ಶಾಲಾ ದಾಖಲಾತಿಗಳನ್ನು ಶಿಕ್ಷಣ ಇಲಾಖೆ ಅನುಮತಿಯನ್ನ ಪಡೆಯದೇ ತಿದ್ದುಪಡಿ ಹಾಗೂ ಬದಲಾವಣೆ ಮಾಡುವಂತಿಲ್ಲ ಕ್ಷೇತ್ರ ಶಿಕ್ಷಾಣಾಧಿಕಾರಿಗಳಾದ : ಸಿ.ಎಂ.ತಿಪ್ಪೇಸ್ವಾಮಿ ಸೂಚನೆ.

by | 17/02/24 | ಶಿಕ್ಷಣ


ಹಿರಿಯೂರು:
ಶಾಲೆಗಳ ದಾಖಲಾತಿ ರಿಜಿಸ್ಟರ್ ನಲ್ಲಿ ನಮೂದಾಗಿರುವ ಮಕ್ಕಳ ಹೆಸರು ಮತ್ತು ತಂದೆ ತಾಯಿಗಳ ಹೆಸರು ವಿಳಾಸ, ಜಾತಿ, ಮತ, ಧರ್ಮ, ಹುಟ್ಟಿದ ದಿನಾಂಕ ಇವುಗಳನ್ನು ಯಾವುದೇ ಕಾರಣಕ್ಕೂ ಶಿಕ್ಷಣ ಇಲಾಖೆ ಅನುಮತಿ ಪಡೆಯದೇ ಶಾಲಾ ಮುಖ್ಯಶಿಕ್ಷಕರುಗಳು ತಿದ್ದುವುದಾಗಲಿ ಅಥವಾ ಬದಲಾಯಿಸುವುದಾಗಲಿ ಮಾಡಬಾರದು ಎಂಬುದಾಗಿ ಕ್ಷೇತ್ರ ಶಿಕ್ಷಾಣಾಧಿಕಾರಿ ಸಿ.ಎಂ.ತಿಪ್ಪೇಸ್ವಾಮಿ ಹೇಳಿದರು.
ನಗರದ ಶ್ರೀಮೋಕ್ಷಗುಡಂ ವಿಶ್ವೇರಯ್ಯ ವಿದ್ಯಾಸಂಸ್ಥೆಯ ಸಭಾಂಗಣದಲ್ಲಿ ಕರೆಯಲಾಗಿದ್ದ ಖಾಸಗಿ ಶಾಲಾ ಆಡಳಿತ ಮಂಡಳಿಗಳ ಹಾಗೂ ಖಾಸಗಿ ಶಾಲೆಗಳ ಮುಖ್ಯ ಶಿಕ್ಷಕರುಗಳ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು.
ಸರ್ಕಾರ ಹಾಗೂ ಶಿಕ್ಷಣ ಇಲಾಖೆಯ ಇತ್ತೀಚಿನ ನಿಯಮಾವಳಿಯಂತೆ ಯಾವುದೇ ಮಗುವನ್ನು 1ನೇ ತರಗತಿಗೆ ಸೇರಿಸಿಕೊಳ್ಳಬೇಕಾದರೆ ಆ ಮಗು ಕನಿಷ್ಠ 6 ವರ್ಷಗಳನ್ನು ಪೂರೈಸಿರಬೇಕು. ಯಾವುದೇ ಮಗು 4 ನೇ ವರ್ಷಕ್ಕೆ ಎಲ್ ಕೆ ಜಿ ಮತ್ತು 5ನೇ ವರ್ಷಕ್ಕೆ ಯುಕೆ.ಜಿಯನ್ನು ಮುಗಿಸಿ, 6 ನೇ ವರ್ಷಕ್ಕೆ 1ನೇ ತರಗತಿಗೆ ದಾಖಲಾಗುವಂತೆ ಮುಖ್ಯಶಿಕ್ಷಕರು ನೋಡಿಕೊಳ್ಳಬೇಕು ಎಂದರಲ್ಲದೆ,
