ರಾಷ್ಟ್ರ ಕವಿ ಕುವೆಂಪುರವರ ಕಲ್ಪನೆಯ ಮಂತ್ರಮಾಂಗಲ್ಯ ವಿವಾಹದ ಪದ್ಧತಿಯಲ್ಲಿ ವಿವಾಹವಾದ ನವಜೋಡಿ

by | 20/09/23 | ಜೀವನಶೈಲಿ

ಚಳ್ಳಕೆರೆ: ಇತ್ತೀಚಿನ ದಿನಗಳಲ್ಲಿ ವಿವಾಹ ಕಾರ್ಯಕ್ರಮಗಳಿಗೆ ರಾಜಕಾರಣಿಗಳು ಚಲನಚಿತ್ರ ನಟರು ಸೇರಿದಂತೆ ಗಣ್ಯಾತಿ ಗಣ್ಯರು ಬಂದು ಹರಸಿದರೆ ಮಾತ್ರ ವಿವಾಹ ಎಂಬ ಕಂದಾಚಾರಗಳನ್ನು ಬದಿಗೊತ್ತಿ ತಾಲೂಕಿನ ಅವಿನಾಶ್ ಮತ್ತು ಮಮತಾ ದಂಪತಿ 60ರ ದಶಕದಲ್ಲಿ ಹೊಸ ವಿಚಾರಧಾರೆಗಳಿಗೆ ದಾರಿ ಮಾಡಿ ಕೊಟ್ಟಿದ್ದ ರಾಷ್ಟ್ರಕವಿ ಕುವೆಂಪುರವರ ಕನಸಿನ ಮಂತ್ರ ಮಾಂಗಲ್ಯವೆಂಬ ಪದ್ಧತಿಯ ಮೂಲಕ ಸತಿಪತಿಗಳಾಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಅಪರೂಪದ ವಿವಾಹಕ್ಕೆ ನಗರದ ಶ್ರೀ ಸಾಯಿಬಾಬಾ ಮಂದಿರ ಸಾಕ್ಷಿಯಾಗಿದೆ.

ಆಡಂಬರವಿಲ್ಲದೆ ಅಬ್ಬರದ ಪ್ರಚಾರವಿಲ್ಲದೆ ಸರಳವಾಗಿ ಕೇವಲ ಒಂದು ಗಂಟೆಯ ಅವಧಿಯಲ್ಲಿ ವಿವಾಹದ ವಿಧಿವಿಧಾನಗಳು ಪೂರ್ಣಗೊಂಡ ಈ ವಿವಾಹ ಕಾರ್ಯಕ್ರಮ ನಡೆದಿದ್ದು ಸಾರ್ವಜನಿಕರ ಗಮನ ಸೆಳೆದಿದೆ.

ಈ ಕಾರ್ಯಕ್ರಮದ ಮುಖ್ಯಸ್ಥಿಕೆ ವಹಿಸಿದ್ದ ಜೆ ಎಸ್ ಆನಂದ್ ಮಾತನಾಡಿ ರಾಷ್ಟ್ರಕವಿ ಕುವೆಂಪುರವರು 60ರ ದಶಕದಲ್ಲಿ ತಮ್ಮ ಪುತ್ರ ತೇಜಸ್ವಿಯವರ ವಿವಾಹ ಕಾರ್ಯಕ್ರಮ ಏರ್ಪಡಿಸುವಾಗ ಇಂತಹ ಮಂತ್ರ ಮಾಂಗಲ್ಯವೆಂಬ ವಿನೂತನ ಕಾರ್ಯಕ್ರಮವನ್ನು ಏರ್ಪಡಿಸಿ ಸಾಮಾಜಿಕ ಕ್ರಾಂತಿಗೆ ನಾಂದಿ ಹಾಡಿದ್ದರು ಇಂದಿನ ಯುವ ಪೀಳಿಗೆ ಹಾಗೂ ಪೋಷಕರು ಆಡಂಬರದ ಮದುವೆಗಳಿಗೆ ಮಾರುಹೋಗುತ್ತಿದ್ದು ದುಂದು ವೆಚ್ಚಕ್ಕೆ ಕಾರಣವಾಗುತ್ತಿದೆ ಮನುಕುಲದ ಮನಸ್ಸುಗಳು ಬದಲಾವಣೆಯಾಗಿ ಇಂತಹ ಸರಳ ವಿವಾಹಗಳು ನಡೆದರೆ ಸಮಾಜದಲ್ಲಿ ಉತ್ತಮ ವಾತಾವರಣ ನಿರ್ಮಾಣವಾಗಲು ಸಾಧ್ಯವಾಗುತ್ತದೆ ಎಂದು ಅಭಿಪ್ರಾಯಪಟ್ಟರು.

