ಪ್ರೋತ್ಸಾಹಧನಕ್ಕೆ ಅರ್ಜಿ

by | 22/08/23 | ಆರ್ಥಿಕ

ಚಿತ್ರದುರ್ಗ ಆ.22:
2023-24ನೇ ಸಾಲಿನಲ್ಲಿ ಬಿ.ಇಡಿ ಹಾಗೂ ಡಿ.ಇಡಿ ಕೋರ್ಸ್‍ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತರ (ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ದ, ಸಿಖ್ ಮತ್ತು ಪಾರ್ಸಿ ಸಮುದಾಯದ ವಿದ್ಯಾರ್ಥಿಗಳಿಗೆ ವಿಶೇಷ ಪ್ರೋತ್ಸಹಧನ ನೀಡಲು ಆನ್‍ಲೈನ್ ಸೇವಾಸಿಂಧು ತಂತ್ರಾಂಶದ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
2023ರ ಸೆಪ್ಟೆಂಬರ್ 21 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದ್ದು, https://sevasindhu.karnataka.gov.in ವೆಬ್‍ಸೈಟ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
ಅರ್ಜಿ ಸಲ್ಲಿಸಲು ಬೇಕಾಗಿರುವ ದಾಖಲೆಗಳು: ನಿವಾಸಿ ದೃಢೀಕರಣ ಪತ್ರ, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಹಿಂದಿನ ವರ್ಷದ ಅಂಕಪಟ್ಟಿ, ಪದವಿ ಪ್ರಮಾಣ ಪತ್ರ, ಶುಲ್ಕ ರಸೀದಿ, ಆಧಾರ್ ಕಾರ್ಡ್, ಎಸ್‍ಎಸ್‍ಎಲ್‍ಸಿ ಅಂಕಪಟ್ಟಿ, ಪಿಯುಸಿ ಅಂಕಪಟ್ಟಿ, ವ್ಯಾಸಂಗ ದೃಢೀಕರಣ ಪತ್ರ, ಬ್ಯಾಂಕ್ ಪಾಸ್ ಬುಕ್ (ಆಧಾರ್ ಲಿಂಕ್ ಮಾಡಿಸಿರಬೇಕು)
ಷರತ್ತುಗಳು: ಅಭ್ಯರ್ಥಿಗಳು ಕರ್ನಾಟಕ ರಾಜ್ಯ ನಿವಾಸಿಯಾಗಿರಬೇಕು, ಕೋರ್ಸ್‍ಗಳ ಅವಧಿಗೆ ತಕ್ಕಂತೆ ಪ್ರತಿ ವರ್ಷ ರೂ.25000/- ದಂತೆ (ಗರಿಷ್ಟ 2ವರ್ಷ) ಅನುದಾನವನ್ನು ನೀಡಲಾಗುವುದು. ಅಲ್ಪ ಸಲ್ಪಸಂಖ್ಯಾತರ ಅಭ್ಯರ್ಥಿಗಳು ಪೋಷಕರ ವಾರ್ಷಿಕ ವರಮಾನ ಗರಿಷ್ಟ ರೂ 6ಲಕ್ಷಗಳ ಮಿತಿಯಲ್ಲಿರಬೇಕು. ಅಭ್ಯರ್ಥಿಗಳನ್ನು ಅರ್ಹತೆ ಪರೀಕ್ಷೆ ಅಥವಾ ಹಿಂದಿನ ಸಾಲಿನ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳ ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು. ಪ್ರೋತ್ಸಾಹಧನ ಪಡೆಯುವ ವಿದ್ಯಾರ್ಥಿಗಳು ಭಾರತ ಸರ್ಕಾರ ಅಥವಾ ಇತರೆ ವಿದ್ಯಾರ್ಥಿವೇತನ ಶಿಷ್ಯವೇತನ ಪಡೆಯಲು ಅರ್ಹರಿರುತ್ತಾರೆ, ಈ ಸೌಲಭ್ಯ ಪಡೆಯುವ ವಿದ್ಯಾರ್ಥಿಗಳು ಸರ್ಕಾರಿ ಇಲಾಖೆಯ ವಿದ್ಯಾರ್ಥಿನಿಲಯಗಳಲ್ಲಿ ನಿಯಮಾನುಸಾರ ಪ್ರವೇಶ ಪಡೆಯಲು ಅರ್ಹರಿರುತ್ತಾರೆ. ವಿದ್ಯಾರ್ಥಿಗಳು ಬಿಎಡ್ ಹಾಗೂ ಡಿಎಡ್ ಕೋರ್ಸುಗಳಲ್ಲಿ ದಾಖಲಾಗಿರುವ ಹಾಗೂ ಶುಲ್ಕವನ್ನು