ಈ ದಾಖಲಾತಿ ಸಂದರ್ಭದಲ್ಲಿ ಮಕ್ಕಳ ಪೋಷಕರಿಂದ ನಿಖರವಾಗಿ ಮಾಹಿತಿ ಪಡೆದು ದಾಖಲಾತಿ ರಿಜಿಸ್ಟರ್ ನಲ್ಲಿ ದಾಖಲಿಸಿಕೊಳ್ಳಬೇಕು. ಬಹಳಷ್ಠು ಶಾಲೆಗಳಲ್ಲಿ ಶಾಲೆಗಳ ಮುಖ್ಯ ಶಿಕ್ಷಕರುಗಳೇ ದಾಖಲಾತಿ ಅರ್ಜಿನಮೂನೆಯನ್ನು ತುಂಬಿ ಪೋಷಕರಿಂದ ಸಹಿ ಮಾತ್ರ ಮಾಡಿಸಿಕೊಳ್ಳುತ್ತಾರೆ. ಇದು ಸೂಕ್ತವಲ್ಲ, ಮಕ್ಕಳ ಪೋಷಕರಿಂದಲೇ ಅರ್ಜಿ ನಮೂನೆ ಭರ್ತಿ ಮಾಡಿಸಿ, ಸಹಿ ಮಾಡಿಸಿಕೊಳ್ಳಬೇಕು ಎಂದರು.
ಯಾವುದೇ ಮಗುವಿನ ಜೀವನದಲ್ಲಿ ಮಗು ಮೊದಲು ಶಾಲೆಗೆ ಸೇರುವಾಗ ನೀವು ದಾಖಲಿಸುವ ಮಾಹಿತಿಯೇ ಜೀವನದುದ್ದಕ್ಕೂ ಅತ್ಯಂತ ಪ್ರಮುಖ ದಾಖಲೆಯಾಗಿರುತ್ತದೆ. ಈ ದಾಖಲಾತಿ ಮಗು ಬೆಳೆದು ದೊಡ್ಡವನಾಗಿ ಉದ್ಯೋಗ ಮತ್ತಿತರ ಕೋರ್ಸಗಳಿಗೆ ಸೇರುವಾಗ ಬಹುಮುಖ್ಯವಾಗಿ ಪರಿಗಣಿಸಲ್ಪಡುತ್ತದೆ. ಅಲ್ಲದೆ ಕೋರ್ಟ್ ಗಳು ಸಹ ಈ ಶಾಲಾ ದಾಖಲಾತಿಗೆ ಅಧಿಕೃತ ದಾಖಲಾತಿಯ ಮನ್ನಣೆ ನೀಡಿದೆ.
ಇನ್ನು ಖಾಸಗಿ ಶಾಲೆಗಳ ಶಾಲಾಶುಲ್ಕಕ್ಕೆ ಸಂಬಂಧಿಸಿದಂತೆ ಯಾವುದೇ ಶಾಲೆ ತನಗಿಷ್ಟಬಂದಂತೆ ಶಾಲಾಶುಲ್ಕಗಳನ್ನು ಹೆಚ್ಚಿಸುವಂತಿಲ್ಲ. ಕಳೆದ ವರ್ಷ ನೀವು ತಮ್ಮ ಇಲಾಖೆಯಿಂದ ಅನುಮತಿ ಪಡೆದ ಶುಲ್ಕಕ್ಕಿಂತ ಕನಿಷ್ಟ ಶೇಕಡ 15 ರಷ್ಟು ಮಾತ್ರ ಶಾಲಾಶುಲ್ಕ ಹೆಚ್ಚಿಸಬಹುದು. ಅಷ್ಟೆ ಅಲ್ಲದೇ ವಿದ್ಯಾರ್ಥಿಗಳಿಗೆ ಅಗತ್ಯ ಮೂಲಭೂತ ಸೌಕರ್ಯಗಳನ್ನು ಶಾಲೆಗಳಲ್ಲಿ ಒದಗಿಸಬೇಕಾಗಿದೆ.
ಅಲ್ಲದೆ ಮಕ್ಕಳಿಗೆ ಶಾಲೆಯಲ್ಲಿ ಉತ್ತಮ ಕಲಿಕಾ ವಾತಾವರಣ ನಿರ್ಮಿಸಿಕೊಡಬೇಕು. ಶಾಲೆಗಳಲ್ಲಿ ಸ್ವಚ್ಚತೆ ಹಾಗೂ ನೈರ್ಮಲ್ಯದ ಕಡೆ ಶಾಲಾ ಆಡಳಿತ ಮಂಡಳಿಗಳು ಗಮನಹರಿಸಬೇಕು. ಮಕ್ಕಳಿಗೆ ಆದಷ್ಟು ಪುಸ್ತಕಗಳ ಹೊರೆ ಕಡಿಮೆ ಮಾಡಬೇಕು. ಈ ನಿಟ್ಟಿನಲ್ಲಿ ಆದಿನದ ವೇಳಾಪಟ್ಟಿಗೆ ತಕ್ಕಂತೆ ಪುಸ್ತಕಗಳನ್ನು ಶಾಲೆಗೆ ತರಿಸಿಕೊಂಡರೆ ಮಕ್ಕಳ ಪುಸ್ತಕಗಳ ಬ್ಯಾಗ್ ಹೊರೆ ಕಡಿಮೆಯಾಗುತ್ತದೆ ಎಂದರು.
