ಮನೆ ದೇವರುಗಳ ಪೂಜೆ ಮೌಢ್ಯವಲ್ಲ – ಕಸವನಹಳ್ಳಿ ರಮೇಶ್.

by | 18/12/23 | ಸುದ್ದಿ


ಚಳ್ಳಕೆರೆ .. ಮನೆ ದೇವರುಗಳ ಪೂಜೆ ಮೌಢ್ಯವಲ್ಲ – ಕಸವನಹಳ್ಳಿ ರಮೇಶ್.
ಚಳ್ಳಕೆರೆ ತಾಲೂಕು ಕಲಮರಹಳ್ಳಿ ಗ್ರಾಮದಲ್ಲಿ ಕುಂಚಿಟಿಗರ ಬೆಳ್ಳನಾರ್ ಕುಲದವರ ಮನೆದೇವರು ರಂಗನಾಥಸ್ವಾಮಿ ಸನ್ನಿಧಿಯಲ್ಲಿ ಬೆಳ್ಳನಾರ್ “ಸ್ನೇಹ ಸಮ್ಮಿಲನ”ಕಾರ್ಯಕ್ರಮದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು.


ಉತ್ತರ ಭಾರತದಿಂದ ದಕ್ಷಿಣ ಭಾರತಕ್ಕೆ ವಲಸೆ ಬಂದ ಕುಂಚಿಟಿಗರು ಪಶುಸಂಗೋಪನೆ ಮಾಡಿಕೊಂಡು ಮೇವು- ನೀರು ಇರುವ ಬೆಟ್ಟ-ಗುಡ್ಡ ಕೆರೆ -ತೊರೆ ಭಾಗಗಳಲ್ಲಿ ವಾಸವಿದ್ದು. ಇವತ್ತಿನ ದಿನಮಾನಗಳಲ್ಲಿ ರಾಜ್ಯದಲ್ಲಿ 18 ಜಿಲ್ಲೆ 46 ತಾಲೂಕುಗಳಲ್ಲಿ 26 ಲಕ್ಷಕ್ಕೂ ಅಧಿಕ ಸಂಖ್ಯೆಯ ಕುಂಚಿಟಿಗರು ಕುಲ -ಬೆಡಗುಗಳ ಆಧಾರದ ಮೇಲೆ ಒಗ್ಗಟ್ಟಾಗಿ ಕೃಷಿ ಸಂಸ್ಕೃತಿಯನ್ನು ಮಾಡಿಕೊಂಡು ಹೋಗಬೇಕು. ಈ ನಿಟ್ಟಿನಲ್ಲಿ ನಮ್ಮ ಕುಟುಂಬದ ಹಿರಿಯರು ಭಕ್ತಿ ಭಾವದಿಂದ ಬಂದು ಮುಟ್ಟಿ ಹೋಗಿರುವ ಮನೆ ದೇವರುಗಳ ದೈವಿಕ ಕಾರ್ಯಗಳಲ್ಲಿ ಪಾಲ್ಗೊಳ್ಳಬೇಕು. ಇದರಿಂದ ನಮ್ಮ ಹಿರಿಯರು ಮತ್ತು ಪೂರ್ವಜರನ್ನು ಗೌರವಿಸಿದಂತಾಗುತ್ತದೆ. ಇದು ಮೂಢನಂಬಿಕೆ ಅಲ್ಲ ಕುಟುಂಬದ ಹಿರಿಯರ ಮೇಲಿರುವ ಗೌರವದ ನಂಬಿಕೆ. ಈ ನಿಟ್ಟಿನಲ್ಲಿ ವಿವಿಧತೆ ಯಲ್ಲಿ ಏಕತೆ ಸಾರುವ 101 ಕುಲ ಬೆಡಗಿನ ಕುಂಚಿಟಿಗರ ಏಕೀಕರಣ ಮತ್ತು ದೃವೀಕರಣದ ಭಾಗವಾಗಿ ಬೆಳ್ಳನಾರ್ ಕುಲದವರನ್ನು ಒಂದೆಡೆ ಸೇರಿಸಿ ಸಮಾವೇಶ ಮಾಡಲಾಗುವುದು.