ಸುರಕ್ಷಿತ ತಾಯ್ತತನದ ಬಗ್ಗೆ ಅರಿವು ಮೂಡಿಸುವ ಕಾರ್ಯಾಗಾರ ತಾಯಿ ಮರಣ ನಿಯಂತ್ರಿಸಲು ಸಾಂಸ್ಥಿಕ ಹೆರಿಗೆ ಮಾಡಿಸಿ

by | 11/04/23 | ಆರೋಗ್ಯ


ಚಿತ್ರದುರ್ಗ(ಕರ್ನಾಟಕ ವಾರ್ತೆ)ಏ.11:
ತಾಯಿ ಮರಣ ನಿಯಂತ್ರಿಸಲು ಸಾಂಸ್ಥಿಕ ಹೆರಿಗೆ ಮಾಡಿಸಿ ಎಂದು ಚಿತ್ರದುರ್ಗ ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಬಿ.ವಿ.ಗಿರೀಶ್ ಎಂದರು.
ಚಿತ್ರದುರ್ಗ ತಾಲ್ಲೂಕಿನ ಸಿರಿಗೆರೆ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಮಂಗಳವಾರ ಸುರಕ್ಷಿತ ಮಾತೃತ್ವ ದಿನದ ಅಂಗವಾಗಿ ಗರ್ಭಿಣಿ ಮಹಿಳೆಯರು ತಾಯಂದಿರಿಗೆ ಸುರಕ್ಷಿತ ತಾಯ್ತನದ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ತಾಯಿಯ ಆರೋಗ್ಯ ಉತ್ತೇಜಿಸಲು ಮತ್ತು ತಾಯಿಯರ ಮರಣ ಕಡಿಮೆ ಮಾಡಲು ಸರ್ಕಾರವು ಈ ದಿನವನ್ನು ರಾಷ್ಟ್ರೀಯ ಸುರಕ್ಷಿತ ಮಾತೃತ್ವ ದಿನವೆಂದು ಘೋಷಿಸಿತು. ರಾಷ್ಟ್ರೀಯ ಸುರಕ್ಷಿತ ಮಾತೃತ್ವ ದಿನವನ್ನು ಭಾರತದಲ್ಲಿ ಪ್ರತಿ ವರ್ಷ ಏಪ್ರಿಲ್ 11 ರಂದು ಆಚರಿಸಲಾಗುತ್ತದೆ. ಗರ್ಭಿಣಿಗೆ ಹೆರಿಗೆಯ ಮೊದಲು, ಹೆರಿಗೆಯ ಸಮಯದಲ್ಲಿ ಮತ್ತು ನಂತರ ಅಗತ್ಯವಿರುವ ಆರೈಕೆಯ ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿ ರಾಷ್ಟ್ರೀಯ ಸುರಕ್ಷಿತ ಮಾತೃತ್ವ ದಿನ ಆಚರಣೆ ಮಾಡಲಾಗುತ್ತದೆ ಎಂದರು.
ಸಿರಿಗೆರೆ ಸಮುದಾಯ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿ ಡಾ.ತಿಮ್ಮೆಗೌಡ ಮಾತನಾಡಿ, ವಿಶ್ವದಾದ್ಯಂತ ಎಲ್ಲ ದೇಶಗಳೂ ಮಾತೃ ಮರಣವನ್ನು ಗಂಭೀರವಾಗಿ ಪರಿಗಣಿಸುತ್ತವೆ. ಕಾರಣ, ಇದು ಆ ದೇಶದ ಆರೋಗ್ಯ ವ್ಯವಸ್ಥೆಯ ಮತ್ತು ಅಭಿವೃದ್ಧಿಯ ಸೂಚ್ಯಂಕವಾಗಿದೆ ಎಂದು ಹೇಳಿದರು.
ಸ್ತ್ರಿ ರೋಗ ತಜ್ಞೆ ಡಾ.