ಶಿವಮೊಗ್ಗ ಇ-ತ್ಯಾಜ್ಯವನ್ನು ಸಂಪತ್ತಾಗಿ ಬದಲಾಯಿಸಬೇಕು : ನ್ಯಾ.ಸುಭಾಷ್ ಅಡಿ.

by | 15/12/23 | ಆರೋಗ್ಯ


ಶಿವಮೊಗ್ಗ, ಡಿಸೆಂಬರ್ 15:
ವೈಜ್ಞಾನಿಕ ರೀತಿಯಲ್ಲಿ ಇ-ತ್ಯಾಜ್ಯವನ್ನು ನಿರ್ವಹಿಸದಿದ್ದರೆ ಭವಿಷ್ಯವಿಲ್ಲ. ಆದ್ದರಿಂದ ಇ-ತ್ಯಾಜ್ಯವನ್ನು ಸಂಪನ್ಮೂಲವನ್ನಾಗಿ ಬದಲಾಯಿಸಿಕೊಂಡು ಸಂಪತ್ತಾಗಿಸಬಹುದು ಎಂದು ಎನ್.ಜಿ.ಟಿ-ಎಸ್.ಎಲ್.ಸಿ ಛೇರ್ಮನ್‍ರಾದ ಸುಭಾಷ್ ಅಡಿ ತಿಳಿಸಿದರು.
ಡೂ ಮೈಂಡ್ಸ್ ಫೌಂಡೇಷನ್, ಪರಿಸರ ಅಧ್ಯಯನ ಕೇಂದ್ರ, ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಇವರು ಸಂಯುಕ್ತಾಶ್ರಯದಲ್ಲಿ ಅಂತರಾಷ್ಟ್ರೀಯ ಇ-ತ್ಯಾಜ್ಯ ದಿನದ ಅಂಗವಾಗಿ ‘ ತ್ಯಾಜ್ಯ ನಿರ್ವಹಣೆಯ ಅವಶ್ಯಕತೆಗಳು, ಉದ್ಯಮಶೀಲತೆಯ ಅವಕಾಶಗಳು’ ಕುರಿತು ಇಂದು ಜೆಎನ್‍ಎನ್‍ಸಿ ಕಾಲೇಜಿನಲ್ಲಿ ಆಯೋಜಿಸಲಾಗಿದ್ದ ವಿಚಾರ ಸಂಕಿರಣವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಕೈಗಾರಿಕೀಕರಣ, ನಗರೀಕರಣ ಹಾಗೂ ಆಧುನೀಕರಣದಿಂದಾಗಿ ಇ-ತ್ಯಾಜ್ಯದ ಪ್ರಮಾಣ ಹೆಚ್ಚುತ್ತಿದೆ. ಅನೇಕ ವಿಕೋಪಗಳು, ಹವಾಮಾನ ಬದಲಾವಣೆ, ಪರಿಸರ ಮಾಲಿನ್ಯವು ಮನುಷ್ಯ ಜೀವನ ದುಸ್ತರ ಮಾಡಿದೆ. ದೆಹಲಿಯಲ್ಲಿ ಒಂದು ಮಗು ದಿನಕ್ಕೆ ವಾಯು ಮಾಲಿನ್ಯದಿಂದ 25 ಸಿಗರೇಟ್‍ನಿಂದ ಹೊರಹೊಮ್ಮುವಷ್ಟು ಹೊಗೆ ಕುಡಿಯುತ್ತಿದೆ.
ಪ್ರತಿವರ್ಷ ಎಲೆಕ್ಟ್ರಾನಿಕ್ ಮತ್ತು ಎಲೆಕ್ಟ್ರಿಕಲ್ ವಸ್ತುಗಳ ಬಳಕೆ ಹೆಚ್ಚುತ್ತಿದೆ. ಜೊತೆಗೆ ಕಾಲಕಾಲಕ್ಕೆ ಅವು ಅಪ್‍ಡೇಟ್ ಆಗುತ್ತಾ ಇರುತ್ತವೆ. ಎಲ್ಲ ಕ್ಷೇತ್ರಗಳಲ್ಲಿ ಎಲೆಕ್ಟ್ರಿಕ್ ಉಪಕರಣಗಳು ಆವರಿಸಿದ್ದು, ಅವುಗಳು ನಮ್ಮ ಜೀವನದ ಒಂದು ಭಾಗವೇ ಆಗಿ ಹೋಗಿವೆ. ಇಂತಹ ಗ್ಯಾಡ್ಜೆಟ್‍ಗಳಲ್ಲಿ ಅನೇಕ ಹಾನಿಕಾರಕ ಮೆಟಲ್, ವಸ್ತುಗಳಿದ್ದು ಇವು ನೇರವಾಗಿ ಪರಿಸರ ಮತ್ತು ಮಾನವನ ಮೇಲೆ ಪರಿಣಾಮ ಬೀರುತ್ತವೆ.