ಇದರಿಂದ ಮುಂದಿನ ಪೀಳಿಗೆಯವರಿಗೆ ನಮ್ಮ ಕುಟುಂಬದ ಹಿರಿಯರ ವಾಸ ಸ್ಥಳಗಳು ,ದೇವಸ್ಥಾನಗಳು, ಜೀವನ ಪದ್ಧತಿ ಕಲಿಸಿಕೊಟ್ಟಂತಾಗುತ್ತದೆ. ಅಲ್ಲದೆ ನಮ್ಮ ವಾಸಸ್ಥಳ ಬದಲಾಗಿರಬಹುದು ,ವ್ಯವಸಾಯದ ಭೂಮಿ ಬದಲಾಗಿರಬಹುದು, ವೃತ್ತಿಯ ಪ್ರದೇಶ ಬದಲಾಗಿರಬಹುದು, ಆದರೆ ಕುಲದ ಮೂಲದ ಬುಡಕಟಿನ ದೇವರುಗಳು ಬದಲಾಗಿಲ್ಲ,ಆದ್ದರಿಂದ ದೈವಿಕ ಕಾರ್ಯಗಳಲ್ಲಿ ಭಕ್ತಿ ಭಾವದಿಂದ ಪಾಲ್ಗೊಳ್ಳಬೇಕು ಎಂದು ಕಸವನಹಳ್ಳಿರಮೇಶ್ ಹೇಳಿದರು. ಇದೇ ಸಂದರ್ಭದಲ್ಲಿ ಹೊಸಹಳ್ಳಿ ಶ್ರೀ ವೀರಬಡಣ್ಣ ಟ್ರಸ್ಟ್ ನ ಕಂಬತ್ತನಹಳ್ಳಿ ಈರಣ್ಣ ಮಾತನಾಡಿ,ನಾವುಗಳು ಶ್ರಮಸಂಸ್ಕೃತಿಯಿಂದ ಬಂದು ಕೃಷಿಯನ್ನು ಆರಾಧಿಸಿಕೊಂಡು ಬುಡಕಟ್ಟಿನ ಮನೆ ದೇವರುಗಳನ್ನು ಪೂಜಿಸುತ್ತಿರುವುದು. ಇದೊಂದು ವಿಶಿಷ್ಟ ಪರಂಪರೆ ಯಾವುದೇ ಕಾರಣಕ್ಕೂ ಸಮಾಜದಲ್ಲಿ ಸ್ಥಾನಮಾನಗಳು ಬದಲಾದರೂ ಮನೆ ದೇವರುಗಳು ಬದಲಾಗಿಲ್ಲ ಎಂದು ಹೇಳಿದರು. ಕುಂಚಿಟಿಗ ಸ್ವಚ್ಛ ಸುಸಂಸ್ಕೃತ ಮತ್ತು ಸುಚಿರ್ಭೂತ ಸಂಸ್ಕಾರಯುಕ್ತ ಜಾತಿಯಾಗಿದೆ ವೈವಿಧ್ಯಮಯ ಕುಲ ಬೆಡಗಿನ ಕುಂಚಿಟಿಗರು ವೈಜ್ಞಾನಿಕ ಹಿನ್ನೆಲೆಯಲ್ಲಿ ವೈವಾಹಿಕ ಬದುಕು ಕಟ್ಟಿಕೊಂಡು ಇತರೆ ಸಮಾಜದವರಿಗೆ ಮಾದರಿಯಾಗಿ ಬದುಕುತ್ತಿದ್ಧಾರೆ ಎಂದು ತಿಳಿಸಿದರು. ಸಭೆಯ ಅಧ್ಯಕ್ಷತೆಯನ್ನು ಕಲಮರಹಳ್ಳಿ ಪಟೇಲ್ ಚಂದ್ರೇಗೌಡರು ವಹಿಸಿದ್ದರು.ಇದೇ ಸಂದರ್ಭದಲ್ಲಿ ಹಿರಿಯರು ತಾಲ್ಲೋಕು ಕುಂಚಿಟಿಗರ ಕ್ಷೇಮಾಭಿವೃದ್ಧಿ ಸಂಘದ ಪ್ರದಾನ ಕಾರ್ಯದರ್ಶಿ ವಿ.ಕುಬೇರಪ್ಪ, ಮ್ಯಾದನಹೊಳೆ ಪುಟ್ಟಸ್ವಾಮಿ, ಆರ್ ಕೃಷ್ಣಮೂರ್ತಿ. ಈಶ್ವರಗೆರೆ ರಾಜಣ್ಣ.ಹುಲಿಕುಂಟೆ ವೀರಣ್ಣ,ಕೆಪಿ ಪ್ರಹ್ಲಾದ್ ಆರ್.ಸಿದ್ದಯ್ಯ,ಸಿದ್ದೇಶ್ ಪೋಜಾರ್, ಕೆ.ಆರ್.ಪಾಂಡುರಂಗಪ್ಪ , ಆರ್.ರಂಗಸ್ವಾಮಿ,ಸಿದ್ದೇಶ್ ಗೌಡ, ಪ್ರಕಾಶ್, ಕಸವನಹಳ್ಳಿ ಶ್ರೀನಾಥ್ ಮತ್ತಿತರರ ಕುಂಚಿಟಿಗ ಮುಖಂಡರು ಉಪಸ್ಥಿತರಿದ್ದರು.