ಪವಿತ್ರ ಮಾತನಾಡಿ, ಪ್ರಸವದ ಬಳಿಕ ಮಹಿಳೆಯರ ಮನಸ್ಸು ಸೂಕ್ಷ್ಮವಾಗಿರುತ್ತದೆ. ಈ ಅಂಶವನ್ನು ಅರಿತು ಮನೆಯವರು ಆಕೆಯೊಂದಿಗೆ ಪ್ರೀತಿಯಿಂದ ನಡೆದುಕೊಳ್ಳಬೇಕು. ಕೆಲವು ಬಾಣಂತಿಯರನ್ನು ಕಾಡುವ ಬಾಣಂತಿ ಸನ್ನಿ ಮತ್ತು ಬಾಣಂತನದ ಖಿನ್ನತೆಯ ಲಕ್ಷಣಗಳ ಬಗ್ಗೆಯೂ ಮನೆಯ ಸದಸ್ಯರು ತಿಳಿದಿರಬೇಕು. ತಾಯಿ ಸದಾ ಮಂಕಾಗಿ ಕುಳಿತಿದ್ದರೆ, ಮಗುವಿನ ಆರೈಕೆಯಲ್ಲಿ ಆಸಕ್ತಿ ತೋರದಿದ್ದರೆ, ನಿದ್ರಾಹೀನತೆ ಅಥವಾ ಮಾನಸಿಕ ಕಿರಿಕಿರಿಯಿಂದ ಬಳಲುತ್ತಿದ್ದರೆ, ಅತಿಯಾಗಿ ಸಿಟ್ಟು, ರಂಪಾಟ ಮಾಡುತ್ತಿದ್ದರೆ ನಿರ್ಲಕ್ಷಿಸಬಾರದು. ಇದು ಮಾನಸಿಕ ಸಮಸ್ಯೆ ಇರಬಹುದು ಎಂಬುದನ್ನು ಮನಗಂಡು ಮನೋವೈದ್ಯರ ಬಳಿ ಸಮಾಲೋಚನೆಗೆ ಕರೆದೊಯ್ಯಬೇಕು ಎಂದು ಸಲಹೆ ನೀಡಿದರು.
ತಾಲ್ಲೂಕು ಆರೋಗ್ಯ ಶಿಕ್ಷಣಾಧಿಕಾರಿ ಎನ್.ಎಸ್.ಮಂಜುನಾಥ ಮಾತನಾಡಿ, ಪ್ರಸವದ ಬಳಿಕ ಮಹಿಳೆಯ ಆರೈಕೆಯಲ್ಲಿ ಇಂದಿಗೂ ಅವೈಜ್ಞಾನಿಕ ಪದ್ಧತಿ ಕೆಲವೆಡೆ ಅನುಸರಿಸುತ್ತಿರುವುದು ದುಃಖಕರ. ಬಾಣಂತಿಯರಿಗೆ ಕುಡಿಯಲು ಕೊಡುವ ನೀರಿನ ಪ್ರಮಾಣದಲ್ಲಿ ಕಟ್ಟುನಿಟ್ಟು, ಆಹಾರದಲ್ಲಿ ಹಣ್ಣು, ತರಕಾರಿಗಳ ನಿμÉೀಧ, ಅತಿಯಾದ ತುಪ್ಪದ ಬಳಕೆ ಮೊದಲಾದ ಅಭ್ಯಾಸಗಳು ಸಮಂಜಸವಲ್ಲ. ತಾಯಿ, ಮಗುವಿನ ಸ್ನಾನಕ್ಕೆ ಸುಡುವ ಅತಿ ಬಿಸಿಯಾದ ನೀರನ್ನೇ ಬಳಸಬೇಕೆಂಬ ಪರಿಕಲ್ಪನೆ ಕೂಡ ಅವೈಜ್ಞಾನಿಕವೇ. ಇವು ಪರೋಕ್ಷವಾಗಿ ತಾಯಿ ಮಗುವಿನ ಅನಾರೋಗ್ಯಕ್ಕೆ ಕಾರಣವಾಗಬಹುದು ಎಂದರು.
ಪ್ರಸವ ಬಹಳ ಮುಖ್ಯವಾದ ಹಂತ. ತಜ್ಞರು ಸೂಚಿಸಿದ ದಿನಾಂಕದಂದು ಅಥವಾ ಯಾವುದೇ ಅಸಾಮಾನ್ಯ ಲಕ್ಷಣಗಳು ಕಂಡುಬಂದ ತಕ್ಷಣವೇ ಆಕೆಯನ್ನು ಸುಸಜ್ಜಿತ ಆರೋಗ್ಯ ಕೇಂದ್ರಕ್ಕೆ ಕರೆದೊಯ್ಯುವುದು ಮತ್ತು ಆಕೆಗೆ ಹಿತವೆನಿಸುವ ಆಸ್ಪತ್ರೆಯಲ್ಲಿಯೇ ಪ್ರಸವಕ್ಕೆ ವ್ಯವಸ್ಥೆ ಮಾಡುವುದೂ ಮುಖ್ಯವೆನಿಸುತ್ತವೆ. ಮಧುಮೇಹ ಅಥವಾ ಏರು ರಕ್ತದೊತ್ತಡದಿಂದ ಬಳಲುವ ಗರ್ಭಿಣಿಯರ ಬಗ್ಗೆ ಹೆಚ್ಚು ಕಾಳಜಿ ಅಗತ್ಯ. ಮಹಿಳೆಯರ ಆ ಹಂತದ ಸೂಕ್ಷ್ಮ ಮನಃಸ್ಥಿತಿಯನ್ನು ಕುಟುಂಬದ ಎಲ್ಲ ಸದಸ್ಯರೂ ಅರ್ಥೈಸಿಕೊಂಡಿದ್ದರೆ ಒಳಿತು ಎಂದರು. ಇದೇ ಸಂದರ್ಭದಲ್ಲಿ ಮತದಾನದ ಕುರಿತು ಜಾಗೃತಿ ಮೂಡಿಸಲಾಯಿತು.
ಕಾರ್ಯಕ್ರಮದಲ್ಲಿ 30ಕ್ಕೂ ಹೆಚ್ಚು ಗರ್ಭಿಣಿಯರ ತಪಾಸಣೆ ಮಾಡಲಾಯಿತು. ಆರೋಗ್ಯ ನಿರೀಕ್ಷಣಾಧಿಕಾರಿ ರಂಗಾರೆಡ್ಡಿ, ಶ್ರೀಧರ್, ಫಾರ್ಮಸಿ ಆಧಿಕಾರಿ ಮೋಹನ್, ಆರೋಗ್ಯ ಸುರಕ್ಷತಾಧಿಕಾರಿ ಶೋಭಾ ಇದ್ದರು.

