ವಿದ್ಯಾರ್ಥಿಗಳು ತಮ್ಮ ವೃತ್ತಿ ಜೀವನದಲ್ಲಿ ಉತ್ತಮ ಸೇವಾ ಮನೋಭಾವ ರೂಡಿಸಿಕೊಳ್ಳಬೇಕು : ಡಾ. ವಿ ಬಸವರಾಜ

by | 08/09/23 | ಆರೋಗ್ಯ


ಹಿರಿಯೂರು :
ಇಂದಿನ ಜಗತ್ತಿನಲ್ಲಿ ಆರೋಗ್ಯ ಕ್ಷೇತ್ರದಲ್ಲಿ ವಿಫಲವಾದ ಉದ್ಯೋಗವಕಾಶಗಳಿದ್ದು, ಉತ್ತಮ ಕೌಶಲ್ಯದ ಮುಖಾಂತರ ನೀವುಗಳು ಪ್ರತಿಷ್ಠಿತ ಆಸ್ಪತ್ರೆಗಳಲ್ಲಿ ಕೆಲಸ ಪಡೆದುಕೊಳ್ಳಬಹುದಾಗಿದೆ, ಈ ನಿಟ್ಟಿನಲ್ಲಿ ನಮ್ಮ ಮೆಡಿಕಲ್ ವಿದ್ಯಾರ್ಥಿಗಳು ತಮ್ಮ ವೃತ್ತಿ ಜೀವನದಲ್ಲಿ ಉತ್ತಮ ಸೇವಾ ಮನೋಭಾವವನ್ನು ರೂಡಿಸಿಕೊಳ್ಳಬೇಕು ಎಂಬುದಾಗಿ ಜ್ಞಾನಭಾರತಿ ವಿದ್ಯಾ ಸಂಸ್ಥೆಯ ಅಧ್ಯಕ್ಷರಾದ ಡಾ. ವಿ ಬಸವರಾಜ ಹೇಳಿದರು.
ನಗರದ ಜ್ಞಾನಭಾರತಿ ಪ್ಯಾರಾಮೆಡಿಕಲ್ ಕಾಲೇಜಿನಲ್ಲಿ ಅಂತಿಮ ವರ್ಷದ ಪ್ಯಾರಾ ಮೆಡಿಕಲ್ ನ ವಿದ್ಯಾರ್ಥಿಗಳಿಗೆ ಹಮ್ಮಿಕೊಳ್ಳಲಾಗಿದ್ದ ಬೀಳ್ಕೊಡುಗೆ ಸಮಾರಂಭವನ್ನು ಉದ್ಘಾಟಿಸಿ, ಅವರು ಮಾತನಾಡಿದರು.
ದಾದಿಯರ ವೃತ್ತಿ ಅತ್ಯಂತ ಗೌರವಾನ್ವಿತ ವೃತ್ತಿಯಾಗಿದ್ದು, ಈ ವೃತ್ತಿಗೆ ಹೋಗುವ ನೀವು ತಾಳ್ಮೆ ಸಂಯಮದಂತಹ ಗುಣಗಳನ್ನು ಅಳವಡಿಸಿಕೊಳ್ಳಬೇಕು, ಸಮಾಜ ತಾಯಿಯ ನಂತರದ ಸ್ಥಾನವನ್ನು ದಾದಿಯರಿಗೆ ನೀಡುತ್ತಿದೆ ಅಂತಹ ಪವಿತ್ರ ವೃತ್ತಿಗೆ ನ್ಯಾಯ ಒದಗಿಸಲು ನಿಸ್ವಾರ್ಥ ಮನೋಭಾವ ಮುಖ್ಯ ಕರೋನಾದಂತಹ ಭೀಕರ ರೋಗ ಬಂದಂತಹ ಸಂದರ್ಭದಲ್ಲಿ ಸಂಬಂಧಗಳನ್ನು ಮನುಷ್ಯ ಮರೆತಿರುವಾಗ ಬಂಧುವಿನಂತೆ ರೋಗಿಗಳನ್ನು ಆರೈಕೆ ಮಾಡಿದವರು ದಾದಿಯರು ಎಂದರಲ್ಲದೆ,
ಮಹಾಯುದ್ಧಗಳು ಸಂಭವಿಸಿದಾಗ ಗಾಯಾಳು ಸೈನಿಕರನ್ನ ಶುಶ್ರೂಷೆ ಮಾಡಿದವರು ದಾದಿಯರು ಆದ್ದರಿಂದ ನಿಮ್ಮ ವೃತ್ತಿ ಸಮಾಜದ ಬಹುಮುಖ್ಯ ಭಾಗವಾಗಿದ್ದು, ಡಿವಿಜಿಯವರು ತಮ್ಮ ಕಗ್ಗದಲ್ಲಿ ಹೇಳುವಂತೆ ಕಲ್ಲು ಸಕ್ಕರೆಯಾಗು ದೀನ ದುರ್ಬಲರಿಗೆ ಎನ್ನುವ ಮಾತು ದಾದಿಯರಿಗೆ ಅತ್ಯಂತ ಪ್ರಸ್ತುತವಾಗಿದೆ ಎಂಬುದಾಗಿ ಹೇಳಿದರು.
ನೊಂದವರ ಪಾಲಿನ ಆಶಾಕಿರಣ ನೀವಾಗಬೇಕು ನೀವುಗಳು ನಿಮ್ಮ ಸೇವೆಯನ್ನು ಹೆಸರು ಕೀರ್ತಿ ಸುದ್ದಿಗಾಗಿ ಮಾಡಬೇಡಿ ಸದ್ದಿಲ್ಲದೇ ಸೇವೆ ಮಾಡುವ ಗುಣ ಬೆಳೆಸಿಕೊಳ್ಳಿ ಭವಿಷ್ಯದಲ್ಲಿ ಆರೋಗ್ಯ ಕ್ಷೇತ್ರದ ಸ್ತಂಭಗಳಾದ ನೀವುಗಳು ಸಂಕಷ್ಟದಲ್ಲಿ ಇರುವ ರೋಗಿಗಳಿಗೆ ಆತ್ಮಸ್ಥೈರ್ಯ ತುಂಬುವ ಮೂಲಕ ರೋಗಗ್ರಸ್ತ ಸಮಾಜವನ್ನು ಸ್ವಸ್ಥ ಆರೋಗ್ಯಯುಕ್ತ ಸಮಾಜವನ್ನಾಗಿಸುವ ಗುರಿಯನ್ನು ಇಟ್ಟುಕೊಳ್ಳಿ ಎಂಬುದಾಗಿ ಕರೆ ನೀಡಿದರು.
ಈ ಕಾರ್ಯಕ್ರಮದಲ್ಲಿ ಬಿಇಡಿ ಕಾಲೇಜಿನ ಪ್ರಾಚಾರ್ಯರಾದ ಎನ್.ಧನಂಜಯ್, ಹಿರಿಯ ಉಪನ್ಯಾಸಕರಾದ ಎಂ.ಬಸವರಾಜ್, ಪ್ಯಾರಾ ಮೆಡಿಕಲ್ ವಿಭಾಗದ ಮುಖ್ಯಸ್ಥರಾದ ಗಿರೀಶ್, ವ್ಯವಸ್ಥಾಪಕರಾದ ದೊರೇಶ್. ನಾಗರತ್ನ, ಮಹಮದ್, ಲೀಲಾ, ಉಮ್ರಾಜ್, ಅಂಬಿಕಾ, ರವಿಕುಮಾರ್, ನಾಗೇಶ್, ಆದಿತ್ಯ ಉಪಸ್ಥಿತರಿದ್ದರು.
ಆರಂಭದಲ್ಲಿ ಚಂದ್ರಕಲಾ ಪ್ರಾರ್ಥಿಸಿದರು, ವಿದ್ಯಾರ್ಥಿಗಳಾದ ಲಿಖಿತ,ಪ್ರಿಯ ಸ್ವಾಗತಿಸಿದರು ಮಂಜುನಾಥ್ ವರದರಾಜ್ ಕಾರ್ಯಕ್ರಮ ನಿರೂಪಿಸಿದರು, ಶಕುಂತಲಾ ಪ್ರಾರ್ಥಿಸಿದರು. ನಂತರ ಕಾಲೇಜಿನ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಸಲಾಯಿತು.