ಅಷ್ಟೇ ಅಲ್ಲದೆ ಎಲ್ಲಾ ಖಾಸಗಿ ಅನುದಾನ ರಹಿತ ಶಾಲೆಗಳು ಶಿಕ್ಷಣ ಇಲಾಖೆಯಿಂದ ಯಾವ ಮಾಧ್ಯಮಕ್ಕೆ ಅನುಮತಿ ಪಡೆದಿರುತ್ತದೆಯೋ ಅದೇ ಮಾಧ್ಯಮದಲ್ಲಿ ಶಿಕ್ಷಣವನ್ನು ನೀಡಬೇಕು. ಉಳಿದಂತೆ ಬೇರೆ ಮಾಧ್ಯಮದಲ್ಲಿ ಶಿಕ್ಷಣವನ್ನು ನೀಡುವಂತಿಲ್ಲ. ಶಿಕ್ಷಕರಿಗೆ ಅಗತ್ಯ ಸೇವಾಭದ್ರತೆ ಸೇರಿದಂತೆ ಅವರ ಶೈಕ್ಷಣಿಕ ಅರ್ಹತೆಗೆ ತಕ್ಕಂತೆ ಶಾಲೆಗಳಲ್ಲಿ ಶಿಕ್ಷಕರಾಗಿ ನೇಮಿಸಿಕೊಳ್ಳಬೇಕು ಎಂಬುದಾಗಿ ಹೇಳಿದರು.
ಶಿಕ್ಷಣ ಇಲಾಖೆಯ ಶಿಕ್ಷಣ ಸಂಯೋಜಕರಾದ ಶಶಿಧರ್ ಮಾತನಾಡಿ, ಪ್ರತಿಶಾಲೆಯಲ್ಲಿಯೂ ಮಕ್ಕಳ ಸುರಕ್ಷತೆ ಬಗ್ಗೆ ಆಡಳಿತಮಂಡಳಿ ಮತ್ತು ಶಿಕ್ಷಕ-ಶಿಕ್ಷಕಿಯರು ಅತ್ಯಂತ ಎಚ್ಚರಿಕೆ ವಹಿಸಬೇಕಾಗಿದೆ. ಈ ಉದ್ದೇಶಕ್ಕಾಗಿ ಶಾಲೆಗಳಲ್ಲಿ ಮಕ್ಕಳ ಸುರಕ್ಷತಾ ಸಮಿತಿ ರಚಿಸಬೇಕು. ಕಾಲಕಾಲಕ್ಕೆ ಮಕ್ಕಳ ಕಲಿಕೆ ಹಾಗೂ ಸುರಕ್ಷತೆಗೆ ಸಂಬಂಧಿಸಿದಂತೆ ಪೋಷಕರಸಭೆ ಕರೆದು ಚರ್ಚಿಸುವ ಮೂಲಕ ತಾವು ಕೈಗೊಂಡಿರುವ ಅಗತ್ಯಕ್ರಮಗಳ ಪೋಷಕರಿಗೆ ತಿಳಿಸಬೇಕು.
ಅದರಲ್ಲೂ ವಿಶೇಷವಾಗಿ ಹೆಣ್ಣುಮಕ್ಕಳ ಸುರಕ್ಷತೆಯ ಬಗ್ಗೆ ಶಾಲಾ ಆಡಳಿತ ಮಂಡಳಿಯವರು ಹೆಚ್ಚಿನ ಗಮನಹರಿಸಬೇಕು. ಶಾಲಾ ಆವರಣದಲ್ಲಾಗಲೀ, ಶಾಲೆಯಲ್ಲಾಗಲಿ ಹೆಣ್ಣುಮಕ್ಕಳ ಮೇಲೆ ಯಾವುದೇ ರೀತಿಯ ಲೈಗಿಂಕ ದೌರ್ಜನ್ಯ ನಡೆಯದಂತೆ ಎಚ್ಚರಿಕೆ ವಹಿಸಬೇಕು, ಶಾಲೆಯಲ್ಲಿ ಹೆಣ್ಣುಮಕ್ಕಳಿಗೆ ಯಾವುದೇ ತೊಂದರೆಯಾಗದಂತೆ ನೀತಿನಿಯಮಗಳನ್ನು ರೂಪಿಸಬೇಕು ಎಂದರಲ್ಲದೆ,
