ಪತ್ರಕರ್ತರ ಭವನದಲ್ಲಿ ಹಳೆ ಸಾಮಾಗ್ರಿಗಳು, ಧೂಳು ಮುಕ್ಕುತ್ತಿರುವ ಪತ್ರಕರ್ತರ ಭವನಕ್ಕೆ ಕಾಯಕಲ್ಪ ನೀಡುವರೇ….?

by | 09/03/24 | ಸುದ್ದಿ


ಚಳ್ಳಕೆರೆ ಜನಧ್ವನಿ ವಾರ್ತೆ ಮಾ.9 ಸಾಮಾಜದ ಅಂಕು ಡೊಂಕುಗಳನ್ನು ತಿದ್ದುವ ಪತ್ರಕರ್ತರ ಭವನ ಸರಕು ಸಾಮಾಗ್ರಿಗಳ ಗೋದಾಮಿನಿಂದ ಧೂಳು ಮುಕ್ಕುವಂತಾಗಿದೆ.
ಹೌದು ಇದು ಚಳ್ಳಕೆರೆ ನಗರದ ತಾಲೂಕು ಪಂಚಾಯತ್ ಕಚೇರಿ ಆವರಣದಲ್ಲಿರುವ ಶಾಸಕರ ಭವನದ ಪಕ್ಕದಲ್ಲಿ ತಾಲೂಕು ಪಂಚಾಯತ್ ಕಟ್ಟಡವನ್ನು ಪತ್ರಕರ್ತರ ಬಳಕೆಗಾಗಿ ನೀಡಲಾಗಿದ್ದು ಕೆಲ ದಿನಗಳು ಪತ್ರಕರ್ತರು ಬಳಕೆ ಮಾಡಿಕೊಳ್ಳುತ್ತಿದ್ದರು ಕೋವಿಡ್ ಸೋಂಕು ಸಂರ್ಭದಲ್ಲಿ ಕೊರೋನಾ ವಾರಿಯರ್ ಗಳಿಗೆ ಆಹಾರದ ಕಿಟ್ ಗಳನ್ನು ಸಂಗ್ರಹಿಸಲು ಮಾಡಿಕೊಂಡಿದ್ದರೂ ಮತ್ತೆ ಅದನ್ನು ಸ್ವಚ್ಚತೆ ಮಾಡದೆ ಹಳೆಯ ಸಾಮಾಗ್ರಿಗಳನ್ನು ತುಂಬಿರುವುದರಿಂದ ಜೇಡರ ಬಲೆ ಹಾಗೂ ಧೂಳಿನಿಂದ ತುಂಬಿದೆ.
ಜಿಲ್ಲಾ ಕೇಂದ್ರ ಸೇರಿದಂತೆ ಚಳ್ಳಕೆರೆ ಹೊರತು ಪಡಿಸಿದ ಉಳಿದ ತಾಲೂಕು ಕೇಂದ್ರದಲ್ಲಿ ಸುಸಜ್ಜಿತ ತಾಲೂಕು ಪತ್ರಕರಿಗೆಂದೇ ಪತ್ರಕರ್ತ ಭವನ್ನು ನಿರ್ಮಿಸಲಾಗಿದ್ದು ಚಳ್ಳಕೆರೆ ನಗರದಲ್ಲಿ ಮಾತ್ರ ಪತ್ರಕರ್ತರ ಭವನದ ಸ್ವಂತ ಕಟ್ಟಡ ಭಾಗ್ಯ ಕೂಡಿ ಬಂದಿಲ್ಲ
ಪತ್ರಕರ್ತರು ಸಮಾಜದಲ್ಲಿ ನಡೆಯುವ ಭ್ರಷ್ಟಾಚಾರ, ದುರಾಡಳಿತ, ಹಗರಣಗಳ ಬಗ್ಗೆ ಜನಾಭಿಪ್ರಾಯ ರೂಪಿಸುವ ಮೂಲಕ ಅನ್ಯಾಯದ ವಿರುದ್ಧ ಸಿಡಿದೇ ಳುವಂತೆ ಜನರನ್ನು ಪ್ರೇರೇಪಿಸುತ್ತವೆ. ಸಮಾಜದಲ್ಲಿನ ಅಂಕುಡೊಂಕುಗಳನ್ನು ತಿದ್ದುವಲ್ಲಿ ಹಾಗೂ ಸರಕಾರದ ಯೋಜನೆಗಳನ್ನು ಜನರಿಗೆ ತಲುಪಿಸುವಲ್ಲಿ , ಯಾವುದೇ ವ್ಯಕ್ತಿ ಉತನ್ನತ ಮಟ್ಟಕ್ಕೆ ಹೋಗಲು ಪತ್ರಿಕೆಗಳ ಪಾತ್ರವೂ ಸಹ ಇದೆ ಸರ್ಕಾರವನ್ನು ಅಧಿಕಾರಕ್ಕೆ ತರುವ ಹಾಗೂ ಕೆಳಗಿಳಿಸುವಲ್ಲಿ ಪತ್ರಿಕೆಗಳು ಪ್ರಮುಖ ಪಾತ್ರವಿದೆ.