ನವ ವಿವಾಹಿತರಾದ ಅವಿನಾಶ್ ಹಾಗೂ ಮಮತಾ ಮಾತನಾಡಿ ಕುವೆಂಪುರವರ ಮಂತ್ರ ಮಾಂಗಲ್ಯ ಪದ್ಧತಿ ನಮ್ಮಿಬ್ಬರಿಗೂ ಇಷ್ಟವಾಗಿದ್ದರಿಂದ ಪೋಷಕರನ್ನು ಒಪ್ಪಿಸಿ ನಾವು ಇಂದು ಈ ವಿಧಾನದಲ್ಲಿ ವಿವಾಹವಾಗಿದ್ದೇವೆ ಆಡಂಬರದ ವಿವಾಹವಾಗುವುದರಿಂದ ಯಾವುದೇ ಲಾಭವಿಲ್ಲ ವಿವಾಹವೆಂಬುವುದು ಎರಡು ಮನಸ್ಸುಗಳ ನಡುವೆ ನಡೆಯಬೇಕು ಕುವೆಂಪುರವರ ಮಂತ್ರ ಮಾಂಗಲ್ಯದ ಅರ್ಥವನ್ನು ತಿಳಿದ ಮೇಲೆ ನಾವಿಬ್ಬರು ಈ ನಿರ್ಧಾರಕ್ಕೆ ಬಂದು ಇಂದು ವಿವಾಹ ಮಾಡಿಕೊಂಡಿದ್ದೇವೆ ವೇದಕಾಲದಲ್ಲಿನ ಉತ್ತಮ ಅಂಶಗಳನ್ನು ಸೇರಿಸಿ ಕುವೆಂಪುರವರ ಮಂತ್ರ ಮಾಂಗಲ್ಯ ರಚಿತವಾಗಿದೆ ಇಂತಹ ವಿವಾಹ ಕಾರ್ಯಗಳು ಇನ್ನು ಹೆಚ್ಚಿನ ರೀತಿಯಲ್ಲಿ ನಡೆಯಲಿ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ವಧುವರರ ಪೋಷಕರು ಹಾಗೂ ಆಪ್ತರು ಭಾಗವಹಿಸಿದ್ದರು.

Latest News >>

ಡಿ.ಸಿ.ಸಿ. ಬ್ಯಾಂಕ್ ನಿರ್ದೇಶಕರಾಗಿ ಓ.ಮಂಜುನಾಥ್ ಮಾಳಿಗೆ ಅವರು ಅವಿರೋಧ ಆಯ್ಕೆಯಾಗಿದ್ದಾರೆ.

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತ, ಚಿತ್ರದುರ್ಗ ಇದರ ಆಡಳಿತ ಮಂಡಳಿ ನಿರ್ದೇಶಕರ ಸ್ಥಾನಕ್ಕೆ ಹಿರಿಯೂರು...

ಚಿತ್ರದುರ್ಗದಲ್ಲಿ ನಡೆಯಲಿರುವ ಪತ್ರಿಕಾ ವಿತರಕರ ಹಂಚಿಕೆದಾರರ 4ನೇರಾಜ್ಯಸಮ್ಮೇಳನ ಕಾರ್ಯಕ್ರಮ ಯಶಸ್ವಿಯಾಗಲಿ : ಆಲೂರು ಹನುಮಂತರಾಯಪ್ಪ

ಹಿರಿಯೂರು: ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ ಹಾಗೂ ಚಿತ್ರದುರ್ಗ ಜಿಲ್ಲಾ ಪತ್ರಿಕೆ ಹಂಚಿಕೆದಾರರ ಹಾಗೂ ವಿತರಕರ ಸಂಘ (ರಿ) ಇವರುಗಳ...

ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ ಅನುಷ್ಟಾನ ಮೌಲ್ಯಮಾಪನ ಸಭೆಜಿಲ್ಲಾ ಮೇಲ್ವಿಚಾರಣಾ ಸಮಿತಿಯಿಂದ ಕ್ರಿಯಾಯೋಜನೆ ಅನುಮೋದನೆ ಕ್ರಮಕ್ಕೆ ಶಿಫಾರಸ್ಸು

ಚಿತ್ರದುರ್ಗ ಸೆ.06: ಪರಿಶಿಷ್ಟ ಜಾತಿ ಹಾಗೂ ಗಿರಿಜನ ಉಪಯೋಜನೆಯಡಿ (ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ) ಜಿಲ್ಲೆಯಲ್ಲಿ ಕೈಗೊಳ್ಳುವ ಎಲ್ಲಾ...