ಜನರ ನಡವಳಿಕೆ ಬದಲಾಗಬೇಕು : ಮಾಲಿನ್ಯ ನಿಯಂತ್ರಣ, ಪ್ಲಾಸ್ಟಿಕ್ ನಿಷೇಧದ ಕುರಿತು ಕಾಯ್ದೆಗಳು ಬಂದವು. ಆದರೆ ಮುಖ್ಯವಾಗಿ ಜನರ ನಡವಳಿಕೆಯಲ್ಲಿ ಬದಲಾವಣೆ ಆಗಬೇಕು. ಕಸವನ್ನು ವಿಂಗಡಿಸಿ ನೀಡಬೇಕು. ಪ್ಲಾಸ್ಟಿಕ್ ಬಾಟಲ್ ನಿರಾಕರಿಸಬೇಕು. ಇ-ವಸ್ತುಗಳ ಕಡಿಮೆ ಬಳಕೆ, ಮರು ಬಳಕೆ ಆಗಬೇಕು. ಸಭೆ, ಸಮಾರಂಭಗಳಲ್ಲಿ ಪ್ಲಾಸ್ಟಿಕ್ ಬಾಟಲ್ ಬಳಕೆ, ಬೀರ್ ಬಾಟಲಿ ಬಳಕೆ ನಿಲ್ಲಬೇಕು. ಬಾಟಲಿ ಬದಲು ಟಿನ್ ಬಳಕೆಯಾಗಬೇಕು.
ನಮ್ಮ ಊರು, ನಗರ ಸ್ವಚ್ಚ ಮತ್ತು ಸುಂದರವಾಗಬೇಕೆಂದು ಜನರು ಮನಸ್ಸು ಮಾಡಿ ಎಲ್ಲರೂ ಕೈಜೋಡಿಸಿದಾಗ ನಿರ್ವಹಣೆ ಸಾಧ್ಯ. ಇ ವಸ್ತುಗಳು ರೆಡ್ಯುಸ್-ರಿ ಯೂಸ್-ರಿಸೈಕಲ್ ಆಗಬೇಕು. ಅಧಿಕೃತ ಮರುಬಳಕೆದಾರರ ಮೂಲಕ ನಿರ್ವಹಣೆ ಆಗಬೇಕು. ಎಂಜಿನಿಯರಿಂಗ್ ವಿದ್ಯಾರ್ಥಿಗಳು ಈ ಬಗ್ಗೆ ಅಧ್ಯಯನದಲ್ಲಿ ತೊಡಗಬೇಕು. ನವೀನ ವಿಚಾರಗಳೊಂದಿಗೆ ಮುಂದೆ ಬರಬೇಕು. ಅನೇಕ ಸ್ಟಾರ್ಟ್‍ಟಪ್‍ಗಳು ಆರಂಭವಾಗುತ್ತಿದ್ದು ‘ವೇಸ್ಟ್ ನ್ನು ವೆಲ್ತ್’ ಆಗಿಸಬೇಕೆಂದ ಅವರು ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು.
ಬೆಂಗಳೂರಿನ ಐಐಡಬ್ಲ್ಯುಎಂ ಕಾರ್ಯ ನಿರ್ವಾಹಕ ನಿರ್ದೇಶಕಿ ಬಿನೀಶಾ ಪಿ ಮಾತನಾಡಿ, ಪ್ರತಿನಿತ್ಯ ನಾವು ಎಲೆಕ್ಟ್ರಿಕ್ ಮತ್ತು ಎಲೆಕ್ಟ್ರಾನಿಕ್ ವಸ್ತುಗಳ ಮೇಲೆ ಅವಲಂಬಿತರಾಗಿದ್ದೇವೆ. ದೇಶದಲ್ಲಿ ಶೇ.97 ಮನೆಗಳು ವಿದ್ಯುದೀಕರಣಗೊಂಡಿವೆ. 2022 ರಲ್ಲಿ 16 ಲಕ್ಷ ಟನ್‍ಗಿಂತ ಹೆಚ್ಚು ಇ-ವೇಸ್ಟ್ ಉತ್ಪಾದನೆಯಾಗಿದೆ. ಸುಮಾರು 200 ವರ್ಷಗಳಲ್ಲಿ 1 ಸಾವಿರ ಎಲೆಕ್ಟ್ರಿಕ್ ಮತ್ತು ಎಲೆಕ್ಟ್ರಾನಿಕ್ ವಸ್ತುಗಳನ್ನು ನಾವು ದಿನನಿತ್ಯದ ಬದುಕಿನಲ್ಲಿ ಬಳಸಿದ್ದೇವೆ. 