ಮಹರ್ಷಿ ವಾಲ್ಮೀಕಿ ಸಮಾಜಕ್ಕೆ ನೀಡಿದ ಉತ್ತಮ ಸಂದೇಶಗಳನ್ನು ಪ್ರತಿಯೊಬ್ಬರು ಜೀವನದಲ್ಲಿ ಅಳವಡಿಸಿಕೊಂಡಾಗ ಮಾತ್ರ ಜಯಂತಿಗೆ ಆಚರಣೆಗೆ ಸಾರ್ಥಕತೆ ಬರುತ್ತದೆ ಎಂದು ನಿಕಟಪೂರ್ವ ತಹಶೀಲ್ದಾರ್ ಎನ್ .ರಘುಮೂರ್ತಿ.

by | 28/10/23 | ಸುದ್ದಿ

‌‌‌‌‌‌
ನಾಯಕನಹಟ್ಟಿ ಜನಧ್ವನಿ ವಾರ್ತೆ ಅ.28. ಮಹರ್ಷಿ ವಾಲ್ಮೀಕಿ ಸಮಾಜಕ್ಕೆ ನೀಡಿದ ಉತ್ತಮ ಸಂದೇಶಗಳನ್ನು ಪ್ರತಿಯೊಬ್ಬರು ಜೀವನದಲ್ಲಿ ಅಳವಡಿಸಿಕೊಂಡಾಗ ಮಾತ್ರ ಜಯಂತಿಗೆ ಆಚರಣೆಗೆ ಸಾರ್ಥಕತೆ ಬರುತ್ತದೆ ಎಂದು ನಿಕಟಪೂರ್ವ ತಹಶೀಲ್ದಾರ್ ಎನ್ .ರಘುಮೂರ್ತಿ ಅಭಿಪ್ರಾಯ ಪಟ್ಟರು. ತಾಲೂಕಿನ ನಾಯಕನಹಟ್ಟಿ ಪಟ್ಟಣದಲ್ಲಿ ಹಟ್ಟಿ ಮಲ್ಲಪ್ಪ ನಾಯಕ ಸಂಘದ ಹಾಗೂ ವಾಲ್ಮೀಕಿ ಸಮುದಸಯದವತಿಯಿಂದ ಆಯೋಸಿದ್ದ ವಾಲ್ಮೀಕಿ ಜಯಂತೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿರು.