ಪೋಷಣ್ ಮಾಸಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ.ಡಿ.ಎಂ.ಅಭಿನವ್ ಪೌಷ್ಠಿಕಾಂಶಯುಕ್ತ ಆಹಾರ ಪದಾರ್ಥ ಸೇವಿಸುವುದು ಅಭ್ಯಾಸಿಸಿ

ಚಿತ್ರದುರ್ಗ ಸೆ.6: ಪೋಷಣ್ ಮಾಸಾಚರಣೆ ಕಾರ್ಯಕ್ರಮ ಮಕ್ಕಳ ಹಾಗೂ ಗರ್ಭಿಣಿಯರ, ಬಾಣಂತಿಯರ ಆರೋಗ್ಯ ಪೋಷಣ ಮಾಸಾಚರಣೆ ಆಗಬೇಕು. ಮಕ್ಕಳಲ್ಲಿ...

ಎಚ್‌ಐವಿ/ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆ

ಚಿತ್ರದುರ್ಗ ಸೆ.6: ಯುವ ಜನೋತ್ಸವ ಅಂಗವಾಗಿ ಎಚ್‌ಐವಿ/ ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆಯು ಚಿತ್ರದುರ್ಗ ನಗರದಲ್ಲಿ ಗುರುವಾರ...

ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಕಾಮಗಾರಿ ಪರಿಶೀಲನೆ

ಚಿತ್ರದುರ್ಗ ಸೆ.06: ನಬಾರ್ಡ್ ಸಂಸ್ಥೆಯ ಡಿಜಿಎಂ ಸಂಜೀವ್ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಈಚೆಗೆ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ವಾಣಿವಿಲಾಸ...

ಮೊಳಕಾಲ್ಮುರು : ಫಲಾನುಭವಿಗಳ ಮನೆ ಬಾಗಿಲಿಗೆ ಹೋಗಿ ಸಮಸ್ಯೆ ಆಲಿಸಿ ಶಾಸಕ ಎನ್ ವೈ ಗೋಪಾಲಕೃಷ್ಣ.

ಮೊಳಕಾಲ್ಮೂರು :-ಪಟ್ಟಣದ ತಾಲೂಕು ಪಂಚಾಯಿತಿಯಲ್ಲಿ ಗ್ಯಾರೆಂಟಿ ಅನುಷ್ಠಾನ ಸಮಿತಿ ನೂತನ ಕಾರ್ಯಾಲಯವನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ಎನ್ ವೈ....

ಬೆಂಬಲಬೆಲೆಯಲ್ಲಿ ಸೂರ್ಯಕಾಂತಿ ಖರೀದಿ ಕೇಂದ್ರಗಳ ಸ್ಥಾಪನೆ

ಚಿತ್ರದುರ್ಗ ಸೆ.04: 2024-25ನೇ ಸಾಲಿಗೆ ಕೇಂದ್ರ ಸರ್ಕಾರದ ಬೆಂಬಲಬೆಲೆ ಯೋಜನೆಯಡಿ ನಿಗದಿಪಡಿಸಿರುವ ರೂ.7,280/- (ಪ್ರತಿ ಕ್ವಿಂಟಾಲ್‌ಗೆ)...

ಮಹಾತ್ಮ ಗಾಂಧೀ ಸೇವಾ ಪ್ರಶಸ್ತಿ – ಕರ್ನಾಟಕ’ ಆಯ್ಕೆಗೆ ನಾಮನಿರ್ದೇಶನ ಆಹ್ವಾನ

ಚಿತ್ರದುರ್ಗ ಸೆ.04: ರಾಜ್ಯ ಸರ್ಕಾರವು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಸ್ಥಾಪಿಸಿರುವ ಐದು ಲಕ್ಷ ರೂಪಾಯಿ ನಗದನ್ನು ಒಳಗೊಂಡ...

ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್ 110 ಸಿಸಿ ಯ ಆಕರ್ಷಕ ಸ್ಕೂಟಿ ಮಾರುಕಟ್ಟೆಗೆ ಬಿಡುಗಡೆ.

ಚಿತ್ರದುರ್ಗ: ಚಿತ್ರದುರ್ಗ ನಗರದ ತುರುವನೂರು ರಸ್ತೆಯಲ್ಲಿನ ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page