ಪಿ ಎಚ್ ಡಿ ಪದವೀಧರ ಮಾರಣ್ಣ ಇಂದಿನ ಯುವ ಸಮೂಹಕ್ಕೆ ಸ್ಪೂರ್ತಿಯಾಗಲಿ: ಕೊರಲಕುಂಟೆ ತಿಪ್ಪೇಸ್ವಾಮಿ.

by | 27/12/23 | ಶಿಕ್ಷಣ


ಚಳ್ಳಕೆರೆ ಡಿ.27: ಮಾದಿಗ ಸಮುದಾಯದ ಸರ್ಕಾರಿ ನೌಕರರು ಅಂಬೇಡ್ಕರ್ ರೂಪಿಸಿದ ಸಂವಿಧಾನದ ಅಡಿಯಲ್ಲಿ ಮೀಸಲಾತಿ ಪಡೆದು ಸರ್ಕಾರಿ ಉದ್ಯೋಗ ಗಿಟ್ಟಿಸಿಕೊಂಡು ಪ್ರತಿಭಾವಂತ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸದೆ ಹಾಗೂ ಸಮಾಜಕ್ಕೆ ಯಾವುದೇ ಕೊಡುಗೆ ನೀಡದೆ ಕೇವಲ ತಮ್ಮ ಸ್ವಾರ್ಥ ಜೀವನ ನಡೆಸುತ್ತಿರುವುದು ಖಂಡನೀಯ ಎಂದು ಪತ್ರಕರ್ತ ಹಾಗೂ ಗಡಿನಾಡ ಕನ್ನಡ ರಕ್ಷಣಾ ಮತ್ತು ಸಾಂಸ್ಕೃತಿಕ ವೇದಿಕೆ ಅಧ್ಯಕ್ಷ ಕೊರ್ಲಕುಂಟೆ ತಿಪ್ಪೇಸ್ವಾಮಿ ಬೇಸರ ವ್ಯಕ್ತಪಡಿಸಿದರು‌.

ನಗರದ ಪ್ರವಾಸಿ ಮಂದಿರದಲ್ಲಿ ತೈವಾನ್ ದೇಶದ ವಿಶ್ವವಿದ್ಯಾನಿಲಯದಲ್ಲಿ ಗಣಿತ ವಿಷಯದಲ್ಲಿ ಪಿ ಹೆಚ್ ಡಿ ಪದವಿ ಪಡೆಯುತ್ತಿರುವ ಸಲುವಾಗಿ   ಸ್ವದೇಶಕ್ಕೆ ಆಗಮಿಸಿದ್ದ ಕೊರಲಕುಂಟೆ ಗ್ರಾಮದ ನಿವಾಸಿ ಟಿ ಮಾರಣ್ಣನವರನ್ನು ಸನ್ಮಾನಿಸುವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು ಗ್ರಾಮೀಣ ಪ್ರದೇಶದಲ್ಲಿ ಬಡತನ ಎಂಬುದು ಹಾಸಹೊಕ್ಕಾಗಿರುತ್ತದೆ ಇಂತಹ ಬಡತನದ ಮಧ್ಯೆ ತನ್ನ ವಿದ್ಯಾಭ್ಯಾಸವನ್ನು ಮುಂದುವರಿಸಿ ಉತ್ತಮ ಅಂಕಗಳೊಂದಿಗೆ ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾದರೂ ಮಾದಿಗ ಸಮುದಾಯದ ಯಾವೊಬ್ಬ ಸರ್ಕಾರಿ ನೌಕರರಾಗಲಿ ಉನ್ನತ ಸ್ಥಾನದಲ್ಲಿರುವ ಸಮುದಾಯದ ಹಿತೈಷಿಗಳಾಗಲಿ ಇಂತಹ ವಿದ್ಯಾವಂತ ವಿದ್ಯಾರ್ಥಿಯನ್ನು ಗುರುತಿಸದೇ ಇರುವುದು ವಿಪರ್ಯಾಸದ ಸಂಗತಿಯಾಗಿದೆ ಇಂದಿನ ಮುಂದುವರೆದ ಸಮಾಜದಲ್ಲಿ ಇಂದಿಗೂ ಸಹ ಇಂತಹ ಕೀಳು ಸಂಸ್ಕೃತಿಯನ್ನು ಬೆಳೆಸಿಕೊಳ್ಳುತ್ತಿರುವುದು ಅತ್ಯಂತ ನೋವಿನ ಸಂಗತಿಯಾಗಿದೆ ಅಂಬೇಡ್ಕರ್ ಅವರ ಶಿಕ್ಷಣ ಸಂಘಟನೆ ಹೋರಾಟ ಎಂಬ ಮೂರು ತತ್ವದ ಮಹತ್ವವನ್ನು ಇಂದು ಮರೆತಂತಾಗಿದೆ ಉತ್ತಮ ಶಿಕ್ಷಣವನ್ನು ಪಡೆದರೆ ಏನನ್ನು ಬೇಕಾದರೂ ಸಾಧಿಸಬಹುದು ಎಂದು ಇಂದಿನ ಯುವಕರಿಗೆ ಟಿ ಮಾರಣ್ಣ ಸಾಧಿಸಿ ತೋರಿಸಿದ್ದಾರೆ ಇವರ ಪ್ರೇರಣೆಯಿಂದ ಇನ್ನಷ್ಟು ಯುವ ವಿದ್ಯಾರ್ಥಿಗಳಿಗೆ ಉನ್ನತ ವ್ಯಾಸಂಗ ಮಾಡಲು ದಾರಿದೀಪವಾಗಲಿ ಎಂದು ಆಶಿಸಿದರು.