ಶ್ರೀ ರಾಮಾಯಣ ಕಾವ್ಯದಲ್ಲಿ ಧರ್ಮ ಸತ್ಯ ಭಾತೃತ್ವ ಮತ್ತು ನಿಷ್ಠೆಯಿಂದ ಬದುಕುವ ಬಗ್ಗೆ ಉಲ್ಲೇಖವಿದೆ ಹಾಗೆಯೇ ಅಧರ್ಮ ಅನೀತಿ ದ್ವೇಷ ಅಸೂಯೆ ಮತ್ತು ಪರಸ್ತ್ರೀ ವ್ಯಾಮೋಹ ಇವುಗಳಿಂದ ಮನುಷ್ಯನ ಅವನತಿಯು ಹೇಗೆಂದು ಮಹರ್ಷಿ ವಾಲ್ಮೀಕಿ ಅವರು ಈ ಮಹಾ ಕಾವ್ಯದಲ್ಲಿ ಅನಾವರಣಗೊಳಿಸಿದ್ದಾರೆ
ಡಾಕ್ಟರ್ ಬಿ ಆರ್ ಅಂಬೇಡ್ಕರ್ ರವರ ಆದರ್ಶಗಳಿಗೂ ಮತ್ತು ಮಹರ್ಷಿ ವಾಲ್ಮೀಕಿ ಅವರ ಆದರ್ಶಗಳಿಗೂ ಒಂದಕ್ಕೊಂದು ಸಾಮ್ಯತೆ ಇದೆ ಸಾಮಾಜಿಕ ಅಸಮತೋಲನತೆ ಪರಿಶ್ರಮ ಮತ್ತು ನಿಷ್ಠೆಯ ಬಗ್ಗೆ ಇಬ್ಬರು ಕೂಡ ಪ್ರತಿಪಾದಿಸಿದ್ದಾರೆ ಪಾಶ್ಚ್ಯಾತ ರಾಷ್ಟ್ರಗಳಲ್ಲಿ ಇವತ್ತು ಶ್ರೀ ರಾಮಾಯಣ ಮಹಾಕಾವ್ಯವನ್ನು ಪಠಣ ಮಾಡುತ್ತಾರೆಂದರೆ ಅದು ಭಾರತೀಯರ ಹೆಮ್ಮೆಯ ವಿಚಾರ ಆದರೂ ಕೂಡ ಮಹರ್ಷಿ ವಾಲ್ಮೀಕಿ ಅವರು ಮತ್ತು ಡಾ. ಬಿಆರ್ ಅಂಬೇಡ್ಕರ್ ಅವರ ಆಸೆಗಳಂತೆ ಸರಿ ಸಮಾನ ಆದಂತಹ ಸಮಾಜದ ನಿರ್ಮಾಣವಾಗಬೇಕು ಸಮಾಜದಲ್ಲಿ ಸಂಕಷ್ಟದಲ್ಲಿರುವಂತಹ ಜನರ ನೆರವಿಗೆ ಉಳ್ಳವರು ನಿಲ್ಲಬೇಕು ಸಂಪತ್ತು ಹಂಚಿಕೆ ಆಗಬೇಕು ಸಂವಿಧಾನದ ಮತ್ತು ಮೀಸಲಾತಿಯ ನೆರವಿನಿಂದ ಬದುಕು ಕಟ್ಟಿಕೊಂಡಂತಹ ಜನ ಸ್ವಾರ್ಥಿಗಳಾಗಬಾರದೆಂದು ಈ ಇಬ್ಬರು ದರ್ಶನಿಕರ ಆಶಯವಾಗಿತ್ತು ಇವತ್ತು ನಾವು ನೀವೆಲ್ಲರೂ ಕೂಡ ಸಂವಿಧಾನದ ಆಶಯದಂತೆ ಮೀಸಲಾತಿ ಉಂಡಂತವರು ಸಮಾಜದಲ್ಲಿ ಧ್ವನಿ ಇಲ್ಲದವರ ಮತ್ತು ಅಸಹಾಯಕರ ನೆರವಿಗೆ ನಿಂತು ಸಮಾಜದ ಬದಲಾವಣೆಗೆ ಇಂದಿನಿಂದಲೇ ಮುನ್ನುಡಿ ಬರೆಯೋಣವೆಂದು ಹೇಳಿದರು
ಹಟ್ಟಿ ಮಲ್ಲಪ್ಪ ನಾಯಕ ಟ್ರಸ್ಟ್ ಅಧ್ಯಕ್ಷ ಪಟೇಲ ತಿಪ್ಪೇಸ್ವಾಮಿ ಮಾತನಾಡಿ ಈ ಟ್ರಸ್ಟಿಗೆ ಇವತ್ತು ಸುಸಜ್ಜಿತವಾದ ಒಂದು ಕಟ್ಟಡವನ್ನು ಹೊಂತಿಕೆ ರೂಪದಲ್ಲಿ ಪ್ರಮಾಣ ಮಾಡಲಾಗಿದೆ ಈ ಕಟ್ಟಡ ಮುಂದಿನ ದಿನಗಳಲ್ಲಿ ಸದ್ವಿನಿಯೋಗವಾಗಬೇಕು ಹೊಸ ಸುಜ್ಜಿತವಾದಂತ ಗ್ರಂಥಾಲಯ ಮತ್ತು ಜನಾಂಗದ ಏಳಿಗೆಗೆ ಇಲ್ಲಿ ಒಂದು ಸಲಹಾ ಕೇಂದ್ರವನ್ನು ಕೂಡ ತೆರೆಯಲಾಗುತ್ತದೆ ಈ ಮುಖಾಂತರ ನಾಯಕನಹಟ್ಟಿ ಮತ್ತು ತಳುಕು ಹೋಬಳಿಯಲ್ಲಿನ ಜನಾಂಗದ ಜನರಿಗೆ ಶೈಕ್ಷಣಿಕವಾಗಿ ಮತ್ತು ಸಾಮಾಜಿಕವಾಗಿ ಹೆಚ್ಚಿನ ಉತ್ತೇಜನ ನೀಡಿದಂತಾಗುತ್ತದೆ ಎಂದು ಹೇಳಿದರು
ಕಟ್ಟಡದ ಉದ್ಘಾಟನೆ ನಂತರ 20ಕ್ಕೂ ಹೆಚ್ಚು ಕಲಾತಂಡಗಳೊಂದಿಗೆ ಅಪಾರ ಸಂಖ್ಯೆ ಜನರು ಡಿಜೆ ಹಾಡಿಗೆ ಕುಣಿದು ಕುಪ್ಪಳಿಸಿ ಮೆರವಣಿಗೆಯಲ್ಲಿ ಪಾಲ್ಗೊಂಡರು ಯುವಕರು ವಾಲ್ಮೀಕಿ ಅವರ ಜಯ ಘೋಷಣೆ ಹಾಕಿದರು.


