ಸುಧಾರಿತ ಬೇಸಾಯ ಪದ್ಧತಿ ಕುರಿತು ತರಬೇತಿಯಲ್ಲಿ ಜಿಲ್ಲಾ ಕೃಷಿ ತರಬೇತಿ ಕೇಂದ್ರದ ಸಹಾಯಕ ನಿರ್ದೇಶಕ ಆರ್.ರಜನೀಕಾಂತ ಇಳುವರಿ ಹೆಚ್ಚಳಕ್ಕೆ ಮಣ್ಣು ಆಧಾರಿತ ಪೋಷಕಾಂಶಗಳ ನಿರ್ವಹಣೆ ಕೈಗೊಳ್ಳಿ.

by | 22/12/23 | ಕೃಷಿ

ಬಬ್ಬೂರು(ಹಿರಿಯೂರು) ಡಿ.22:
ಜಿಲ್ಲೆಯಲ್ಲಿ ಹಿಂಗಾರು ಹಂಗಾಮಿನಲ್ಲಿ ಹಿಂಗಾರಿ ಜೋಳ, ಕಡಲೆ, ಕುಸುಬೆ, ಹುರುಳಿ, ಮುಸುಕಿನಜೋಳ, ಗೋಧಿ ಮತ್ತು ಸೂರ್ಯಕಾಂತಿ ಬೆಳೆಗಳಲ್ಲಿ ಹೆಚ್ಚಿನ ಇಳುವರಿ ಪಡೆಯಲು ಮಣ್ಣು ಪರೀಕ್ಷೆ ಆಧಾರಿತ ಪೋಷಕಾಂಶಗಳ ನಿರ್ವಹಣೆ ಮತ್ತು ಸಮಗ್ರ ಪೀಡೆ ನಿರ್ವಹಣೆ ಕೈಗೊಳ್ಳಬೇಕು ಎಂದು ಜಿಲ್ಲಾ ಕೃಷಿ ತರಬೇತಿ ಕೇಂದ್ರದ ಸಹಾಯಕ ಕೃಷಿ ನಿರ್ದೇಶಕ ಆರ್.ರಜನೀಕಾಂತ ರೈತರಿಗೆ ಮನವಿ ಮಾಡಿದರು.
ಹಿರಿಯೂರು ತಾಲ್ಲೂಕಿನ ಬಬ್ಬೂರು ಫಾರಂನ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ಗುರುವಾರ ರೈತರಿಗೆ ಹಿಂಗಾರು ಹಂಗಾಮಿನ ಪ್ರಮುಖ ಕೃಷಿ ಬೆಳೆಗಳಲ್ಲಿ ಅನುಸರಿಸಬೇಕಾದ ಸುಧಾರಿತ ಆಧುನಿಕ ಬೇಸಾಯ ಪದ್ದತಿಗಳ ತಾಂತ್ರಿಕತೆಯ ಕುರಿತು ಒಂದು ದಿನದ ತರಬೇತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಬಬ್ಬೂರು ಫಾರಂನ ಕೃಷಿ ವಿಜ್ಞಾನ ಕೇಂದ್ರದ ಮುಖ್ಯಸ್ಥ ಡಾ. ಓ.ಕುಮಾರ್ ಅವರು, ಹಿಂಗಾರು ಹಂಗಾಮಿನ ಪ್ರಮುಖ ಬೆಳೆಗಳಲ್ಲಿ ಅನುಸರಿಸಬೇಕಾದ ಸುಧಾರಿತ ಬೇಸಾಯ ಪದ್ದತಿಗಳ ಕುರಿತು ರೈತರಿಗೆ ಮಾಹಿತಿ ನೀಡಿದರು.
ಹಿಂಗಾರು ಹಂಗಾಮಿನ ಪ್ರಮುಖ ಬೆಳೆಗಳಲ್ಲಿ ಬರುವ ಪ್ರಮುಖ ರೋಗ ಮತ್ತು ಕೀಟಗಳ ನಿರ್ವಹಣೆಯ ಕುರಿತು ಮಾತನಾಡಿದ ಕೃಷಿ ವಿಜ್ಞಾನ ಕೇಂದ್ರದ ಕೀಟಶಾಸ್ತ್ರಜ್ಞ ಡಾ. ರುದ್ರಮುನಿ, ಕಡಲೆ ಬೆಳೆಯಲ್ಲಿ ಆರು ಸಾಲಿಗೆ ಎರಡು ಸಾಲು ಕೊತ್ತಂಬರಿ ಬೆಳೆ ಬೆಳೆಯುವುದರಿಂದ ಹಸಿರು ಕಾಯಿ ಕೊರಕ ಕೊತ್ತಂಬರಿ ಬೆಳೆಯ ಹೂವಿನ ಮೇಲೆ ಮೊಟ್ಟೆಯನ್ನು ಇಟ್ಟು ಮೊಟ್ಟೆಯಿಂದ ಹೊರಬಂದ ಮರಿಗಳು ಕೊತ್ತಂಬರಿ ಬೆಳೆಯನ್ನು ತಿನ್ನುತ್ತವೆ. ಆದ ಪ್ರಯುಕ್ತ ಕೊತ್ತಂಬರಿ ಬೆಳೆಯು ಕೀಟವನ್ನು ಆಕರ್ಷಣೆ ಮಾಡುವುದರಿಂದ ಬೆಳೆಯ ಮೇಲೆ ಕೀಟನಾಶಕ ಸಿಂಪರಣೆ ಮಾಡುವುದರಿಂದ ಹಸಿರು ಕಾಯಿ ಕೊರಕದ ಬಾದೆ ಕಡಿಮೆ ಮಾಡಬಹುದು. ಕಡಲೆ ಬೆಳೆಯಲ್ಲಿ ಅಲ್ಲಲ್ಲಿ ಕವಲೊಡೆದ ಮರದ ಟೊಂಗೆಗಳನ್ನು ನಿಲ್ಲಿಸುವುದರಿಂದ ಪಕ್ಷಿಗಳು ಕುಳಿತು ಕೀಟಗಳನ್ನು ಆಯ್ದು ತಿನ್ನುತ್ತವೆ. ರೈತ ಭಾಂದವರು ತಮ್ಮ ಜಮೀನಿನಲ್ಲಿ ಸಿಗುವ ಬೇವಿನ ಬೀಜಗಳನ್ನು ಆಯ್ದು ಶೇ.5ರ ಬೇವಿನ ಬೀಜದ ಕಷಾಯವನ್ನು ತಯಾರಿಸಿಕೊಂಡು ಕಡಲೆ ಬೆಳೆಯ ಬೆಳವಣಿಗೆ ಹಂತದಲ್ಲಿ ಸಿಂಪರಣೆ ಮಾಡುವುದರಿಂದ ಕೀಟಗಳ ನಿರ್ವಹಣೆ ಸಾಧ್ಯವಾಗುತ್ತದೆ. ಕೀಟನಾಶಕಗಳಾದ ಪ್ರೋಪೆನೊಪಾಸ್ @ 2 ಮಿ.ಲೀ ಪ್ರತಿ ಲೀಟರ್ ನೀರಿಗೆ ಅಥವಾ ಎಮಾಮೆಕ್ಟಿನ್ ಬೆಂಜೋಯೆಟ್ @ 0.3 ಗ್ರಾಂ ಪ್ರತಿ ಲೀಟರ್ ನೀರಿಗೆ ಹಾಕಿ ಸಿಂಪರಣೆ ಮಾಡುವುದರಿಂದ ಕಾಯಿ ಕೊರಕ ಹುಳುವಿನ ಬಾದೆಯನ್ನು ಕಡಿಮೆ ಮಾಡಬಹುದೆಂದು ತಿಳಿಸಿದರು.
ತರಬೇತಿಯ ನಂತರ ಕೃಷಿ ವಿಜ್ಞಾನ ಕೇಂದ್ರದ ಕಡಲೆ ಬೆಳೆಯ ತಾಕಿಗೆ ರೈತರೊಂದಿಗೆ ಭೇಟಿ ನೀಡಿ ಕಾಯಿ ಕೊರಕ ಹುಳುವಿನ ಸಮಗ್ರ ನಿರ್ವಹಣೆ ಕುರಿತು ಮಾಹಿತಿ ನೀಡಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಕೃಷಿ ತರಬೇತಿ ಕೇಂದ್ರದ ಸಿಬ್ಬಂದಿಯವರು ಹಾಗೂ ಜಿಲ್ಲೆಯ ರೈತ ಇದ್ದರು.