ಮಾಜಿ ಪುರಸಭಾ ಉಪಾಧ್ಯಕ್ಷ ಟಿ ವಿಜಯ್ ಕುಮಾರ್ ಮಾತನಾಡಿ ದಲಿತ ಎಂಬ ಪದವು ಇಂದು ದಲಿತರಿಗೆ ಪಿಎಚ್ಡಿ ಪದವಿ ಪಡೆದಂತಾಗಿದೆ ಇಂತಹ ಪದಗಳನ್ನು ಬಳಸಿಕೊಂಡು ಕೇವಲ ಸ್ವಾರ್ಥಕ್ಕಾಗಿ ಜೀವನ ನಡೆಸುವವರ ಸಂಖ್ಯೆ ಹೆಚ್ಚಾಗಿದೆ ಬಡತನ ಸಾಧನೆಗೆ ಅಡ್ಡಿ ಆಗುವುದಿಲ್ಲ ಎಂಬುದನ್ನು ಇಂದು ಮಾರಣ್ಣನವರು ಸಾಧಿಸಿ ತೋರಿಸಿದ್ದಾರೆ ಅಂಬೇಡ್ಕರ್ ಅವರು ಯಾವ ಕಾರಣಕ್ಕಾಗಿ ಮೀಸಲಾತಿ ನೀಡಿದರು ಎಂಬುದು ಇಂದು ಈ ಯುವಕನ ಸಾಧನೆಯ ಮೂಲಕ ಪ್ರತಿಫಲಿಸುವಂತೆ ಆಗಿದೆ ಮಾದಿಗ ಸಮುದಾಯವು ಅಂಬೇಡ್ಕರ್ ಅವರ ಆದರ್ಶಗಳನ್ನು ಕೇವಲ ಬಾಯಿಮಾಚಿನಲ್ಲಿ ಹೇಳದೆ ಅವುಗಳನ್ನು ಅಳವಡಿಸಿಕೊಂಡಾಗ ಮಾತ್ರ ಇಂತಹ ಪ್ರತಿಭೆಗಳನ್ನು ಪೋಷಿಸಲು ಸಾಧ್ಯವಾಗುತ್ತದೆ ಕೇವಲ ಡೋಂಗಿತನದ ಮಾತುಗಳನ್ನು ಆಡುತ್ತ ಸಮುದಾಯಕ್ಕೆ ಕಪ್ಪು ಚುಕ್ಕೆ ತರಬಾರದು ಎಂದು ತಿಳಿಸಿದರು.

