ಯಾವುದೇ ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆಗಳ ದೂರು , ಮಾಧ್ಯಗಳಲ್ಲಿ ಸುದ್ದಿ ಬಂದರೆ ಆಯಾ ಅಧಿಕಾರಳೇ ನೇರೆ ಹೊಣೆ ಗಾರರು ಎಂದು ಶಾಸಕ ಹಾಗೂ ಸಣ್ಣ ಕೈಗಾರಿಗಳ ಅಭಿವೃದ್ಧಿನಿಗಮದ ಅಧ್ಯಕ್ಷ ಟಿ.ರಘುಮೂರ್ತಿ ತಾಕೀತು.

by | 19/02/24 | ಸುದ್ದಿ


ಚಳ್ಳಕೆರೆ ಫೆ.19 ಯಾವುದೇ ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆಗಳ ದೂರು , ಮಾಧ್ಯಗಳಲ್ಲಿ ಸುದ್ದಿ ಬಂದರೆ ಆಯಾ ಅಧಿಕಾರಳೇ ನೇರೆ ಹೊಣೆ ಗಾರರು ಎಂದು ಶಾಸಕ ಹಾಗೂ ಸಣ್ಣ ಕೈಗಾರಿಗಳ ಅಭಿವೃದ್ಧಿನಿಗಮದ ಅಧ್ಯಕ್ಷ ಟಿ.ರಘುಮೂರ್ತಿ ತಾಕೀತು ಮಾಡಿದರು.
ನಗರದ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ವಿವಿಧ ಇಲಾಖೆ ಅಧಿಕಾರಿಗಳಿಗೆ ಆಯೋಜಿಸಿದ್ದ ಟಾಸ್ಕ್ ಪರ‍್ಸ್ ಸಮಿತಿ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದರು.
ಈಗಾಗಲೆ ಸರಕಾರ ಬರಗಾಲ ಎಂದು ಘೋಷಣೆ ಮಾಡಿದ್ದು ಕುಡಿಯುವ ನೀರಿನ ನಿgರ್ವಹಣೆಗೆ ೨೫ ಲಕ್ಷ ರೂ ಅನುದಾನ ಬಿಡುಗಡೆ ಮಾಡಿದ್ದು ಕುಡಿಯುವ ನೀರಿನ ಸಮಸ್ಯೆಯಾಗದಂತೆ ಅಗತ್ಯ ಮುಂಜಾಗೃತ ಕ್ರಮ ವಹಿಸುವಂತೆ ಸೂಚನೆ ನೀಡಿದರು.
ಕುಡಿಯುವ ನೀರು ಸರಬರಾಜು ಎಇಇ ದಯಾನಂದ್ ಮಾತನಾಡಿ ಈಗಾಗಲೆ ಕೊರೆದ ೧೭೫ ಕೊಳವೆ ಬಾವಿಗಳ ಹಣ ಬಿಡುಗಡೆ ಮಾಡದೆ ಇರುವುದರಿಂದ ಯಾರೂ ಬೋರು ಕೊರೆಯಲು ಮುಂದಾಗುತ್ತಿಲ್ಲ. ಜಲಜೀವನ್ ಮಿಷನ್ ಯೋಜನೆ ಜಾರಿಯಲ್ಲಿರುವುದರಿಂದ ಹೊಸ ಬೋರು ಕೊರೆಯಲು ಅವಕಾಶ ವಿಲ್ಲದೆ ಈಗಾಗಲೆ ಚಳ್ಳಕೆರೆ ವಿಧಾನ ಸಭಾ ಕ್ಷತ್ರ ವ್ಯಾಪ್ತಿಯ ಕಸಬ ಹಾಗೂ ಪರಶುರಾಂಪುರ ಹೋಬಳಿಯಲ್ಲಿ ೨೫ ಹಳ್ಳಿಗಳನ್ನು ಅಂತರ್ಜಲ ಬತ್ತಿ ಹೋಗಿ ನೀರಿನ ಸಮಸ್ಯೆ ಇರುವ ಹಳ್ಳಿಗಳನ್ನು ಗುರುತಿಸಲಾಗಿದೆ ಎಂದು ತಿಳಿಸಿದರು.
