ವಾಣಿವಿಲಾಸ ಸಾಗರ ಜಲಾಶಯದ ರಕ್ಷಕಿಯಾದ ಕಣಿವೆಮಾರಮ್ಮ ದೇವಿಯ ಅದ್ದೂರಿ ರಥೋತ್ಸವ ಶುಕ್ರವಾರ ಡ್ಯಾಂ ಬಳಿ ಸಂಭ್ರಮದಿಂದ ನಡೆಯಿತು.

by | 11/05/24 | ಸುದ್ದಿ


ಹಿರಿಯೂರು:
ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲ್ಲೂಕಿನ ವಾಣಿ ವಿಲಾಸ ಜಲಾಶಯದ ಕೆಳಭಾಗದಲ್ಲಿರುವ ನೆಲೆಸಿರುವ ವಾಣಿವಿಲಾಸ ಸಾಗರ ಜಲಾಶಯದ ರಕ್ಷಕಿ ಎಂದೇ ಪ್ರಸಿದ್ದಳಾದ ಕಣಿವೆಮಾರಮ್ಮ ದೇವಿಯ ವೈಭವದ ರಥೋತ್ಸವ ಶುಕ್ರವಾರ ಜಲಾಶಯದ ಬಳಿ ಇರುವ ದೇವಾಲಯದ ಆವರಣದಲ್ಲಿ ಸಡಗರ-ಸಂಭ್ರಮದಿಂದ ನೆರವೇರಿತು.
ನೂರಾರು ವರ್ಷಗಳ ಇತಿಹಾಸ ಹೊಂದಿರುವ ಕಣಿವೆ ಮಾರಮ್ಮ ದೇವಿಯ ವಿಗ್ರಹ ಜಲಾಶಯದ ಕಡೆ ಮುಖ ಮಾಡಿ ಅಣೆಕಟ್ಟೆಯನ್ನು ಕಾಲಲ್ಲಿ ಒದ್ದು ಕುಳಿತಿರುವ ಭಂಗಿಯಲ್ಲಿರುವುದರಿಂದ ಈ ಭಾಗದ ಜನರಲ್ಲಿ ಕಣಿವೆ ಮಾರಮ್ಮ ದೇವಿಯು ವಾಣಿ ವಿಲಾಸ ಸಾಗರದ ರಕ್ಷಕಿ ಎಂಬ ನಂಬಿಕೆ ಮನೆಮಾಡಿದೆ. ಎರಡು ಗುಡ್ಡಗಳ ನಡುವಿನ ಪ್ರದೇಶದಲ್ಲಿ ವಾಣಿವಿಲಾಸ ಸಾಗರ ಅಣೆಕಟ್ಟೆ ನಿರ್ಮಿಸಲಾಗಿದೆ
ಎರಡು ಗುಡ್ಡಗಳ ನಡುವಿನ ಕಣಿವೆಯಂತಹ ಪ್ರದೇಶದಲ್ಲಿ ಈ ದೇಗುಲವನ್ನು ನಿರ್ಮಿಸಿರುವ ಕಾರಣ ಈ ದೇವಿಗೆ ಕಣಿವೆಮಾರಮ್ಮ ದೇವಿ ಎಂಬ ಹೆಸರು ಬಂದಿದೆ. ಈ ದೇವಿಯ ದರ್ಶನಕ್ಕೆ ಸ್ಥಳೀಯರಲ್ಲದೆ ನೆರೆಯ ರಾಜ್ಯಗಳಾದ ಆಂದ್ರಪ್ರದೇಶ, ತಮಿಳುನಾಡಿನಿಂದಲೂ ನೂರಾರು ಜನ ಜಾತ್ರೆಗೆ ಬಂದು ತಮ್ಮ ಹರಕೆ ತೀರಿಸುವುದು ರೂಡಿಯಲ್ಲಿದೆ.
ಜಾತ್ರೋತ್ಸವದ ನಿಮಿತ್ತ ಗಂಗಾಪೂಜೆ, ಜಲಧಿ ಉತ್ಸವ, ಹೋಮ, ಸಿಡಿ ಉತ್ಸವ, ಹೋಮ ಹವನ,ಕಳಸ ಪ್ರತಿಷ್ಟಾಪನೆ, ದೇವಿಗೆ ನೈವೇದ್ಯ, ಆರತಿ,ಅನ್ನಸಂತರ್ಪಣೆ ಸೇರಿ ಇತರ ಧಾರ್ಮಿಕ ಕಾರ್ಯಕ್ರಮಗಳು ನೆರವೇರಿದವು. ಹಸಿರು ತೋರಣ ಹಾಗೂ ಬಣ್ಣ-ಬಣ್ಣದ ಬಟ್ಟೆ ಹಾಗೂ ಹೂಮಾಲೆಗಳಿಂದ ಅಲಂಕರಿಸಿದ ರಥದಲ್ಲಿ ದೇವಿಯ ಉತ್ಸವಮೂರ್ತಿಯನ್ನು ಪ್ರತಿಷ್ಟಾಪಿಸಲಾಯಿತು.