2050 ರ ವೇಳೆ ಜಗತ್ತಿನಲ್ಲಿ ವಾರ್ಷಿಕವಾಗಿ 120 ಮಿನಿಯಲ್ ಟನ್‍ಗಳಷ್ಟು ಇ-ವೇಸ್ಟ್ ಉತ್ಪಾದನೆ ಆಗುವ ಅಂದಾಜಿದೆ. ಆದ್ದರಿಂದ ಇ-ವೇಸ್ಟ್ ನಿರ್ವಹಣೆ ತುರ್ತಾಗಿದೆ.
ಎಲೆಕ್ಟ್ರಿಕ್, ಪ್ಲಾಸ್ಟಿಕ್ ಇತರೆ ಇ-ತ್ಯಾಜ್ಯಕ್ಕೆ ಕಾರಣವಾಗುವ ವಸ್ತುಗಳನ್ನು ನಿರಾಕರಿಸಬೇಕು, ಕಡಿಮೆ ಮಾಡಬೇಕು, ಮರು ಬಳಕೆ ಮಾಡಬೇಕು. ಇ-ತ್ಯಾಜ್ಯ ನಿರ್ವಹಿಸಿ ಉತ್ತಮ ಉದ್ಯಮವನ್ನಾಗಿಸಿಕೊಳ್ಳುವ ಅವಕಾಶಗಳು ಇದ್ದು, ಮುಂಬರುವ ದಿನಗಳಲ್ಲಿ ತ್ಯಾಜ್ಯ ಮರುಬಳಕೆ ಉದ್ಯಮ ಮುಂಚೂಣಿ ವಲಯವಾಗುವುದು ಎಂದ ಅವರು ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು.
ಜೆಎನ್‍ಎನ್‍ಸಿಇ ಕಾಲೇಜಿನ ಪ್ರಾಂಶುಪಾಲರಾದ ಡಾ.ಮಂಜುನಾಥ ಪಿ ಅಧ್ಯಕ್ಷತೆ ವಹಿಸಿ ಮಾತನಾಡಿ, ಪ್ರತಿ ವರ್ಷ ಎಲೆಕ್ಟ್ರಾನಿಕ್ ವಸ್ತುಗಳ ಬಳಕೆ ಹೆಚ್ಚುತ್ತಾ ಇದ್ದು, ಇ-ತ್ಯಾಜ್ಯ ನಿರ್ವಹಣೆ ದೊಡ್ಡ ಸವಾಲಾಗಲಿದ್ದು ಈ ನಿಟ್ಟಿನಲ್ಲಿ ಅಧ್ಯಯನಗಳು ಆಗಬೇಕೆಂದರು.
ಪರಿಸರ ಅಧ್ಯಯನ ಕೇಂದ್ರದ ನಿರ್ದೇಶಕ ಜನಾರ್ಧನ ಜಿ ಎಲ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಡೂ ಮೈಂಡ್ಸ್ ಫೌಂಡೇಷನ್‍ನ ನವೀನ್ ಹೆಚ್‍ಎಸ್ ಸಂಸ್ಥೆಯ ಕಾರ್ಯಚಟುವಟಿಕೆ ಬಗ್ಗೆ ತಿಳಿಸಿದರು.
ಮಹಾನಗರಪಾಲಿಕೆ ಆಯುಕ್ತ ಮಾಯಣ್ಣಗೌಡ, ಮಾಲಿನ್ಯ ನಿಯಂತ್ರಣ ಮಂಡಳಿಯ ಹಿರಿಯ ಪರಿಸರ ಅಧಿಕಾರಿ ರಮೇಶ್ ಡಿ ನಾಯ್ಕ್, ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ಗೋಪಿನಾಥ್ ಎನ್, ಬೋಧಕರು, ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