ಪತ್ರಕರ್ತರು ಸರ್ಕಾರದ ಕಾರ್ಯಕ್ರಮಗಳನ್ನು ಜನರಿಗೆ ತಿಳಿಸುವ ಕೆಲಸ ಮಾಡುತ್ತಾರೆ. ಸಮಾಜದ ಒಳಿತಿಗೆ ಶ್ರಮಿಸುವ ಪತ್ರಕರ್ತರ ಏಳಿಗೆಗೆ ಜನಪತ್ರಿನಿಗಳು ಹಾಗೂ ಸರ್ಕಾರ ಗಮನಹರಿಸಬೇಕು. ಪತ್ರಕರ್ತರಿಗೆ ನಿವೇಶನ ಹಾಗೂ ಅಗತ್ಯ ಸೌಲಭ್ಯಗಳಿಂದ ವಂಚಿತರ ಜತಗೆ ಈ ಪತ್ರಕರ್ತರು ಒಂದಡೆ ಸೇರಿ ಸಭೆ ಸಮಾರಂಭಗಳನ್ನು ಮಾಡಲು ಹಾಗೂ ರಾಜಕೀಯ, ವಿವಿಧ ಸಂಘಟನೆಗಳು ಸುದ್ದಿಗೋಷ್ಠಿನಡೆಸಲು ಪತ್ರಕರ್ತರ ಭವನದಿಂದಲೂ ಸಹ ವಂಚಿತರಾಗಿದ್ದಾರೆ.,
ಇರುವ ಪತ್ರಕರ್ತರ ಭವನದಲ್ಲಿ ಹಳೆಯ ಸಾಮಾಗ್ರಿಗಳನ್ನು ತುಂಬಲಾಗಿದ್ದು ಈಗಲಾದರೂ ಸಂಬಂಧ ಪಟ್ಟ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಪತ್ರಕರ್ತರಿಗೆ ತಾಲೂಕು ಪತ್ರಕರ್ತರ ಭವನದ ವ್ಯವಸ್ಥೆ ಕಲ್ಪಿಸುವರೇ ಕಾದು ನೋಡ ಬೇಕಿದೆ.

Latest News >>

ಡಿ.ಸಿ.ಸಿ. ಬ್ಯಾಂಕ್ ನಿರ್ದೇಶಕರಾಗಿ ಓ.ಮಂಜುನಾಥ್ ಮಾಳಿಗೆ ಅವರು ಅವಿರೋಧ ಆಯ್ಕೆಯಾಗಿದ್ದಾರೆ.

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತ, ಚಿತ್ರದುರ್ಗ ಇದರ ಆಡಳಿತ ಮಂಡಳಿ ನಿರ್ದೇಶಕರ ಸ್ಥಾನಕ್ಕೆ ಹಿರಿಯೂರು...

ಚಿತ್ರದುರ್ಗದಲ್ಲಿ ನಡೆಯಲಿರುವ ಪತ್ರಿಕಾ ವಿತರಕರ ಹಂಚಿಕೆದಾರರ 4ನೇರಾಜ್ಯಸಮ್ಮೇಳನ ಕಾರ್ಯಕ್ರಮ ಯಶಸ್ವಿಯಾಗಲಿ : ಆಲೂರು ಹನುಮಂತರಾಯಪ್ಪ

ಹಿರಿಯೂರು: ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ ಹಾಗೂ ಚಿತ್ರದುರ್ಗ ಜಿಲ್ಲಾ ಪತ್ರಿಕೆ ಹಂಚಿಕೆದಾರರ ಹಾಗೂ ವಿತರಕರ ಸಂಘ (ರಿ) ಇವರುಗಳ...

ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ ಅನುಷ್ಟಾನ ಮೌಲ್ಯಮಾಪನ ಸಭೆಜಿಲ್ಲಾ ಮೇಲ್ವಿಚಾರಣಾ ಸಮಿತಿಯಿಂದ ಕ್ರಿಯಾಯೋಜನೆ ಅನುಮೋದನೆ ಕ್ರಮಕ್ಕೆ ಶಿಫಾರಸ್ಸು

ಚಿತ್ರದುರ್ಗ ಸೆ.06: ಪರಿಶಿಷ್ಟ ಜಾತಿ ಹಾಗೂ ಗಿರಿಜನ ಉಪಯೋಜನೆಯಡಿ (ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ) ಜಿಲ್ಲೆಯಲ್ಲಿ ಕೈಗೊಳ್ಳುವ ಎಲ್ಲಾ...