ಭರಿಸಿರುವ ಬಗ್ಗೆ ಎಲ್ಲಾ ಅಧಿಕೃತ ದಾಖಲೆಗಳನ್ನು ಸಲ್ಲಿಸಬೇಕು. ನ್ಯಾಷನಲ್ ಕೌನ್ಸಿಲ್ ಫಾರ್ ಟೀಚರ್ಸ್ ಎಜುಕೇಷನ್‍ನಿಂದ ಮಾನ್ಯತೆ ಪಡೆದಿರುವ ಬಿಎಡ್ ಹಾಗೂ ಡಿಪಾರ್ಟ್‍ಮೆಂಟ್ ಆಫ್ ಸ್ಟೇಟ್ ಎಜುಕೇಷನಲ್ ರಿಸರ್ಚ್ ಅಂಡ್ ಟ್ರೈನಿಂಗ್‍ನಿಂದ ಮಾನ್ಯತೆ ಪಡೆದಿರುವ ಡಿಎಡ್ ಕೋರ್ಸುಗಳ ಸರ್ಕಾರಿ, ಅರೆ ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಕಾಲೇಜುಗಳಲ್ಲಿ ದಾಖಲಾತಿ ಹೊಂದಿರುವ ವಿದ್ಯಾರ್ಥಿಗಳು ಮಾತ್ರ ಅರ್ಹರಿರುತ್ತಾರೆ. ಅರ್ಜಿಸಲ್ಲಿಸುವ ವಿದ್ಯಾರ್ಥಿಗಳು ಅರ್ಹತೆ ಪರೀಕ್ಷೆ ಹಿಂದಿನ ಸಾಲಿನ ಪರೀಕ್ಷೆಯಲ್ಲಿ ಕನಿಷ್ಠ 50ರಷ್ಟು ಅಂಕಗಳನ್ನು ಪಡೆದಿರಬೇಕು. ಉತ್ತೀರ್ಣರಾಗದ ಅಭ್ಯರ್ಥಿಗಳು ಪ್ರೋತ್ಸಾಧನ ಪಡೆಯಲು ಅರ್ಹರಾಗಿರುವುದಿಲ್ಲ, ಮೊದಲನೇ ವರ್ಷದಲ್ಲಿ ಪ್ರೋತ್ಸಾಧನ ಪಡೆದಿರುವ ಅಭ್ಯರ್ಥಿಗಳು 2ನೇ ವರ್ಷಕ್ಕೆ ಪ್ರೋತ್ಸಾಧನ ಪಡೆಯಲು ಪ್ರತ್ಯೇಕ ಅರ್ಜಿ ಸಲ್ಲಿಸಬೇಕು. ಪ್ರತಿ ಜಿಲ್ಲೆಗೆ ಬಿಡುಗಡೆ ಮಾಡಿರುವ ಅನುದಾನದಲ್ಲಿ ಕನಿಷ್ಠ ಶೇ 50ರಷ್ಟು ಬಾಲಕಿಯರಿಗೆ ಮೀಸಲಿರಿಸತಕ್ಕದ್ದು ಹಾಗೂ ಡಿಎಡ್ ಕೋರ್ಸ್‍ಗೆ ಶೇ.25ರಷ್ಟು ಮತ್ತು ಬಿಎಡ್ ಕೋರ್ಸ್‍ನ ಅಭ್ಯರ್ಥಿಗಳಿಗೆ ಶೇ. 75ರಷ್ಟು ಅನುಪಾತದಲ್ಲಿ ಉಪಯೋಗಿಸುವುದು, ಸುಳ್ಳು ಮಾಹಿತಿ ದಾಖಲಾತಿ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ನೀಡಿ ಪ್ರೋತ್ಸಾಧನ ಪಡೆದಿದ್ದಲ್ಲಿ ಅಂತಹ ಅಭ್ಯರ್ಥಿಗಳಿಗೆ ನೀಡಲಾದ ಪ್ರೋತ್ಸಾಧನ ಮೊತ್ತವನ್ನು ವಸೂಲಿ ಮಾಡಿ ಸರ್ಕಾರಕ್ಕೆ ಹಿಂದಿರುಗಿಸಲಾಗುವದು. ಈ ಯೋಜನೆಯಡಿ ಪ್ರೋತ್ಸಾಧನ ಪಡೆದ ವಿದ್ಯಾರ್ಥಿಗಳು ಡಿಎಡ್ ಮತ್ತು ಬಿಎಡ್ ಕೋರ್ಸ್ ಪೂರ್ಣಗೊಳಿಸದೆ ಮಧ್ಯದಲ್ಲಿ ಬಿಟ್ಟು ಹೋದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು ವಿಚಾರಣೆ ನಡೆಸಿ ಇಲಾಖೆಯ ಮುಖ್ಯಸ್ಥರಿಗೆ ವರದಿ ಸಲ್ಲಿಸಬೇಕು ಅಂತಹ ಪ್ರಕರಣಗಳಲ್ಲಿ ಪರಿಶೀಲಿಸಿ ಇಲಾಖಾ ಮುಖ್ಯಸ್ಥರು ಅಂತಿಮ ನಿರ್ಣಯ ತೆಗೆದುಕೊಳ್ಳತಕೊಳ್ಳುತ್ತಾರೆ, ಒಂದು ಪಕ್ಷ ಸಮಂಜಸವಾದ ಕಾರಣವಿಲ್ಲದಿದ್ದಲ್ಲಿ ಸಂಬಂಧಪಟ್ಟ ಅಭ್ಯರ್ಥಿಗಳಿಗೆ ನೀಡಲಾದ ಮೊತ್ತವನ್ನು ವಸೂಲಿ ಮಾಡಿ ಸರ್ಕಾರಕ್ಕೆ ಹಿಂದಿರುಗಿಸಲಾಗುವುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿಗಳು ತಿಳಿಸಿದ್ದಾರೆ.