ಈ ಸರ್ವಾಲಂಕಾರಗೊಂಡ ರಥಕ್ಕೆ ದೇವಸ್ಥಾನ ಸಮಿತಿ ಹಾಗೂ ಮುಖ್ಯಸ್ಥರಿಂದ ಕಳಸಪೂಜೆ, ಈಡುಗಾಯಿ, ಬಲಿಅನ್ನ, ಕುಂಬಳಕಾಯಿ ಅರ್ಪಣೆ ಮಹಾಮಂಗಳಾರತಿ ನಂತರ ಸಂಜೆ 4 ಗಂಟೆಗೆ ಭಕ್ತರು ತೇರನ್ನು ದೇವಸ್ಥಾನದ ಆವರಣದಿಂದ ಎಳೆದರು. ನೆರೆದಿದ್ದ ಭಕ್ತರು ರಥಕ್ಕೆ ಬಾಳೆಹಣ್ಣು, ಮಂಡಕ್ಕಿ ತೂರಿ ಭಕ್ತಿ ಸಮರ್ಪಿಸಿದರು.
ಈ ಸಂದರ್ಭದಲ್ಲಿ ಸಿಡಿ ಉತ್ಸವ ಸೇರಿದಂತೆ ಅಮ್ಮನವರು ಗುಡ್ಡ ಇಳಿಯುವುದು,ಭರಮಗಿರಿಕೆರೆ ಹಿಂಭಾಗದಲ್ಲಿ ದೊಡ್ಡ ಎಡೆ ಸೇವೆ ಮುಗಿಸಿಕೊಂಡು ಅಮ್ಮನವರು ಗುಡ್ಡ ಹತ್ತುವುದು,ಚಪ್ಪರ ಇಳಿಸುವುದು, ಸಣ್ಣ ಪುಲ್ಲಪ್ಪ ಮನೆ ಅಂಗಳದ ಬೇವಿನ ಮರದ ಬಳಿ ವಿಶೇಷ ಪೂಜೆ ಇತರ ಧಾರ್ಮಿಕ ಕಾರ್ಯಗಳನ್ನು ವಿಧಿ ವಿಧಾನಗಳಿಂದ ನೆರವೇರಿಸಲಾಯಿತು.
ಈ ಜಾತ್ರೋತ್ಸವ ಪ್ರಯುಕ್ತ ಗ್ರಾಮದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಳನ್ನು ಹಮ್ಮಿಕೊಳ್ಳಲಾಗಿದ್ದು ಡೊಳ್ಳು ಕುಣಿತ ವೀರಗಾಸೆ, ರಸಮಂಜರಿ ಸೇರಿದಂತೆ ಇತರ ಧಾರ್ಮಿಕ ಸೊಗಡಿನ ಕಾರ್ಯಕ್ರಮಗಳು ನೆರವೇರಿದವು. ಭಕ್ತರಿಗೆ ಪ್ರಸಾದ ವಿತರಣೆ ವ್ಯವಸ್ಥೆ ಮಾಡಲಾಗಿತ್ತು.ಜಾತ್ರಾ ಮಹೋತ್ಸವಕ್ಕೆ ಜಿಲ್ಲೆಯ ವಿವಿಧೆಡೆಯಿಂದ ಸಹಸ್ರಾರು ಭಕ್ತರು ಆಗಮಿಸಿದ್ದರು.
ಈ ರಥೋತ್ಸವ ಸಂದರ್ಭದಲ್ಲಿ ಕ್ಷೇತ್ರದ ಶಾಸಕರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಿ.ಸುಧಾಕರ್ ಅವರು ದೇಗುಲಕ್ಕೆ ಭೇಟಿ ನೀಡಿ ಈ ಭಾಗದ ಶಕ್ತಿ ದೇವತೆ ಕಣಿವೆ ಮಾರಮ್ಮ ದೇವಿಗೆ ವಿಶೇಷ ಪೂಜೆ ಸಲ್ಲಿಸಿ, ಪ್ರಸಕ್ತವರ್ಷ ಜಿಲ್ಲೆಯಲ್ಲಿ ಉತ್ತಮ ಮಳೆ-ಬೆಳೆಯಾಗಿ ಜಿಲ್ಲೆಯ ಜನರು ಹಾಗೂ ರೈತರು ಸಮೃದ್ಧಯುತವಾದ ಹಾಗೂ ನೆಮ್ಮದಿಯ ಜೀವನ ನಡೆಸುವಂತಾಗಲಿ ಎಂಬುದಾಗಿ ಅವರು ಪ್ರಾರ್ಥಿಸಿದರು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷರು, ರೈತ ಕಾರ್ಮಿಕ ಸಂಘದ ಮುಖಂಡರು, ದೇವಸ್ಥಾನದ ಸಮಿತಿ ಮುಖ್ಯಸ್ಥರು, ಆದಿಜಾಂಬವ, ಯಾದವ, ತಳವಾರ, ಹಳ್ಳಿಕಾರ್, ವಾಲ್ಮಿಕಿ ವಂಶಸ್ಥರು ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