ವಿದ್ಯಾರ್ಥಿಗಳಿಗೆ ಫೋಕ್ಸೋ ಕಾಯಿದೆ ಬಗ್ಗೆ ಅರಿವು ಮೂಡಿಸುವ ನಿಟ್ಟಿನಲ್ಲಿ ಶಿಕ್ಷಣ ಇಲಾಖೆ ಸಹಯೋಗದಲ್ಲಿ ತಾಲ್ಲೂಕು ಕಾನೂನು ಸೇವಾ ಸಮಿತಿ ಹಾಗೂ ಪೋಲೀಸ್ ಇಲಾಖೆ ಅಥವಾ ವಕೀಲರುಗಳನ್ನು ಶಾಲೆಗೆ ಆಹ್ವಾನಿಸಿ, ಫೋಕ್ಸೋ ಕಾಯಿದೆಯ ಬಗ್ಗೆ ವಿಚಾರ ಸಂಕಿರಣ ನಡೆಸಬೇಕು, ಶಾಲಾ ಆವರಣದಲ್ಲಿ ಮಕ್ಕಳ ಸಹಾಯವಾಣಿಯ, ಮೊಬೈಲ್ ನಂಬರ್ ಹಾಗೂ ದೂರುಪೆಟ್ಟಿಗೆ ವ್ಯವಸ್ಥೆಯನ್ನು ಕಡ್ಡಾಯವಾಗಿ ಮಾಡಬೇಕು ಎಂಬುದಾಗಿ ಅವರು ಹೇಳಿದರು.
ಕ್ಷೇತ್ರ ಸಂಪನ್ಮೂಲ ವ್ಯಕ್ತಿಗಳಾದ ಪ್ರಸನ್ನ ಕುಮಾರ್ ಮಾತನಾಡಿ, ಶಾಲಾ ಮುಖ್ಯಶಿಕ್ಷಕರು ಹೊರರಾಜ್ಯಗಳಿಂದ ಬರುವ ವಿದ್ಯಾರ್ಥಿಗಳನ್ನು ಸ್ಯಾಟ್ಸ್ ನಲ್ಲಿ ದಾಖಲಿಸುವಾಗ ಅತ್ಯಂತ ಎಚ್ಚರಿಕೆ ವಹಿಸಬೇಕು, ಹೊರರಾಜ್ಯದ ವಿದ್ಯಾರ್ಥಿಗಳಿಗೆ ನೇರ ದಾಖಲಾತಿ ಸೌಲಭ್ಯವಿದ್ದು, ಶಿಕ್ಷಣ ಇಲಾಖೆಯ ಅನುಮತಿಯೊಂದಿಗೆ ವಿದ್ಯಾರ್ಥಿಗಳ ಪೆನ್ ನಂಬರ್ ಆಧಾರದ ಮೂಲಕ ನೇರವಾಗಿ ದಾಖಲಾತಿ ಮಾಡಿಕೊಳ್ಳಬೇಕು. ಇಲ್ಲವಾದಲ್ಲಿ ವಿದ್ಯಾರ್ಥಿಗಳ ಮುಂದಿನ ಶೈಕ್ಷಣಿಕ ಚಟುವಟಿಕೆಗಳಿಗೆ ತೊಂದರೆಯಾಗುತ್ತದೆ ಎಂಬುದಾಗಿ ಹೇಳಿದರು.
ಈ ಸಭೆಯಲ್ಲಿ ಕ್ಷೇತ್ರದ ಶಿಕ್ಷಣಾಧಿಕಾರಿಗಳಾದ ಸಿ.ಎಂ.ತಿಪ್ಪೇಸ್ವಾಮಿ,ಶಿಕ್ಷಣ ಸಂಯೋಜಕರಾದ ಶಶಿಧರ್, ಕ್ಷೇತ್ರ ಸಂಪನ್ಮೂಲ ವ್ಯಕ್ತಿಗಳಾದ ಪ್ರಸನ್ನ ಕುಮಾರ್, ವಾಣಿವಿಲಾಸ ವಿದ್ಯಾಸಂಸ್ಥೆ ಕಾರ್ಯದರ್ಶಿಗಳಾದ ಆಲೂರುಹನುಮಂತರಾಯಪ್ಪ, ಮೋಕ್ಷಗುಡಂ ವಿದ್ಯಾಸಂಸ್ಥೆಯ ಉಪಾಧ್ಯಕ್ಷರಾದ ಸೂರ್ಯಪ್ರಕಾಶ್, ಕಾರ್ಯದರ್ಶಿಗಳಾದ ಸಣ್ಣಭೀಮಣ್ಣ, ತಾಲ್ಲೂಕು ಖಾಸಗಿ ಶಾಲಾ ಆಡಳಿತ ಮಂಡಳಿಗಳ ಒಕ್ಕೂಟದ ಅಧ್ಯಕ್ಷ ಆರ್.ಕೆ.ಎಂ.ವೆಂಕಟೇಶ್, ಸೇರಿದಂತೆ ನಗರದ ವಿವಿಧ ಶಾಲೆಗಳ ಆಡಳಿತ ಮಂಡಳಿ ಸದಸ್ಯರು ಹಾಗೂ ಮುಖ್ಯಶಿಕ್ಷಕರುಗಳು, ಭಾಗವಹಿಸಿದ್ದರು.

