ಸಿ ಎನ್ ಜಿ ಅನಿಲ ಅಭಾವ ಆಟೋ ಚಾಲಕರ ಮುಷ್ಕರ

by | 03/01/24 | ಪ್ರತಿಭಟನೆ


ಚಳ್ಳಕೆರೆ:ನಗರದ ಬಳ್ಳಾರಿ ರಸ್ತೆಯಲ್ಲಿರುವ ಇಂಡಿಯನ್ ಪೆಟ್ರೋಲ್ ಬಂಕ್ ನಲ್ಲಿ ಸಿ ಎನ್ ಜಿ ಗ್ಯಾಸ್ ಅಭಾವ ಉಂಟಾಗಿ ಆಟೋ ಚಾಲಕರು ದಿಡೀರ್ ಪ್ರತಿಭಟನೆ ನಡೆಸಿದ ಘಟನೆ ನಡೆದಿದೆ


ಈ ವೇಳೆ ಮಾತನಾಡಿದ ಆಟೋ ಚಾಲಕ ವೆಂಕಟೇಶ್ ದಿನನಿತ್ಯ ನಮಗೆ ಆಟೋ ಓಡಿಸಲು ಸಿಎನ್‌ಜಿ ಗ್ಯಾಸ್ ಬಳಕೆ ಅನಿವಾರ್ಯವಾಗಿದೆ ಯಾವ ವೇಳೆಯಲ್ಲಿಯೇ ಬಂದರು ಬಂಕ್ ಮಾಲೀಕರು ಸ್ಟಾಕ್ ಇಲ್ಲ ಎಂಬ ಉಡಾಫೆ ಉತ್ತರ ನೀಡಿ ನಮ್ಮ ಜೀವನದ ಜೊತೆ ಚೆಲ್ಲಾಟವಾಡುತ್ತಿದ್ದಾರೆ ಈ ಉದ್ಯೋಗದಿಂದಲೇ ನಮ್ಮ ಜೀವನ ನಡೆಯುತ್ತಿರುವುದರಿಂದ ನಾವು ಬಂದ ವೇಳೆಯಲ್ಲಿ ಗ್ಯಾಸ್ ತುಂಬಿಕೊಟ್ಟರೆ ಅನುಕೂಲವಾಗುತ್ತದೆ ನಮ್ಮ ಜೀವನದ ಸ್ಥಿತಿ ಹೇಳಬಾರದಾಗಿದೆ ಎಂದು ತಮ್ಮ ಅಳಲನ್ನು ತೋಡಿಕೊಂಡರು

ಆಟೋ ಚಾಲಕ ಕೊಟ್ರೇಶ್ ಮಾತನಾಡಿ ಸಿ ಎನ್ ಜಿ ಗ್ಯಾಸ್ ಬಂಕಿನಲ್ಲಿ ಕೇವಲ ಒಂದು ಲೋಡ್ ಬರುತ್ತಿರುವುದರಿಂದ ಆಟೋ ಚಾಲಕರಿಗೆ ತೀವ್ರ ತೊಂದರೆ ಉಂಟಾಗುತ್ತಿದೆ ದಿನನಿತ್ಯ ಎರಡು ಲೋಡ್ ಬಂದರೆ ಅನುಕೂಲವಾಗುತ್ತದೆ ಇಲ್ಲದಿದ್ದರೆ ಮತ್ತೊಂದು ಗ್ಯಾಸ್ ಬಂಕ್ ತೆರೆಯಬೇಕು ಈ ಸಮಸ್ಯೆಯಿಂದ ಶಾಲಾ ಮಕ್ಕಳನ್ನು ಶಾಲೆಗಳಿಗೆ ಸಮಯಕ್ಕೆ ಸರಿಯಾಗಿ ಕರೆದುಕೊಂಡು ಹೋಗಲು ಸಾಧ್ಯವಾಗುತ್ತಿಲ್ಲ ಹೀಗಾಗಿ ದುಡಿಮೆ ಇಲ್ಲದೆ ಆಟೋ ಸಾಲದ ಕಂತನ್ನು ಸಹ ಕಟ್ಟಲು ಸಾಧ್ಯವಾಗುತ್ತಿಲ್ಲ ದಿನಗಟ್ಟಲೆ ಗ್ಯಾಸ್ ಗಾಗಿ ಕಾಯುತ್ತಿರುವುದರಿಂದ ತಮ್ಮ ದಿನ ನಿತ್ಯದ ಜೀವನದ ಮೇಲೆ ಪರಿಣಾಮ ಬೀರುತ್ತಿದ್ದು ಚಾಲಕರು ತಮ್ಮ ವೈಯಕ್ತಿಕ ಕೆಲಸ ಕಾರ್ಯಗಳನ್ನು ಬಿಟ್ಟು ಬಂಕಿನ ಮುಂದೆ ಕಾಯುವ ಪರಿಸ್ಥಿತಿ ನಿರ್ಮಾಣವಾಗಿದೆ ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ಇದರ ಬಗ್ಗೆ ಗಮನ ಹರಿಸಬೇಕು ಎಂದು ಆಗ್ರಹಿಸಿದರು.