Latest News >>

ಡಿ.ಸಿ.ಸಿ. ಬ್ಯಾಂಕ್ ನಿರ್ದೇಶಕರಾಗಿ ಓ.ಮಂಜುನಾಥ್ ಮಾಳಿಗೆ ಅವರು ಅವಿರೋಧ ಆಯ್ಕೆಯಾಗಿದ್ದಾರೆ.

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತ, ಚಿತ್ರದುರ್ಗ ಇದರ ಆಡಳಿತ ಮಂಡಳಿ ನಿರ್ದೇಶಕರ ಸ್ಥಾನಕ್ಕೆ ಹಿರಿಯೂರು...

ಚಿತ್ರದುರ್ಗದಲ್ಲಿ ನಡೆಯಲಿರುವ ಪತ್ರಿಕಾ ವಿತರಕರ ಹಂಚಿಕೆದಾರರ 4ನೇರಾಜ್ಯಸಮ್ಮೇಳನ ಕಾರ್ಯಕ್ರಮ ಯಶಸ್ವಿಯಾಗಲಿ : ಆಲೂರು ಹನುಮಂತರಾಯಪ್ಪ

ಹಿರಿಯೂರು: ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ ಹಾಗೂ ಚಿತ್ರದುರ್ಗ ಜಿಲ್ಲಾ ಪತ್ರಿಕೆ ಹಂಚಿಕೆದಾರರ ಹಾಗೂ ವಿತರಕರ ಸಂಘ (ರಿ) ಇವರುಗಳ...

ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ ಅನುಷ್ಟಾನ ಮೌಲ್ಯಮಾಪನ ಸಭೆಜಿಲ್ಲಾ ಮೇಲ್ವಿಚಾರಣಾ ಸಮಿತಿಯಿಂದ ಕ್ರಿಯಾಯೋಜನೆ ಅನುಮೋದನೆ ಕ್ರಮಕ್ಕೆ ಶಿಫಾರಸ್ಸು

ಚಿತ್ರದುರ್ಗ ಸೆ.06: ಪರಿಶಿಷ್ಟ ಜಾತಿ ಹಾಗೂ ಗಿರಿಜನ ಉಪಯೋಜನೆಯಡಿ (ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ) ಜಿಲ್ಲೆಯಲ್ಲಿ ಕೈಗೊಳ್ಳುವ ಎಲ್ಲಾ...