Latest News >>

ಡಿ.ಸಿ.ಸಿ. ಬ್ಯಾಂಕ್ ನಿರ್ದೇಶಕರಾಗಿ ಓ.ಮಂಜುನಾಥ್ ಮಾಳಿಗೆ ಅವರು ಅವಿರೋಧ ಆಯ್ಕೆಯಾಗಿದ್ದಾರೆ.

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತ, ಚಿತ್ರದುರ್ಗ ಇದರ ಆಡಳಿತ ಮಂಡಳಿ ನಿರ್ದೇಶಕರ ಸ್ಥಾನಕ್ಕೆ ಹಿರಿಯೂರು...

ಚಿತ್ರದುರ್ಗದಲ್ಲಿ ನಡೆಯಲಿರುವ ಪತ್ರಿಕಾ ವಿತರಕರ ಹಂಚಿಕೆದಾರರ 4ನೇರಾಜ್ಯಸಮ್ಮೇಳನ ಕಾರ್ಯಕ್ರಮ ಯಶಸ್ವಿಯಾಗಲಿ : ಆಲೂರು ಹನುಮಂತರಾಯಪ್ಪ

ಹಿರಿಯೂರು: ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ ಹಾಗೂ ಚಿತ್ರದುರ್ಗ ಜಿಲ್ಲಾ ಪತ್ರಿಕೆ ಹಂಚಿಕೆದಾರರ ಹಾಗೂ ವಿತರಕರ ಸಂಘ (ರಿ) ಇವರುಗಳ...

ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ ಅನುಷ್ಟಾನ ಮೌಲ್ಯಮಾಪನ ಸಭೆಜಿಲ್ಲಾ ಮೇಲ್ವಿಚಾರಣಾ ಸಮಿತಿಯಿಂದ ಕ್ರಿಯಾಯೋಜನೆ ಅನುಮೋದನೆ ಕ್ರಮಕ್ಕೆ ಶಿಫಾರಸ್ಸು

ಚಿತ್ರದುರ್ಗ ಸೆ.06: ಪರಿಶಿಷ್ಟ ಜಾತಿ ಹಾಗೂ ಗಿರಿಜನ ಉಪಯೋಜನೆಯಡಿ (ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ) ಜಿಲ್ಲೆಯಲ್ಲಿ ಕೈಗೊಳ್ಳುವ ಎಲ್ಲಾ...