ಶಾಸಕ ಟಿ.ರಘುಮೂರ್ತಿ ಮಾತನಾಡಿ ಬರಗಾಲದ ಹಿನ್ನೆಯಲ್ಲೆ ಕುಡಿಯುವ ನೀರಿನ ಸಮಸ್ಯೆಯಾಗಬಾರದು ಎಂದು ವಿಧಾನ ಸಭಾ ಕಲಾಪಕ್ಕೆ ಒಂದು ಗೈರಾಗಿ ಕ್ಷೇತ್ರದ ಜನರಿಗೆ ನೀರಿನ ಕೊರತೆ ನೀಗಿಸಲು ಅಗತ್ಯ ಕ್ರಮ ಕೈಗಳ್ಳಲು ಅಧಿಕಾರಿಗಳ ಸಭೆ ಕರೆದಿದ್ದು ಅಧಿಕಾರಿಗಳು ಒಬ್ಬರ ಮೇಲೆ ಒಬ್ಬರು ಉತ್ತರ ನೀಡದೆ ಜನರಿಗೆ ನೀರನ್ನು ಒದಗಿಸ ಬೇಕು, ಖಾಸಗಿ ಬೋರ್ ವೆಲ್, ಪಡೆದು ತಾತ್ಕಾಲಿಕವಾಗಿ ಟ್ಯಾಂಕರ್ ಮೂಲಕ ನೀರು ನೀಡ ಬೇಕು ಹಣ ಇದ್ದರೂ ಕೆಲವು ಕಾನೂನು ತೊಡಕುಗಳನ್ನು ಮುಂದಿಟ್ಟು ಜನರಿಗೆ ನೀರಿನ ಸಮಸ್ಯೆಯಾಗಬಾರದು ಎಂದು ತಿಳಿಸಿದರುಸ.
ಜೆಇ ತಿಪ್ಪೇಸ್ವಾಮಿ ಮಾತನಾಡಿ ರೈತರು ಕೊಳವೆ ಬಾವಿ ನೀರು ಕೊಡಲು ಮುಂದಾಗುತಿಲ್ಲ ಅಡಿಗೆ ಬೆಳೆ ಹಾಕಿರುವುದರಿಂದ ಅದಕ್ಕೆ ಸಾಕಾಗುತ್ತಿಲ್ಲ ಎಂದು ರೈತರು ನೀರು ಕೊಡುವುದಿಲ್ಲ ಎನ್ನುತ್ತಾರೆ ಎಂದು ಉತ್ತರಿಸಿದರು.
ತಾಪಂ ಇಒ ಹನುಮಂತಪ್ಪ, ಶಶಿಧರ್ ಮಾತನಾಡಿ ಗ್ರಾಮಪಂಚಾಯಿಗಳಲ್ಲಿ ಕುಡಿಯುವ ನೀರು ನೈರ್ಲಲ್ಯಕ್ಕೆ ಅನುದಾನದ ಕೊರತೆಯಿದೆ ಒಂದೇ ಕಂತು ಅನುದಾನ ಬಿಡುಗಡೆ ಮಾಡಿರುವುದರಿಂದ ರೀಬೋರು ಮಾಡಲು ಅನುದಾನದ ಕೊರತೆಯಿದೆ ಎಂದರು.
ಶಾಸಕ ಟಿ.ರಘುಮೂರ್ತಿ ಮಾತನಾಡಿ ಜನರು ಹಣ ಇದೆ ಇಲ್ಲ ಎಂದು ಕೇಳುವುದಿಲ್ಲ ಬಿಡಿಗಡೆಯಾಗಿರುವ ೨೫ ಲಕ್ಷ ಆದರೂ ನೀರು ಕೊಡಬೇಕು ಎಂದು ಕೇಳುತ್ತಾರೆ ಗ್ರಾಮೀಣ ಜನರ ಮಸ್ಯೆಗಳನ್ನು ಅರಿತು ಅಧಿಕಾರಿಗಳು ಕರ್ತವ್ಯ ನಿರ್ವಹಿಸ ಬೇಕು ಜನರಿಗೆ ನೀರಿನ ಸಮಸ್ಯೆ ಉಲ್ಬಣವಾಗದಂತೆ ಅಗತ್ಯ ಮುಂಜಾಗೃತೆ ವಹಿಸುವಂತೆ ಸೂಚನೆ ನೀಡಿದರು.
ಆಶ್ರಯ, ಸ್ಮಶಾನ, ಸೇರಿಂತೆ ಅಗತ್ಯ ಮೂಲ ಭೂತ ಸೌಲಭ್ಯಗಳ ಬಗ್ಗೆ ಅಧಿಕಾರಿಗಳು ಹೆಚ್ಚಿನ ನಿಗಾವಹಿಸುವಂತೆ ತಿಳಿಸಿದರು.
ಸಭೆಯಲ್ಲಿ ಜಿಲ್ಲಾ ಉಪವಿಭಾಗಾಧಿಕಾರಿ ಕಾರ್ತೀಕ್, ಚಿತ್ರದುರ್ಗ ತಹಶೀಲ್ದಾರ್ ನಾಗವೇಣೀ, ಚಳ್ಳಕೆರೆ ತಹಶೀಲ್ದಾರ್ ರೇಹಾನ್ ಪಾಷ, ಚಳ್ಳಕೆರೆ ತಾಪಂ ಇಒ ಶಶಿಧರ್, ಚಿತ್ರದುರ್ಗ ತಾಪಂ ಇಒ ಹನುಮಂತಪ್ಪ, ಸೇರಿದಂತೆ ತಾಲೂಕು ಮಟ್ಟದ ವಿವಿಧ ಇಲಾಖೆ ಅಧಿಕಾರಿಗಳು ತುರುನೂರು, ಪರಶುರಾಂಪುರ, ಕಸಬಾ ಹೋಬಳಿ ವ್ಯಾಪ್ತಿಯ ಪಿಡಿಒಗಳು ಉಪಸ್ಥಿತರಿದ್ದರು.