ಪೋಷಣ್ ಮಾಸಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ.ಡಿ.ಎಂ.ಅಭಿನವ್ ಪೌಷ್ಠಿಕಾಂಶಯುಕ್ತ ಆಹಾರ ಪದಾರ್ಥ ಸೇವಿಸುವುದು ಅಭ್ಯಾಸಿಸಿ

ಚಿತ್ರದುರ್ಗ ಸೆ.6: ಪೋಷಣ್ ಮಾಸಾಚರಣೆ ಕಾರ್ಯಕ್ರಮ ಮಕ್ಕಳ ಹಾಗೂ ಗರ್ಭಿಣಿಯರ, ಬಾಣಂತಿಯರ ಆರೋಗ್ಯ ಪೋಷಣ ಮಾಸಾಚರಣೆ ಆಗಬೇಕು. ಮಕ್ಕಳಲ್ಲಿ...

ಎಚ್‌ಐವಿ/ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆ

ಚಿತ್ರದುರ್ಗ ಸೆ.6: ಯುವ ಜನೋತ್ಸವ ಅಂಗವಾಗಿ ಎಚ್‌ಐವಿ/ ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆಯು ಚಿತ್ರದುರ್ಗ ನಗರದಲ್ಲಿ ಗುರುವಾರ...

ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಕಾಮಗಾರಿ ಪರಿಶೀಲನೆ

ಚಿತ್ರದುರ್ಗ ಸೆ.06: ನಬಾರ್ಡ್ ಸಂಸ್ಥೆಯ ಡಿಜಿಎಂ ಸಂಜೀವ್ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಈಚೆಗೆ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ವಾಣಿವಿಲಾಸ...

ಮೊಳಕಾಲ್ಮುರು : ಫಲಾನುಭವಿಗಳ ಮನೆ ಬಾಗಿಲಿಗೆ ಹೋಗಿ ಸಮಸ್ಯೆ ಆಲಿಸಿ ಶಾಸಕ ಎನ್ ವೈ ಗೋಪಾಲಕೃಷ್ಣ.

ಮೊಳಕಾಲ್ಮೂರು :-ಪಟ್ಟಣದ ತಾಲೂಕು ಪಂಚಾಯಿತಿಯಲ್ಲಿ ಗ್ಯಾರೆಂಟಿ ಅನುಷ್ಠಾನ ಸಮಿತಿ ನೂತನ ಕಾರ್ಯಾಲಯವನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ಎನ್ ವೈ....

ಬೆಂಬಲಬೆಲೆಯಲ್ಲಿ ಸೂರ್ಯಕಾಂತಿ ಖರೀದಿ ಕೇಂದ್ರಗಳ ಸ್ಥಾಪನೆ

ಚಿತ್ರದುರ್ಗ ಸೆ.04: 2024-25ನೇ ಸಾಲಿಗೆ ಕೇಂದ್ರ ಸರ್ಕಾರದ ಬೆಂಬಲಬೆಲೆ ಯೋಜನೆಯಡಿ ನಿಗದಿಪಡಿಸಿರುವ ರೂ.7,280/- (ಪ್ರತಿ ಕ್ವಿಂಟಾಲ್‌ಗೆ)...

ಮಹಾತ್ಮ ಗಾಂಧೀ ಸೇವಾ ಪ್ರಶಸ್ತಿ – ಕರ್ನಾಟಕ’ ಆಯ್ಕೆಗೆ ನಾಮನಿರ್ದೇಶನ ಆಹ್ವಾನ

ಚಿತ್ರದುರ್ಗ ಸೆ.04: ರಾಜ್ಯ ಸರ್ಕಾರವು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಸ್ಥಾಪಿಸಿರುವ ಐದು ಲಕ್ಷ ರೂಪಾಯಿ ನಗದನ್ನು ಒಳಗೊಂಡ...

ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್ 110 ಸಿಸಿ ಯ ಆಕರ್ಷಕ ಸ್ಕೂಟಿ ಮಾರುಕಟ್ಟೆಗೆ ಬಿಡುಗಡೆ.

ಚಿತ್ರದುರ್ಗ: ಚಿತ್ರದುರ್ಗ ನಗರದ ತುರುವನೂರು ರಸ್ತೆಯಲ್ಲಿನ ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page