ಪಿಎಚ್ ಡಿ ಪದವೀಧರ ಟಿ ಮಾರಣ್ಣ ಮಾತನಾಡಿ ನನ್ನ ಈ ಸಾಧನೆಗೆ ಶಿಕ್ಷಣ ಕಲಿಸಿದ ಗುರುಗಳ ಪ್ರೇರಣೆಯಿಂದ ಸಾಧನೆ ಮಾಡಲು ಸಾಧ್ಯವಾಯಿತು ಮುಂದಿನ ದಿನಗಳಲ್ಲಿ ದೇಶಕ್ಕೆ ಏನಾದರೂ ಸೇವೆ ಮಾಡಬೇಕು ಎಂಬುದು ನನ್ನ ಧ್ಯೇಯವಾಗಿದ್ದು ಯಾವುದೇ ತರಬೇತಿಗಳಿಲ್ಲದೆ ಸ್ವಯಂ ಅಭ್ಯಾಸದಿಂದ ಕೆ ಸೆಟ್ ಸೇರಿದಂತೆ ಹಲವು ಪರೀಕ್ಷೆಗಳಲ್ಲಿ ಉತ್ತೀರ್ಣನಾಗಿದ್ದು ನನ್ನ ಗುರುಗಳಾದ ಡಾಕ್ಟರ್ ರಾಮಲಿಂಗಪ್ಪ ಹಾಗೂ ಮಹಾಬಲೇಶ್ವರ ರವರ ನೆರವಿನಿಂದ ಇಂದು ಈ ಸಾಧನೆ ಮಾಡಲು ಸಾಧ್ಯವಾಗಿದೆ ಶಿಕ್ಷಣದಲ್ಲಿ ರಾಜಕೀಯ ಹಸ್ತಕ್ಷೇಪ ಮರೆಯಾದಾಗ ಮಾತ್ರ ಭಾರತದಲ್ಲಿ ಉತ್ತಮ ಶಿಕ್ಷಣ ಹಾಗೂ ಪ್ರತಿಭೆಗಳು ಹೊರಹೊಮ್ಮಲು ಸಾಧ್ಯ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಸಮುದಾಯದ ಮುಖಂಡರಾದ ಗಂಗರಾಜ್ ಲಕ್ಷ್ಮಣ ನಂಜಪ್ಪ ನಾಗರಾಜ್ ಉಮೇಶ್ ಮಹಾಂತೇಶ್ ಜಯಣ್ಣ ಭೀಮನಕೆರೆ ಶಿವಮೂರ್ತಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Latest News >>

ಡಿ.ಸಿ.ಸಿ. ಬ್ಯಾಂಕ್ ನಿರ್ದೇಶಕರಾಗಿ ಓ.ಮಂಜುನಾಥ್ ಮಾಳಿಗೆ ಅವರು ಅವಿರೋಧ ಆಯ್ಕೆಯಾಗಿದ್ದಾರೆ.

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತ, ಚಿತ್ರದುರ್ಗ ಇದರ ಆಡಳಿತ ಮಂಡಳಿ ನಿರ್ದೇಶಕರ ಸ್ಥಾನಕ್ಕೆ ಹಿರಿಯೂರು...

ಚಿತ್ರದುರ್ಗದಲ್ಲಿ ನಡೆಯಲಿರುವ ಪತ್ರಿಕಾ ವಿತರಕರ ಹಂಚಿಕೆದಾರರ 4ನೇರಾಜ್ಯಸಮ್ಮೇಳನ ಕಾರ್ಯಕ್ರಮ ಯಶಸ್ವಿಯಾಗಲಿ : ಆಲೂರು ಹನುಮಂತರಾಯಪ್ಪ

ಹಿರಿಯೂರು: ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ ಹಾಗೂ ಚಿತ್ರದುರ್ಗ ಜಿಲ್ಲಾ ಪತ್ರಿಕೆ ಹಂಚಿಕೆದಾರರ ಹಾಗೂ ವಿತರಕರ ಸಂಘ (ರಿ) ಇವರುಗಳ...

ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ ಅನುಷ್ಟಾನ ಮೌಲ್ಯಮಾಪನ ಸಭೆಜಿಲ್ಲಾ ಮೇಲ್ವಿಚಾರಣಾ ಸಮಿತಿಯಿಂದ ಕ್ರಿಯಾಯೋಜನೆ ಅನುಮೋದನೆ ಕ್ರಮಕ್ಕೆ ಶಿಫಾರಸ್ಸು

ಚಿತ್ರದುರ್ಗ ಸೆ.06: ಪರಿಶಿಷ್ಟ ಜಾತಿ ಹಾಗೂ ಗಿರಿಜನ ಉಪಯೋಜನೆಯಡಿ (ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ) ಜಿಲ್ಲೆಯಲ್ಲಿ ಕೈಗೊಳ್ಳುವ ಎಲ್ಲಾ...