ಪೋಷಣ್ ಮಾಸಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ.ಡಿ.ಎಂ.ಅಭಿನವ್ ಪೌಷ್ಠಿಕಾಂಶಯುಕ್ತ ಆಹಾರ ಪದಾರ್ಥ ಸೇವಿಸುವುದು ಅಭ್ಯಾಸಿಸಿ

ಚಿತ್ರದುರ್ಗ ಸೆ.6: ಪೋಷಣ್ ಮಾಸಾಚರಣೆ ಕಾರ್ಯಕ್ರಮ ಮಕ್ಕಳ ಹಾಗೂ ಗರ್ಭಿಣಿಯರ, ಬಾಣಂತಿಯರ ಆರೋಗ್ಯ ಪೋಷಣ ಮಾಸಾಚರಣೆ ಆಗಬೇಕು. ಮಕ್ಕಳಲ್ಲಿ...

ಎಚ್‌ಐವಿ/ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆ

ಚಿತ್ರದುರ್ಗ ಸೆ.6: ಯುವ ಜನೋತ್ಸವ ಅಂಗವಾಗಿ ಎಚ್‌ಐವಿ/ ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆಯು ಚಿತ್ರದುರ್ಗ ನಗರದಲ್ಲಿ ಗುರುವಾರ...

ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಕಾಮಗಾರಿ ಪರಿಶೀಲನೆ

ಚಿತ್ರದುರ್ಗ ಸೆ.06: ನಬಾರ್ಡ್ ಸಂಸ್ಥೆಯ ಡಿಜಿಎಂ ಸಂಜೀವ್ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಈಚೆಗೆ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ವಾಣಿವಿಲಾಸ...

ಮೊಳಕಾಲ್ಮುರು : ಫಲಾನುಭವಿಗಳ ಮನೆ ಬಾಗಿಲಿಗೆ ಹೋಗಿ ಸಮಸ್ಯೆ ಆಲಿಸಿ ಶಾಸಕ ಎನ್ ವೈ ಗೋಪಾಲಕೃಷ್ಣ.

ಮೊಳಕಾಲ್ಮೂರು :-ಪಟ್ಟಣದ ತಾಲೂಕು ಪಂಚಾಯಿತಿಯಲ್ಲಿ ಗ್ಯಾರೆಂಟಿ ಅನುಷ್ಠಾನ ಸಮಿತಿ ನೂತನ ಕಾರ್ಯಾಲಯವನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ಎನ್ ವೈ....

ಬೆಂಬಲಬೆಲೆಯಲ್ಲಿ ಸೂರ್ಯಕಾಂತಿ ಖರೀದಿ ಕೇಂದ್ರಗಳ ಸ್ಥಾಪನೆ

ಚಿತ್ರದುರ್ಗ ಸೆ.04: 2024-25ನೇ ಸಾಲಿಗೆ ಕೇಂದ್ರ ಸರ್ಕಾರದ ಬೆಂಬಲಬೆಲೆ ಯೋಜನೆಯಡಿ ನಿಗದಿಪಡಿಸಿರುವ ರೂ.7,280/- (ಪ್ರತಿ ಕ್ವಿಂಟಾಲ್‌ಗೆ)...

ಮಹಾತ್ಮ ಗಾಂಧೀ ಸೇವಾ ಪ್ರಶಸ್ತಿ – ಕರ್ನಾಟಕ’ ಆಯ್ಕೆಗೆ ನಾಮನಿರ್ದೇಶನ ಆಹ್ವಾನ

ಚಿತ್ರದುರ್ಗ ಸೆ.04: ರಾಜ್ಯ ಸರ್ಕಾರವು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಸ್ಥಾಪಿಸಿರುವ ಐದು ಲಕ್ಷ ರೂಪಾಯಿ ನಗದನ್ನು ಒಳಗೊಂಡ...

ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್ 110 ಸಿಸಿ ಯ ಆಕರ್ಷಕ ಸ್ಕೂಟಿ ಮಾರುಕಟ್ಟೆಗೆ ಬಿಡುಗಡೆ.

ಚಿತ್ರದುರ್ಗ: ಚಿತ್ರದುರ್ಗ ನಗರದ ತುರುವನೂರು ರಸ್ತೆಯಲ್ಲಿನ ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page