Latest News >>

ಡಿ.ಸಿ.ಸಿ. ಬ್ಯಾಂಕ್ ನಿರ್ದೇಶಕರಾಗಿ ಓ.ಮಂಜುನಾಥ್ ಮಾಳಿಗೆ ಅವರು ಅವಿರೋಧ ಆಯ್ಕೆಯಾಗಿದ್ದಾರೆ.

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತ, ಚಿತ್ರದುರ್ಗ ಇದರ ಆಡಳಿತ ಮಂಡಳಿ ನಿರ್ದೇಶಕರ ಸ್ಥಾನಕ್ಕೆ ಹಿರಿಯೂರು...

ಚಿತ್ರದುರ್ಗದಲ್ಲಿ ನಡೆಯಲಿರುವ ಪತ್ರಿಕಾ ವಿತರಕರ ಹಂಚಿಕೆದಾರರ 4ನೇರಾಜ್ಯಸಮ್ಮೇಳನ ಕಾರ್ಯಕ್ರಮ ಯಶಸ್ವಿಯಾಗಲಿ : ಆಲೂರು ಹನುಮಂತರಾಯಪ್ಪ

ಹಿರಿಯೂರು: ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ ಹಾಗೂ ಚಿತ್ರದುರ್ಗ ಜಿಲ್ಲಾ ಪತ್ರಿಕೆ ಹಂಚಿಕೆದಾರರ ಹಾಗೂ ವಿತರಕರ ಸಂಘ (ರಿ) ಇವರುಗಳ...

ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ ಅನುಷ್ಟಾನ ಮೌಲ್ಯಮಾಪನ ಸಭೆಜಿಲ್ಲಾ ಮೇಲ್ವಿಚಾರಣಾ ಸಮಿತಿಯಿಂದ ಕ್ರಿಯಾಯೋಜನೆ ಅನುಮೋದನೆ ಕ್ರಮಕ್ಕೆ ಶಿಫಾರಸ್ಸು

ಚಿತ್ರದುರ್ಗ ಸೆ.06: ಪರಿಶಿಷ್ಟ ಜಾತಿ ಹಾಗೂ ಗಿರಿಜನ ಉಪಯೋಜನೆಯಡಿ (ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ) ಜಿಲ್ಲೆಯಲ್ಲಿ ಕೈಗೊಳ್ಳುವ ಎಲ್ಲಾ...