Latest News >>

ಡಿ.ಸಿ.ಸಿ. ಬ್ಯಾಂಕ್ ನಿರ್ದೇಶಕರಾಗಿ ಓ.ಮಂಜುನಾಥ್ ಮಾಳಿಗೆ ಅವರು ಅವಿರೋಧ ಆಯ್ಕೆಯಾಗಿದ್ದಾರೆ.

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತ, ಚಿತ್ರದುರ್ಗ ಇದರ ಆಡಳಿತ ಮಂಡಳಿ ನಿರ್ದೇಶಕರ ಸ್ಥಾನಕ್ಕೆ ಹಿರಿಯೂರು...

ಚಿತ್ರದುರ್ಗದಲ್ಲಿ ನಡೆಯಲಿರುವ ಪತ್ರಿಕಾ ವಿತರಕರ ಹಂಚಿಕೆದಾರರ 4ನೇರಾಜ್ಯಸಮ್ಮೇಳನ ಕಾರ್ಯಕ್ರಮ ಯಶಸ್ವಿಯಾಗಲಿ : ಆಲೂರು ಹನುಮಂತರಾಯಪ್ಪ

ಹಿರಿಯೂರು: ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ ಹಾಗೂ ಚಿತ್ರದುರ್ಗ ಜಿಲ್ಲಾ ಪತ್ರಿಕೆ ಹಂಚಿಕೆದಾರರ ಹಾಗೂ ವಿತರಕರ ಸಂಘ (ರಿ) ಇವರುಗಳ...

ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ ಅನುಷ್ಟಾನ ಮೌಲ್ಯಮಾಪನ ಸಭೆಜಿಲ್ಲಾ ಮೇಲ್ವಿಚಾರಣಾ ಸಮಿತಿಯಿಂದ ಕ್ರಿಯಾಯೋಜನೆ ಅನುಮೋದನೆ ಕ್ರಮಕ್ಕೆ ಶಿಫಾರಸ್ಸು

ಚಿತ್ರದುರ್ಗ ಸೆ.06: ಪರಿಶಿಷ್ಟ ಜಾತಿ ಹಾಗೂ ಗಿರಿಜನ ಉಪಯೋಜನೆಯಡಿ (ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ) ಜಿಲ್ಲೆಯಲ್ಲಿ ಕೈಗೊಳ್ಳುವ ಎಲ್ಲಾ...

