ಸಭೆಗೆ ಗೈರುಹಾಜರಾದ ಅಧಿಕಾರಿಗಳು ಮತ್ತು ವಿಮೆಕಂಪನಿ ಎಂಡಿಗಳ ವಿರುದ್ಧ ತಾಲ್ಲೂಕು ರೈತಸಂಘದಿಂದ ಪ್ರತಿಭಟನೆ.

by | 05/01/24 | ಕೃಷಿ


ಹಿರಿಯೂರು :
ತೋಟಗಾರಿಕೆ ಇಲಾಖೆಯಲ್ಲಿ ಬೆಳೆವಿಮೆ ಕುರಿತು ಅಧಿಕಾರಿಗಳು ಮತ್ತು ವಿಮೆ ಕಂಪನಿಯ ಎಂಡಿಗಳಿಗೆ ಸಭೆ ಕರೆಯಲಾಗಿದ್ದು, ಸಭೆಗೆ ಬೆಳೆ ವಿಮೆ ಕಂಪೆನಿಯ ಎಂ ಡಿ ಸಭೆಗೆ ಹಾಜರಾಗದೇ ಇರುವುದು ನಿಜಕ್ಕೂ ಖಂಡನೀಯ ಎಂಬುದಾಗಿ ರೈತಸಂಘದ ತಾಲ್ಲೂಕು ಅಧ್ಯಕ್ಷರಾದ ಕೆ.ಟಿ.ತಿಪ್ಪೇಸ್ವಾಮಿ ಹೇಳಿದರು.
ತೋಟಗಾರಿಕೆ ಇಲಾಖೆಯಲ್ಲಿ ಬೆಳೆವಿಮೆ ಕುರಿತು ವಿಮೆ ಕಂಪನಿಯ ಅಧಿಕಾರಿಗಳು ಹಾಗೂ ಎಂಡಿಗಳ ವಿರುದ್ಧ ಎಲ್ಲ ರೈತರು ಧಿಕ್ಕಾರ ಕೂಗಿ, ಸುಮಾರು ಮೂರು ಗಂಟೆಗಳ ಕಾಲ ಬಾಗಿಲಲ್ಲಿ ಮಲಗಿ ಪ್ರತಿಭಟನೆ ನಡೆಸಿ, ನಂತರ ಅವರು ಮಾತನಾಡಿದರು.
ಸಭೆಗೆ ಬೆಳೆ ವಿಮೆ ಕಂಪೆನಿಯ ಎಂ ಡಿ ಅವರು ಹಾಜರಾಗದೇ ಇರುವುದನ್ನು ಖಂಡಿಸಿ ತೋಟಗಾರಿಕಾ ಇಲಾಖೆ ಮುಂಭಾಗದಲ್ಲಿ ರೈತರು ಆಕ್ರೋಶಭರಿತರಾಗಿ ಬಾಗಿಲಿಗೆ ಅಡ್ಡವಾಗಿ ಮಲಗಿ ಕಂಪನಿಯ ಮಾಲೀಕರು ಬರುವವರೆಗೂ ನಾವು ತೆರಳುವುದಿಲ್ಲ ಮತ್ತು ಇಲಾಖೆ ಅಧಿಕಾರಿಗಳನ್ನು ಹೊರ ಹೋಗಲು ಬಿಡುವುದಿಲ್ಲ ಎಂದು ದಿಗ್ಬಂದನ ಹಾಕಿ, ಒತ್ತಾಯಿಸಿದರು.
ಕಳೆದ ಬಾರಿ ಅತಿಯಾದ ಮಳೆ ಬಂದು ಅತಿವೃಷ್ಟಿ ಉಂಟಾಗಿ ಅಡಿಕೆ ದಾಳಿಂಬೆ ಮಾವು ಬೆಳೆಗಳು ಸಂಪೂರ್ಣ ಹಾಳಾಗಿರುವುದರಿಂದ ರೈತರಿಗೆ ಬೆಳೆ ವಿಮೆ ಕೊಡಬೇಕಾಗುತ್ತದೆ ಎಂದು ಸಭೆಗೆ ಬಂದಿರುವುದಿಲ್ಲ ಎಂದು ವಿಮೆ ಕಂಪನಿಯ ಮತ್ತು ಅಧಿಕಾರಿಗಳ ವಿರುದ್ಧ ಎಲ್ಲ ರೈತರು ಧಿಕ್ಕಾರ ಕೂಗಿದರು.