ಪೋಷಣ್ ಮಾಸಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ.ಡಿ.ಎಂ.ಅಭಿನವ್ ಪೌಷ್ಠಿಕಾಂಶಯುಕ್ತ ಆಹಾರ ಪದಾರ್ಥ ಸೇವಿಸುವುದು ಅಭ್ಯಾಸಿಸಿ

ಚಿತ್ರದುರ್ಗ ಸೆ.6: ಪೋಷಣ್ ಮಾಸಾಚರಣೆ ಕಾರ್ಯಕ್ರಮ ಮಕ್ಕಳ ಹಾಗೂ ಗರ್ಭಿಣಿಯರ, ಬಾಣಂತಿಯರ ಆರೋಗ್ಯ ಪೋಷಣ ಮಾಸಾಚರಣೆ ಆಗಬೇಕು. ಮಕ್ಕಳಲ್ಲಿ...

ಎಚ್‌ಐವಿ/ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆ

ಚಿತ್ರದುರ್ಗ ಸೆ.6: ಯುವ ಜನೋತ್ಸವ ಅಂಗವಾಗಿ ಎಚ್‌ಐವಿ/ ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆಯು ಚಿತ್ರದುರ್ಗ ನಗರದಲ್ಲಿ ಗುರುವಾರ...

ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಕಾಮಗಾರಿ ಪರಿಶೀಲನೆ

ಚಿತ್ರದುರ್ಗ ಸೆ.06: ನಬಾರ್ಡ್ ಸಂಸ್ಥೆಯ ಡಿಜಿಎಂ ಸಂಜೀವ್ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಈಚೆಗೆ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ವಾಣಿವಿಲಾಸ...

ಮೊಳಕಾಲ್ಮುರು : ಫಲಾನುಭವಿಗಳ ಮನೆ ಬಾಗಿಲಿಗೆ ಹೋಗಿ ಸಮಸ್ಯೆ ಆಲಿಸಿ ಶಾಸಕ ಎನ್ ವೈ ಗೋಪಾಲಕೃಷ್ಣ.

ಮೊಳಕಾಲ್ಮೂರು :-ಪಟ್ಟಣದ ತಾಲೂಕು ಪಂಚಾಯಿತಿಯಲ್ಲಿ ಗ್ಯಾರೆಂಟಿ ಅನುಷ್ಠಾನ ಸಮಿತಿ ನೂತನ ಕಾರ್ಯಾಲಯವನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ಎನ್ ವೈ....

ಬೆಂಬಲಬೆಲೆಯಲ್ಲಿ ಸೂರ್ಯಕಾಂತಿ ಖರೀದಿ ಕೇಂದ್ರಗಳ ಸ್ಥಾಪನೆ

ಚಿತ್ರದುರ್ಗ ಸೆ.04: 2024-25ನೇ ಸಾಲಿಗೆ ಕೇಂದ್ರ ಸರ್ಕಾರದ ಬೆಂಬಲಬೆಲೆ ಯೋಜನೆಯಡಿ ನಿಗದಿಪಡಿಸಿರುವ ರೂ.7,280/- (ಪ್ರತಿ ಕ್ವಿಂಟಾಲ್‌ಗೆ)...

ಮಹಾತ್ಮ ಗಾಂಧೀ ಸೇವಾ ಪ್ರಶಸ್ತಿ – ಕರ್ನಾಟಕ’ ಆಯ್ಕೆಗೆ ನಾಮನಿರ್ದೇಶನ ಆಹ್ವಾನ

ಚಿತ್ರದುರ್ಗ ಸೆ.04: ರಾಜ್ಯ ಸರ್ಕಾರವು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಸ್ಥಾಪಿಸಿರುವ ಐದು ಲಕ್ಷ ರೂಪಾಯಿ ನಗದನ್ನು ಒಳಗೊಂಡ...

ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್ 110 ಸಿಸಿ ಯ ಆಕರ್ಷಕ ಸ್ಕೂಟಿ ಮಾರುಕಟ್ಟೆಗೆ ಬಿಡುಗಡೆ.

ಚಿತ್ರದುರ್ಗ: ಚಿತ್ರದುರ್ಗ ನಗರದ ತುರುವನೂರು ರಸ್ತೆಯಲ್ಲಿನ ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page