ಈ ಸಂದರ್ಭದಲ್ಲಿ ಬಂಡೆ ಕಟ್ಟೆ ಓಬಣ್ಣ ಮುದಿಯಪ್ಪ.ಬಸವರಾಜು ತಿಪ್ಪೇಸ್ವಾಮಿ .ಅನ್ವರ್ .ಬಂಗಾರಿ. ಪಟ್ಟಣ ಪಂಚಾಯತಿ ಸದಸ್ಯರುಗಳು ತಳುಕು ಮತ್ತು ನಾಯಕನಹಟ್ಟಿ ಹೋಬಳಿಯ ಗ್ರಾಮ ಪಂಚಾಯಿತಿ ಅಧ್ಯಕ್ಷರು ಉಪಾಧ್ಯಕ್ಷರು ಹಾಗೂ ಸದಸ್ಯರುಗಳು ಮತ್ತು ಸಾರ್ವಜನಿಕರು ಪಾಲ್ಗೊಂಡಿದ್ದರು

Latest News >>

ಡಿ.ಸಿ.ಸಿ. ಬ್ಯಾಂಕ್ ನಿರ್ದೇಶಕರಾಗಿ ಓ.ಮಂಜುನಾಥ್ ಮಾಳಿಗೆ ಅವರು ಅವಿರೋಧ ಆಯ್ಕೆಯಾಗಿದ್ದಾರೆ.

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತ, ಚಿತ್ರದುರ್ಗ ಇದರ ಆಡಳಿತ ಮಂಡಳಿ ನಿರ್ದೇಶಕರ ಸ್ಥಾನಕ್ಕೆ ಹಿರಿಯೂರು...

ಚಿತ್ರದುರ್ಗದಲ್ಲಿ ನಡೆಯಲಿರುವ ಪತ್ರಿಕಾ ವಿತರಕರ ಹಂಚಿಕೆದಾರರ 4ನೇರಾಜ್ಯಸಮ್ಮೇಳನ ಕಾರ್ಯಕ್ರಮ ಯಶಸ್ವಿಯಾಗಲಿ : ಆಲೂರು ಹನುಮಂತರಾಯಪ್ಪ

ಹಿರಿಯೂರು: ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ ಹಾಗೂ ಚಿತ್ರದುರ್ಗ ಜಿಲ್ಲಾ ಪತ್ರಿಕೆ ಹಂಚಿಕೆದಾರರ ಹಾಗೂ ವಿತರಕರ ಸಂಘ (ರಿ) ಇವರುಗಳ...

ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ ಅನುಷ್ಟಾನ ಮೌಲ್ಯಮಾಪನ ಸಭೆಜಿಲ್ಲಾ ಮೇಲ್ವಿಚಾರಣಾ ಸಮಿತಿಯಿಂದ ಕ್ರಿಯಾಯೋಜನೆ ಅನುಮೋದನೆ ಕ್ರಮಕ್ಕೆ ಶಿಫಾರಸ್ಸು

ಚಿತ್ರದುರ್ಗ ಸೆ.06: ಪರಿಶಿಷ್ಟ ಜಾತಿ ಹಾಗೂ ಗಿರಿಜನ ಉಪಯೋಜನೆಯಡಿ (ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ) ಜಿಲ್ಲೆಯಲ್ಲಿ ಕೈಗೊಳ್ಳುವ ಎಲ್ಲಾ...