ಕೊನೆಗೆ ತೋಟಗಾರಿಕಾ ಜಿಲ್ಲಾ ಉಪನಿರ್ದೇಶಕರು ಸವಿತಾ ಮತ್ತು ಪೊಲೀಸ್ ಅಧಿಕಾರಿಗಳು ಮಧ್ಯಪ್ರವೇಶಿಸಿ ರೈತರ ಮನವೊಲಿಸಿ ಖಂಡಿತವಾಗಿಯೂ ಕಂಪನಿಯ ಮಾಲೀಕರನ್ನು ಕರೆಸಿ ನಿಮಗೆ ವಿಮೆ ಕಂಪನಿಯಿಂದ ಬರಬೇಕಾಗಿರುವ ಎಲ್ಲಾ ಹಣವನ್ನು ಕೊಡಿಸುತ್ತೇವೆ ಮತ್ತು ವಿಮೆಹಣ ಯಾರಿಗೆ ಬಂದಿರುವುದಿಲ್ಲ ಅವರೆಲ್ಲರ ಪಟ್ಟಿ ಮಾಡಿ ಎಲ್ಲರಿಗೂ ಹಣ ಕೊಡುಸುತ್ತೇವೆ ಎಂದು ಭರವಸೆ ನೀಡಿದರಲ್ಲದೆ,ನಂತರ ಸಭೆ ನಡೆಸಿ ರೈತರ ಅಹವಾಲುಗಳನ್ನು ಸ್ವೀಕರಿಸಿದರು.
ಕೃಷಿ ವಿಜ್ಞಾನ ಕೇಂದ್ರದ ವಿಜ್ಞಾನಿ ಓಂಕಾರಪ್ಪ ಮಾತನಾಡಿ, ಅತಿಯಾದ ಮಳೆ ಆಗಿರುವುದರಿಂದ ನಮ್ಮ ತಾಲೂಕಿನಲ್ಲಿ ಅನೇಕ ರೋಗಗಳು ಉಲ್ಬಣಿಸುವ ಸಂಭವವಿದ್ದು, ತೇವಾಂಶ ಹೆಚ್ಚಾಗಿ ಕೊಳೆರೋಗ ಮತ್ತು ಅರಳು ಉದುರುವಿಕೆ ಹೆಚ್ಚಾಗಿದ್ದು, ಅನೇಕ ರೈತರು ತೋಟಗಳನ್ನ ಕಳೆದುಕೊಂಡಿದ್ದಾರೆ ಮತ್ತು ದಿನನಿತ್ಯ ರೈತರು ವಿಜ್ಞಾನ ಕೇಂದ್ರಕ್ಕೆ ಭೇಟಿ ನೀಡಿ ಅನೇಕ ಸಮಸ್ಯೆಗಳನ್ನು ತರುತ್ತಾರೆ ಎಂದರಲ್ಲದೆ,
ರೈತರು ಬೆಳಗ್ಗೆ ಬೇಕಾದ ನೀರನ್ನು ಮಾತ್ರ ಕಟ್ಟಬೇಕು ಮತ್ತು ಹೆಚ್ಚಿಗೆ ಕೊಟ್ಟಿಗೆ ಗೊಬ್ಬರವನ್ನ ಬಳಸಬೇಕು ಎಂದು ಮಾರ್ಗದರ್ಶನ ನೀಡಿದರು ಕೊನೆಯಲ್ಲಿ ಮುಂದಿನ ವಾರದೊಳಗಾಗಿ ಅವರಿಗೆ ಪತ್ರ ಬರೆಯುವ ಮೂಲಕ ಸಮಯ ನಿಗದಿ ಮಾಡಿ ಸಭೆ ನಡೆಸಲಾಗುವುದು ಎಂದು ತಿಳಿಸಿದರು
ಈ ಸಭೆಯಲ್ಲಿ ರೈತಸಂಘದ ತಾಲ್ಲೂಕು ಅಧ್ಯಕ್ಷರಾದ ಕೆ.ಟಿ.ತಿಪ್ಪೇಸ್ವಾಮಿ, ಕಾರ್ಯದರ್ಶಿ ಆಲೂರು ಸಿದ್ಧರಾಮಣ್ಣ, ವೈ.ಶಿವಣ್ಣ, ರಂಗಸ್ವಾಮಿ, ಅರಳಿಕೆರೆ ತಿಪ್ಪೇಸ್ವಾಮಿ, ಮೀಸೆರಾಮಣ್ಣ, ಗೌಡಪ್ಪ, ತಿಮ್ಮಾರೆಡ್ಡಿ, ವಿರೂಪಾಕ್ಷಪ್ಪ, ಜಯಣ್ಣ, ಶಶಿ, ರಾಮಕೃಷ್ಣ, ಶಿವಣ್ಣ, ಚಂದ್ರಪ್ಪ, ಸತೀಶ್, ಬಾಲು ತಿಮ್ಮಣ್ಣ, ಕವಿತಾ ಇತರರು ಉಪಸ್ಥಿತರಿದ್ದರು.