Latest News >>

ಡಿ.ಸಿ.ಸಿ. ಬ್ಯಾಂಕ್ ನಿರ್ದೇಶಕರಾಗಿ ಓ.ಮಂಜುನಾಥ್ ಮಾಳಿಗೆ ಅವರು ಅವಿರೋಧ ಆಯ್ಕೆಯಾಗಿದ್ದಾರೆ.

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತ, ಚಿತ್ರದುರ್ಗ ಇದರ ಆಡಳಿತ ಮಂಡಳಿ ನಿರ್ದೇಶಕರ ಸ್ಥಾನಕ್ಕೆ ಹಿರಿಯೂರು...

ಚಿತ್ರದುರ್ಗದಲ್ಲಿ ನಡೆಯಲಿರುವ ಪತ್ರಿಕಾ ವಿತರಕರ ಹಂಚಿಕೆದಾರರ 4ನೇರಾಜ್ಯಸಮ್ಮೇಳನ ಕಾರ್ಯಕ್ರಮ ಯಶಸ್ವಿಯಾಗಲಿ : ಆಲೂರು ಹನುಮಂತರಾಯಪ್ಪ

ಹಿರಿಯೂರು: ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ ಹಾಗೂ ಚಿತ್ರದುರ್ಗ ಜಿಲ್ಲಾ ಪತ್ರಿಕೆ ಹಂಚಿಕೆದಾರರ ಹಾಗೂ ವಿತರಕರ ಸಂಘ (ರಿ) ಇವರುಗಳ...

ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ ಅನುಷ್ಟಾನ ಮೌಲ್ಯಮಾಪನ ಸಭೆಜಿಲ್ಲಾ ಮೇಲ್ವಿಚಾರಣಾ ಸಮಿತಿಯಿಂದ ಕ್ರಿಯಾಯೋಜನೆ ಅನುಮೋದನೆ ಕ್ರಮಕ್ಕೆ ಶಿಫಾರಸ್ಸು

ಚಿತ್ರದುರ್ಗ ಸೆ.06: ಪರಿಶಿಷ್ಟ ಜಾತಿ ಹಾಗೂ ಗಿರಿಜನ ಉಪಯೋಜನೆಯಡಿ (ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ) ಜಿಲ್ಲೆಯಲ್ಲಿ ಕೈಗೊಳ್ಳುವ ಎಲ್ಲಾ...