ಪೋಷಣ್ ಮಾಸಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ.ಡಿ.ಎಂ.ಅಭಿನವ್ ಪೌಷ್ಠಿಕಾಂಶಯುಕ್ತ ಆಹಾರ ಪದಾರ್ಥ ಸೇವಿಸುವುದು ಅಭ್ಯಾಸಿಸಿ

ಚಿತ್ರದುರ್ಗ ಸೆ.6: ಪೋಷಣ್ ಮಾಸಾಚರಣೆ ಕಾರ್ಯಕ್ರಮ ಮಕ್ಕಳ ಹಾಗೂ ಗರ್ಭಿಣಿಯರ, ಬಾಣಂತಿಯರ ಆರೋಗ್ಯ ಪೋಷಣ ಮಾಸಾಚರಣೆ ಆಗಬೇಕು. ಮಕ್ಕಳಲ್ಲಿ...

ಎಚ್‌ಐವಿ/ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆ

ಚಿತ್ರದುರ್ಗ ಸೆ.6: ಯುವ ಜನೋತ್ಸವ ಅಂಗವಾಗಿ ಎಚ್‌ಐವಿ/ ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆಯು ಚಿತ್ರದುರ್ಗ ನಗರದಲ್ಲಿ ಗುರುವಾರ...

ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಕಾಮಗಾರಿ ಪರಿಶೀಲನೆ

ಚಿತ್ರದುರ್ಗ ಸೆ.06: ನಬಾರ್ಡ್ ಸಂಸ್ಥೆಯ ಡಿಜಿಎಂ ಸಂಜೀವ್ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಈಚೆಗೆ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ವಾಣಿವಿಲಾಸ...

ಮೊಳಕಾಲ್ಮುರು : ಫಲಾನುಭವಿಗಳ ಮನೆ ಬಾಗಿಲಿಗೆ ಹೋಗಿ ಸಮಸ್ಯೆ ಆಲಿಸಿ ಶಾಸಕ ಎನ್ ವೈ ಗೋಪಾಲಕೃಷ್ಣ.

ಮೊಳಕಾಲ್ಮೂರು :-ಪಟ್ಟಣದ ತಾಲೂಕು ಪಂಚಾಯಿತಿಯಲ್ಲಿ ಗ್ಯಾರೆಂಟಿ ಅನುಷ್ಠಾನ ಸಮಿತಿ ನೂತನ ಕಾರ್ಯಾಲಯವನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ಎನ್ ವೈ....

ಬೆಂಬಲಬೆಲೆಯಲ್ಲಿ ಸೂರ್ಯಕಾಂತಿ ಖರೀದಿ ಕೇಂದ್ರಗಳ ಸ್ಥಾಪನೆ

ಚಿತ್ರದುರ್ಗ ಸೆ.04: 2024-25ನೇ ಸಾಲಿಗೆ ಕೇಂದ್ರ ಸರ್ಕಾರದ ಬೆಂಬಲಬೆಲೆ ಯೋಜನೆಯಡಿ ನಿಗದಿಪಡಿಸಿರುವ ರೂ.7,280/- (ಪ್ರತಿ ಕ್ವಿಂಟಾಲ್‌ಗೆ)...

ಮಹಾತ್ಮ ಗಾಂಧೀ ಸೇವಾ ಪ್ರಶಸ್ತಿ – ಕರ್ನಾಟಕ’ ಆಯ್ಕೆಗೆ ನಾಮನಿರ್ದೇಶನ ಆಹ್ವಾನ

ಚಿತ್ರದುರ್ಗ ಸೆ.04: ರಾಜ್ಯ ಸರ್ಕಾರವು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಸ್ಥಾಪಿಸಿರುವ ಐದು ಲಕ್ಷ ರೂಪಾಯಿ ನಗದನ್ನು ಒಳಗೊಂಡ...

ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್ 110 ಸಿಸಿ ಯ ಆಕರ್ಷಕ ಸ್ಕೂಟಿ ಮಾರುಕಟ್ಟೆಗೆ ಬಿಡುಗಡೆ.

ಚಿತ್ರದುರ್ಗ: ಚಿತ್ರದುರ್ಗ ನಗರದ ತುರುವನೂರು ರಸ್ತೆಯಲ್ಲಿನ ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page