Latest News >>

ಡಿ.ಸಿ.ಸಿ. ಬ್ಯಾಂಕ್ ನಿರ್ದೇಶಕರಾಗಿ ಓ.ಮಂಜುನಾಥ್ ಮಾಳಿಗೆ ಅವರು ಅವಿರೋಧ ಆಯ್ಕೆಯಾಗಿದ್ದಾರೆ.

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತ, ಚಿತ್ರದುರ್ಗ ಇದರ ಆಡಳಿತ ಮಂಡಳಿ ನಿರ್ದೇಶಕರ ಸ್ಥಾನಕ್ಕೆ ಹಿರಿಯೂರು...

ಚಿತ್ರದುರ್ಗದಲ್ಲಿ ನಡೆಯಲಿರುವ ಪತ್ರಿಕಾ ವಿತರಕರ ಹಂಚಿಕೆದಾರರ 4ನೇರಾಜ್ಯಸಮ್ಮೇಳನ ಕಾರ್ಯಕ್ರಮ ಯಶಸ್ವಿಯಾಗಲಿ : ಆಲೂರು ಹನುಮಂತರಾಯಪ್ಪ

ಹಿರಿಯೂರು: ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ ಹಾಗೂ ಚಿತ್ರದುರ್ಗ ಜಿಲ್ಲಾ ಪತ್ರಿಕೆ ಹಂಚಿಕೆದಾರರ ಹಾಗೂ ವಿತರಕರ ಸಂಘ (ರಿ) ಇವರುಗಳ...

ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ ಅನುಷ್ಟಾನ ಮೌಲ್ಯಮಾಪನ ಸಭೆಜಿಲ್ಲಾ ಮೇಲ್ವಿಚಾರಣಾ ಸಮಿತಿಯಿಂದ ಕ್ರಿಯಾಯೋಜನೆ ಅನುಮೋದನೆ ಕ್ರಮಕ್ಕೆ ಶಿಫಾರಸ್ಸು

ಚಿತ್ರದುರ್ಗ ಸೆ.06: ಪರಿಶಿಷ್ಟ ಜಾತಿ ಹಾಗೂ ಗಿರಿಜನ ಉಪಯೋಜನೆಯಡಿ (ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ) ಜಿಲ್ಲೆಯಲ್ಲಿ ಕೈಗೊಳ್ಳುವ ಎಲ್ಲಾ...