ಬಂಕ್ ಮಾಲಿಕ ವಿನಯ್ ಮಾತನಾಡಿ ಕಳೆದ 15 ದಿನಗಳಿಂದ ಈ ಸಮಸ್ಯೆ ಉಂಟಾಗಿದೆ ಗುಜರಾತ್ ರಾಜ್ಯದಿಂದ ಗ್ಯಾಸ್ ರವಾನೆಯಾಗುತ್ತಿದ್ದು ಕಂಪನಿಯಲ್ಲಿ ನಿರ್ವಹಣೆ ನಡೆಯುತ್ತಿರುವುದರಿಂದ ಈ ಸಮಸ್ಯೆ ಉಲ್ಬಣಗೊಂಡಿದೆ ಕಂಪನಿ ಕಡೆಯಿಂದ ಯಾವುದೇ ರೀತಿಯ ಮಾಹಿತಿ ಇಲ್ಲದಿರುವುದು ಈ ಸಮಸ್ಯೆಗೆ ಕಾರಣವಾಗಿದೆ ಎಂದು ತಿಳಿಸಿದರು

ಈ ಸಂದರ್ಭದಲ್ಲಿ ಆಟೋ ಚಾಲಕರಾದ ವೆಂಕಟೇಶ್ ಮಂಜುನಾಥ ವೀರೇಶ್ ತಿಪ್ಪೇಸ್ವಾಮಿ ಅಭಿ ನಾಗೇಶ್ ಸಂತೋಷ್ ಸೇರಿದಂತೆ ಹಲವರು ಉಪಸ್ಥಿತರಿದ್ದರು

Latest News >>

ಡಿ.ಸಿ.ಸಿ. ಬ್ಯಾಂಕ್ ನಿರ್ದೇಶಕರಾಗಿ ಓ.ಮಂಜುನಾಥ್ ಮಾಳಿಗೆ ಅವರು ಅವಿರೋಧ ಆಯ್ಕೆಯಾಗಿದ್ದಾರೆ.

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತ, ಚಿತ್ರದುರ್ಗ ಇದರ ಆಡಳಿತ ಮಂಡಳಿ ನಿರ್ದೇಶಕರ ಸ್ಥಾನಕ್ಕೆ ಹಿರಿಯೂರು...

ಚಿತ್ರದುರ್ಗದಲ್ಲಿ ನಡೆಯಲಿರುವ ಪತ್ರಿಕಾ ವಿತರಕರ ಹಂಚಿಕೆದಾರರ 4ನೇರಾಜ್ಯಸಮ್ಮೇಳನ ಕಾರ್ಯಕ್ರಮ ಯಶಸ್ವಿಯಾಗಲಿ : ಆಲೂರು ಹನುಮಂತರಾಯಪ್ಪ

ಹಿರಿಯೂರು: ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ ಹಾಗೂ ಚಿತ್ರದುರ್ಗ ಜಿಲ್ಲಾ ಪತ್ರಿಕೆ ಹಂಚಿಕೆದಾರರ ಹಾಗೂ ವಿತರಕರ ಸಂಘ (ರಿ) ಇವರುಗಳ...

ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ ಅನುಷ್ಟಾನ ಮೌಲ್ಯಮಾಪನ ಸಭೆಜಿಲ್ಲಾ ಮೇಲ್ವಿಚಾರಣಾ ಸಮಿತಿಯಿಂದ ಕ್ರಿಯಾಯೋಜನೆ ಅನುಮೋದನೆ ಕ್ರಮಕ್ಕೆ ಶಿಫಾರಸ್ಸು

ಚಿತ್ರದುರ್ಗ ಸೆ.06: ಪರಿಶಿಷ್ಟ ಜಾತಿ ಹಾಗೂ ಗಿರಿಜನ ಉಪಯೋಜನೆಯಡಿ (ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ) ಜಿಲ್ಲೆಯಲ್ಲಿ ಕೈಗೊಳ್ಳುವ ಎಲ್ಲಾ...

