ಬುಡಕಟ್ಟು ಕಾಡುಗೊಲ್ಲ ಸಮುದಾಯದ ಅತ್ಯಂತ ಪ್ರಸಿದ್ಧ ಜಾತ್ರೆ ಎಂದೇ ಖ್ಯಾತಿ ಪಡೆದಿರುವ ಪುರ್ಲಹಳ್ಳಿ ಹತ್ತಿರ ಹೊಸದಿಬ್ಬದಲ್ಲಿ ನಡೆಯುವ ಕ್ಯಾತಪ್ಪನ ಪರಿಷೆ ಸೋಮವಾರ ಸಂಭ್ರಮದಿಂದ ಜರುಗಿತು

by | 29/01/24 | ಸುದ್ದಿ


ಚಳ್ಳಕೆರೆ : ತಾಲ್ಲೂಕಿನ ಬುಡಕಟ್ಟು
ಕಾಡುಗೊಲ್ಲ ಸಮುದಾಯದ ಅತ್ಯಂತ ಪ್ರಸಿದ್ಧ ಜಾತ್ರೆ ಎಂದೇ
ಖ್ಯಾತಿ ಪಡೆದಿರುವ ಪುರ್ಲಹಳ್ಳಿ ಹತ್ತಿರ ಹೊಸದಿಬ್ಬದಲ್ಲಿ
ನಡೆಯುವ ಕ್ಯಾತಪ್ಪನ ಪರಿಷೆ ಸೋಮವಾರ ಸಂಭ್ರಮದಿಂದ
ಜರುಗಿತು.

ಒಂದು ತಿಂಗಳ ಕಾಲ ನಡೆಯುವ ಜಾತ್ರೆಯಲ್ಲಿ ಬುಡಕಟ್ಟು
ಸಮುದಾಯದವರು ತಲತಲಾಂತರದಿಂದ ನಡೆಸಿಕೊಂಡು
ಬಂದಿರುವ ವಿಶಿಷ್ಟ ಆಚರಣೆ, ಸಂಪ್ರದಾಯ ವಿವಿಧ ಜಾತಿಯ
ಕಳ್ಳೆಗಳಿಂದ ನಿರ್ಮಿಸಿರುವ 20 ಅಡಿ ಎತ್ತರದ
ಕಳ್ಳೆಗುಡಿಯ ಮೇಲೆ ಪಂಚ ಕಳಶಗಳನ್ನು ಇಟ್ಟು ಅವುಗಳನ್ನು
ಕೀಳುವ ಮಹತ್ವದ ಕ್ಷಣ ನೆರೆದ ಜನರ ಮೈನವಿರೇಳುವಂತೆ
ಮಾಡಿತು.
ಸಂಪ್ರದಾಯದಂತೆ ಕಳ್ಳೆ ಗುಡಿಯ ಮೇಲಿನ ಕಳಶವನ್ನು
ಕೀಳಲು ತಣ್ಣೀರಿನಲ್ಲಿ ಸ್ನಾನ ಮಾಡಿರುವ ಹರಕೆ ಹೊತ್ತ
ದೇವರ ಒಕ್ಕಲ ಮಕ್ಕಳಾದ ಈರಗಾರರು ಬರಿಗಾಲು ಮತ್ತು
ಬರಿ ಮೈಯಲ್ಲಿ ಕಳ್ಳೆಯ ಮೇಲೆ ಜಿಗಿಯುತ್ತಾ ಕಳಶ ಕೀಳುವ
ಸಂದರ್ಭ ರೋಮಾಂಚನಗೊಳಿಸಿತು.
ಈ ಸಂದರ್ಭದಲ್ಲಿ ನೆರೆದಿದ್ದ ಸಹಸ್ರರಾರು ಭಕ್ತರು ಮುಗಿಲುಮುಟ್ಟುವಂತೆ ಕೇಕೆ ಹಾಕುತ್ತಾ ಕಳ್ಳೆಯ ಗುಡಿಯ ಮೇಲೆ ಕಳಶ
ಕೀಳುವವರನ್ನು ಪ್ರೋತ್ಸಾಹಿಸುತ್ತಿರುವುದು ಕಂಡು ಬಂತು.
ಇದರಿಂದ ಮತ್ತಷ್ಟು ಹುರುಪಿನಿಂದ ಕಳ್ಳೆ ಗುಡಿಯ ತುದಿಯ
ಮೇಲೆ ನೆಟ್ಟಿರುವ ಕಳಶ ಕೀಳಲು ಈರಗಾರರಿಗೆ
ಸಾಧ್ಯವಾಯಿತು. ಬುಡಕಟ್ಟು ಸಾಂಸ್ಕೃತಿಕ ಪರಂಪರೆಗೆ
ಹೆಸರಾಗಿರುವ ತಾಲ್ಲೂಕಿನಲ್ಲಿ ಕ್ಯಾತಪ್ಪನ
ಜಾತ್ರೆಯಲ್ಲಿ ನಡೆಯುವ ವಿಶಿಷ್ಟ ಸಂಪ್ರದಾಯಗಳ
ಆಚರಣೆಗಳನ್ನು ವೀಕ್ಷಿಸಲು ಸುತ್ತಲ ಹಳ್ಳಿಗಳೂ ಸೇರಿದಂತೆ
ನೆರೆಯ ಆಂಧ್ರದಿಂದಲೂ ಜನರು ಆಗಮಿಸಿದ್ದರು. ಕಳಸ ಕೀಳುವ ಸ್ಪರ್ಥೆಯಲ್ಲಿ ದ್ವಾರಕುಂಟೆ ರಾಜು ಕಳಸ ಕೀಳುವಲ್ಲಿ‌ಯಶಸ್ವಿಯಾಗಿದ್ದಾರೆ. ಪರಿಷೆಯಲ್ಲಿ ಶಾಸಕ‌ ಟಿ.ರಘುಮೂರ್ತಿ. ಗ್ರಾಪಂ‌ಅಧ್ಯಕ್ಷ ಆನಂದ್ ಕುಮಾರ್ ಮಾಜಿ ಜಿಪಂ‌ಸದಸ್ಯ ರವಿಕುಮಾರ್ .ಕಾಡುಗೊಲ್ಲರ ಸಂಘದ ಅಧ್ಯಕ್ಷ ಬೂದಿಹಳ್ಳಿ ರಾಜಣ್ಣ ಜನಪ್ರತಿನಿಧಿಗಳು.ಗಣ್ಯರು ಸೇರಿದಂತೆ ತಹಶೀಲ್ದಾರ್ ರೇಹಾನ್ ಪಾಷ.ತಾಪಂ ಇಒ ಶಶಿಧರ್ ಭಾಗವಹಿಸಿದ್ದರು.