ಪೋಷಣ್ ಮಾಸಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ.ಡಿ.ಎಂ.ಅಭಿನವ್ ಪೌಷ್ಠಿಕಾಂಶಯುಕ್ತ ಆಹಾರ ಪದಾರ್ಥ ಸೇವಿಸುವುದು ಅಭ್ಯಾಸಿಸಿ

ಚಿತ್ರದುರ್ಗ ಸೆ.6: ಪೋಷಣ್ ಮಾಸಾಚರಣೆ ಕಾರ್ಯಕ್ರಮ ಮಕ್ಕಳ ಹಾಗೂ ಗರ್ಭಿಣಿಯರ, ಬಾಣಂತಿಯರ ಆರೋಗ್ಯ ಪೋಷಣ ಮಾಸಾಚರಣೆ ಆಗಬೇಕು. ಮಕ್ಕಳಲ್ಲಿ...

ಎಚ್‌ಐವಿ/ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆ

ಚಿತ್ರದುರ್ಗ ಸೆ.6: ಯುವ ಜನೋತ್ಸವ ಅಂಗವಾಗಿ ಎಚ್‌ಐವಿ/ ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆಯು ಚಿತ್ರದುರ್ಗ ನಗರದಲ್ಲಿ ಗುರುವಾರ...

ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಕಾಮಗಾರಿ ಪರಿಶೀಲನೆ

ಚಿತ್ರದುರ್ಗ ಸೆ.06: ನಬಾರ್ಡ್ ಸಂಸ್ಥೆಯ ಡಿಜಿಎಂ ಸಂಜೀವ್ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಈಚೆಗೆ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ವಾಣಿವಿಲಾಸ...

ಮೊಳಕಾಲ್ಮುರು : ಫಲಾನುಭವಿಗಳ ಮನೆ ಬಾಗಿಲಿಗೆ ಹೋಗಿ ಸಮಸ್ಯೆ ಆಲಿಸಿ ಶಾಸಕ ಎನ್ ವೈ ಗೋಪಾಲಕೃಷ್ಣ.

ಮೊಳಕಾಲ್ಮೂರು :-ಪಟ್ಟಣದ ತಾಲೂಕು ಪಂಚಾಯಿತಿಯಲ್ಲಿ ಗ್ಯಾರೆಂಟಿ ಅನುಷ್ಠಾನ ಸಮಿತಿ ನೂತನ ಕಾರ್ಯಾಲಯವನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ಎನ್ ವೈ....

ಬೆಂಬಲಬೆಲೆಯಲ್ಲಿ ಸೂರ್ಯಕಾಂತಿ ಖರೀದಿ ಕೇಂದ್ರಗಳ ಸ್ಥಾಪನೆ

ಚಿತ್ರದುರ್ಗ ಸೆ.04: 2024-25ನೇ ಸಾಲಿಗೆ ಕೇಂದ್ರ ಸರ್ಕಾರದ ಬೆಂಬಲಬೆಲೆ ಯೋಜನೆಯಡಿ ನಿಗದಿಪಡಿಸಿರುವ ರೂ.7,280/- (ಪ್ರತಿ ಕ್ವಿಂಟಾಲ್‌ಗೆ)...

ಮಹಾತ್ಮ ಗಾಂಧೀ ಸೇವಾ ಪ್ರಶಸ್ತಿ – ಕರ್ನಾಟಕ’ ಆಯ್ಕೆಗೆ ನಾಮನಿರ್ದೇಶನ ಆಹ್ವಾನ

ಚಿತ್ರದುರ್ಗ ಸೆ.04: ರಾಜ್ಯ ಸರ್ಕಾರವು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಸ್ಥಾಪಿಸಿರುವ ಐದು ಲಕ್ಷ ರೂಪಾಯಿ ನಗದನ್ನು ಒಳಗೊಂಡ...

ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್ 110 ಸಿಸಿ ಯ ಆಕರ್ಷಕ ಸ್ಕೂಟಿ ಮಾರುಕಟ್ಟೆಗೆ ಬಿಡುಗಡೆ.

ಚಿತ್ರದುರ್ಗ: ಚಿತ್ರದುರ್ಗ ನಗರದ ತುರುವನೂರು ರಸ್ತೆಯಲ್ಲಿನ ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page