Latest News >>

ಡಿ.ಸಿ.ಸಿ. ಬ್ಯಾಂಕ್ ನಿರ್ದೇಶಕರಾಗಿ ಓ.ಮಂಜುನಾಥ್ ಮಾಳಿಗೆ ಅವರು ಅವಿರೋಧ ಆಯ್ಕೆಯಾಗಿದ್ದಾರೆ.

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತ, ಚಿತ್ರದುರ್ಗ ಇದರ ಆಡಳಿತ ಮಂಡಳಿ ನಿರ್ದೇಶಕರ ಸ್ಥಾನಕ್ಕೆ ಹಿರಿಯೂರು...

ಚಿತ್ರದುರ್ಗದಲ್ಲಿ ನಡೆಯಲಿರುವ ಪತ್ರಿಕಾ ವಿತರಕರ ಹಂಚಿಕೆದಾರರ 4ನೇರಾಜ್ಯಸಮ್ಮೇಳನ ಕಾರ್ಯಕ್ರಮ ಯಶಸ್ವಿಯಾಗಲಿ : ಆಲೂರು ಹನುಮಂತರಾಯಪ್ಪ

ಹಿರಿಯೂರು: ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ ಹಾಗೂ ಚಿತ್ರದುರ್ಗ ಜಿಲ್ಲಾ ಪತ್ರಿಕೆ ಹಂಚಿಕೆದಾರರ ಹಾಗೂ ವಿತರಕರ ಸಂಘ (ರಿ) ಇವರುಗಳ...

ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ ಅನುಷ್ಟಾನ ಮೌಲ್ಯಮಾಪನ ಸಭೆಜಿಲ್ಲಾ ಮೇಲ್ವಿಚಾರಣಾ ಸಮಿತಿಯಿಂದ ಕ್ರಿಯಾಯೋಜನೆ ಅನುಮೋದನೆ ಕ್ರಮಕ್ಕೆ ಶಿಫಾರಸ್ಸು

ಚಿತ್ರದುರ್ಗ ಸೆ.06: ಪರಿಶಿಷ್ಟ ಜಾತಿ ಹಾಗೂ ಗಿರಿಜನ ಉಪಯೋಜನೆಯಡಿ (ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ) ಜಿಲ್ಲೆಯಲ್ಲಿ ಕೈಗೊಳ್ಳುವ ಎಲ್ಲಾ...