ಪೋಷಣ್ ಮಾಸಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ.ಡಿ.ಎಂ.ಅಭಿನವ್ ಪೌಷ್ಠಿಕಾಂಶಯುಕ್ತ ಆಹಾರ ಪದಾರ್ಥ ಸೇವಿಸುವುದು ಅಭ್ಯಾಸಿಸಿ

ಚಿತ್ರದುರ್ಗ ಸೆ.6: ಪೋಷಣ್ ಮಾಸಾಚರಣೆ ಕಾರ್ಯಕ್ರಮ ಮಕ್ಕಳ ಹಾಗೂ ಗರ್ಭಿಣಿಯರ, ಬಾಣಂತಿಯರ ಆರೋಗ್ಯ ಪೋಷಣ ಮಾಸಾಚರಣೆ ಆಗಬೇಕು. ಮಕ್ಕಳಲ್ಲಿ...

ಎಚ್‌ಐವಿ/ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆ

ಚಿತ್ರದುರ್ಗ ಸೆ.6: ಯುವ ಜನೋತ್ಸವ ಅಂಗವಾಗಿ ಎಚ್‌ಐವಿ/ ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆಯು ಚಿತ್ರದುರ್ಗ ನಗರದಲ್ಲಿ ಗುರುವಾರ...

ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಕಾಮಗಾರಿ ಪರಿಶೀಲನೆ

ಚಿತ್ರದುರ್ಗ ಸೆ.06: ನಬಾರ್ಡ್ ಸಂಸ್ಥೆಯ ಡಿಜಿಎಂ ಸಂಜೀವ್ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಈಚೆಗೆ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ವಾಣಿವಿಲಾಸ...

ಮೊಳಕಾಲ್ಮುರು : ಫಲಾನುಭವಿಗಳ ಮನೆ ಬಾಗಿಲಿಗೆ ಹೋಗಿ ಸಮಸ್ಯೆ ಆಲಿಸಿ ಶಾಸಕ ಎನ್ ವೈ ಗೋಪಾಲಕೃಷ್ಣ.

ಮೊಳಕಾಲ್ಮೂರು :-ಪಟ್ಟಣದ ತಾಲೂಕು ಪಂಚಾಯಿತಿಯಲ್ಲಿ ಗ್ಯಾರೆಂಟಿ ಅನುಷ್ಠಾನ ಸಮಿತಿ ನೂತನ ಕಾರ್ಯಾಲಯವನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ಎನ್ ವೈ....

ಬೆಂಬಲಬೆಲೆಯಲ್ಲಿ ಸೂರ್ಯಕಾಂತಿ ಖರೀದಿ ಕೇಂದ್ರಗಳ ಸ್ಥಾಪನೆ

ಚಿತ್ರದುರ್ಗ ಸೆ.04: 2024-25ನೇ ಸಾಲಿಗೆ ಕೇಂದ್ರ ಸರ್ಕಾರದ ಬೆಂಬಲಬೆಲೆ ಯೋಜನೆಯಡಿ ನಿಗದಿಪಡಿಸಿರುವ ರೂ.7,280/- (ಪ್ರತಿ ಕ್ವಿಂಟಾಲ್‌ಗೆ)...

ಮಹಾತ್ಮ ಗಾಂಧೀ ಸೇವಾ ಪ್ರಶಸ್ತಿ – ಕರ್ನಾಟಕ’ ಆಯ್ಕೆಗೆ ನಾಮನಿರ್ದೇಶನ ಆಹ್ವಾನ

ಚಿತ್ರದುರ್ಗ ಸೆ.04: ರಾಜ್ಯ ಸರ್ಕಾರವು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಸ್ಥಾಪಿಸಿರುವ ಐದು ಲಕ್ಷ ರೂಪಾಯಿ ನಗದನ್ನು ಒಳಗೊಂಡ...

ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್ 110 ಸಿಸಿ ಯ ಆಕರ್ಷಕ ಸ್ಕೂಟಿ ಮಾರುಕಟ್ಟೆಗೆ ಬಿಡುಗಡೆ.

ಚಿತ್ರದುರ್ಗ: ಚಿತ್ರದುರ್ಗ ನಗರದ ತುರುವನೂರು ರಸ್ತೆಯಲ್ಲಿನ ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page