Latest News >>

ಡಿ.ಸಿ.ಸಿ. ಬ್ಯಾಂಕ್ ನಿರ್ದೇಶಕರಾಗಿ ಓ.ಮಂಜುನಾಥ್ ಮಾಳಿಗೆ ಅವರು ಅವಿರೋಧ ಆಯ್ಕೆಯಾಗಿದ್ದಾರೆ.

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತ, ಚಿತ್ರದುರ್ಗ ಇದರ ಆಡಳಿತ ಮಂಡಳಿ ನಿರ್ದೇಶಕರ ಸ್ಥಾನಕ್ಕೆ ಹಿರಿಯೂರು...

ಚಿತ್ರದುರ್ಗದಲ್ಲಿ ನಡೆಯಲಿರುವ ಪತ್ರಿಕಾ ವಿತರಕರ ಹಂಚಿಕೆದಾರರ 4ನೇರಾಜ್ಯಸಮ್ಮೇಳನ ಕಾರ್ಯಕ್ರಮ ಯಶಸ್ವಿಯಾಗಲಿ : ಆಲೂರು ಹನುಮಂತರಾಯಪ್ಪ

ಹಿರಿಯೂರು: ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ ಹಾಗೂ ಚಿತ್ರದುರ್ಗ ಜಿಲ್ಲಾ ಪತ್ರಿಕೆ ಹಂಚಿಕೆದಾರರ ಹಾಗೂ ವಿತರಕರ ಸಂಘ (ರಿ) ಇವರುಗಳ...

ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ ಅನುಷ್ಟಾನ ಮೌಲ್ಯಮಾಪನ ಸಭೆಜಿಲ್ಲಾ ಮೇಲ್ವಿಚಾರಣಾ ಸಮಿತಿಯಿಂದ ಕ್ರಿಯಾಯೋಜನೆ ಅನುಮೋದನೆ ಕ್ರಮಕ್ಕೆ ಶಿಫಾರಸ್ಸು

ಚಿತ್ರದುರ್ಗ ಸೆ.06: ಪರಿಶಿಷ್ಟ ಜಾತಿ ಹಾಗೂ ಗಿರಿಜನ ಉಪಯೋಜನೆಯಡಿ (ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ) ಜಿಲ್ಲೆಯಲ್ಲಿ ಕೈಗೊಳ್ಳುವ ಎಲ್ಲಾ...