ಪೋಷಣ್ ಮಾಸಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ.ಡಿ.ಎಂ.ಅಭಿನವ್ ಪೌಷ್ಠಿಕಾಂಶಯುಕ್ತ ಆಹಾರ ಪದಾರ್ಥ ಸೇವಿಸುವುದು ಅಭ್ಯಾಸಿಸಿ

ಚಿತ್ರದುರ್ಗ ಸೆ.6: ಪೋಷಣ್ ಮಾಸಾಚರಣೆ ಕಾರ್ಯಕ್ರಮ ಮಕ್ಕಳ ಹಾಗೂ ಗರ್ಭಿಣಿಯರ, ಬಾಣಂತಿಯರ ಆರೋಗ್ಯ ಪೋಷಣ ಮಾಸಾಚರಣೆ ಆಗಬೇಕು. ಮಕ್ಕಳಲ್ಲಿ...

ಎಚ್‌ಐವಿ/ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆ

ಚಿತ್ರದುರ್ಗ ಸೆ.6: ಯುವ ಜನೋತ್ಸವ ಅಂಗವಾಗಿ ಎಚ್‌ಐವಿ/ ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆಯು ಚಿತ್ರದುರ್ಗ ನಗರದಲ್ಲಿ ಗುರುವಾರ...

ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಕಾಮಗಾರಿ ಪರಿಶೀಲನೆ

ಚಿತ್ರದುರ್ಗ ಸೆ.06: ನಬಾರ್ಡ್ ಸಂಸ್ಥೆಯ ಡಿಜಿಎಂ ಸಂಜೀವ್ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಈಚೆಗೆ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ವಾಣಿವಿಲಾಸ...

ಮೊಳಕಾಲ್ಮುರು : ಫಲಾನುಭವಿಗಳ ಮನೆ ಬಾಗಿಲಿಗೆ ಹೋಗಿ ಸಮಸ್ಯೆ ಆಲಿಸಿ ಶಾಸಕ ಎನ್ ವೈ ಗೋಪಾಲಕೃಷ್ಣ.

ಮೊಳಕಾಲ್ಮೂರು :-ಪಟ್ಟಣದ ತಾಲೂಕು ಪಂಚಾಯಿತಿಯಲ್ಲಿ ಗ್ಯಾರೆಂಟಿ ಅನುಷ್ಠಾನ ಸಮಿತಿ ನೂತನ ಕಾರ್ಯಾಲಯವನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ಎನ್ ವೈ....

ಬೆಂಬಲಬೆಲೆಯಲ್ಲಿ ಸೂರ್ಯಕಾಂತಿ ಖರೀದಿ ಕೇಂದ್ರಗಳ ಸ್ಥಾಪನೆ

ಚಿತ್ರದುರ್ಗ ಸೆ.04: 2024-25ನೇ ಸಾಲಿಗೆ ಕೇಂದ್ರ ಸರ್ಕಾರದ ಬೆಂಬಲಬೆಲೆ ಯೋಜನೆಯಡಿ ನಿಗದಿಪಡಿಸಿರುವ ರೂ.7,280/- (ಪ್ರತಿ ಕ್ವಿಂಟಾಲ್‌ಗೆ)...

ಮಹಾತ್ಮ ಗಾಂಧೀ ಸೇವಾ ಪ್ರಶಸ್ತಿ – ಕರ್ನಾಟಕ’ ಆಯ್ಕೆಗೆ ನಾಮನಿರ್ದೇಶನ ಆಹ್ವಾನ

ಚಿತ್ರದುರ್ಗ ಸೆ.04: ರಾಜ್ಯ ಸರ್ಕಾರವು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಸ್ಥಾಪಿಸಿರುವ ಐದು ಲಕ್ಷ ರೂಪಾಯಿ ನಗದನ್ನು ಒಳಗೊಂಡ...

ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್ 110 ಸಿಸಿ ಯ ಆಕರ್ಷಕ ಸ್ಕೂಟಿ ಮಾರುಕಟ್ಟೆಗೆ ಬಿಡುಗಡೆ.

ಚಿತ್ರದುರ್ಗ: ಚಿತ್ರದುರ್ಗ ನಗರದ ತುರುವನೂರು ರಸ್ತೆಯಲ್ಲಿನ ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page