Latest News >>

ಡಿ.ಸಿ.ಸಿ. ಬ್ಯಾಂಕ್ ನಿರ್ದೇಶಕರಾಗಿ ಓ.ಮಂಜುನಾಥ್ ಮಾಳಿಗೆ ಅವರು ಅವಿರೋಧ ಆಯ್ಕೆಯಾಗಿದ್ದಾರೆ.

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತ, ಚಿತ್ರದುರ್ಗ ಇದರ ಆಡಳಿತ ಮಂಡಳಿ ನಿರ್ದೇಶಕರ ಸ್ಥಾನಕ್ಕೆ ಹಿರಿಯೂರು...

ಚಿತ್ರದುರ್ಗದಲ್ಲಿ ನಡೆಯಲಿರುವ ಪತ್ರಿಕಾ ವಿತರಕರ ಹಂಚಿಕೆದಾರರ 4ನೇರಾಜ್ಯಸಮ್ಮೇಳನ ಕಾರ್ಯಕ್ರಮ ಯಶಸ್ವಿಯಾಗಲಿ : ಆಲೂರು ಹನುಮಂತರಾಯಪ್ಪ

ಹಿರಿಯೂರು: ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ ಹಾಗೂ ಚಿತ್ರದುರ್ಗ ಜಿಲ್ಲಾ ಪತ್ರಿಕೆ ಹಂಚಿಕೆದಾರರ ಹಾಗೂ ವಿತರಕರ ಸಂಘ (ರಿ) ಇವರುಗಳ...

ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ ಅನುಷ್ಟಾನ ಮೌಲ್ಯಮಾಪನ ಸಭೆಜಿಲ್ಲಾ ಮೇಲ್ವಿಚಾರಣಾ ಸಮಿತಿಯಿಂದ ಕ್ರಿಯಾಯೋಜನೆ ಅನುಮೋದನೆ ಕ್ರಮಕ್ಕೆ ಶಿಫಾರಸ್ಸು

ಚಿತ್ರದುರ್ಗ ಸೆ.06: ಪರಿಶಿಷ್ಟ ಜಾತಿ ಹಾಗೂ ಗಿರಿಜನ ಉಪಯೋಜನೆಯಡಿ (ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ) ಜಿಲ್ಲೆಯಲ್ಲಿ ಕೈಗೊಳ್ಳುವ ಎಲ್ಲಾ...