Latest News >>

ಡಿ.ಸಿ.ಸಿ. ಬ್ಯಾಂಕ್ ನಿರ್ದೇಶಕರಾಗಿ ಓ.ಮಂಜುನಾಥ್ ಮಾಳಿಗೆ ಅವರು ಅವಿರೋಧ ಆಯ್ಕೆಯಾಗಿದ್ದಾರೆ.

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತ, ಚಿತ್ರದುರ್ಗ ಇದರ ಆಡಳಿತ ಮಂಡಳಿ ನಿರ್ದೇಶಕರ ಸ್ಥಾನಕ್ಕೆ ಹಿರಿಯೂರು...

ಚಿತ್ರದುರ್ಗದಲ್ಲಿ ನಡೆಯಲಿರುವ ಪತ್ರಿಕಾ ವಿತರಕರ ಹಂಚಿಕೆದಾರರ 4ನೇರಾಜ್ಯಸಮ್ಮೇಳನ ಕಾರ್ಯಕ್ರಮ ಯಶಸ್ವಿಯಾಗಲಿ : ಆಲೂರು ಹನುಮಂತರಾಯಪ್ಪ

ಹಿರಿಯೂರು: ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ ಹಾಗೂ ಚಿತ್ರದುರ್ಗ ಜಿಲ್ಲಾ ಪತ್ರಿಕೆ ಹಂಚಿಕೆದಾರರ ಹಾಗೂ ವಿತರಕರ ಸಂಘ (ರಿ) ಇವರುಗಳ...

ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ ಅನುಷ್ಟಾನ ಮೌಲ್ಯಮಾಪನ ಸಭೆಜಿಲ್ಲಾ ಮೇಲ್ವಿಚಾರಣಾ ಸಮಿತಿಯಿಂದ ಕ್ರಿಯಾಯೋಜನೆ ಅನುಮೋದನೆ ಕ್ರಮಕ್ಕೆ ಶಿಫಾರಸ್ಸು

ಚಿತ್ರದುರ್ಗ ಸೆ.06: ಪರಿಶಿಷ್ಟ ಜಾತಿ ಹಾಗೂ ಗಿರಿಜನ ಉಪಯೋಜನೆಯಡಿ (ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ) ಜಿಲ್ಲೆಯಲ್ಲಿ ಕೈಗೊಳ್ಳುವ ಎಲ್ಲಾ...

ಪೋಷಣ್ ಮಾಸಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ.ಡಿ.ಎಂ.ಅಭಿನವ್ ಪೌಷ್ಠಿಕಾಂಶಯುಕ್ತ ಆಹಾರ ಪದಾರ್ಥ ಸೇವಿಸುವುದು ಅಭ್ಯಾಸಿಸಿ

ಚಿತ್ರದುರ್ಗ ಸೆ.6: ಪೋಷಣ್ ಮಾಸಾಚರಣೆ ಕಾರ್ಯಕ್ರಮ ಮಕ್ಕಳ ಹಾಗೂ ಗರ್ಭಿಣಿಯರ, ಬಾಣಂತಿಯರ ಆರೋಗ್ಯ ಪೋಷಣ ಮಾಸಾಚರಣೆ ಆಗಬೇಕು. ಮಕ್ಕಳಲ್ಲಿ...

ಎಚ್‌ಐವಿ/ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆ

ಚಿತ್ರದುರ್ಗ ಸೆ.6: ಯುವ ಜನೋತ್ಸವ ಅಂಗವಾಗಿ ಎಚ್‌ಐವಿ/ ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆಯು ಚಿತ್ರದುರ್ಗ ನಗರದಲ್ಲಿ ಗುರುವಾರ...

ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಕಾಮಗಾರಿ ಪರಿಶೀಲನೆ

ಚಿತ್ರದುರ್ಗ ಸೆ.06: ನಬಾರ್ಡ್ ಸಂಸ್ಥೆಯ ಡಿಜಿಎಂ ಸಂಜೀವ್ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಈಚೆಗೆ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ವಾಣಿವಿಲಾಸ...

ಮೊಳಕಾಲ್ಮುರು : ಫಲಾನುಭವಿಗಳ ಮನೆ ಬಾಗಿಲಿಗೆ ಹೋಗಿ ಸಮಸ್ಯೆ ಆಲಿಸಿ ಶಾಸಕ ಎನ್ ವೈ ಗೋಪಾಲಕೃಷ್ಣ.

ಮೊಳಕಾಲ್ಮೂರು :-ಪಟ್ಟಣದ ತಾಲೂಕು ಪಂಚಾಯಿತಿಯಲ್ಲಿ ಗ್ಯಾರೆಂಟಿ ಅನುಷ್ಠಾನ ಸಮಿತಿ ನೂತನ ಕಾರ್ಯಾಲಯವನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ಎನ್ ವೈ....

ಬೆಂಬಲಬೆಲೆಯಲ್ಲಿ ಸೂರ್ಯಕಾಂತಿ ಖರೀದಿ ಕೇಂದ್ರಗಳ ಸ್ಥಾಪನೆ

ಚಿತ್ರದುರ್ಗ ಸೆ.04: 2024-25ನೇ ಸಾಲಿಗೆ ಕೇಂದ್ರ ಸರ್ಕಾರದ ಬೆಂಬಲಬೆಲೆ ಯೋಜನೆಯಡಿ ನಿಗದಿಪಡಿಸಿರುವ ರೂ.7,280/- (ಪ್ರತಿ ಕ್ವಿಂಟಾಲ್‌ಗೆ)...

ಮಹಾತ್ಮ ಗಾಂಧೀ ಸೇವಾ ಪ್ರಶಸ್ತಿ – ಕರ್ನಾಟಕ’ ಆಯ್ಕೆಗೆ ನಾಮನಿರ್ದೇಶನ ಆಹ್ವಾನ

ಚಿತ್ರದುರ್ಗ ಸೆ.04: ರಾಜ್ಯ ಸರ್ಕಾರವು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಸ್ಥಾಪಿಸಿರುವ ಐದು ಲಕ್ಷ ರೂಪಾಯಿ ನಗದನ್ನು ಒಳಗೊಂಡ...

ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್ 110 ಸಿಸಿ ಯ ಆಕರ್ಷಕ ಸ್ಕೂಟಿ ಮಾರುಕಟ್ಟೆಗೆ ಬಿಡುಗಡೆ.

ಚಿತ್ರದುರ್ಗ: ಚಿತ್ರದುರ್ಗ ನಗರದ ತುರುವನೂರು ರಸ್ತೆಯಲ್ಲಿನ ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page