ಪೋಷಣ್ ಮಾಸಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ.ಡಿ.ಎಂ.ಅಭಿನವ್ ಪೌಷ್ಠಿಕಾಂಶಯುಕ್ತ ಆಹಾರ ಪದಾರ್ಥ ಸೇವಿಸುವುದು ಅಭ್ಯಾಸಿಸಿ

ಚಿತ್ರದುರ್ಗ ಸೆ.6: ಪೋಷಣ್ ಮಾಸಾಚರಣೆ ಕಾರ್ಯಕ್ರಮ ಮಕ್ಕಳ ಹಾಗೂ ಗರ್ಭಿಣಿಯರ, ಬಾಣಂತಿಯರ ಆರೋಗ್ಯ ಪೋಷಣ ಮಾಸಾಚರಣೆ ಆಗಬೇಕು. ಮಕ್ಕಳಲ್ಲಿ...

ಎಚ್‌ಐವಿ/ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆ

ಚಿತ್ರದುರ್ಗ ಸೆ.6: ಯುವ ಜನೋತ್ಸವ ಅಂಗವಾಗಿ ಎಚ್‌ಐವಿ/ ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆಯು ಚಿತ್ರದುರ್ಗ ನಗರದಲ್ಲಿ ಗುರುವಾರ...

ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಕಾಮಗಾರಿ ಪರಿಶೀಲನೆ

ಚಿತ್ರದುರ್ಗ ಸೆ.06: ನಬಾರ್ಡ್ ಸಂಸ್ಥೆಯ ಡಿಜಿಎಂ ಸಂಜೀವ್ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಈಚೆಗೆ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ವಾಣಿವಿಲಾಸ...

ಮೊಳಕಾಲ್ಮುರು : ಫಲಾನುಭವಿಗಳ ಮನೆ ಬಾಗಿಲಿಗೆ ಹೋಗಿ ಸಮಸ್ಯೆ ಆಲಿಸಿ ಶಾಸಕ ಎನ್ ವೈ ಗೋಪಾಲಕೃಷ್ಣ.

ಮೊಳಕಾಲ್ಮೂರು :-ಪಟ್ಟಣದ ತಾಲೂಕು ಪಂಚಾಯಿತಿಯಲ್ಲಿ ಗ್ಯಾರೆಂಟಿ ಅನುಷ್ಠಾನ ಸಮಿತಿ ನೂತನ ಕಾರ್ಯಾಲಯವನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ಎನ್ ವೈ....

ಬೆಂಬಲಬೆಲೆಯಲ್ಲಿ ಸೂರ್ಯಕಾಂತಿ ಖರೀದಿ ಕೇಂದ್ರಗಳ ಸ್ಥಾಪನೆ

ಚಿತ್ರದುರ್ಗ ಸೆ.04: 2024-25ನೇ ಸಾಲಿಗೆ ಕೇಂದ್ರ ಸರ್ಕಾರದ ಬೆಂಬಲಬೆಲೆ ಯೋಜನೆಯಡಿ ನಿಗದಿಪಡಿಸಿರುವ ರೂ.7,280/- (ಪ್ರತಿ ಕ್ವಿಂಟಾಲ್‌ಗೆ)...

ಮಹಾತ್ಮ ಗಾಂಧೀ ಸೇವಾ ಪ್ರಶಸ್ತಿ – ಕರ್ನಾಟಕ’ ಆಯ್ಕೆಗೆ ನಾಮನಿರ್ದೇಶನ ಆಹ್ವಾನ

ಚಿತ್ರದುರ್ಗ ಸೆ.04: ರಾಜ್ಯ ಸರ್ಕಾರವು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಸ್ಥಾಪಿಸಿರುವ ಐದು ಲಕ್ಷ ರೂಪಾಯಿ ನಗದನ್ನು ಒಳಗೊಂಡ...

ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್ 110 ಸಿಸಿ ಯ ಆಕರ್ಷಕ ಸ್ಕೂಟಿ ಮಾರುಕಟ್ಟೆಗೆ ಬಿಡುಗಡೆ.

ಚಿತ್ರದುರ್ಗ: ಚಿತ್ರದುರ್ಗ ನಗರದ ತುರುವನೂರು ರಸ್ತೆಯಲ್ಲಿನ ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page