ಪೋಷಣ್ ಮಾಸಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ.ಡಿ.ಎಂ.ಅಭಿನವ್ ಪೌಷ್ಠಿಕಾಂಶಯುಕ್ತ ಆಹಾರ ಪದಾರ್ಥ ಸೇವಿಸುವುದು ಅಭ್ಯಾಸಿಸಿ

ಚಿತ್ರದುರ್ಗ ಸೆ.6: ಪೋಷಣ್ ಮಾಸಾಚರಣೆ ಕಾರ್ಯಕ್ರಮ ಮಕ್ಕಳ ಹಾಗೂ ಗರ್ಭಿಣಿಯರ, ಬಾಣಂತಿಯರ ಆರೋಗ್ಯ ಪೋಷಣ ಮಾಸಾಚರಣೆ ಆಗಬೇಕು. ಮಕ್ಕಳಲ್ಲಿ...

ಎಚ್‌ಐವಿ/ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆ

ಚಿತ್ರದುರ್ಗ ಸೆ.6: ಯುವ ಜನೋತ್ಸವ ಅಂಗವಾಗಿ ಎಚ್‌ಐವಿ/ ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆಯು ಚಿತ್ರದುರ್ಗ ನಗರದಲ್ಲಿ ಗುರುವಾರ...

ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಕಾಮಗಾರಿ ಪರಿಶೀಲನೆ

ಚಿತ್ರದುರ್ಗ ಸೆ.06: ನಬಾರ್ಡ್ ಸಂಸ್ಥೆಯ ಡಿಜಿಎಂ ಸಂಜೀವ್ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಈಚೆಗೆ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ವಾಣಿವಿಲಾಸ...

ಮೊಳಕಾಲ್ಮುರು : ಫಲಾನುಭವಿಗಳ ಮನೆ ಬಾಗಿಲಿಗೆ ಹೋಗಿ ಸಮಸ್ಯೆ ಆಲಿಸಿ ಶಾಸಕ ಎನ್ ವೈ ಗೋಪಾಲಕೃಷ್ಣ.

ಮೊಳಕಾಲ್ಮೂರು :-ಪಟ್ಟಣದ ತಾಲೂಕು ಪಂಚಾಯಿತಿಯಲ್ಲಿ ಗ್ಯಾರೆಂಟಿ ಅನುಷ್ಠಾನ ಸಮಿತಿ ನೂತನ ಕಾರ್ಯಾಲಯವನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ಎನ್ ವೈ....

ಬೆಂಬಲಬೆಲೆಯಲ್ಲಿ ಸೂರ್ಯಕಾಂತಿ ಖರೀದಿ ಕೇಂದ್ರಗಳ ಸ್ಥಾಪನೆ

ಚಿತ್ರದುರ್ಗ ಸೆ.04: 2024-25ನೇ ಸಾಲಿಗೆ ಕೇಂದ್ರ ಸರ್ಕಾರದ ಬೆಂಬಲಬೆಲೆ ಯೋಜನೆಯಡಿ ನಿಗದಿಪಡಿಸಿರುವ ರೂ.7,280/- (ಪ್ರತಿ ಕ್ವಿಂಟಾಲ್‌ಗೆ)...

ಮಹಾತ್ಮ ಗಾಂಧೀ ಸೇವಾ ಪ್ರಶಸ್ತಿ – ಕರ್ನಾಟಕ’ ಆಯ್ಕೆಗೆ ನಾಮನಿರ್ದೇಶನ ಆಹ್ವಾನ

ಚಿತ್ರದುರ್ಗ ಸೆ.04: ರಾಜ್ಯ ಸರ್ಕಾರವು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಸ್ಥಾಪಿಸಿರುವ ಐದು ಲಕ್ಷ ರೂಪಾಯಿ ನಗದನ್ನು ಒಳಗೊಂಡ...

ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್ 110 ಸಿಸಿ ಯ ಆಕರ್ಷಕ ಸ್ಕೂಟಿ ಮಾರುಕಟ್ಟೆಗೆ ಬಿಡುಗಡೆ.

ಚಿತ್ರದುರ್ಗ: ಚಿತ್ರದುರ್ಗ ನಗರದ ತುರುವನೂರು ರಸ್ತೆಯಲ್ಲಿನ ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page