ಪೋಷಣ್ ಮಾಸಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ.ಡಿ.ಎಂ.ಅಭಿನವ್ ಪೌಷ್ಠಿಕಾಂಶಯುಕ್ತ ಆಹಾರ ಪದಾರ್ಥ ಸೇವಿಸುವುದು ಅಭ್ಯಾಸಿಸಿ

ಚಿತ್ರದುರ್ಗ ಸೆ.6: ಪೋಷಣ್ ಮಾಸಾಚರಣೆ ಕಾರ್ಯಕ್ರಮ ಮಕ್ಕಳ ಹಾಗೂ ಗರ್ಭಿಣಿಯರ, ಬಾಣಂತಿಯರ ಆರೋಗ್ಯ ಪೋಷಣ ಮಾಸಾಚರಣೆ ಆಗಬೇಕು. ಮಕ್ಕಳಲ್ಲಿ...

ಎಚ್‌ಐವಿ/ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆ

ಚಿತ್ರದುರ್ಗ ಸೆ.6: ಯುವ ಜನೋತ್ಸವ ಅಂಗವಾಗಿ ಎಚ್‌ಐವಿ/ ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆಯು ಚಿತ್ರದುರ್ಗ ನಗರದಲ್ಲಿ ಗುರುವಾರ...

ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಕಾಮಗಾರಿ ಪರಿಶೀಲನೆ

ಚಿತ್ರದುರ್ಗ ಸೆ.06: ನಬಾರ್ಡ್ ಸಂಸ್ಥೆಯ ಡಿಜಿಎಂ ಸಂಜೀವ್ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಈಚೆಗೆ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ವಾಣಿವಿಲಾಸ...

ಮೊಳಕಾಲ್ಮುರು : ಫಲಾನುಭವಿಗಳ ಮನೆ ಬಾಗಿಲಿಗೆ ಹೋಗಿ ಸಮಸ್ಯೆ ಆಲಿಸಿ ಶಾಸಕ ಎನ್ ವೈ ಗೋಪಾಲಕೃಷ್ಣ.

ಮೊಳಕಾಲ್ಮೂರು :-ಪಟ್ಟಣದ ತಾಲೂಕು ಪಂಚಾಯಿತಿಯಲ್ಲಿ ಗ್ಯಾರೆಂಟಿ ಅನುಷ್ಠಾನ ಸಮಿತಿ ನೂತನ ಕಾರ್ಯಾಲಯವನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ಎನ್ ವೈ....

ಬೆಂಬಲಬೆಲೆಯಲ್ಲಿ ಸೂರ್ಯಕಾಂತಿ ಖರೀದಿ ಕೇಂದ್ರಗಳ ಸ್ಥಾಪನೆ

ಚಿತ್ರದುರ್ಗ ಸೆ.04: 2024-25ನೇ ಸಾಲಿಗೆ ಕೇಂದ್ರ ಸರ್ಕಾರದ ಬೆಂಬಲಬೆಲೆ ಯೋಜನೆಯಡಿ ನಿಗದಿಪಡಿಸಿರುವ ರೂ.7,280/- (ಪ್ರತಿ ಕ್ವಿಂಟಾಲ್‌ಗೆ)...

ಮಹಾತ್ಮ ಗಾಂಧೀ ಸೇವಾ ಪ್ರಶಸ್ತಿ – ಕರ್ನಾಟಕ’ ಆಯ್ಕೆಗೆ ನಾಮನಿರ್ದೇಶನ ಆಹ್ವಾನ

ಚಿತ್ರದುರ್ಗ ಸೆ.04: ರಾಜ್ಯ ಸರ್ಕಾರವು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಸ್ಥಾಪಿಸಿರುವ ಐದು ಲಕ್ಷ ರೂಪಾಯಿ ನಗದನ್ನು ಒಳಗೊಂಡ...

ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್ 110 ಸಿಸಿ ಯ ಆಕರ್ಷಕ ಸ್ಕೂಟಿ ಮಾರುಕಟ್ಟೆಗೆ ಬಿಡುಗಡೆ.

ಚಿತ್ರದುರ್ಗ: ಚಿತ್ರದುರ್ಗ ನಗರದ ತುರುವನೂರು ರಸ್ತೆಯಲ್ಲಿನ ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page