಲಿ ಗ್ಯಾರೆಂಟಿ ಅನುಷ್ಠಾನ ಸಮಿತಿ ನೂತನ ಕಾರ್ಯಾಲಯವನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ಎನ್ ವೈ....

ಬೆಂಬಲಬೆಲೆಯಲ್ಲಿ ಸೂರ್ಯಕಾಂತಿ ಖರೀದಿ ಕೇಂದ್ರಗಳ ಸ್ಥಾಪನೆ

ಚಿತ್ರದುರ್ಗ ಸೆ.04: 2024-25ನೇ ಸಾಲಿಗೆ ಕೇಂದ್ರ ಸರ್ಕಾರದ ಬೆಂಬಲಬೆಲೆ ಯೋಜನೆಯಡಿ ನಿಗದಿಪಡಿಸಿರುವ ರೂ.7,280/- (ಪ್ರತಿ ಕ್ವಿಂಟಾಲ್‌ಗೆ)...

ಮಹಾತ್ಮ ಗಾಂಧೀ ಸೇವಾ ಪ್ರಶಸ್ತಿ – ಕರ್ನಾಟಕ’ ಆಯ್ಕೆಗೆ ನಾಮನಿರ್ದೇಶನ ಆಹ್ವಾನ

ಚಿತ್ರದುರ್ಗ ಸೆ.04: ರಾಜ್ಯ ಸರ್ಕಾರವು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಸ್ಥಾಪಿಸಿರುವ ಐದು ಲಕ್ಷ ರೂಪಾಯಿ ನಗದನ್ನು ಒಳಗೊಂಡ...

ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್ 110 ಸಿಸಿ ಯ ಆಕರ್ಷಕ ಸ್ಕೂಟಿ ಮಾರುಕಟ್ಟೆಗೆ ಬಿಡುಗಡೆ.

ಚಿತ್ರದುರ್ಗ: ಚಿತ್ರದುರ್ಗ ನಗರದ ತುರುವನೂರು ರಸ್ತೆಯಲ್ಲಿನ ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page