ಪೋಷಣ್ ಮಾಸಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ.ಡಿ.ಎಂ.ಅಭಿನವ್ ಪೌಷ್ಠಿಕಾಂಶಯುಕ್ತ ಆಹಾರ ಪದಾರ್ಥ ಸೇವಿಸುವುದು ಅಭ್ಯಾಸಿಸಿ

ಚಿತ್ರದುರ್ಗ ಸೆ.6: ಪೋಷಣ್ ಮಾಸಾಚರಣೆ ಕಾರ್ಯಕ್ರಮ ಮಕ್ಕಳ ಹಾಗೂ ಗರ್ಭಿಣಿಯರ, ಬಾಣಂತಿಯರ ಆರೋಗ್ಯ ಪೋಷಣ ಮಾಸಾಚರಣೆ ಆಗಬೇಕು. ಮಕ್ಕಳಲ್ಲಿ...

ಎಚ್‌ಐವಿ/ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆ

ಚಿತ್ರದುರ್ಗ ಸೆ.6: ಯುವ ಜನೋತ್ಸವ ಅಂಗವಾಗಿ ಎಚ್‌ಐವಿ/ ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆಯು ಚಿತ್ರದುರ್ಗ ನಗರದಲ್ಲಿ ಗುರುವಾರ...

ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಕಾಮಗಾರಿ ಪರಿಶೀಲನೆ

ಚಿತ್ರದುರ್ಗ ಸೆ.06: ನಬಾರ್ಡ್ ಸಂಸ್ಥೆಯ ಡಿಜಿಎಂ ಸಂಜೀವ್ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಈಚೆಗೆ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ವಾಣಿವಿಲಾಸ...

ಮೊಳಕಾಲ್ಮುರು : ಫಲಾನುಭವಿಗಳ ಮನೆ ಬಾಗಿಲಿಗೆ ಹೋಗಿ ಸಮಸ್ಯೆ ಆಲಿಸಿ ಶಾಸಕ ಎನ್ ವೈ ಗೋಪಾಲಕೃಷ್ಣ.

ಮೊಳಕಾಲ್ಮೂರು :-ಪಟ್ಟಣದ ತಾಲೂಕು ಪಂಚಾಯಿತಿಯಲ್ಲಿ ಗ್ಯಾರೆಂಟಿ ಅನುಷ್ಠಾನ ಸಮಿತಿ ನೂತನ ಕಾರ್ಯಾಲಯವನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ಎನ್ ವೈ....

ಬೆಂಬಲಬೆಲೆಯಲ್ಲಿ ಸೂರ್ಯಕಾಂತಿ ಖರೀದಿ ಕೇಂದ್ರಗಳ ಸ್ಥಾಪನೆ

ಚಿತ್ರದುರ್ಗ ಸೆ.04: 2024-25ನೇ ಸಾಲಿಗೆ ಕೇಂದ್ರ ಸರ್ಕಾರದ ಬೆಂಬಲಬೆಲೆ ಯೋಜನೆಯಡಿ ನಿಗದಿಪಡಿಸಿರುವ ರೂ.7,280/- (ಪ್ರತಿ ಕ್ವಿಂಟಾಲ್‌ಗೆ)...

ಮಹಾತ್ಮ ಗಾಂಧೀ ಸೇವಾ ಪ್ರಶಸ್ತಿ – ಕರ್ನಾಟಕ’ ಆಯ್ಕೆಗೆ ನಾಮನಿರ್ದೇಶನ ಆಹ್ವಾನ

ಚಿತ್ರದುರ್ಗ ಸೆ.04: ರಾಜ್ಯ ಸರ್ಕಾರವು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಸ್ಥಾಪಿಸಿರುವ ಐದು ಲಕ್ಷ ರೂಪಾಯಿ ನಗದನ್ನು ಒಳಗೊಂಡ...

ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್ 110 ಸಿಸಿ ಯ ಆಕರ್ಷಕ ಸ್ಕೂಟಿ ಮಾರುಕಟ್ಟೆಗೆ ಬಿಡುಗಡೆ.

ಚಿತ್ರದುರ್ಗ: ಚಿತ್ರದುರ್ಗ ನಗರದ ತುರುವನೂರು ರಸ್ತೆಯಲ್ಲಿನ ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page