ಪೋಷಣ್ ಮಾಸಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ.ಡಿ.ಎಂ.ಅಭಿನವ್ ಪೌಷ್ಠಿಕಾಂಶಯುಕ್ತ ಆಹಾರ ಪದಾರ್ಥ ಸೇವಿಸುವುದು ಅಭ್ಯಾಸಿಸಿ

ಚಿತ್ರದುರ್ಗ ಸೆ.6: ಪೋಷಣ್ ಮಾಸಾಚರಣೆ ಕಾರ್ಯಕ್ರಮ ಮಕ್ಕಳ ಹಾಗೂ ಗರ್ಭಿಣಿಯರ, ಬಾಣಂತಿಯರ ಆರೋಗ್ಯ ಪೋಷಣ ಮಾಸಾಚರಣೆ ಆಗಬೇಕು. ಮಕ್ಕಳಲ್ಲಿ...

ಎಚ್‌ಐವಿ/ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆ

ಚಿತ್ರದುರ್ಗ ಸೆ.6: ಯುವ ಜನೋತ್ಸವ ಅಂಗವಾಗಿ ಎಚ್‌ಐವಿ/ ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆಯು ಚಿತ್ರದುರ್ಗ ನಗರದಲ್ಲಿ ಗುರುವಾರ...

ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಕಾಮಗಾರಿ ಪರಿಶೀಲನೆ

ಚಿತ್ರದುರ್ಗ ಸೆ.06: ನಬಾರ್ಡ್ ಸಂಸ್ಥೆಯ ಡಿಜಿಎಂ ಸಂಜೀವ್ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಈಚೆಗೆ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ವಾಣಿವಿಲಾಸ...

ಮೊಳಕಾಲ್ಮುರು : ಫಲಾನುಭವಿಗಳ ಮನೆ ಬಾಗಿಲಿಗೆ ಹೋಗಿ ಸಮಸ್ಯೆ ಆಲಿಸಿ ಶಾಸಕ ಎನ್ ವೈ ಗೋಪಾಲಕೃಷ್ಣ.

ಮೊಳಕಾಲ್ಮೂರು :-ಪಟ್ಟಣದ ತಾಲೂಕು ಪಂಚಾಯಿತಿಯಲ್ಲಿ ಗ್ಯಾರೆಂಟಿ ಅನುಷ್ಠಾನ ಸಮಿತಿ ನೂತನ ಕಾರ್ಯಾಲಯವನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ಎನ್ ವೈ....

ಬೆಂಬಲಬೆಲೆಯಲ್ಲಿ ಸೂರ್ಯಕಾಂತಿ ಖರೀದಿ ಕೇಂದ್ರಗಳ ಸ್ಥಾಪನೆ

ಚಿತ್ರದುರ್ಗ ಸೆ.04: 2024-25ನೇ ಸಾಲಿಗೆ ಕೇಂದ್ರ ಸರ್ಕಾರದ ಬೆಂಬಲಬೆಲೆ ಯೋಜನೆಯಡಿ ನಿಗದಿಪಡಿಸಿರುವ ರೂ.7,280/- (ಪ್ರತಿ ಕ್ವಿಂಟಾಲ್‌ಗೆ)...

ಮಹಾತ್ಮ ಗಾಂಧೀ ಸೇವಾ ಪ್ರಶಸ್ತಿ – ಕರ್ನಾಟಕ’ ಆಯ್ಕೆಗೆ ನಾಮನಿರ್ದೇಶನ ಆಹ್ವಾನ

ಚಿತ್ರದುರ್ಗ ಸೆ.04: ರಾಜ್ಯ ಸರ್ಕಾರವು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಸ್ಥಾಪಿಸಿರುವ ಐದು ಲಕ್ಷ ರೂಪಾಯಿ ನಗದನ್ನು ಒಳಗೊಂಡ...

ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್ 110 ಸಿಸಿ ಯ ಆಕರ್ಷಕ ಸ್ಕೂಟಿ ಮಾರುಕಟ್ಟೆಗೆ ಬಿಡುಗಡೆ.

ಚಿತ್ರದುರ್ಗ: ಚಿತ್ರದುರ್ಗ ನಗರದ ತುರುವನೂರು ರಸ್ತೆಯಲ್ಲಿನ ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page