Latest News >>

ಡಿ.ಸಿ.ಸಿ. ಬ್ಯಾಂಕ್ ನಿರ್ದೇಶಕರಾಗಿ ಓ.ಮಂಜುನಾಥ್ ಮಾಳಿಗೆ ಅವರು ಅವಿರೋಧ ಆಯ್ಕೆಯಾಗಿದ್ದಾರೆ.

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತ, ಚಿತ್ರದುರ್ಗ ಇದರ ಆಡಳಿತ ಮಂಡಳಿ ನಿರ್ದೇಶಕರ ಸ್ಥಾನಕ್ಕೆ ಹಿರಿಯೂರು...

ಚಿತ್ರದುರ್ಗದಲ್ಲಿ ನಡೆಯಲಿರುವ ಪತ್ರಿಕಾ ವಿತರಕರ ಹಂಚಿಕೆದಾರರ 4ನೇರಾಜ್ಯಸಮ್ಮೇಳನ ಕಾರ್ಯಕ್ರಮ ಯಶಸ್ವಿಯಾಗಲಿ : ಆಲೂರು ಹನುಮಂತರಾಯಪ್ಪ

ಹಿರಿಯೂರು: ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ ಹಾಗೂ ಚಿತ್ರದುರ್ಗ ಜಿಲ್ಲಾ ಪತ್ರಿಕೆ ಹಂಚಿಕೆದಾರರ ಹಾಗೂ ವಿತರಕರ ಸಂಘ (ರಿ) ಇವರುಗಳ...

ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ ಅನುಷ್ಟಾನ ಮೌಲ್ಯಮಾಪನ ಸಭೆಜಿಲ್ಲಾ ಮೇಲ್ವಿಚಾರಣಾ ಸಮಿತಿಯಿಂದ ಕ್ರಿಯಾಯೋಜನೆ ಅನುಮೋದನೆ ಕ್ರಮಕ್ಕೆ ಶಿಫಾರಸ್ಸು

ಚಿತ್ರದುರ್ಗ ಸೆ.06: ಪರಿಶಿಷ್ಟ ಜಾತಿ ಹಾಗೂ ಗಿರಿಜನ ಉಪಯೋಜನೆಯಡಿ (ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ) ಜಿಲ್ಲೆಯಲ್ಲಿ ಕೈಗೊಳ್ಳುವ ಎಲ್ಲಾ...

ಪೋಷಣ್ ಮಾಸಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ.ಡಿ.ಎಂ.ಅಭಿನವ್ ಪೌಷ್ಠಿಕಾಂಶಯುಕ್ತ ಆಹಾರ ಪದಾರ್ಥ ಸೇವಿಸುವುದು ಅಭ್ಯಾಸಿಸಿ

ಚಿತ್ರದುರ್ಗ ಸೆ.6: ಪೋಷಣ್ ಮಾಸಾಚರಣೆ ಕಾರ್ಯಕ್ರಮ ಮಕ್ಕಳ ಹಾಗೂ ಗರ್ಭಿಣಿಯರ, ಬಾಣಂತಿಯರ ಆರೋಗ್ಯ ಪೋಷಣ ಮಾಸಾಚರಣೆ ಆಗಬೇಕು. ಮಕ್ಕಳಲ್ಲಿ...

ಎಚ್‌ಐವಿ/ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆ

ಚಿತ್ರದುರ್ಗ ಸೆ.6: ಯುವ ಜನೋತ್ಸವ ಅಂಗವಾಗಿ ಎಚ್‌ಐವಿ/ ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆಯು ಚಿತ್ರದುರ್ಗ ನಗರದಲ್ಲಿ ಗುರುವಾರ...

ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಕಾಮಗಾರಿ ಪರಿಶೀಲನೆ

ಚಿತ್ರದುರ್ಗ ಸೆ.06: ನಬಾರ್ಡ್ ಸಂಸ್ಥೆಯ ಡಿಜಿಎಂ ಸಂಜೀವ್ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಈಚೆಗೆ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ವಾಣಿವಿಲಾಸ...

ಮೊಳಕಾಲ್ಮುರು : ಫಲಾನುಭವಿಗಳ ಮನೆ ಬಾಗಿಲಿಗೆ ಹೋಗಿ ಸಮಸ್ಯೆ ಆಲಿಸಿ ಶಾಸಕ ಎನ್ ವೈ ಗೋಪಾಲಕೃಷ್ಣ.

ಮೊಳಕಾಲ್ಮೂರು :-ಪಟ್ಟಣದ ತಾಲೂಕು ಪಂಚಾಯಿತಿಯಲ್ಲಿ ಗ್ಯಾರೆಂಟಿ ಅನುಷ್ಠಾನ ಸಮಿತಿ ನೂತನ ಕಾರ್ಯಾಲಯವನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ಎನ್ ವೈ....

ಬೆಂಬಲಬೆಲೆಯಲ್ಲಿ ಸೂರ್ಯಕಾಂತಿ ಖರೀದಿ ಕೇಂದ್ರಗಳ ಸ್ಥಾಪನೆ

ಚಿತ್ರದುರ್ಗ ಸೆ.04: 2024-25ನೇ ಸಾಲಿಗೆ ಕೇಂದ್ರ ಸರ್ಕಾರದ ಬೆಂಬಲಬೆಲೆ ಯೋಜನೆಯಡಿ ನಿಗದಿಪಡಿಸಿರುವ ರೂ.7,280/- (ಪ್ರತಿ ಕ್ವಿಂಟಾಲ್‌ಗೆ)...

ಮಹಾತ್ಮ ಗಾಂಧೀ ಸೇವಾ ಪ್ರಶಸ್ತಿ – ಕರ್ನಾಟಕ’ ಆಯ್ಕೆಗೆ ನಾಮನಿರ್ದೇಶನ ಆಹ್ವಾನ

ಚಿತ್ರದುರ್ಗ ಸೆ.04: ರಾಜ್ಯ ಸರ್ಕಾರವು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಸ್ಥಾಪಿಸಿರುವ ಐದು ಲಕ್ಷ ರೂಪಾಯಿ ನಗದನ್ನು ಒಳಗೊಂಡ...

ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್ 110 ಸಿಸಿ ಯ ಆಕರ್ಷಕ ಸ್ಕೂಟಿ ಮಾರುಕಟ್ಟೆಗೆ ಬಿಡುಗಡೆ.

ಚಿತ್ರದುರ್ಗ: ಚಿತ್ರದುರ್ಗ ನಗರದ ತುರುವನೂರು ರಸ್ತೆಯಲ್ಲಿನ ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page