ಪೋಷಣ್ ಮಾಸಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ.ಡಿ.ಎಂ.ಅಭಿನವ್ ಪೌಷ್ಠಿಕಾಂಶಯುಕ್ತ ಆಹಾರ ಪದಾರ್ಥ ಸೇವಿಸುವುದು ಅಭ್ಯಾಸಿಸಿ

ಚಿತ್ರದುರ್ಗ ಸೆ.6: ಪೋಷಣ್ ಮಾಸಾಚರಣೆ ಕಾರ್ಯಕ್ರಮ ಮಕ್ಕಳ ಹಾಗೂ ಗರ್ಭಿಣಿಯರ, ಬಾಣಂತಿಯರ ಆರೋಗ್ಯ ಪೋಷಣ ಮಾಸಾಚರಣೆ ಆಗಬೇಕು. ಮಕ್ಕಳಲ್ಲಿ...

ಎಚ್‌ಐವಿ/ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆ

ಚಿತ್ರದುರ್ಗ ಸೆ.6: ಯುವ ಜನೋತ್ಸವ ಅಂಗವಾಗಿ ಎಚ್‌ಐವಿ/ ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆಯು ಚಿತ್ರದುರ್ಗ ನಗರದಲ್ಲಿ ಗುರುವಾರ...

ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಕಾಮಗಾರಿ ಪರಿಶೀಲನೆ

ಚಿತ್ರದುರ್ಗ ಸೆ.06: ನಬಾರ್ಡ್ ಸಂಸ್ಥೆಯ ಡಿಜಿಎಂ ಸಂಜೀವ್ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಈಚೆಗೆ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ವಾಣಿವಿಲಾಸ...

ಮೊಳಕಾಲ್ಮುರು : ಫಲಾನುಭವಿಗಳ ಮನೆ ಬಾಗಿಲಿಗೆ ಹೋಗಿ ಸಮಸ್ಯೆ ಆಲಿಸಿ ಶಾಸಕ ಎನ್ ವೈ ಗೋಪಾಲಕೃಷ್ಣ.

ಮೊಳಕಾಲ್ಮೂರು :-ಪಟ್ಟಣದ ತಾಲೂಕು ಪಂಚಾಯಿತಿಯಲ್ಲಿ ಗ್ಯಾರೆಂಟಿ ಅನುಷ್ಠಾನ ಸಮಿತಿ ನೂತನ ಕಾರ್ಯಾಲಯವನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ಎನ್ ವೈ....

ಬೆಂಬಲಬೆಲೆಯಲ್ಲಿ ಸೂರ್ಯಕಾಂತಿ ಖರೀದಿ ಕೇಂದ್ರಗಳ ಸ್ಥಾಪನೆ

ಚಿತ್ರದುರ್ಗ ಸೆ.04: 2024-25ನೇ ಸಾಲಿಗೆ ಕೇಂದ್ರ ಸರ್ಕಾರದ ಬೆಂಬಲಬೆಲೆ ಯೋಜನೆಯಡಿ ನಿಗದಿಪಡಿಸಿರುವ ರೂ.7,280/- (ಪ್ರತಿ ಕ್ವಿಂಟಾಲ್‌ಗೆ)...

ಮಹಾತ್ಮ ಗಾಂಧೀ ಸೇವಾ ಪ್ರಶಸ್ತಿ – ಕರ್ನಾಟಕ’ ಆಯ್ಕೆಗೆ ನಾಮನಿರ್ದೇಶನ ಆಹ್ವಾನ

ಚಿತ್ರದುರ್ಗ ಸೆ.04: ರಾಜ್ಯ ಸರ್ಕಾರವು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಸ್ಥಾಪಿಸಿರುವ ಐದು ಲಕ್ಷ ರೂಪಾಯಿ ನಗದನ್ನು ಒಳಗೊಂಡ...

ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್ 110 ಸಿಸಿ ಯ ಆಕರ್ಷಕ ಸ್ಕೂಟಿ ಮಾರುಕಟ್ಟೆಗೆ ಬಿಡುಗಡೆ.

ಚಿತ್ರದುರ್ಗ: ಚಿತ್ರದುರ್ಗ ನಗರದ ತುರುವನೂರು ರಸ್ತೆಯಲ್ಲಿನ ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page